Homeಕರ್ನಾಟಕಅವಕಾಶವಾದವನ್ನು ಸಿದ್ಧಾಂತವಾಗಿಸಿಕೊಂಡಾಗ ವಿಶ್ವಾಸ ಉಳಿಯುವ ಬಗೆ ಎಂತು?

ಅವಕಾಶವಾದವನ್ನು ಸಿದ್ಧಾಂತವಾಗಿಸಿಕೊಂಡಾಗ ವಿಶ್ವಾಸ ಉಳಿಯುವ ಬಗೆ ಎಂತು?

- Advertisement -
- Advertisement -

ಅವಕಾಶವಾದವು ನಮ್ಮ ಸಿದ್ಧಾಂತದ ಭಾಗ ಎಂದು ಬಹಿರಂಗವಾಗಿ ಘೋಷಿಸಿಕೊಂಡಿರುವ ಪಕ್ಷ ಬಹುಜನ ಸಮಾಜ ಪಕ್ಷ. ಆ ಪಕ್ಷದ ಸಿದ್ಧಾಂತದ ಕುರಿತು ಸಾವಿರಾರು ಯುವಜನರಿಗೆ ಪಾಠ ಹೇಳಿದವರು ಎನ್.ಮಹೇಶ್. ಇಂದು ನಡೆದ ವಿಶ್ವಾಸಮತ ಯಾಚನೆಯಲ್ಲಿ ತಮ್ಮ ಪಕ್ಷದ ಅಧಿನಾಯಕಿ ಮಾಯಾವತಿಯವರ ಸೂಚನೆಯನ್ನೂ ಧಿಕ್ಕರಿಸಿ ಗೈರು ಹಾಜರಾಗಿದ್ದಾರೆ. ಇದು ಹಲವರಿಗೆ ಶಾಕಿಂಗ್ ಇರಬಹುದು; ಆದರೆ ಆಶ್ಚರ್ಯಕರವಲ್ಲ. ಏಕೆಂದರೆ ಅವಕಾಶವಾದವು ಸಿದ್ಧಾಂತದ ಭಾಗ.

ಇನ್ನು ಕೆಲವರಿಗೆ ಶಾಕ್ ಅನಿಸಿರುವುದು ಎಚ್.ವಿಶ್ವನಾಥ್ ಅವರ ನಡವಳಿಕೆ. ಅವರು ಪುಸ್ತಕವೊಂದರಲ್ಲಿ ಬರೆದ ಕೆಲವು ಭಾಗಗಳನ್ನು ಡಿ.ಕೆ.ಶಿವಕುಮಾರ್ ಸದನದಲ್ಲಿ ಓದಿ ಹೇಳಿದರು. ಪಕ್ಷಾಂತರಿಗಳ ಯಾವುದೇ ವಾದವು ನಂಬಲರ್ಹವಲ್ಲ ಎಂದು ಸ್ವತಃ ವಿಶ್ವನಾಥ್ ಬರೆದಿರುವ ಮಾತುಗಳವು. ದೀರ್ಘಕಾಲದ ತಮ್ಮ ರಾಜಕೀಯ ವಿರೋಧಿ ಸಾ.ರಾ.ಮಹೇಶ್ ಸದನದಲ್ಲಿ ಹೇಳಿದ ನೈತಿಕತೆಯ ಪಾಠವನ್ನು ಮುಂಬೈನ ಹೋಟೆಲ್ ರೂಂನ ಟಿವಿಯಲ್ಲಿ ಎಚ್.ವಿಶ್ವನಾಥ್ ಕೇಳಿಸಿಕೊಂಡಿರುತ್ತಾರೆ. ‘ಇಂಥವರಿಂದ ತಾನು ಬುದ್ಧಿವಾದ ಕೇಳಬೇಕಾಯಿತು’ ಎಂದು ಪಕ್ಕದಲ್ಲಿದ್ದವರಿಗೆ ಹೇಳಿರದಿದ್ದರೆ ಅದು ಆಶ್ಚರ್ಯ. ಆದರೆ, ವಿಶ್ವನಾಥ್ ಇಂದು ಗಟಾರದ ರಾಜಕಾರಣದ ಭಾಗವಾಗಿರುವುದರಲ್ಲಿ ಸಂಶಯವೇ ಇಲ್ಲ.

ಸದನದಲ್ಲಿ ಶಿವಲಿಂಗೇಗೌಡ ಮತ್ತು ಬಿ.ನಾರಾಯಣರಾವ್‍ರ ಮಾತುಗಳು ಒಳಗಿನಿಂದ ಬಂದ ಮಾತುಗಳು ಎಂದು ಅನಿಸಿದ್ದರಿಂದ ಅವುಗಳು ಎಲ್ಲರ ಹೃದಯಕ್ಕೆ ತಟ್ಟಿದವು. ಕೃಷ್ಣಭೈರೇಗೌಡರ ಪ್ರಾಮಾಣಿಕತೆಯನ್ನು ಅನುಮಾನಿಸಲೂ ಕಾರಣಗಳಿಲ್ಲ.
ಆದರೆ, ಇಂಥದೇ ಮಾತನ್ನು ಸ್ವತಃ ಸ್ಪೀಕರ್ ರಮೇಶ್‍ಕುಮಾರ್‍ರ ಕುರಿತು ಹೇಳುವುದು ಸಾಧ್ಯವಿಲ್ಲ. ಅಪಾರ ಅನುಭವ, ಬುದ್ಧಿವಂತಿಕೆ ಮತ್ತು ಹಣಕಾಸಿನ ವಿಚಾರದಲ್ಲಿ ಎಂದೂ ಭ್ರಷ್ಟರಾಗದ ಮತ್ತು ಜಾತಿವಾದಿಯಾಗದ ರಮೇಶ್‍ಕುಮಾರ್ ಪಕ್ಷಾಂತರ ಮಾಡದೇ ತಮ್ಮ ಪಕ್ಷದ (ಸ್ಪೀಕರ್‍ಗೆ ಪಕ್ಷ ಇರುವುದಿಲ್ಲ ಎಂಬುದು ತಾಂತ್ರಿಕವಾದ ಸಂಗತಿಯಷ್ಟೇ) ಅಭ್ಯರ್ಥಿ ಸೋಲಲು ಮೊನ್ನೆಯ ಚುನಾವಣೆಯಲ್ಲಿ ತಮ್ಮ ಕೊಡುಗೆಯನ್ನೂ ಸಲ್ಲಿಸಿದ್ದರು. ಮಿಕ್ಕಂತೆ ಸ್ವಚ್ಛ ರಾಜಕಾರಣದ ಹಾಗೂ ತತ್ವನಿಷ್ಠೆಯ ಕುರಿತು ಅವರಾಡುವ ಮಾತುಗಳಲ್ಲಿ ಇಂತಹ ದ್ವಂದ್ವಗಳು ಇದ್ದೇ ಇವೆ.

ಮುಂದೊಂದು ದಿನ ತಾನು ಮುಖ್ಯಮಂತ್ರಿಯಾಗಲೇಬೇಕು, ಬಿಜೆಪಿಗೆ ಹೋದರೆ ಅದು ಸಾಧ್ಯವೇ ಇಲ್ಲ ಎಂದು ಖಚಿತವಾಗಿ ಗೊತ್ತಿರುವ ಡಿ.ಕೆ.ಶಿವಕುಮಾರ್ ಅದಕ್ಕಾಗಿ ಪಡುತ್ತಿರುವ ಕಷ್ಟ ಅಷ್ಟಿಷ್ಟಲ್ಲ. ಆದರೆ, ಇದೇ ಯಡಿಯೂರಪ್ಪನವರ ಜೊತೆಗಿನ ಅವರ ಸಖ್ಯ ಮತ್ತು ಇಂಧನ ಇಲಾಖೆಯ ಅವ್ಯವಹಾರದಲ್ಲಿ ಯಡಿಯೂರಪ್ಪನವರಿಗೆ ಮಾಡಿದ ಉಪಕಾರವನ್ನು ಪಕ್ಷಾಂತರ ಎಂದು ಕರೆಯಲಾಗದು. ಆದರೆ, ಪಕ್ಷ ಮೀರಿದ ಸಖ್ಯ ಕೇವಲ ಮನುಷ್ಯ ಸಂಬಂಧವಲ್ಲ. ಅದರಲ್ಲಿ ವ್ಯವಹಾರಿಕ ಮತ್ತು ಸ್ವಾರ್ಥದ ಲೆಕ್ಕಾಚಾರಗಳಿವೆ.

ದೇವೇಗೌಡರ ಕುಟುಂಬದ ಅವಕಾಶವಾದಕ್ಕೆ ಎಣೆಯೇ ಇಲ್ಲ. ಅವರಾಡುವ ಯಾವ ಮಾತುಗಳನ್ನೂ ನಂಬಬಹುದು ಎನಿಸುವುದಿಲ್ಲ. ನಿಖಿಲ್‍ನ್ನು ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿಸಿದ್ದೇಕೆ ಎಂಬ ಕುರಿತು ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್‍ನಲ್ಲಿ ದೇವೇಗೌಡರು ವಿವರಿಸಿದ್ದನ್ನು ಸ್ವತಃ ನಿಖಿಲ್ ನಂಬಿರುವುದಿಲ್ಲ.

ಪಕ್ಷ ಸಿದ್ಧಾಂತ, ಭಾರತೀಯ ಸಂಸ್ಕøತಿ, ಭ್ರಷ್ಟಾಚಾರಕ್ಕೆ ವಿರೋಧ, ಕಾಂಗ್ರೆಸ್ ಸಂಸ್ಕøತಿಗೆ ಪ್ರತಿರೋಧ, ಪಕ್ಷಕ್ಕೆ ಬದ್ಧರಾಗಿ ದುಡಿವ ಕಾರ್ಯಕರ್ತರಿಗೆ ಮನ್ನಣೆ ಇತ್ಯಾದಿಗಳನ್ನು ಹೇಳುತ್ತಾ ಬಂದಿರುವ ಬಿಜೆಪಿ ಈಗಲೂ ಆ ಮಾತುಗಳನ್ನು ಹೇಳಲು ಹಿಂಜರಿಯುವುದಿಲ್ಲ. ಅದೇ ಸೋಜಿಗದ ಸಂಗತಿ. ಆ ಹಿಂಜರಿಕೆಯೂ ಏಕಿಲ್ಲವೆಂದರೆ ಅದರಷ್ಟೇ ಅವಕಾಶವಾದಿಯಾದ ಮಾಧ್ಯಮ ಸಮೂಹ ಅಂತಹ ಪ್ರಶ್ನೆಗಳು ವಿರೋಧ ಪಕ್ಷಗಳಿಗೆ ಕೇಳಲು ಮಾತ್ರ ಇವೆಯೆಂದು ಭಾವಿಸಿವೆ. ಮಾಧ್ಯಮಗಳು ಮತ್ತು ಬಿಜೆಪಿ ಪಕ್ಷ ಎನ್ನುವುದು ಒಂದೇ ಪ್ಯಾಕೇಜ್‍ನ ಭಾಗ.
ಬಿಜೆಪಿ ಪಕ್ಷದಲ್ಲಿ ಸಜ್ಜನರೆಂದು ತೋರಿಸಿಕೊಳ್ಳಲು ಹಾತೊರೆಯುವ ಶಾಸಕರೊಬ್ಬರಿದ್ದಾರೆ. ರಾಜಾಜಿನಗರದ ಸುರೇಶ್‍ಕುಮಾರ್. ಅವರು ‘ವಿಶ್ವಾಸಮತ ಯಾಚನೆಗೆ ಮುಂದಾದ ಮೇಲೂ ವರ್ಗಾವಣೆಗಳನ್ನು ಮಾಡುತ್ತಿರುವ ಕುಮಾರಸ್ವಾಮಿ ಸರ್ಕಾರವನ್ನು’ ಸಕಾರಣವಾಗಿ ತರಾಟೆಗೆ ತೆಗೆದುಕೊಳ್ಳುತ್ತಾರೆ. ಆದರೆ, ತಮ್ಮ ಪಕ್ಷದಿಂದ ಮುಖ್ಯಮಂತ್ರಿ ಮಾಡಲು ಹೊರಟಿರುವ ಯಡಿಯೂರಪ್ಪನವರು ಈ ಹಿಂದೆ ಪ್ರಮಾಣವಚನ ಸ್ವೀಕರಿಸಿ ವಿಶ್ವಾಸಮತ ಯಾಚನೆ ಮಾಡುವುದಕ್ಕೆ ಮುಂಚೆಯೇ ವರ್ಗಾವಣೆ ಮಾಡಿದ್ದನ್ನು ಮರೆಯುತ್ತಾರೆ. ಇಂತಹವರ ಅವಕಾಶವಾದಕ್ಕೆ ಸಾವಿರಾರು ಉದಾಹರಣೆಗಳು ಸಿಗುತ್ತವೆ.

ಈಗಾಗಲೇ ಹೇಳಿರುವಂತೆ ಅವಕಾಶವಾದಕ್ಕೆ ಮತ್ತೊಂದು ಹೆಸರೇ ಮಾಧ್ಯಮವಾಗಿದೆ. ಒಂದೇ ಬಗೆಯ ಎರಡು ಪ್ರಕರಣಗಳಲ್ಲಿ ಬಿಜೆಪಿ ಅಥವಾ ವಿರೋಧ ಪಕ್ಷಗಳಲ್ಲಿ ಯಾರು ಇದ್ದಾರೆ ಎಂಬುದರ ಮೇಲೆ ಅವರ ನಿಲುವೇ ಬದಲಾಗುತ್ತದೆ. ಪಕ್ಷವೊಂದರ ಪರವಾಗಿ ಪ್ರಚಾರಕ್ಕೇ ನಿಂತಿರುವ ಉಪಕರಣ ಅದು.

ಈ ರೀತಿಯಾಗಿ ಅವಕಾಶವಾದವನ್ನೇ ಬಿತ್ತಿ ಬೆಳೆದಿರುವ ಇಂದಿನ ರಾಜಕಾರಣದಲ್ಲಿ ಯಾವ ವಿಶ್ವಾಸ ಉಳಿದಿದೆ. ಕೆಲವು ಅತ್ಯುತ್ತಮ ಭಾಷಣಗಳನ್ನೂ, ಸಾಂವಿಧಾನಿಕ ನಡಾವಳಿಗಳನ್ನೂ ಕಂಡ ವಿಶ್ವಾಸಮತ ಯಾಚನೆಯ ಅಧಿವೇಶನದಲ್ಲಿ ಒಂದೆರಡು ಉತ್ತಮ ಅಂಶಗಳು ಇದ್ದವು. ಆದರೆ, ಅದಕ್ಕಿಂತ ನೂರು ಪಟ್ಟು ಕೊಳಕು ಎದ್ದು ಕಾಣುತ್ತಿತ್ತು. ತಮ್ಮನ್ನು, ತಮ್ಮ ಪಕ್ಷವನ್ನು ವಾಚಾಮಗೋಚರವಾಗಿ ಬಯ್ಯುತ್ತಿದ್ದಾಗ ಅದಕ್ಕೆ ಪ್ರತ್ಯುತ್ತರವನ್ನು ಕೊಡದೇ ವಿರೋಧ ಪಕ್ಷ ಕೂತಿದ್ದು ಇತಿಹಾಸದಲ್ಲಿ ದಾಖಲಾಗಿ ನಿಲ್ಲುತ್ತದೆ. ಹಾಗಾಗಿ ರಾಜಕೀಯ ವ್ಯವಸ್ಥೆಯ ವಿರುದ್ಧವೇ ಅವಿಶ್ವಾಸವು ಮೂಡುವಂತಹ ವಾತಾವರಣ ಇಂದು ಮೇಲುಗೈ ಸಾಧಿಸಿದೆ.

ಅವಕಾಶವಾದ ಹಾಗೂ ಅನೈತಿಕ ರಾಜಕಾರಣದ ಮೂಲಕ್ಕೆ ಹೋಗಿ ಅದಕ್ಕೆ ಮದ್ದು ಕಂಡುಹಿಡಿದಾಗ ಮಾತ್ರ ವಿಶ್ವಾಸ ಹುಟ್ಟುತ್ತದೆ. ಆ ನಿಟ್ಟಿನಲ್ಲಿ ಮಾನ-ಮರ್ಯಾದೆ ಇರುವ ಎಲ್ಲರೂ ಪ್ರಯತ್ನಿಸುವ ಅಗತ್ಯ ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...