Homeಕರ್ನಾಟಕಅವಕಾಶವಾದವನ್ನು ಸಿದ್ಧಾಂತವಾಗಿಸಿಕೊಂಡಾಗ ವಿಶ್ವಾಸ ಉಳಿಯುವ ಬಗೆ ಎಂತು?

ಅವಕಾಶವಾದವನ್ನು ಸಿದ್ಧಾಂತವಾಗಿಸಿಕೊಂಡಾಗ ವಿಶ್ವಾಸ ಉಳಿಯುವ ಬಗೆ ಎಂತು?

- Advertisement -
- Advertisement -

ಅವಕಾಶವಾದವು ನಮ್ಮ ಸಿದ್ಧಾಂತದ ಭಾಗ ಎಂದು ಬಹಿರಂಗವಾಗಿ ಘೋಷಿಸಿಕೊಂಡಿರುವ ಪಕ್ಷ ಬಹುಜನ ಸಮಾಜ ಪಕ್ಷ. ಆ ಪಕ್ಷದ ಸಿದ್ಧಾಂತದ ಕುರಿತು ಸಾವಿರಾರು ಯುವಜನರಿಗೆ ಪಾಠ ಹೇಳಿದವರು ಎನ್.ಮಹೇಶ್. ಇಂದು ನಡೆದ ವಿಶ್ವಾಸಮತ ಯಾಚನೆಯಲ್ಲಿ ತಮ್ಮ ಪಕ್ಷದ ಅಧಿನಾಯಕಿ ಮಾಯಾವತಿಯವರ ಸೂಚನೆಯನ್ನೂ ಧಿಕ್ಕರಿಸಿ ಗೈರು ಹಾಜರಾಗಿದ್ದಾರೆ. ಇದು ಹಲವರಿಗೆ ಶಾಕಿಂಗ್ ಇರಬಹುದು; ಆದರೆ ಆಶ್ಚರ್ಯಕರವಲ್ಲ. ಏಕೆಂದರೆ ಅವಕಾಶವಾದವು ಸಿದ್ಧಾಂತದ ಭಾಗ.

ಇನ್ನು ಕೆಲವರಿಗೆ ಶಾಕ್ ಅನಿಸಿರುವುದು ಎಚ್.ವಿಶ್ವನಾಥ್ ಅವರ ನಡವಳಿಕೆ. ಅವರು ಪುಸ್ತಕವೊಂದರಲ್ಲಿ ಬರೆದ ಕೆಲವು ಭಾಗಗಳನ್ನು ಡಿ.ಕೆ.ಶಿವಕುಮಾರ್ ಸದನದಲ್ಲಿ ಓದಿ ಹೇಳಿದರು. ಪಕ್ಷಾಂತರಿಗಳ ಯಾವುದೇ ವಾದವು ನಂಬಲರ್ಹವಲ್ಲ ಎಂದು ಸ್ವತಃ ವಿಶ್ವನಾಥ್ ಬರೆದಿರುವ ಮಾತುಗಳವು. ದೀರ್ಘಕಾಲದ ತಮ್ಮ ರಾಜಕೀಯ ವಿರೋಧಿ ಸಾ.ರಾ.ಮಹೇಶ್ ಸದನದಲ್ಲಿ ಹೇಳಿದ ನೈತಿಕತೆಯ ಪಾಠವನ್ನು ಮುಂಬೈನ ಹೋಟೆಲ್ ರೂಂನ ಟಿವಿಯಲ್ಲಿ ಎಚ್.ವಿಶ್ವನಾಥ್ ಕೇಳಿಸಿಕೊಂಡಿರುತ್ತಾರೆ. ‘ಇಂಥವರಿಂದ ತಾನು ಬುದ್ಧಿವಾದ ಕೇಳಬೇಕಾಯಿತು’ ಎಂದು ಪಕ್ಕದಲ್ಲಿದ್ದವರಿಗೆ ಹೇಳಿರದಿದ್ದರೆ ಅದು ಆಶ್ಚರ್ಯ. ಆದರೆ, ವಿಶ್ವನಾಥ್ ಇಂದು ಗಟಾರದ ರಾಜಕಾರಣದ ಭಾಗವಾಗಿರುವುದರಲ್ಲಿ ಸಂಶಯವೇ ಇಲ್ಲ.

ಸದನದಲ್ಲಿ ಶಿವಲಿಂಗೇಗೌಡ ಮತ್ತು ಬಿ.ನಾರಾಯಣರಾವ್‍ರ ಮಾತುಗಳು ಒಳಗಿನಿಂದ ಬಂದ ಮಾತುಗಳು ಎಂದು ಅನಿಸಿದ್ದರಿಂದ ಅವುಗಳು ಎಲ್ಲರ ಹೃದಯಕ್ಕೆ ತಟ್ಟಿದವು. ಕೃಷ್ಣಭೈರೇಗೌಡರ ಪ್ರಾಮಾಣಿಕತೆಯನ್ನು ಅನುಮಾನಿಸಲೂ ಕಾರಣಗಳಿಲ್ಲ.
ಆದರೆ, ಇಂಥದೇ ಮಾತನ್ನು ಸ್ವತಃ ಸ್ಪೀಕರ್ ರಮೇಶ್‍ಕುಮಾರ್‍ರ ಕುರಿತು ಹೇಳುವುದು ಸಾಧ್ಯವಿಲ್ಲ. ಅಪಾರ ಅನುಭವ, ಬುದ್ಧಿವಂತಿಕೆ ಮತ್ತು ಹಣಕಾಸಿನ ವಿಚಾರದಲ್ಲಿ ಎಂದೂ ಭ್ರಷ್ಟರಾಗದ ಮತ್ತು ಜಾತಿವಾದಿಯಾಗದ ರಮೇಶ್‍ಕುಮಾರ್ ಪಕ್ಷಾಂತರ ಮಾಡದೇ ತಮ್ಮ ಪಕ್ಷದ (ಸ್ಪೀಕರ್‍ಗೆ ಪಕ್ಷ ಇರುವುದಿಲ್ಲ ಎಂಬುದು ತಾಂತ್ರಿಕವಾದ ಸಂಗತಿಯಷ್ಟೇ) ಅಭ್ಯರ್ಥಿ ಸೋಲಲು ಮೊನ್ನೆಯ ಚುನಾವಣೆಯಲ್ಲಿ ತಮ್ಮ ಕೊಡುಗೆಯನ್ನೂ ಸಲ್ಲಿಸಿದ್ದರು. ಮಿಕ್ಕಂತೆ ಸ್ವಚ್ಛ ರಾಜಕಾರಣದ ಹಾಗೂ ತತ್ವನಿಷ್ಠೆಯ ಕುರಿತು ಅವರಾಡುವ ಮಾತುಗಳಲ್ಲಿ ಇಂತಹ ದ್ವಂದ್ವಗಳು ಇದ್ದೇ ಇವೆ.

ಮುಂದೊಂದು ದಿನ ತಾನು ಮುಖ್ಯಮಂತ್ರಿಯಾಗಲೇಬೇಕು, ಬಿಜೆಪಿಗೆ ಹೋದರೆ ಅದು ಸಾಧ್ಯವೇ ಇಲ್ಲ ಎಂದು ಖಚಿತವಾಗಿ ಗೊತ್ತಿರುವ ಡಿ.ಕೆ.ಶಿವಕುಮಾರ್ ಅದಕ್ಕಾಗಿ ಪಡುತ್ತಿರುವ ಕಷ್ಟ ಅಷ್ಟಿಷ್ಟಲ್ಲ. ಆದರೆ, ಇದೇ ಯಡಿಯೂರಪ್ಪನವರ ಜೊತೆಗಿನ ಅವರ ಸಖ್ಯ ಮತ್ತು ಇಂಧನ ಇಲಾಖೆಯ ಅವ್ಯವಹಾರದಲ್ಲಿ ಯಡಿಯೂರಪ್ಪನವರಿಗೆ ಮಾಡಿದ ಉಪಕಾರವನ್ನು ಪಕ್ಷಾಂತರ ಎಂದು ಕರೆಯಲಾಗದು. ಆದರೆ, ಪಕ್ಷ ಮೀರಿದ ಸಖ್ಯ ಕೇವಲ ಮನುಷ್ಯ ಸಂಬಂಧವಲ್ಲ. ಅದರಲ್ಲಿ ವ್ಯವಹಾರಿಕ ಮತ್ತು ಸ್ವಾರ್ಥದ ಲೆಕ್ಕಾಚಾರಗಳಿವೆ.

ದೇವೇಗೌಡರ ಕುಟುಂಬದ ಅವಕಾಶವಾದಕ್ಕೆ ಎಣೆಯೇ ಇಲ್ಲ. ಅವರಾಡುವ ಯಾವ ಮಾತುಗಳನ್ನೂ ನಂಬಬಹುದು ಎನಿಸುವುದಿಲ್ಲ. ನಿಖಿಲ್‍ನ್ನು ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿಸಿದ್ದೇಕೆ ಎಂಬ ಕುರಿತು ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್‍ನಲ್ಲಿ ದೇವೇಗೌಡರು ವಿವರಿಸಿದ್ದನ್ನು ಸ್ವತಃ ನಿಖಿಲ್ ನಂಬಿರುವುದಿಲ್ಲ.

ಪಕ್ಷ ಸಿದ್ಧಾಂತ, ಭಾರತೀಯ ಸಂಸ್ಕøತಿ, ಭ್ರಷ್ಟಾಚಾರಕ್ಕೆ ವಿರೋಧ, ಕಾಂಗ್ರೆಸ್ ಸಂಸ್ಕøತಿಗೆ ಪ್ರತಿರೋಧ, ಪಕ್ಷಕ್ಕೆ ಬದ್ಧರಾಗಿ ದುಡಿವ ಕಾರ್ಯಕರ್ತರಿಗೆ ಮನ್ನಣೆ ಇತ್ಯಾದಿಗಳನ್ನು ಹೇಳುತ್ತಾ ಬಂದಿರುವ ಬಿಜೆಪಿ ಈಗಲೂ ಆ ಮಾತುಗಳನ್ನು ಹೇಳಲು ಹಿಂಜರಿಯುವುದಿಲ್ಲ. ಅದೇ ಸೋಜಿಗದ ಸಂಗತಿ. ಆ ಹಿಂಜರಿಕೆಯೂ ಏಕಿಲ್ಲವೆಂದರೆ ಅದರಷ್ಟೇ ಅವಕಾಶವಾದಿಯಾದ ಮಾಧ್ಯಮ ಸಮೂಹ ಅಂತಹ ಪ್ರಶ್ನೆಗಳು ವಿರೋಧ ಪಕ್ಷಗಳಿಗೆ ಕೇಳಲು ಮಾತ್ರ ಇವೆಯೆಂದು ಭಾವಿಸಿವೆ. ಮಾಧ್ಯಮಗಳು ಮತ್ತು ಬಿಜೆಪಿ ಪಕ್ಷ ಎನ್ನುವುದು ಒಂದೇ ಪ್ಯಾಕೇಜ್‍ನ ಭಾಗ.
ಬಿಜೆಪಿ ಪಕ್ಷದಲ್ಲಿ ಸಜ್ಜನರೆಂದು ತೋರಿಸಿಕೊಳ್ಳಲು ಹಾತೊರೆಯುವ ಶಾಸಕರೊಬ್ಬರಿದ್ದಾರೆ. ರಾಜಾಜಿನಗರದ ಸುರೇಶ್‍ಕುಮಾರ್. ಅವರು ‘ವಿಶ್ವಾಸಮತ ಯಾಚನೆಗೆ ಮುಂದಾದ ಮೇಲೂ ವರ್ಗಾವಣೆಗಳನ್ನು ಮಾಡುತ್ತಿರುವ ಕುಮಾರಸ್ವಾಮಿ ಸರ್ಕಾರವನ್ನು’ ಸಕಾರಣವಾಗಿ ತರಾಟೆಗೆ ತೆಗೆದುಕೊಳ್ಳುತ್ತಾರೆ. ಆದರೆ, ತಮ್ಮ ಪಕ್ಷದಿಂದ ಮುಖ್ಯಮಂತ್ರಿ ಮಾಡಲು ಹೊರಟಿರುವ ಯಡಿಯೂರಪ್ಪನವರು ಈ ಹಿಂದೆ ಪ್ರಮಾಣವಚನ ಸ್ವೀಕರಿಸಿ ವಿಶ್ವಾಸಮತ ಯಾಚನೆ ಮಾಡುವುದಕ್ಕೆ ಮುಂಚೆಯೇ ವರ್ಗಾವಣೆ ಮಾಡಿದ್ದನ್ನು ಮರೆಯುತ್ತಾರೆ. ಇಂತಹವರ ಅವಕಾಶವಾದಕ್ಕೆ ಸಾವಿರಾರು ಉದಾಹರಣೆಗಳು ಸಿಗುತ್ತವೆ.

ಈಗಾಗಲೇ ಹೇಳಿರುವಂತೆ ಅವಕಾಶವಾದಕ್ಕೆ ಮತ್ತೊಂದು ಹೆಸರೇ ಮಾಧ್ಯಮವಾಗಿದೆ. ಒಂದೇ ಬಗೆಯ ಎರಡು ಪ್ರಕರಣಗಳಲ್ಲಿ ಬಿಜೆಪಿ ಅಥವಾ ವಿರೋಧ ಪಕ್ಷಗಳಲ್ಲಿ ಯಾರು ಇದ್ದಾರೆ ಎಂಬುದರ ಮೇಲೆ ಅವರ ನಿಲುವೇ ಬದಲಾಗುತ್ತದೆ. ಪಕ್ಷವೊಂದರ ಪರವಾಗಿ ಪ್ರಚಾರಕ್ಕೇ ನಿಂತಿರುವ ಉಪಕರಣ ಅದು.

ಈ ರೀತಿಯಾಗಿ ಅವಕಾಶವಾದವನ್ನೇ ಬಿತ್ತಿ ಬೆಳೆದಿರುವ ಇಂದಿನ ರಾಜಕಾರಣದಲ್ಲಿ ಯಾವ ವಿಶ್ವಾಸ ಉಳಿದಿದೆ. ಕೆಲವು ಅತ್ಯುತ್ತಮ ಭಾಷಣಗಳನ್ನೂ, ಸಾಂವಿಧಾನಿಕ ನಡಾವಳಿಗಳನ್ನೂ ಕಂಡ ವಿಶ್ವಾಸಮತ ಯಾಚನೆಯ ಅಧಿವೇಶನದಲ್ಲಿ ಒಂದೆರಡು ಉತ್ತಮ ಅಂಶಗಳು ಇದ್ದವು. ಆದರೆ, ಅದಕ್ಕಿಂತ ನೂರು ಪಟ್ಟು ಕೊಳಕು ಎದ್ದು ಕಾಣುತ್ತಿತ್ತು. ತಮ್ಮನ್ನು, ತಮ್ಮ ಪಕ್ಷವನ್ನು ವಾಚಾಮಗೋಚರವಾಗಿ ಬಯ್ಯುತ್ತಿದ್ದಾಗ ಅದಕ್ಕೆ ಪ್ರತ್ಯುತ್ತರವನ್ನು ಕೊಡದೇ ವಿರೋಧ ಪಕ್ಷ ಕೂತಿದ್ದು ಇತಿಹಾಸದಲ್ಲಿ ದಾಖಲಾಗಿ ನಿಲ್ಲುತ್ತದೆ. ಹಾಗಾಗಿ ರಾಜಕೀಯ ವ್ಯವಸ್ಥೆಯ ವಿರುದ್ಧವೇ ಅವಿಶ್ವಾಸವು ಮೂಡುವಂತಹ ವಾತಾವರಣ ಇಂದು ಮೇಲುಗೈ ಸಾಧಿಸಿದೆ.

ಅವಕಾಶವಾದ ಹಾಗೂ ಅನೈತಿಕ ರಾಜಕಾರಣದ ಮೂಲಕ್ಕೆ ಹೋಗಿ ಅದಕ್ಕೆ ಮದ್ದು ಕಂಡುಹಿಡಿದಾಗ ಮಾತ್ರ ವಿಶ್ವಾಸ ಹುಟ್ಟುತ್ತದೆ. ಆ ನಿಟ್ಟಿನಲ್ಲಿ ಮಾನ-ಮರ್ಯಾದೆ ಇರುವ ಎಲ್ಲರೂ ಪ್ರಯತ್ನಿಸುವ ಅಗತ್ಯ ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...