Homeಕರ್ನಾಟಕಅವಕಾಶವಾದವನ್ನು ಸಿದ್ಧಾಂತವಾಗಿಸಿಕೊಂಡಾಗ ವಿಶ್ವಾಸ ಉಳಿಯುವ ಬಗೆ ಎಂತು?

ಅವಕಾಶವಾದವನ್ನು ಸಿದ್ಧಾಂತವಾಗಿಸಿಕೊಂಡಾಗ ವಿಶ್ವಾಸ ಉಳಿಯುವ ಬಗೆ ಎಂತು?

- Advertisement -
- Advertisement -

ಅವಕಾಶವಾದವು ನಮ್ಮ ಸಿದ್ಧಾಂತದ ಭಾಗ ಎಂದು ಬಹಿರಂಗವಾಗಿ ಘೋಷಿಸಿಕೊಂಡಿರುವ ಪಕ್ಷ ಬಹುಜನ ಸಮಾಜ ಪಕ್ಷ. ಆ ಪಕ್ಷದ ಸಿದ್ಧಾಂತದ ಕುರಿತು ಸಾವಿರಾರು ಯುವಜನರಿಗೆ ಪಾಠ ಹೇಳಿದವರು ಎನ್.ಮಹೇಶ್. ಇಂದು ನಡೆದ ವಿಶ್ವಾಸಮತ ಯಾಚನೆಯಲ್ಲಿ ತಮ್ಮ ಪಕ್ಷದ ಅಧಿನಾಯಕಿ ಮಾಯಾವತಿಯವರ ಸೂಚನೆಯನ್ನೂ ಧಿಕ್ಕರಿಸಿ ಗೈರು ಹಾಜರಾಗಿದ್ದಾರೆ. ಇದು ಹಲವರಿಗೆ ಶಾಕಿಂಗ್ ಇರಬಹುದು; ಆದರೆ ಆಶ್ಚರ್ಯಕರವಲ್ಲ. ಏಕೆಂದರೆ ಅವಕಾಶವಾದವು ಸಿದ್ಧಾಂತದ ಭಾಗ.

ಇನ್ನು ಕೆಲವರಿಗೆ ಶಾಕ್ ಅನಿಸಿರುವುದು ಎಚ್.ವಿಶ್ವನಾಥ್ ಅವರ ನಡವಳಿಕೆ. ಅವರು ಪುಸ್ತಕವೊಂದರಲ್ಲಿ ಬರೆದ ಕೆಲವು ಭಾಗಗಳನ್ನು ಡಿ.ಕೆ.ಶಿವಕುಮಾರ್ ಸದನದಲ್ಲಿ ಓದಿ ಹೇಳಿದರು. ಪಕ್ಷಾಂತರಿಗಳ ಯಾವುದೇ ವಾದವು ನಂಬಲರ್ಹವಲ್ಲ ಎಂದು ಸ್ವತಃ ವಿಶ್ವನಾಥ್ ಬರೆದಿರುವ ಮಾತುಗಳವು. ದೀರ್ಘಕಾಲದ ತಮ್ಮ ರಾಜಕೀಯ ವಿರೋಧಿ ಸಾ.ರಾ.ಮಹೇಶ್ ಸದನದಲ್ಲಿ ಹೇಳಿದ ನೈತಿಕತೆಯ ಪಾಠವನ್ನು ಮುಂಬೈನ ಹೋಟೆಲ್ ರೂಂನ ಟಿವಿಯಲ್ಲಿ ಎಚ್.ವಿಶ್ವನಾಥ್ ಕೇಳಿಸಿಕೊಂಡಿರುತ್ತಾರೆ. ‘ಇಂಥವರಿಂದ ತಾನು ಬುದ್ಧಿವಾದ ಕೇಳಬೇಕಾಯಿತು’ ಎಂದು ಪಕ್ಕದಲ್ಲಿದ್ದವರಿಗೆ ಹೇಳಿರದಿದ್ದರೆ ಅದು ಆಶ್ಚರ್ಯ. ಆದರೆ, ವಿಶ್ವನಾಥ್ ಇಂದು ಗಟಾರದ ರಾಜಕಾರಣದ ಭಾಗವಾಗಿರುವುದರಲ್ಲಿ ಸಂಶಯವೇ ಇಲ್ಲ.

ಸದನದಲ್ಲಿ ಶಿವಲಿಂಗೇಗೌಡ ಮತ್ತು ಬಿ.ನಾರಾಯಣರಾವ್‍ರ ಮಾತುಗಳು ಒಳಗಿನಿಂದ ಬಂದ ಮಾತುಗಳು ಎಂದು ಅನಿಸಿದ್ದರಿಂದ ಅವುಗಳು ಎಲ್ಲರ ಹೃದಯಕ್ಕೆ ತಟ್ಟಿದವು. ಕೃಷ್ಣಭೈರೇಗೌಡರ ಪ್ರಾಮಾಣಿಕತೆಯನ್ನು ಅನುಮಾನಿಸಲೂ ಕಾರಣಗಳಿಲ್ಲ.
ಆದರೆ, ಇಂಥದೇ ಮಾತನ್ನು ಸ್ವತಃ ಸ್ಪೀಕರ್ ರಮೇಶ್‍ಕುಮಾರ್‍ರ ಕುರಿತು ಹೇಳುವುದು ಸಾಧ್ಯವಿಲ್ಲ. ಅಪಾರ ಅನುಭವ, ಬುದ್ಧಿವಂತಿಕೆ ಮತ್ತು ಹಣಕಾಸಿನ ವಿಚಾರದಲ್ಲಿ ಎಂದೂ ಭ್ರಷ್ಟರಾಗದ ಮತ್ತು ಜಾತಿವಾದಿಯಾಗದ ರಮೇಶ್‍ಕುಮಾರ್ ಪಕ್ಷಾಂತರ ಮಾಡದೇ ತಮ್ಮ ಪಕ್ಷದ (ಸ್ಪೀಕರ್‍ಗೆ ಪಕ್ಷ ಇರುವುದಿಲ್ಲ ಎಂಬುದು ತಾಂತ್ರಿಕವಾದ ಸಂಗತಿಯಷ್ಟೇ) ಅಭ್ಯರ್ಥಿ ಸೋಲಲು ಮೊನ್ನೆಯ ಚುನಾವಣೆಯಲ್ಲಿ ತಮ್ಮ ಕೊಡುಗೆಯನ್ನೂ ಸಲ್ಲಿಸಿದ್ದರು. ಮಿಕ್ಕಂತೆ ಸ್ವಚ್ಛ ರಾಜಕಾರಣದ ಹಾಗೂ ತತ್ವನಿಷ್ಠೆಯ ಕುರಿತು ಅವರಾಡುವ ಮಾತುಗಳಲ್ಲಿ ಇಂತಹ ದ್ವಂದ್ವಗಳು ಇದ್ದೇ ಇವೆ.

ಮುಂದೊಂದು ದಿನ ತಾನು ಮುಖ್ಯಮಂತ್ರಿಯಾಗಲೇಬೇಕು, ಬಿಜೆಪಿಗೆ ಹೋದರೆ ಅದು ಸಾಧ್ಯವೇ ಇಲ್ಲ ಎಂದು ಖಚಿತವಾಗಿ ಗೊತ್ತಿರುವ ಡಿ.ಕೆ.ಶಿವಕುಮಾರ್ ಅದಕ್ಕಾಗಿ ಪಡುತ್ತಿರುವ ಕಷ್ಟ ಅಷ್ಟಿಷ್ಟಲ್ಲ. ಆದರೆ, ಇದೇ ಯಡಿಯೂರಪ್ಪನವರ ಜೊತೆಗಿನ ಅವರ ಸಖ್ಯ ಮತ್ತು ಇಂಧನ ಇಲಾಖೆಯ ಅವ್ಯವಹಾರದಲ್ಲಿ ಯಡಿಯೂರಪ್ಪನವರಿಗೆ ಮಾಡಿದ ಉಪಕಾರವನ್ನು ಪಕ್ಷಾಂತರ ಎಂದು ಕರೆಯಲಾಗದು. ಆದರೆ, ಪಕ್ಷ ಮೀರಿದ ಸಖ್ಯ ಕೇವಲ ಮನುಷ್ಯ ಸಂಬಂಧವಲ್ಲ. ಅದರಲ್ಲಿ ವ್ಯವಹಾರಿಕ ಮತ್ತು ಸ್ವಾರ್ಥದ ಲೆಕ್ಕಾಚಾರಗಳಿವೆ.

ದೇವೇಗೌಡರ ಕುಟುಂಬದ ಅವಕಾಶವಾದಕ್ಕೆ ಎಣೆಯೇ ಇಲ್ಲ. ಅವರಾಡುವ ಯಾವ ಮಾತುಗಳನ್ನೂ ನಂಬಬಹುದು ಎನಿಸುವುದಿಲ್ಲ. ನಿಖಿಲ್‍ನ್ನು ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿಸಿದ್ದೇಕೆ ಎಂಬ ಕುರಿತು ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್‍ನಲ್ಲಿ ದೇವೇಗೌಡರು ವಿವರಿಸಿದ್ದನ್ನು ಸ್ವತಃ ನಿಖಿಲ್ ನಂಬಿರುವುದಿಲ್ಲ.

ಪಕ್ಷ ಸಿದ್ಧಾಂತ, ಭಾರತೀಯ ಸಂಸ್ಕøತಿ, ಭ್ರಷ್ಟಾಚಾರಕ್ಕೆ ವಿರೋಧ, ಕಾಂಗ್ರೆಸ್ ಸಂಸ್ಕøತಿಗೆ ಪ್ರತಿರೋಧ, ಪಕ್ಷಕ್ಕೆ ಬದ್ಧರಾಗಿ ದುಡಿವ ಕಾರ್ಯಕರ್ತರಿಗೆ ಮನ್ನಣೆ ಇತ್ಯಾದಿಗಳನ್ನು ಹೇಳುತ್ತಾ ಬಂದಿರುವ ಬಿಜೆಪಿ ಈಗಲೂ ಆ ಮಾತುಗಳನ್ನು ಹೇಳಲು ಹಿಂಜರಿಯುವುದಿಲ್ಲ. ಅದೇ ಸೋಜಿಗದ ಸಂಗತಿ. ಆ ಹಿಂಜರಿಕೆಯೂ ಏಕಿಲ್ಲವೆಂದರೆ ಅದರಷ್ಟೇ ಅವಕಾಶವಾದಿಯಾದ ಮಾಧ್ಯಮ ಸಮೂಹ ಅಂತಹ ಪ್ರಶ್ನೆಗಳು ವಿರೋಧ ಪಕ್ಷಗಳಿಗೆ ಕೇಳಲು ಮಾತ್ರ ಇವೆಯೆಂದು ಭಾವಿಸಿವೆ. ಮಾಧ್ಯಮಗಳು ಮತ್ತು ಬಿಜೆಪಿ ಪಕ್ಷ ಎನ್ನುವುದು ಒಂದೇ ಪ್ಯಾಕೇಜ್‍ನ ಭಾಗ.
ಬಿಜೆಪಿ ಪಕ್ಷದಲ್ಲಿ ಸಜ್ಜನರೆಂದು ತೋರಿಸಿಕೊಳ್ಳಲು ಹಾತೊರೆಯುವ ಶಾಸಕರೊಬ್ಬರಿದ್ದಾರೆ. ರಾಜಾಜಿನಗರದ ಸುರೇಶ್‍ಕುಮಾರ್. ಅವರು ‘ವಿಶ್ವಾಸಮತ ಯಾಚನೆಗೆ ಮುಂದಾದ ಮೇಲೂ ವರ್ಗಾವಣೆಗಳನ್ನು ಮಾಡುತ್ತಿರುವ ಕುಮಾರಸ್ವಾಮಿ ಸರ್ಕಾರವನ್ನು’ ಸಕಾರಣವಾಗಿ ತರಾಟೆಗೆ ತೆಗೆದುಕೊಳ್ಳುತ್ತಾರೆ. ಆದರೆ, ತಮ್ಮ ಪಕ್ಷದಿಂದ ಮುಖ್ಯಮಂತ್ರಿ ಮಾಡಲು ಹೊರಟಿರುವ ಯಡಿಯೂರಪ್ಪನವರು ಈ ಹಿಂದೆ ಪ್ರಮಾಣವಚನ ಸ್ವೀಕರಿಸಿ ವಿಶ್ವಾಸಮತ ಯಾಚನೆ ಮಾಡುವುದಕ್ಕೆ ಮುಂಚೆಯೇ ವರ್ಗಾವಣೆ ಮಾಡಿದ್ದನ್ನು ಮರೆಯುತ್ತಾರೆ. ಇಂತಹವರ ಅವಕಾಶವಾದಕ್ಕೆ ಸಾವಿರಾರು ಉದಾಹರಣೆಗಳು ಸಿಗುತ್ತವೆ.

ಈಗಾಗಲೇ ಹೇಳಿರುವಂತೆ ಅವಕಾಶವಾದಕ್ಕೆ ಮತ್ತೊಂದು ಹೆಸರೇ ಮಾಧ್ಯಮವಾಗಿದೆ. ಒಂದೇ ಬಗೆಯ ಎರಡು ಪ್ರಕರಣಗಳಲ್ಲಿ ಬಿಜೆಪಿ ಅಥವಾ ವಿರೋಧ ಪಕ್ಷಗಳಲ್ಲಿ ಯಾರು ಇದ್ದಾರೆ ಎಂಬುದರ ಮೇಲೆ ಅವರ ನಿಲುವೇ ಬದಲಾಗುತ್ತದೆ. ಪಕ್ಷವೊಂದರ ಪರವಾಗಿ ಪ್ರಚಾರಕ್ಕೇ ನಿಂತಿರುವ ಉಪಕರಣ ಅದು.

ಈ ರೀತಿಯಾಗಿ ಅವಕಾಶವಾದವನ್ನೇ ಬಿತ್ತಿ ಬೆಳೆದಿರುವ ಇಂದಿನ ರಾಜಕಾರಣದಲ್ಲಿ ಯಾವ ವಿಶ್ವಾಸ ಉಳಿದಿದೆ. ಕೆಲವು ಅತ್ಯುತ್ತಮ ಭಾಷಣಗಳನ್ನೂ, ಸಾಂವಿಧಾನಿಕ ನಡಾವಳಿಗಳನ್ನೂ ಕಂಡ ವಿಶ್ವಾಸಮತ ಯಾಚನೆಯ ಅಧಿವೇಶನದಲ್ಲಿ ಒಂದೆರಡು ಉತ್ತಮ ಅಂಶಗಳು ಇದ್ದವು. ಆದರೆ, ಅದಕ್ಕಿಂತ ನೂರು ಪಟ್ಟು ಕೊಳಕು ಎದ್ದು ಕಾಣುತ್ತಿತ್ತು. ತಮ್ಮನ್ನು, ತಮ್ಮ ಪಕ್ಷವನ್ನು ವಾಚಾಮಗೋಚರವಾಗಿ ಬಯ್ಯುತ್ತಿದ್ದಾಗ ಅದಕ್ಕೆ ಪ್ರತ್ಯುತ್ತರವನ್ನು ಕೊಡದೇ ವಿರೋಧ ಪಕ್ಷ ಕೂತಿದ್ದು ಇತಿಹಾಸದಲ್ಲಿ ದಾಖಲಾಗಿ ನಿಲ್ಲುತ್ತದೆ. ಹಾಗಾಗಿ ರಾಜಕೀಯ ವ್ಯವಸ್ಥೆಯ ವಿರುದ್ಧವೇ ಅವಿಶ್ವಾಸವು ಮೂಡುವಂತಹ ವಾತಾವರಣ ಇಂದು ಮೇಲುಗೈ ಸಾಧಿಸಿದೆ.

ಅವಕಾಶವಾದ ಹಾಗೂ ಅನೈತಿಕ ರಾಜಕಾರಣದ ಮೂಲಕ್ಕೆ ಹೋಗಿ ಅದಕ್ಕೆ ಮದ್ದು ಕಂಡುಹಿಡಿದಾಗ ಮಾತ್ರ ವಿಶ್ವಾಸ ಹುಟ್ಟುತ್ತದೆ. ಆ ನಿಟ್ಟಿನಲ್ಲಿ ಮಾನ-ಮರ್ಯಾದೆ ಇರುವ ಎಲ್ಲರೂ ಪ್ರಯತ್ನಿಸುವ ಅಗತ್ಯ ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...