Homeಕರ್ನಾಟಕಅವಕಾಶವಾದವನ್ನು ಸಿದ್ಧಾಂತವಾಗಿಸಿಕೊಂಡಾಗ ವಿಶ್ವಾಸ ಉಳಿಯುವ ಬಗೆ ಎಂತು?

ಅವಕಾಶವಾದವನ್ನು ಸಿದ್ಧಾಂತವಾಗಿಸಿಕೊಂಡಾಗ ವಿಶ್ವಾಸ ಉಳಿಯುವ ಬಗೆ ಎಂತು?

- Advertisement -
- Advertisement -

ಅವಕಾಶವಾದವು ನಮ್ಮ ಸಿದ್ಧಾಂತದ ಭಾಗ ಎಂದು ಬಹಿರಂಗವಾಗಿ ಘೋಷಿಸಿಕೊಂಡಿರುವ ಪಕ್ಷ ಬಹುಜನ ಸಮಾಜ ಪಕ್ಷ. ಆ ಪಕ್ಷದ ಸಿದ್ಧಾಂತದ ಕುರಿತು ಸಾವಿರಾರು ಯುವಜನರಿಗೆ ಪಾಠ ಹೇಳಿದವರು ಎನ್.ಮಹೇಶ್. ಇಂದು ನಡೆದ ವಿಶ್ವಾಸಮತ ಯಾಚನೆಯಲ್ಲಿ ತಮ್ಮ ಪಕ್ಷದ ಅಧಿನಾಯಕಿ ಮಾಯಾವತಿಯವರ ಸೂಚನೆಯನ್ನೂ ಧಿಕ್ಕರಿಸಿ ಗೈರು ಹಾಜರಾಗಿದ್ದಾರೆ. ಇದು ಹಲವರಿಗೆ ಶಾಕಿಂಗ್ ಇರಬಹುದು; ಆದರೆ ಆಶ್ಚರ್ಯಕರವಲ್ಲ. ಏಕೆಂದರೆ ಅವಕಾಶವಾದವು ಸಿದ್ಧಾಂತದ ಭಾಗ.

ಇನ್ನು ಕೆಲವರಿಗೆ ಶಾಕ್ ಅನಿಸಿರುವುದು ಎಚ್.ವಿಶ್ವನಾಥ್ ಅವರ ನಡವಳಿಕೆ. ಅವರು ಪುಸ್ತಕವೊಂದರಲ್ಲಿ ಬರೆದ ಕೆಲವು ಭಾಗಗಳನ್ನು ಡಿ.ಕೆ.ಶಿವಕುಮಾರ್ ಸದನದಲ್ಲಿ ಓದಿ ಹೇಳಿದರು. ಪಕ್ಷಾಂತರಿಗಳ ಯಾವುದೇ ವಾದವು ನಂಬಲರ್ಹವಲ್ಲ ಎಂದು ಸ್ವತಃ ವಿಶ್ವನಾಥ್ ಬರೆದಿರುವ ಮಾತುಗಳವು. ದೀರ್ಘಕಾಲದ ತಮ್ಮ ರಾಜಕೀಯ ವಿರೋಧಿ ಸಾ.ರಾ.ಮಹೇಶ್ ಸದನದಲ್ಲಿ ಹೇಳಿದ ನೈತಿಕತೆಯ ಪಾಠವನ್ನು ಮುಂಬೈನ ಹೋಟೆಲ್ ರೂಂನ ಟಿವಿಯಲ್ಲಿ ಎಚ್.ವಿಶ್ವನಾಥ್ ಕೇಳಿಸಿಕೊಂಡಿರುತ್ತಾರೆ. ‘ಇಂಥವರಿಂದ ತಾನು ಬುದ್ಧಿವಾದ ಕೇಳಬೇಕಾಯಿತು’ ಎಂದು ಪಕ್ಕದಲ್ಲಿದ್ದವರಿಗೆ ಹೇಳಿರದಿದ್ದರೆ ಅದು ಆಶ್ಚರ್ಯ. ಆದರೆ, ವಿಶ್ವನಾಥ್ ಇಂದು ಗಟಾರದ ರಾಜಕಾರಣದ ಭಾಗವಾಗಿರುವುದರಲ್ಲಿ ಸಂಶಯವೇ ಇಲ್ಲ.

ಸದನದಲ್ಲಿ ಶಿವಲಿಂಗೇಗೌಡ ಮತ್ತು ಬಿ.ನಾರಾಯಣರಾವ್‍ರ ಮಾತುಗಳು ಒಳಗಿನಿಂದ ಬಂದ ಮಾತುಗಳು ಎಂದು ಅನಿಸಿದ್ದರಿಂದ ಅವುಗಳು ಎಲ್ಲರ ಹೃದಯಕ್ಕೆ ತಟ್ಟಿದವು. ಕೃಷ್ಣಭೈರೇಗೌಡರ ಪ್ರಾಮಾಣಿಕತೆಯನ್ನು ಅನುಮಾನಿಸಲೂ ಕಾರಣಗಳಿಲ್ಲ.
ಆದರೆ, ಇಂಥದೇ ಮಾತನ್ನು ಸ್ವತಃ ಸ್ಪೀಕರ್ ರಮೇಶ್‍ಕುಮಾರ್‍ರ ಕುರಿತು ಹೇಳುವುದು ಸಾಧ್ಯವಿಲ್ಲ. ಅಪಾರ ಅನುಭವ, ಬುದ್ಧಿವಂತಿಕೆ ಮತ್ತು ಹಣಕಾಸಿನ ವಿಚಾರದಲ್ಲಿ ಎಂದೂ ಭ್ರಷ್ಟರಾಗದ ಮತ್ತು ಜಾತಿವಾದಿಯಾಗದ ರಮೇಶ್‍ಕುಮಾರ್ ಪಕ್ಷಾಂತರ ಮಾಡದೇ ತಮ್ಮ ಪಕ್ಷದ (ಸ್ಪೀಕರ್‍ಗೆ ಪಕ್ಷ ಇರುವುದಿಲ್ಲ ಎಂಬುದು ತಾಂತ್ರಿಕವಾದ ಸಂಗತಿಯಷ್ಟೇ) ಅಭ್ಯರ್ಥಿ ಸೋಲಲು ಮೊನ್ನೆಯ ಚುನಾವಣೆಯಲ್ಲಿ ತಮ್ಮ ಕೊಡುಗೆಯನ್ನೂ ಸಲ್ಲಿಸಿದ್ದರು. ಮಿಕ್ಕಂತೆ ಸ್ವಚ್ಛ ರಾಜಕಾರಣದ ಹಾಗೂ ತತ್ವನಿಷ್ಠೆಯ ಕುರಿತು ಅವರಾಡುವ ಮಾತುಗಳಲ್ಲಿ ಇಂತಹ ದ್ವಂದ್ವಗಳು ಇದ್ದೇ ಇವೆ.

ಮುಂದೊಂದು ದಿನ ತಾನು ಮುಖ್ಯಮಂತ್ರಿಯಾಗಲೇಬೇಕು, ಬಿಜೆಪಿಗೆ ಹೋದರೆ ಅದು ಸಾಧ್ಯವೇ ಇಲ್ಲ ಎಂದು ಖಚಿತವಾಗಿ ಗೊತ್ತಿರುವ ಡಿ.ಕೆ.ಶಿವಕುಮಾರ್ ಅದಕ್ಕಾಗಿ ಪಡುತ್ತಿರುವ ಕಷ್ಟ ಅಷ್ಟಿಷ್ಟಲ್ಲ. ಆದರೆ, ಇದೇ ಯಡಿಯೂರಪ್ಪನವರ ಜೊತೆಗಿನ ಅವರ ಸಖ್ಯ ಮತ್ತು ಇಂಧನ ಇಲಾಖೆಯ ಅವ್ಯವಹಾರದಲ್ಲಿ ಯಡಿಯೂರಪ್ಪನವರಿಗೆ ಮಾಡಿದ ಉಪಕಾರವನ್ನು ಪಕ್ಷಾಂತರ ಎಂದು ಕರೆಯಲಾಗದು. ಆದರೆ, ಪಕ್ಷ ಮೀರಿದ ಸಖ್ಯ ಕೇವಲ ಮನುಷ್ಯ ಸಂಬಂಧವಲ್ಲ. ಅದರಲ್ಲಿ ವ್ಯವಹಾರಿಕ ಮತ್ತು ಸ್ವಾರ್ಥದ ಲೆಕ್ಕಾಚಾರಗಳಿವೆ.

ದೇವೇಗೌಡರ ಕುಟುಂಬದ ಅವಕಾಶವಾದಕ್ಕೆ ಎಣೆಯೇ ಇಲ್ಲ. ಅವರಾಡುವ ಯಾವ ಮಾತುಗಳನ್ನೂ ನಂಬಬಹುದು ಎನಿಸುವುದಿಲ್ಲ. ನಿಖಿಲ್‍ನ್ನು ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿಸಿದ್ದೇಕೆ ಎಂಬ ಕುರಿತು ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್‍ನಲ್ಲಿ ದೇವೇಗೌಡರು ವಿವರಿಸಿದ್ದನ್ನು ಸ್ವತಃ ನಿಖಿಲ್ ನಂಬಿರುವುದಿಲ್ಲ.

ಪಕ್ಷ ಸಿದ್ಧಾಂತ, ಭಾರತೀಯ ಸಂಸ್ಕøತಿ, ಭ್ರಷ್ಟಾಚಾರಕ್ಕೆ ವಿರೋಧ, ಕಾಂಗ್ರೆಸ್ ಸಂಸ್ಕøತಿಗೆ ಪ್ರತಿರೋಧ, ಪಕ್ಷಕ್ಕೆ ಬದ್ಧರಾಗಿ ದುಡಿವ ಕಾರ್ಯಕರ್ತರಿಗೆ ಮನ್ನಣೆ ಇತ್ಯಾದಿಗಳನ್ನು ಹೇಳುತ್ತಾ ಬಂದಿರುವ ಬಿಜೆಪಿ ಈಗಲೂ ಆ ಮಾತುಗಳನ್ನು ಹೇಳಲು ಹಿಂಜರಿಯುವುದಿಲ್ಲ. ಅದೇ ಸೋಜಿಗದ ಸಂಗತಿ. ಆ ಹಿಂಜರಿಕೆಯೂ ಏಕಿಲ್ಲವೆಂದರೆ ಅದರಷ್ಟೇ ಅವಕಾಶವಾದಿಯಾದ ಮಾಧ್ಯಮ ಸಮೂಹ ಅಂತಹ ಪ್ರಶ್ನೆಗಳು ವಿರೋಧ ಪಕ್ಷಗಳಿಗೆ ಕೇಳಲು ಮಾತ್ರ ಇವೆಯೆಂದು ಭಾವಿಸಿವೆ. ಮಾಧ್ಯಮಗಳು ಮತ್ತು ಬಿಜೆಪಿ ಪಕ್ಷ ಎನ್ನುವುದು ಒಂದೇ ಪ್ಯಾಕೇಜ್‍ನ ಭಾಗ.
ಬಿಜೆಪಿ ಪಕ್ಷದಲ್ಲಿ ಸಜ್ಜನರೆಂದು ತೋರಿಸಿಕೊಳ್ಳಲು ಹಾತೊರೆಯುವ ಶಾಸಕರೊಬ್ಬರಿದ್ದಾರೆ. ರಾಜಾಜಿನಗರದ ಸುರೇಶ್‍ಕುಮಾರ್. ಅವರು ‘ವಿಶ್ವಾಸಮತ ಯಾಚನೆಗೆ ಮುಂದಾದ ಮೇಲೂ ವರ್ಗಾವಣೆಗಳನ್ನು ಮಾಡುತ್ತಿರುವ ಕುಮಾರಸ್ವಾಮಿ ಸರ್ಕಾರವನ್ನು’ ಸಕಾರಣವಾಗಿ ತರಾಟೆಗೆ ತೆಗೆದುಕೊಳ್ಳುತ್ತಾರೆ. ಆದರೆ, ತಮ್ಮ ಪಕ್ಷದಿಂದ ಮುಖ್ಯಮಂತ್ರಿ ಮಾಡಲು ಹೊರಟಿರುವ ಯಡಿಯೂರಪ್ಪನವರು ಈ ಹಿಂದೆ ಪ್ರಮಾಣವಚನ ಸ್ವೀಕರಿಸಿ ವಿಶ್ವಾಸಮತ ಯಾಚನೆ ಮಾಡುವುದಕ್ಕೆ ಮುಂಚೆಯೇ ವರ್ಗಾವಣೆ ಮಾಡಿದ್ದನ್ನು ಮರೆಯುತ್ತಾರೆ. ಇಂತಹವರ ಅವಕಾಶವಾದಕ್ಕೆ ಸಾವಿರಾರು ಉದಾಹರಣೆಗಳು ಸಿಗುತ್ತವೆ.

ಈಗಾಗಲೇ ಹೇಳಿರುವಂತೆ ಅವಕಾಶವಾದಕ್ಕೆ ಮತ್ತೊಂದು ಹೆಸರೇ ಮಾಧ್ಯಮವಾಗಿದೆ. ಒಂದೇ ಬಗೆಯ ಎರಡು ಪ್ರಕರಣಗಳಲ್ಲಿ ಬಿಜೆಪಿ ಅಥವಾ ವಿರೋಧ ಪಕ್ಷಗಳಲ್ಲಿ ಯಾರು ಇದ್ದಾರೆ ಎಂಬುದರ ಮೇಲೆ ಅವರ ನಿಲುವೇ ಬದಲಾಗುತ್ತದೆ. ಪಕ್ಷವೊಂದರ ಪರವಾಗಿ ಪ್ರಚಾರಕ್ಕೇ ನಿಂತಿರುವ ಉಪಕರಣ ಅದು.

ಈ ರೀತಿಯಾಗಿ ಅವಕಾಶವಾದವನ್ನೇ ಬಿತ್ತಿ ಬೆಳೆದಿರುವ ಇಂದಿನ ರಾಜಕಾರಣದಲ್ಲಿ ಯಾವ ವಿಶ್ವಾಸ ಉಳಿದಿದೆ. ಕೆಲವು ಅತ್ಯುತ್ತಮ ಭಾಷಣಗಳನ್ನೂ, ಸಾಂವಿಧಾನಿಕ ನಡಾವಳಿಗಳನ್ನೂ ಕಂಡ ವಿಶ್ವಾಸಮತ ಯಾಚನೆಯ ಅಧಿವೇಶನದಲ್ಲಿ ಒಂದೆರಡು ಉತ್ತಮ ಅಂಶಗಳು ಇದ್ದವು. ಆದರೆ, ಅದಕ್ಕಿಂತ ನೂರು ಪಟ್ಟು ಕೊಳಕು ಎದ್ದು ಕಾಣುತ್ತಿತ್ತು. ತಮ್ಮನ್ನು, ತಮ್ಮ ಪಕ್ಷವನ್ನು ವಾಚಾಮಗೋಚರವಾಗಿ ಬಯ್ಯುತ್ತಿದ್ದಾಗ ಅದಕ್ಕೆ ಪ್ರತ್ಯುತ್ತರವನ್ನು ಕೊಡದೇ ವಿರೋಧ ಪಕ್ಷ ಕೂತಿದ್ದು ಇತಿಹಾಸದಲ್ಲಿ ದಾಖಲಾಗಿ ನಿಲ್ಲುತ್ತದೆ. ಹಾಗಾಗಿ ರಾಜಕೀಯ ವ್ಯವಸ್ಥೆಯ ವಿರುದ್ಧವೇ ಅವಿಶ್ವಾಸವು ಮೂಡುವಂತಹ ವಾತಾವರಣ ಇಂದು ಮೇಲುಗೈ ಸಾಧಿಸಿದೆ.

ಅವಕಾಶವಾದ ಹಾಗೂ ಅನೈತಿಕ ರಾಜಕಾರಣದ ಮೂಲಕ್ಕೆ ಹೋಗಿ ಅದಕ್ಕೆ ಮದ್ದು ಕಂಡುಹಿಡಿದಾಗ ಮಾತ್ರ ವಿಶ್ವಾಸ ಹುಟ್ಟುತ್ತದೆ. ಆ ನಿಟ್ಟಿನಲ್ಲಿ ಮಾನ-ಮರ್ಯಾದೆ ಇರುವ ಎಲ್ಲರೂ ಪ್ರಯತ್ನಿಸುವ ಅಗತ್ಯ ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...