Homeಕರ್ನಾಟಕಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜು.26, 27ರವರೆಗೆ ಅವಕಾಶ: ಸಚಿವ ಕೆಜೆ ಜಾರ್ಜ್

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜು.26, 27ರವರೆಗೆ ಅವಕಾಶ: ಸಚಿವ ಕೆಜೆ ಜಾರ್ಜ್

- Advertisement -
- Advertisement -

ಜುಲೈ.26, 27ರವರೆಗೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಜುಲೈ ತಿಂಗಳ ಬಿಲ್ ಮುಂದಿನ ತಿಂಗಳ ಮೊದಲ ವಾರ ಬರುತ್ತದೆ. ಇನ್ನೆರಡು ತಿಂಗಳಲ್ಲಿ ಕೆಇಬಿ ಕಚೇರಿಗಳಲ್ಲಿ ಅದಾಲತ್ ನಡೆಸುತ್ತೇವೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದ್ದಾರೆ.

ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರೆಂಟಿಗಳಲ್ಲಿ ಒಂದಾದ ”ಗೃಹ ಜ್ಯೋತಿ” ಯೋಜನೆ ಬಗ್ಗೆ ವಿಧಾನಸಭೆಯ ಅಧಿವೇಶನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ​​ಕೆ ಜೆ ಜಾರ್ಜ್ ಅವರು,​ ”ಗೃಹಜ್ಯೋತಿ ಯೋಜನೆಗೆ ಅರ್ಜಿ ಹಾಕದವರಿಗಾಗಿ ಈ ಅದಾಲತ್ ಪ್ರಾರಂಭಿಸುತ್ತೇವೆ. ಎಲ್ಲ ಅರ್ಹರಿಗೂ ಉಚಿತ ವಿದ್ಯುತ್ ಕೊಡಲು ಪ್ರಯತ್ನ ಮಾಡುತ್ತೇವೆ” ಎಂದು ತಿಳಿಸಿದರು.

”ಯಾರೆಲ್ಲಾ ಗೃಹಜ್ಯೋತಿಯಡಿ ಅರ್ಜಿ ಹಾಕುವುದರಿಂದ ಬಿಟ್ಟು ಹೋಗಿದ್ದಾರೋ ಅವರಿಗಾಗಿ ಈ ಅದಾಲತ್. ಅದಕ್ಕಾಗಿಯೇ ನಾವು ಈ ಯೋಜನೆಗೆ ಕಟ್ ಆಫ್ ಡೇಟ್ ಇನ್ನೂ ಕೊಡಲಿಲ್ಲ. ಆದಷ್ಟು ಎಲ್ಲಾ ಅರ್ಹರಿಗೂ ಉಚಿತ ವಿದ್ಯುತ್ ಕೊಡಲು ಪ್ರಯತ್ನ ಮಾಡುತ್ತೇವೆ” ಎಂದು ಜಾರ್ಜ್‌ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿಯವರು ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರೆಂಟಿಗಳ ಬಗ್ಗೆ ಪ್ರಸ್ತಾಪಿಸಿದರು. ಹೆಚ್​ ಡಿ ಕುಮಾರಸ್ವಾಮಿಯವರ​ ಮಾತಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಬೆಂಬಲ ವ್ಯಕ್ತಪಡಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯೆ ಪ್ರವೇಶಿಸಿದರು.

”ಯತ್ನಾಳ್ ಅವರೇ ನೀವು ತಿಂಗಳಿಗೆ 100, 110 ಯೂನಿಟ್ ವಿದ್ಯುತ್ ಸರಾಸರಿ ಬಳಸುತ್ತಿದ್ದೀರಿ ಅಂದುಕೊಳ್ಳಿ, ಒಂದು ವರ್ಷದಿಂದ ಬಳಸುತ್ತಿದ್ದರೇ ಸರಾಸರಿ ಅಷ್ಟೇ ಬರುತ್ತದೆ. ಹಾಗಾಗಿ ನಿಮಗೆ 200 ಯೂನಿಟ್ ವಿದ್ಯುತ್ ಕೊಡೋ ಅಗತ್ಯ ಇದೆಯಾ? ನೀವು ಪದೇ ಪದೇ ಮಾತಾಡಿದರೇ ಸಂಸದೀಯ ಪಟು ಆಗಲ್ಲ. ನಿಮ್ಮನ್ನು ವಿಪಕ್ಷ ನಾಯಕನಾಗಿಯೂ ಮಾಡಲ್ಲ. ನನಗೆ ಇರುವ ಮಾಹಿತಿ ಪ್ರಕಾರ ನಿಮ್ಮನ್ನು ವಿಪಕ್ಷ ನಾಯಕ ಮಾಡಲ್ಲ” ಎಂದು ಸಿದ್ದರಾಮಯ್ಯ ಅವರು ಕಾಲೆಳೆದರು.

ಇದನ್ನೂ ಓದಿ: ಗೃಹಜ್ಯೋತಿ ಅರ್ಜಿ ನೋಂದಣಿ: ನಕಲಿ ಲಿಂಕ್‌ಗಳ ಬಗ್ಗೆ ಬೆಸ್ಕಾಂ ಎಚ್ಚರಿಕೆ, ಇಲ್ಲಿದೆ ಅಸಲಿ ಲಿಂಕ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...