Homeಮುಖಪುಟಅಲ್ಪಸಂಖ್ಯಾತರ ಹಕ್ಕು ಕಸಿಯುವ ಕರ್ನಾಟಕ ಸೊಸೈಟಿ ತಿದ್ದುಪಡಿ ವಿಧೇಯಕ ಸೋಲಿಸಿ: PFI

ಅಲ್ಪಸಂಖ್ಯಾತರ ಹಕ್ಕು ಕಸಿಯುವ ಕರ್ನಾಟಕ ಸೊಸೈಟಿ ತಿದ್ದುಪಡಿ ವಿಧೇಯಕ ಸೋಲಿಸಿ: PFI

- Advertisement -
- Advertisement -

ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಂಡಿರುವ ಕರ್ನಾಟಕ ಸೊಸೈಟಿಗಳ ತಿದ್ದುಪಡಿ ವಿಧೇಯಕವು ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿಯುವ ಹುನ್ನಾರವಾಗಿದೆ. ಹಾಗಾಗಿ ತಿದ್ದುಪಡಿ ವಿಧೇಯಕವನ್ನು ಮೇಲ್ಮನೆಯಲ್ಲಿ ವಿಫಲಗೊಳಿಸಲು ಜಾತ್ಯತೀತ ಪಕ್ಷಗಳಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಕರೆ ನೀಡಿದ್ದಾರೆ.

ವಿಧೇಯಕ ಕಾನೂನಾಗಿ ಜಾರಿಯಾದ ನಂತರ, ಕೆಲವೊಂದು ಸಬೂಬುಗಳನ್ನು ಮುಂದಿಟ್ಟುಕೊಂಡು ಸರಕಾರವು ಅಲ್ಪಸಂಖ್ಯಾತರ ಸಂಸ್ಥೆಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸುವ ಮೂಲಕ ಅಲ್ಪಸಂಖ್ಯಾತರ ಸಂಸ್ಥೆಗಳ ನಿಯಂತ್ರಣವನ್ನು ತನ್ನ ಸುಪರ್ದಿಗೆ ಪಡೆಯುವ ಹುನ್ನಾರ ನಡೆಸುತ್ತಿದೆ. ಸರಕಾರದಿಂದ ರಚಿಸಲಾದ ಸಂಸ್ಥೆಗಳಿಗೆ ಸರಕಾರವು ಆಡಳಿತಾಧಿಕಾರಿಯನ್ನು ನೇಮಿಸಲು ಯಾವುದೇ ತೊಡಕಿಲ್ಲ. ಆದರೆ ಸಹಕಾರಿ ಸಂಸ್ಥೆಗಳು ಸರಕಾರೇತರ ಸಂಸ್ಥೆಗಳಾಗಿದ್ದು, ಇವು ಸರಕಾರದಿಂದ ಯಾವುದೇ ಅನುದಾನ ಪಡೆಯುತ್ತಿಲ್ಲ. ಈ ನಿಟ್ಟಿನಲ್ಲಿ ಪ್ರಸಕ್ತ ತಿದ್ದುಪಡಿಯ ಮೂಲಕ ಅಲ್ಪಸಂಖ್ಯಾತರ ಸೊಸೈಟಿಗಳಲ್ಲಿ ಸರಕಾರ ಮಾಡುತ್ತಿರುವ ಹಸ್ತಕ್ಷೇಪವು ಸಂವಿಧಾನ ವಿರೋಧಿಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, “ಅಲ್ಪ ಸಂಖ್ಯಾತ ಸಂಸ್ಥೆಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸುವ ಅವಕಾಶ ಸಂವಿಧಾನಬಾಹಿರ ಎಂದು ಕರ್ನಾಟಕ ಹೈಕೋರ್ಟ್ 1987ರಲ್ಲೇ ಆದೇಶ ನೀಡಿದೆ. ಆದರೂ ಬಿಜೆಪಿ ಸರಕಾರವು ಇದಕ್ಕೆ ಕಾನೂನಿನ ಮಾನ್ಯತೆ ನೀಡಲು ತಿದ್ದುಪಡಿಯನ್ನು ತಂದಿದೆ” ಎಂದು ಕಿಡಿಕಾರಿದ್ದಾರೆ.

ಅಲ್ಪಸಂಖ್ಯಾತರ ವಿರೋಧಿ ನಿಲುವು ಹೊಂದಿರುವ ಬಿಜೆಪಿ ಸರಕಾರವು ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಯೋಜನೆ, ಅನುದಾನಗಳನ್ನು ನಿರಂತರವಾಗಿ ಕಡಿತಗೊಳಿಸುತ್ತಾ ತಾರತಮ್ಯ ಎಸಗುತ್ತಿರುವುದು ಖಂಡನಾರ್ಹವಾಗಿದೆ. ಈ ಮಧ್ಯೆ ಸಿಡಿ ಪ್ರಕರಣದ ಗದ್ದಲದ ನಡುವೆ ಯಾವುದೇ ಚರ್ಚೆಗಳಿಲ್ಲದೆ ವಿಧೇಯಕಕ್ಕೆ ಅನುಮೋದನೆ ದೊರಕಿರುವುದು ವಿರೋಧ ಪಕ್ಷಗಳ ವೈಫಲ್ಯವನ್ನು ಬೊಟ್ಟು ಮಾಡುತ್ತದೆ. ಹಲವು ಸಮಯಗಳಿಂದ ಈ ವಿಚಾರ ಚರ್ಚೆಯಲ್ಲಿತ್ತಾದರೂ ಜಾತ್ಯತೀತ ಪಕ್ಷಗಳು ಇದಕ್ಕೆ ಮಹತ್ವ ನೀಡದಿರುವುದು ಅಲ್ಪಸಂಖ್ಯಾತರ ಪರವಾದ ಅವರ ನಿರ್ಲಕ್ಷ್ಯ ಭಾವವನ್ನು ಸ್ಟಷ್ಟಪಡಿಸುತ್ತದೆ ಎಂದು ಯಾಸಿರ್ ಹಸನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಾತ್ಯತೀತ ಪಕ್ಷಗಳ ಪ್ರಾಬಲ್ಯವಿದ್ದರೂ, ಬಿಜೆಪಿ ಸರಕಾರವು ಹಿಂಬಾಗಿಲ ಮೂಲಕ ಮೇಲ್ಮನೆಯಲ್ಲಿ ರೈತವಿರೋಧಿ, ಜನವಿರೋಧಿ ಗೋ ಹತ್ಯೆ ಮಸೂದೆ ಅಂಗೀಕರಿಸಲು ಇತ್ತೀಚಿಗೆ ಸಫಲವಾಗಿತ್ತು. ಆದರೆ ಈ ಬಾರಿ ಅಲ್ಪಸಂಖ್ಯಾತರ ಪರವಾದ ತಮ್ಮ ಬದ್ಧತೆಯನ್ನು ಖಾತರಿಪಡಿಸಲು ವಿಪಕ್ಷಗಳು ಒಗ್ಗಟ್ಟಾಗಿ ಈ ವಿಧೇಯಕವನ್ನು ವಿಫಲಗೊಳಿಸಬೇಕೆಂದು ಅವರು ಕರೆ ನೀಡಿದ್ದಾರೆ.


ಇದನ್ನೂ ಓದಿ: ಪಿಎಂ ವಸತಿ ಯೋಜನೆ: 2.6 ಲಕ್ಷ ಫೇಕ್ ಅಕೌಂಟ್, 14 ಸಾವಿರ ಕೋಟಿ ರೂ ಗುಳುಂ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...