Homeಮುಖಪುಟಅಲ್ಪಸಂಖ್ಯಾತರ ಹಕ್ಕು ಕಸಿಯುವ ಕರ್ನಾಟಕ ಸೊಸೈಟಿ ತಿದ್ದುಪಡಿ ವಿಧೇಯಕ ಸೋಲಿಸಿ: PFI

ಅಲ್ಪಸಂಖ್ಯಾತರ ಹಕ್ಕು ಕಸಿಯುವ ಕರ್ನಾಟಕ ಸೊಸೈಟಿ ತಿದ್ದುಪಡಿ ವಿಧೇಯಕ ಸೋಲಿಸಿ: PFI

- Advertisement -
- Advertisement -

ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಂಡಿರುವ ಕರ್ನಾಟಕ ಸೊಸೈಟಿಗಳ ತಿದ್ದುಪಡಿ ವಿಧೇಯಕವು ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿಯುವ ಹುನ್ನಾರವಾಗಿದೆ. ಹಾಗಾಗಿ ತಿದ್ದುಪಡಿ ವಿಧೇಯಕವನ್ನು ಮೇಲ್ಮನೆಯಲ್ಲಿ ವಿಫಲಗೊಳಿಸಲು ಜಾತ್ಯತೀತ ಪಕ್ಷಗಳಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಕರೆ ನೀಡಿದ್ದಾರೆ.

ವಿಧೇಯಕ ಕಾನೂನಾಗಿ ಜಾರಿಯಾದ ನಂತರ, ಕೆಲವೊಂದು ಸಬೂಬುಗಳನ್ನು ಮುಂದಿಟ್ಟುಕೊಂಡು ಸರಕಾರವು ಅಲ್ಪಸಂಖ್ಯಾತರ ಸಂಸ್ಥೆಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸುವ ಮೂಲಕ ಅಲ್ಪಸಂಖ್ಯಾತರ ಸಂಸ್ಥೆಗಳ ನಿಯಂತ್ರಣವನ್ನು ತನ್ನ ಸುಪರ್ದಿಗೆ ಪಡೆಯುವ ಹುನ್ನಾರ ನಡೆಸುತ್ತಿದೆ. ಸರಕಾರದಿಂದ ರಚಿಸಲಾದ ಸಂಸ್ಥೆಗಳಿಗೆ ಸರಕಾರವು ಆಡಳಿತಾಧಿಕಾರಿಯನ್ನು ನೇಮಿಸಲು ಯಾವುದೇ ತೊಡಕಿಲ್ಲ. ಆದರೆ ಸಹಕಾರಿ ಸಂಸ್ಥೆಗಳು ಸರಕಾರೇತರ ಸಂಸ್ಥೆಗಳಾಗಿದ್ದು, ಇವು ಸರಕಾರದಿಂದ ಯಾವುದೇ ಅನುದಾನ ಪಡೆಯುತ್ತಿಲ್ಲ. ಈ ನಿಟ್ಟಿನಲ್ಲಿ ಪ್ರಸಕ್ತ ತಿದ್ದುಪಡಿಯ ಮೂಲಕ ಅಲ್ಪಸಂಖ್ಯಾತರ ಸೊಸೈಟಿಗಳಲ್ಲಿ ಸರಕಾರ ಮಾಡುತ್ತಿರುವ ಹಸ್ತಕ್ಷೇಪವು ಸಂವಿಧಾನ ವಿರೋಧಿಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, “ಅಲ್ಪ ಸಂಖ್ಯಾತ ಸಂಸ್ಥೆಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸುವ ಅವಕಾಶ ಸಂವಿಧಾನಬಾಹಿರ ಎಂದು ಕರ್ನಾಟಕ ಹೈಕೋರ್ಟ್ 1987ರಲ್ಲೇ ಆದೇಶ ನೀಡಿದೆ. ಆದರೂ ಬಿಜೆಪಿ ಸರಕಾರವು ಇದಕ್ಕೆ ಕಾನೂನಿನ ಮಾನ್ಯತೆ ನೀಡಲು ತಿದ್ದುಪಡಿಯನ್ನು ತಂದಿದೆ” ಎಂದು ಕಿಡಿಕಾರಿದ್ದಾರೆ.

ಅಲ್ಪಸಂಖ್ಯಾತರ ವಿರೋಧಿ ನಿಲುವು ಹೊಂದಿರುವ ಬಿಜೆಪಿ ಸರಕಾರವು ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಯೋಜನೆ, ಅನುದಾನಗಳನ್ನು ನಿರಂತರವಾಗಿ ಕಡಿತಗೊಳಿಸುತ್ತಾ ತಾರತಮ್ಯ ಎಸಗುತ್ತಿರುವುದು ಖಂಡನಾರ್ಹವಾಗಿದೆ. ಈ ಮಧ್ಯೆ ಸಿಡಿ ಪ್ರಕರಣದ ಗದ್ದಲದ ನಡುವೆ ಯಾವುದೇ ಚರ್ಚೆಗಳಿಲ್ಲದೆ ವಿಧೇಯಕಕ್ಕೆ ಅನುಮೋದನೆ ದೊರಕಿರುವುದು ವಿರೋಧ ಪಕ್ಷಗಳ ವೈಫಲ್ಯವನ್ನು ಬೊಟ್ಟು ಮಾಡುತ್ತದೆ. ಹಲವು ಸಮಯಗಳಿಂದ ಈ ವಿಚಾರ ಚರ್ಚೆಯಲ್ಲಿತ್ತಾದರೂ ಜಾತ್ಯತೀತ ಪಕ್ಷಗಳು ಇದಕ್ಕೆ ಮಹತ್ವ ನೀಡದಿರುವುದು ಅಲ್ಪಸಂಖ್ಯಾತರ ಪರವಾದ ಅವರ ನಿರ್ಲಕ್ಷ್ಯ ಭಾವವನ್ನು ಸ್ಟಷ್ಟಪಡಿಸುತ್ತದೆ ಎಂದು ಯಾಸಿರ್ ಹಸನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಾತ್ಯತೀತ ಪಕ್ಷಗಳ ಪ್ರಾಬಲ್ಯವಿದ್ದರೂ, ಬಿಜೆಪಿ ಸರಕಾರವು ಹಿಂಬಾಗಿಲ ಮೂಲಕ ಮೇಲ್ಮನೆಯಲ್ಲಿ ರೈತವಿರೋಧಿ, ಜನವಿರೋಧಿ ಗೋ ಹತ್ಯೆ ಮಸೂದೆ ಅಂಗೀಕರಿಸಲು ಇತ್ತೀಚಿಗೆ ಸಫಲವಾಗಿತ್ತು. ಆದರೆ ಈ ಬಾರಿ ಅಲ್ಪಸಂಖ್ಯಾತರ ಪರವಾದ ತಮ್ಮ ಬದ್ಧತೆಯನ್ನು ಖಾತರಿಪಡಿಸಲು ವಿಪಕ್ಷಗಳು ಒಗ್ಗಟ್ಟಾಗಿ ಈ ವಿಧೇಯಕವನ್ನು ವಿಫಲಗೊಳಿಸಬೇಕೆಂದು ಅವರು ಕರೆ ನೀಡಿದ್ದಾರೆ.


ಇದನ್ನೂ ಓದಿ: ಪಿಎಂ ವಸತಿ ಯೋಜನೆ: 2.6 ಲಕ್ಷ ಫೇಕ್ ಅಕೌಂಟ್, 14 ಸಾವಿರ ಕೋಟಿ ರೂ ಗುಳುಂ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...