Homeಮುಖಪುಟಅಲ್ಪಸಂಖ್ಯಾತರ ಹಕ್ಕು ಕಸಿಯುವ ಕರ್ನಾಟಕ ಸೊಸೈಟಿ ತಿದ್ದುಪಡಿ ವಿಧೇಯಕ ಸೋಲಿಸಿ: PFI

ಅಲ್ಪಸಂಖ್ಯಾತರ ಹಕ್ಕು ಕಸಿಯುವ ಕರ್ನಾಟಕ ಸೊಸೈಟಿ ತಿದ್ದುಪಡಿ ವಿಧೇಯಕ ಸೋಲಿಸಿ: PFI

- Advertisement -
- Advertisement -

ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಂಡಿರುವ ಕರ್ನಾಟಕ ಸೊಸೈಟಿಗಳ ತಿದ್ದುಪಡಿ ವಿಧೇಯಕವು ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿಯುವ ಹುನ್ನಾರವಾಗಿದೆ. ಹಾಗಾಗಿ ತಿದ್ದುಪಡಿ ವಿಧೇಯಕವನ್ನು ಮೇಲ್ಮನೆಯಲ್ಲಿ ವಿಫಲಗೊಳಿಸಲು ಜಾತ್ಯತೀತ ಪಕ್ಷಗಳಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಕರೆ ನೀಡಿದ್ದಾರೆ.

ವಿಧೇಯಕ ಕಾನೂನಾಗಿ ಜಾರಿಯಾದ ನಂತರ, ಕೆಲವೊಂದು ಸಬೂಬುಗಳನ್ನು ಮುಂದಿಟ್ಟುಕೊಂಡು ಸರಕಾರವು ಅಲ್ಪಸಂಖ್ಯಾತರ ಸಂಸ್ಥೆಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸುವ ಮೂಲಕ ಅಲ್ಪಸಂಖ್ಯಾತರ ಸಂಸ್ಥೆಗಳ ನಿಯಂತ್ರಣವನ್ನು ತನ್ನ ಸುಪರ್ದಿಗೆ ಪಡೆಯುವ ಹುನ್ನಾರ ನಡೆಸುತ್ತಿದೆ. ಸರಕಾರದಿಂದ ರಚಿಸಲಾದ ಸಂಸ್ಥೆಗಳಿಗೆ ಸರಕಾರವು ಆಡಳಿತಾಧಿಕಾರಿಯನ್ನು ನೇಮಿಸಲು ಯಾವುದೇ ತೊಡಕಿಲ್ಲ. ಆದರೆ ಸಹಕಾರಿ ಸಂಸ್ಥೆಗಳು ಸರಕಾರೇತರ ಸಂಸ್ಥೆಗಳಾಗಿದ್ದು, ಇವು ಸರಕಾರದಿಂದ ಯಾವುದೇ ಅನುದಾನ ಪಡೆಯುತ್ತಿಲ್ಲ. ಈ ನಿಟ್ಟಿನಲ್ಲಿ ಪ್ರಸಕ್ತ ತಿದ್ದುಪಡಿಯ ಮೂಲಕ ಅಲ್ಪಸಂಖ್ಯಾತರ ಸೊಸೈಟಿಗಳಲ್ಲಿ ಸರಕಾರ ಮಾಡುತ್ತಿರುವ ಹಸ್ತಕ್ಷೇಪವು ಸಂವಿಧಾನ ವಿರೋಧಿಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, “ಅಲ್ಪ ಸಂಖ್ಯಾತ ಸಂಸ್ಥೆಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸುವ ಅವಕಾಶ ಸಂವಿಧಾನಬಾಹಿರ ಎಂದು ಕರ್ನಾಟಕ ಹೈಕೋರ್ಟ್ 1987ರಲ್ಲೇ ಆದೇಶ ನೀಡಿದೆ. ಆದರೂ ಬಿಜೆಪಿ ಸರಕಾರವು ಇದಕ್ಕೆ ಕಾನೂನಿನ ಮಾನ್ಯತೆ ನೀಡಲು ತಿದ್ದುಪಡಿಯನ್ನು ತಂದಿದೆ” ಎಂದು ಕಿಡಿಕಾರಿದ್ದಾರೆ.

ಅಲ್ಪಸಂಖ್ಯಾತರ ವಿರೋಧಿ ನಿಲುವು ಹೊಂದಿರುವ ಬಿಜೆಪಿ ಸರಕಾರವು ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಯೋಜನೆ, ಅನುದಾನಗಳನ್ನು ನಿರಂತರವಾಗಿ ಕಡಿತಗೊಳಿಸುತ್ತಾ ತಾರತಮ್ಯ ಎಸಗುತ್ತಿರುವುದು ಖಂಡನಾರ್ಹವಾಗಿದೆ. ಈ ಮಧ್ಯೆ ಸಿಡಿ ಪ್ರಕರಣದ ಗದ್ದಲದ ನಡುವೆ ಯಾವುದೇ ಚರ್ಚೆಗಳಿಲ್ಲದೆ ವಿಧೇಯಕಕ್ಕೆ ಅನುಮೋದನೆ ದೊರಕಿರುವುದು ವಿರೋಧ ಪಕ್ಷಗಳ ವೈಫಲ್ಯವನ್ನು ಬೊಟ್ಟು ಮಾಡುತ್ತದೆ. ಹಲವು ಸಮಯಗಳಿಂದ ಈ ವಿಚಾರ ಚರ್ಚೆಯಲ್ಲಿತ್ತಾದರೂ ಜಾತ್ಯತೀತ ಪಕ್ಷಗಳು ಇದಕ್ಕೆ ಮಹತ್ವ ನೀಡದಿರುವುದು ಅಲ್ಪಸಂಖ್ಯಾತರ ಪರವಾದ ಅವರ ನಿರ್ಲಕ್ಷ್ಯ ಭಾವವನ್ನು ಸ್ಟಷ್ಟಪಡಿಸುತ್ತದೆ ಎಂದು ಯಾಸಿರ್ ಹಸನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಾತ್ಯತೀತ ಪಕ್ಷಗಳ ಪ್ರಾಬಲ್ಯವಿದ್ದರೂ, ಬಿಜೆಪಿ ಸರಕಾರವು ಹಿಂಬಾಗಿಲ ಮೂಲಕ ಮೇಲ್ಮನೆಯಲ್ಲಿ ರೈತವಿರೋಧಿ, ಜನವಿರೋಧಿ ಗೋ ಹತ್ಯೆ ಮಸೂದೆ ಅಂಗೀಕರಿಸಲು ಇತ್ತೀಚಿಗೆ ಸಫಲವಾಗಿತ್ತು. ಆದರೆ ಈ ಬಾರಿ ಅಲ್ಪಸಂಖ್ಯಾತರ ಪರವಾದ ತಮ್ಮ ಬದ್ಧತೆಯನ್ನು ಖಾತರಿಪಡಿಸಲು ವಿಪಕ್ಷಗಳು ಒಗ್ಗಟ್ಟಾಗಿ ಈ ವಿಧೇಯಕವನ್ನು ವಿಫಲಗೊಳಿಸಬೇಕೆಂದು ಅವರು ಕರೆ ನೀಡಿದ್ದಾರೆ.


ಇದನ್ನೂ ಓದಿ: ಪಿಎಂ ವಸತಿ ಯೋಜನೆ: 2.6 ಲಕ್ಷ ಫೇಕ್ ಅಕೌಂಟ್, 14 ಸಾವಿರ ಕೋಟಿ ರೂ ಗುಳುಂ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...