Homeಮುಖಪುಟಹೆಂಗ್ ಪುಂಗ್ಲಿ ಖ್ಯಾತಿಯ ಬಾಡಿಗೆ ಭಾಷಣಕಾರನ ಪಠ್ಯ ಬೇಡ: ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್...

ಹೆಂಗ್ ಪುಂಗ್ಲಿ ಖ್ಯಾತಿಯ ಬಾಡಿಗೆ ಭಾಷಣಕಾರನ ಪಠ್ಯ ಬೇಡ: ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿ

ಸ್ವಿಸ್‌ನಲ್ಲಿರುವ ಕಪ್ಪು ಹಣವನ್ನು ಭಾರತದ ಬೊಕ್ಕಸಕ್ಕೆ ತಂದು ಹಾಕಿದರೆ ದೇಶದ ಎಲ್ಲಾ ರಸ್ತೆಗಳಿಗೂ ಟಾರ್ ಹಾಕುವ ಬದಲು ಚಿನ್ನ ಹಾಕಬಹುದು ಎಂದು ಚಕ್ರವರ್ತಿ ಸೂಲಿಬೆಲೆ ಭಾಷಣ ಮಾಡಿದ್ದರು.

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಪಠ್ಯಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿದೆ. ಹೆಂಗ್ ಪುಂಗ್ಲಿ ಖ್ಯಾತಿಯ ಬಾಡಿಗೆ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಯ ಪಠ್ಯ ಬೇಡ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.

BJP ಹಾಗೂ ಸಂಘಪರಿವಾರದ ಬೌದ್ಧಿಕ ದಿವಾಳಿತನ ಈ ಮಟ್ಟಕ್ಕೆ ಇಳಿಬಾರದಾಗಿತ್ತು. ಸುಳ್ಳಿನ ಕಂತೆಗಳನ್ನ ಪೋಣಿಸುವ ಹೆಂಗ್ ಪುಂಗ್ಲಿ ಖ್ಯಾತಿಯ ಬಾಡಿಗೆ ಭಾಷಣಕಾರನನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಂಬಲಿಸುವುದು ದುರಂತ ಎಂದಿದ್ದಾರೆ.

ಅಂತಹ ವಾಗ್ಮಿ, ಚಿಂತಕನ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ನಿಮ್ಮದೇ ಪಕ್ಷದ ಮಾಜಿ ಸಿಎಂ ಡಿ.ವಿ ಸದಾನಂದಗೌಡರ ಬಗ್ಗೆ ಮಾರ್ಗದರ್ಶನ ಪಡೆಯುವುದು ಒಳ್ಳೆಯದು ಎಂದು ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ “ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆಯವರ ಹಿಂದೂಪರ ಚಿಂತನೆಗಳನ್ನು ಶಾಲಾ ಪಠ್ಯ ಪುಸ್ತಕಗಳಲ್ಲಿ ಅಳವಡಿಸಿದರೆ” ತಪ್ಪೇನು ಎಂದು ಪ್ರಶ್ನಿಸಿದ್ದರು. ಅಲ್ಲದೆ ಟಿಪ್ಪು ಒಬ್ಬ ನರಭಕ್ಷಕ ಎಂದು ಸಹ ಹೇಳಿಕೆ ನೀಡಿದ್ದರು.

ಅವರ ಹೇಳಿಕೆಗೆ ಬಿ.ಕೆ ಹರಿಪ್ರಸಾದ್ ತಿರುಗೇಟು ನೀಡಿದ್ದು, “ಜಗದೀಶ್ ಶೆಟ್ಟರ್‌ ಟಿಪ್ಪುವಿನ ಪೋಷಾಕು ಧರಿಸಿ ಪೋಸು ನೀಡಿದ್ದನ್ನ ಮರೆತಿರಬೇಕು. ಚಿತ್ರಗಳು ಬರೀ ಮಾತಾಡುವುದಿಲ್ಲ ಶೆಟ್ಟರ್ ಅವರೇ, ಸತ್ಯವನ್ನ ಬೆತ್ತಲೆ ಕೂಡ ಮಾಡುತ್ತೆ. ಕೋಮುವಾದದ ಕನ್ನಡಕ ಕಳಚಿಟ್ಟು ಓದುವುದಾದರೇ ತಾವೇ ಸಿಎಂ ಆಗಿದ್ದಾಗ ಪ್ರಕಟಿಸಿರುವ ಪುಸ್ತಕ ಕಳಿಸಿ‌ಕೊಡಬೇಕಾ?” ಎಂದು ಶೆಟ್ಟರ್ ಟಿಪ್ಪುವಿನ ವೇಶ ಧರಿಸಿದ್ದ ಫೋಟೋಗಳನ್ನು ಟ್ವಿಟ್ ಮಾಡಿದ್ದಾರೆ.

ಸ್ವಿಸ್‌ನಲ್ಲಿರುವ ಕಪ್ಪು ಹಣವನ್ನು ಭಾರತದ ಬೊಕ್ಕಸಕ್ಕೆ ತಂದು ಹಾಕಿದರೆ ದೇಶದ ಎಲ್ಲಾ ರಸ್ತೆಗಳಿಗೂ ಟಾರ್ ಹಾಕುವ ಬದಲು ಚಿನ್ನ ಹಾಕಬಹುದು. ಸೌದಿಯ ಪೆಟ್ರೋಲಿಯಂ ಸಚಿವರಿಗೆ ಮೋದಿ ಫೋನ್ ಮಾಡಿ ಪೆಟ್ರೋಲ್ ಬೆಲೆ ಕಡಿಮೆ ಮಾಡಲು ಹೇಳಿದ್ದರು. ಬೆಂಗಳೂರಿನಿಂದ ಮಂಗಳೂರಿಗೆ ಬುಲೆಟ್ ಟ್ರೈನ್ ನಲ್ಲಿ 2 ಗಂಟೆಯಲ್ಲಿ ಹೋಗಬಹುದು. ಮೋದಿ ಇವೆಲ್ಲವನ್ನು ಮಾಡುತ್ತಾರೆ ಎಂದು ಚಕ್ರವರ್ತಿ ಸೂಲಿಬೆಲೆ ಭಾಷಣ ಮಾಡಿ ವಿವಾದ ಸೃಷ್ಟಿಸಿದ್ದರು. ಹಾಗಾಗಿ ಅವರನ್ನು ಸೋಷಿಯಲ್ ಮೀಡಿಯಾದಲ್ಲಿ ಹೆಂಗ್ ಪುಂಗ್ಲಿಯೆಂಬ ಅಡ್ಡನಾಮದಿಂದ ಕರೆದು ಟ್ರೋಲ್ ಮಾಡಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಹರಿಪ್ರಸಾದ್ ಅನ್ನೋ ಗುಲಾಮನೇ ಒಬ್ಬಾ ಗೂಂಡಾ ಹಾಗಿರುವಾಗ ಇನ್ನೊಬ್ಬರ ಬಗ್ಗೆ ಮಾತಾಡೋ ಯೋಗ್ಯತೆ ಈ ಗೂಂಡಾ ಗುಲಾಮರಿಗೆ ಇಲ್ಲಾ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...