Homeಮುಖಪುಟಹೆಂಗ್ ಪುಂಗ್ಲಿ ಖ್ಯಾತಿಯ ಬಾಡಿಗೆ ಭಾಷಣಕಾರನ ಪಠ್ಯ ಬೇಡ: ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್...

ಹೆಂಗ್ ಪುಂಗ್ಲಿ ಖ್ಯಾತಿಯ ಬಾಡಿಗೆ ಭಾಷಣಕಾರನ ಪಠ್ಯ ಬೇಡ: ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿ

ಸ್ವಿಸ್‌ನಲ್ಲಿರುವ ಕಪ್ಪು ಹಣವನ್ನು ಭಾರತದ ಬೊಕ್ಕಸಕ್ಕೆ ತಂದು ಹಾಕಿದರೆ ದೇಶದ ಎಲ್ಲಾ ರಸ್ತೆಗಳಿಗೂ ಟಾರ್ ಹಾಕುವ ಬದಲು ಚಿನ್ನ ಹಾಕಬಹುದು ಎಂದು ಚಕ್ರವರ್ತಿ ಸೂಲಿಬೆಲೆ ಭಾಷಣ ಮಾಡಿದ್ದರು.

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಪಠ್ಯಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿದೆ. ಹೆಂಗ್ ಪುಂಗ್ಲಿ ಖ್ಯಾತಿಯ ಬಾಡಿಗೆ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಯ ಪಠ್ಯ ಬೇಡ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.

BJP ಹಾಗೂ ಸಂಘಪರಿವಾರದ ಬೌದ್ಧಿಕ ದಿವಾಳಿತನ ಈ ಮಟ್ಟಕ್ಕೆ ಇಳಿಬಾರದಾಗಿತ್ತು. ಸುಳ್ಳಿನ ಕಂತೆಗಳನ್ನ ಪೋಣಿಸುವ ಹೆಂಗ್ ಪುಂಗ್ಲಿ ಖ್ಯಾತಿಯ ಬಾಡಿಗೆ ಭಾಷಣಕಾರನನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಂಬಲಿಸುವುದು ದುರಂತ ಎಂದಿದ್ದಾರೆ.

ಅಂತಹ ವಾಗ್ಮಿ, ಚಿಂತಕನ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ನಿಮ್ಮದೇ ಪಕ್ಷದ ಮಾಜಿ ಸಿಎಂ ಡಿ.ವಿ ಸದಾನಂದಗೌಡರ ಬಗ್ಗೆ ಮಾರ್ಗದರ್ಶನ ಪಡೆಯುವುದು ಒಳ್ಳೆಯದು ಎಂದು ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ “ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆಯವರ ಹಿಂದೂಪರ ಚಿಂತನೆಗಳನ್ನು ಶಾಲಾ ಪಠ್ಯ ಪುಸ್ತಕಗಳಲ್ಲಿ ಅಳವಡಿಸಿದರೆ” ತಪ್ಪೇನು ಎಂದು ಪ್ರಶ್ನಿಸಿದ್ದರು. ಅಲ್ಲದೆ ಟಿಪ್ಪು ಒಬ್ಬ ನರಭಕ್ಷಕ ಎಂದು ಸಹ ಹೇಳಿಕೆ ನೀಡಿದ್ದರು.

ಅವರ ಹೇಳಿಕೆಗೆ ಬಿ.ಕೆ ಹರಿಪ್ರಸಾದ್ ತಿರುಗೇಟು ನೀಡಿದ್ದು, “ಜಗದೀಶ್ ಶೆಟ್ಟರ್‌ ಟಿಪ್ಪುವಿನ ಪೋಷಾಕು ಧರಿಸಿ ಪೋಸು ನೀಡಿದ್ದನ್ನ ಮರೆತಿರಬೇಕು. ಚಿತ್ರಗಳು ಬರೀ ಮಾತಾಡುವುದಿಲ್ಲ ಶೆಟ್ಟರ್ ಅವರೇ, ಸತ್ಯವನ್ನ ಬೆತ್ತಲೆ ಕೂಡ ಮಾಡುತ್ತೆ. ಕೋಮುವಾದದ ಕನ್ನಡಕ ಕಳಚಿಟ್ಟು ಓದುವುದಾದರೇ ತಾವೇ ಸಿಎಂ ಆಗಿದ್ದಾಗ ಪ್ರಕಟಿಸಿರುವ ಪುಸ್ತಕ ಕಳಿಸಿ‌ಕೊಡಬೇಕಾ?” ಎಂದು ಶೆಟ್ಟರ್ ಟಿಪ್ಪುವಿನ ವೇಶ ಧರಿಸಿದ್ದ ಫೋಟೋಗಳನ್ನು ಟ್ವಿಟ್ ಮಾಡಿದ್ದಾರೆ.

ಸ್ವಿಸ್‌ನಲ್ಲಿರುವ ಕಪ್ಪು ಹಣವನ್ನು ಭಾರತದ ಬೊಕ್ಕಸಕ್ಕೆ ತಂದು ಹಾಕಿದರೆ ದೇಶದ ಎಲ್ಲಾ ರಸ್ತೆಗಳಿಗೂ ಟಾರ್ ಹಾಕುವ ಬದಲು ಚಿನ್ನ ಹಾಕಬಹುದು. ಸೌದಿಯ ಪೆಟ್ರೋಲಿಯಂ ಸಚಿವರಿಗೆ ಮೋದಿ ಫೋನ್ ಮಾಡಿ ಪೆಟ್ರೋಲ್ ಬೆಲೆ ಕಡಿಮೆ ಮಾಡಲು ಹೇಳಿದ್ದರು. ಬೆಂಗಳೂರಿನಿಂದ ಮಂಗಳೂರಿಗೆ ಬುಲೆಟ್ ಟ್ರೈನ್ ನಲ್ಲಿ 2 ಗಂಟೆಯಲ್ಲಿ ಹೋಗಬಹುದು. ಮೋದಿ ಇವೆಲ್ಲವನ್ನು ಮಾಡುತ್ತಾರೆ ಎಂದು ಚಕ್ರವರ್ತಿ ಸೂಲಿಬೆಲೆ ಭಾಷಣ ಮಾಡಿ ವಿವಾದ ಸೃಷ್ಟಿಸಿದ್ದರು. ಹಾಗಾಗಿ ಅವರನ್ನು ಸೋಷಿಯಲ್ ಮೀಡಿಯಾದಲ್ಲಿ ಹೆಂಗ್ ಪುಂಗ್ಲಿಯೆಂಬ ಅಡ್ಡನಾಮದಿಂದ ಕರೆದು ಟ್ರೋಲ್ ಮಾಡಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಹರಿಪ್ರಸಾದ್ ಅನ್ನೋ ಗುಲಾಮನೇ ಒಬ್ಬಾ ಗೂಂಡಾ ಹಾಗಿರುವಾಗ ಇನ್ನೊಬ್ಬರ ಬಗ್ಗೆ ಮಾತಾಡೋ ಯೋಗ್ಯತೆ ಈ ಗೂಂಡಾ ಗುಲಾಮರಿಗೆ ಇಲ್ಲಾ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...