Homeಚಳವಳಿಬಸವಣ್ಣನವರ ಪಠ್ಯ ತಿರುಚುವಿಕೆ ಕುಚೋದ್ಯ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಖಂಡನೆ - ಸಿಎಂಗೆ ಬಹಿರಂಗ ಪತ್ರ

ಬಸವಣ್ಣನವರ ಪಠ್ಯ ತಿರುಚುವಿಕೆ ಕುಚೋದ್ಯ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಖಂಡನೆ – ಸಿಎಂಗೆ ಬಹಿರಂಗ ಪತ್ರ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದ ಮುಗಿಯುವ ಯಾವ ಸೂಚನೆಗಳೂ ಕಾಣುತ್ತಿಲ್ಲ. ಬದಲಿಗೆ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಲೇ ಇದೆ. ಇದೀಗ ಬಸವಣ್ಣನವರ ಪಠ್ಯ ತಿರುಚುವಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬಹಿರಂಗ ಪತ್ರ ಬರೆದಿದೆ.

ನೂರಾರು ಲಿಂಗಾಯಿತ ಮಠಾಧೀಶರು ಇರುವ ಲಿಂಗಾಯಿತ ಮಠಾಧಿಪತಿಗಳ ಒಕ್ಕೂಟ ಬಸವಣ್ಣನವರ ಪಠ್ಯವನ್ನು ತಿರುಚಿರುವ ಕುರಿತು ಗಂಭೀರವಾದ ಆಕ್ಷೇಪ ವ್ಯಕ್ತಪಡಿಸಿದೆ. ಇದನ್ನು ಸರಿಪಡಿಸದೇ ಹೋದಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆ ಅನಿವಾರ್ಯ ಎಂಬ ಎಚ್ಚರಿಕೆಯನ್ನೂ ನೀಡಿದೆ.

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರಾದ ಭಾಲ್ಕಿಯ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದ್ದೇವರು ಮತ್ತು ಹಂದಿಗುಂದದ ವಿರಕ್ತಮಠದ  ನೇತೃತ್ವದಲ್ಲಿ ಶ್ರೀ ಶಿವಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ ಪತ್ರ ಬರೆದಿದ್ದು, ಲಿಂಗಾಯತ ಧರ್ಮಗುರು ಬಸವಣ್ಣನವರ ಕುರಿತು ಪಠ್ಯದಲ್ಲಿ ಬದಲಾವಣೆ ಮಾಡಿರುವುದು ಕುಚೋದ್ಯದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಮಸ್ತಕದಲ್ಲಿ ಉಪನಯನವಾದ ನಂತರ ಕೂಡಲಸಂಗಮಕ್ಕೆ ನಡೆದರು ಎಂದು ಬರೆಯಲಾಗಿದೆ. ಇದು ತಪ್ಪು. ಬಸವಣ್ಣನವರು ತಮ್ಮ ಸಹೋದರಿ ಅಕ್ಕನಾಗಾಯಿಗೆ ಇಲ್ಲದ ಉಪನಯನ ನನಗೇಕೆ? ಎಂದು ಧಿಕ್ಕರಿಸಿ ಕೂಡಲಸಂಗಮಕ್ಕೆ ಹೋದುದು ಐತಿಹಾಸಿಕ ಸಂಗತಿ ಎಂದು ಪತ್ರದಲ್ಲಿ ಬರೆಯಲಾಗಿದೆ.

ಅದೇ ರೀತಿ “ಶೈವ-ಗುರುಗಳ ಸಾನಿಧ್ಯದಲ್ಲಿ ಲಿಂಗದೀಕ್ಷೆಯನ್ನು ಪಡೆದು” ಎಂದು ಬರೆಯಲಾಗಿದೆ. ಇದು ಸಹ ತಪ್ಪು. ಶೈವಗುರುಗಳು ಗುಡಿ-ಗುಂಡಾರಗಳಲ್ಲಿರುವ ಸ್ಥಾವರ ಲಿಂಗಾರಾಧಕರು, ಅವರು ಹೇಗೆ ಇಷ್ಟಲಿಂಗ ದೀಕ್ಷೆ ಮಾಡಬಲ್ಲರು. ಇಷ್ಟಲಿಂಗ ಬಸವಣ್ಣನವರ ಪರಿಕಲ್ಪನೆಯಲ್ಲಿ ಮೂಡಿಬಂದದು. ಅವರೇ ಇಷ್ಟಲಿಂಗದ ಜನಕರು. ಅಲ್ಲಮಪ್ರಭುದೇವರಾದಿಯಾಗಿ ಎಲ್ಲ ಶರಣರು ತಮ್ಮ ವಚನಗಳಲ್ಲಿ ಇದನ್ನು ಉಲ್ಲೇಖಿಸಿದ್ದಾರೆ. ‘ಬಸವಣ್ಣನ ಉದರದಲ್ಲಿ ಹುಟ್ಟಿತ್ತು ಲಿಂಗ’ ಎಂದು ಚನ್ನಬಸವಣ್ಣನವರು ಉಲ್ಲೇಖಿಸಿದ್ದಾರೆ. ‘ನಿನ್ನ ನಾನರಿಯದ ಮುನ್ನ ನೀನೆಲ್ಲಿ ಇದ್ದೆ? ಎನ್ನೊಳಗಿದ್ದು ನಿನ್ನ ತೋರಲಕೆ ನೀನೆ ರೂಪಾದೆ’ ಎಂದು ಬಸವಣ್ಣನವರು ಸ್ವತಃ ತಮ್ಮ ವಚನದಲ್ಲಿ ಹೇಳಿದ್ದಾರೆ” ಎಂದು ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ.

“ಬಸವಣ್ಣನವರು ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು ಎಂದು ಈಗ ಪಠ್ಯದಲ್ಲಿ ಸೇರಿಸಲಾಗಿದೆ. ಇದು ಕೂಡ ಶುದ್ಧ ತಪ್ಪು. ವೀರಶೈವ ಶೈವದ ಶಾಖೆ. ಅದು ಮತವಿರಬಹುದು ಈಗ ಅದನ್ನು ಅಂಗಾಯತ ಧರ್ಮದ ಒಂದು ಪಂಗಡ ಎಂದು ಹೆಸರಿಸಲಾಗಿದೆ. ಸರಕಾರದ ದಾಖಲೆಗಳಲ್ಲಿ ಕ್ರಿ.ಶ.1871 ರಿಂದಲೂ ಇದನ್ನು ಕಾಣಬಹುದು. ಆದರೆ ಬಸವಣ್ಣನವರು ಅಂಗಾಯತ ಧರ್ಮದ ಸ್ಥಾಪಕರು ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಶೈವದಲ್ಲಿ ವರ್ಣಾಶ್ರಮದ ಆಚರಣೆ ಇದೆ. ಅಂಗಾಯತರಲ್ಲಿ ವರ್ಣಾಶ್ರಮ ಭೇದಗಳಲ್ಲ. ಬಸವಣ್ಣನವರು ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು ಎಂಬುದು ಶುದ್ಧ ಅನೈತಿಹಾಸಿಕ” ಎಂದು ಮಠಾಧಿಪತಿಗಳು ತಿಳಿಸಿದ್ದಾರೆ.

ಕಳೆದ ವರ್ಷ ಪಠ್ಯದಲ್ಲಿದ್ದ ವೈದಿಕ ಧರ್ಮದ ಆಚರಣೆಗಳ ನಿರಾಕರಣೆ, ಮಾನವೀಯ ಮಾಲ್ಯಗಳಿಂದ ಕೂಡಿದ ಸಿದ್ಧಾಂತದ ಪ್ರತಿಪಾದನೆ, ಅನಿಷ್ಟ ಪದ್ಧತಿಗಳ ವಿರುದ್ಧದ ಹೋರಾಟ, ಸ್ವಾವಲಂಬನೆ, ದೇಹವೇ ದೇಗುಲ ತತ್ವಗಳ ಬೋಧನೆ ಮುಂತಾದವುಗಳ ಜೊತೆಗೆ ಅವರು ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳುವಳಿಯನ್ನು ಜನಮುಖಿಯಾಗಿಸಿದರು ಎನ್ನುವಂತಹ ಸಾಲುಗಳನ್ನು ಕೈಬಿಟ್ಟಿರುವುದು ದುರ್ದೈವದ ಸಂಗತಿ ಎಂದು ಮಠಾಧಿಪತಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಈ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯದಲ್ಲಿ ಆಗಿರುವ ಈ ಎಲ್ಲ ದೋಷಗಳನ್ನು ನಿವಾರಿಸಿ ಪಠ್ಯಪುಸ್ತಕ ಮುದ್ರಿಸಬೇಕು. ಅನ್ಯಥಾ ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುವುದಲ್ಲದೆ ವೈಶಿಷ್ಟ್ಯಪೂರ್ಣವಾದ ಲಿಂಗಾಯತ ಧರ್ಮಕ್ಕೆ ಮತ್ತು ಬಸವಣ್ಣನವರಿಗೆ ಅಪಚಾರವೆಸಗಿದಂತಾಗುತ್ತದೆ. ಲಿಂಗಾಯತ ಧರ್ಮದ ಅನುಯಾಯಿ ಮತ್ತು ಬಸವಣ್ಣನವರ ಹೆಸರಿನವರಾದ ತಾವು ಮುಖ್ಯ ಮಂತ್ರಿಯಾಗಿರುವ ಸಮಯದಲ್ಲಿ ಇಂತಹ ಅಪಚಾರವಾಗಿರುವುದು ನಮಗೆ ಆಘಾತಕಾರಿಯಾಗಿದೆ. ಬಹುಸಂಖ್ಯಾತ ಲಿಂಗಾಯತರು ಮತ್ತು ಲಿಂಗಾಯತ ಮಠಾಧಿಪತಿಗಳು ಬೃಹತ್ ಪ್ರಮಾಣದ ಪ್ರತಿಭಟನೆ ನಡೆಸುವ ಮೊದಲು ಈ ತಪ್ಪು ಸರಿಪಡಿಸಿ ಪಠ್ಯ ಪುಸ್ತಕಗಳನ್ನು ಪ್ರಕಟಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಸೂಕ್ತ ಸಂದರ್ಭದಲ್ಲಿ ಹೋರಾಟ ಮಾಡುವುದು ನಮಗೆ ಅನಿವಾರ್ಯವಾಗುತ್ತದೆ” ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.

ಇದೇ ರೀತಿ ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಮತ್ತು ನಾಡಗೀತೆಯ ಬಗ್ಗೆಯೂ ಅವಹೇಳನಕಾರಿ ವಿಷಯ ಪ್ರಕಟವಾಗಿರುವುದು ಸರಿಯಾದ ರೀತಿಯಲ್ಲ. ಇದು ಅತ್ಯಂತ ಖಂಡನೀಯವಾಗಿದೆ. ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿ: 🛑 Live Updates| ಪಠ್ಯಪುಸ್ತಕ ತಿರುಚೀಕರಣ ವಿವಾದ: ಅಂಬೇಡ್ಕರ್‌ ಕುರಿತು ಚಕ್ರತೀರ್ಥ ಮಾಡಿದ್ದ ವ್ಯಂಗ್ಯದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಸವಣ್ಣ ಮಂಗಳವೇಡೆಯಿಂದ ತಮ್ಮ ಸಾಮಾಜಿಕ ಕೆಲಸಗಳನ್ನು ಆರಂಭಿಸಿದರು ಎಂಬುದಕ್ಕೆ ಸಂಬಂಧಿಸಿದಂತೆ, ಬೆಳಗಾವಿ ಜಿಲ್ಲೆಯ ಮಂಗಳವೇಡೆಗೂ ಬಸವಣ್ಣಿಗೂ ಏನು ಸಂಬಂಧ ಎಂದು ಹುಡುಕಿದರೆ ವಿಕಿಪೀಡಿಯದಲ್ಲಿ ಈ ಕೆಳಗಿನ ಒಂದು ಬರಹ ಕಾಣಸಿಗುತ್ತದೆ. ಅದರ ಪ್ರಕಾರ ಮಂಗಳವೇಡದಿಂದ ಆಳ್ವಿಕೆ ನಡೆಸಿದ ಕರ್ಣ ಎಂಬ ಸಾಮಂತರಾಜ ಕಳಚುರಿ ವಂಶದ ಒಂದನೇ ಬಿಜ್ಜಳನ ಮಗ ಎಂಬುದೊಂದನ್ನು ಬಿಟ್ಟರೆ, ಬಸವಣ್ಣನು ಬಾಗೇವಾಡಿಯಿಂದ ಹೊರಟು ತಲುಪಿದ ಕೂಡಲಸಂಗಮ ಅಥವಾ ತನ್ನ ಸಾಮಾಜಿಕ ಕಾರ್ಯಗಳನ್ನು ನಡೆಸಿದ ಬಸವಕಲ್ಯಾಣ ಇವುಗಳಿಗೂ ಮಂಗಳವೇಡೆಗೂ ಮತ್ಯಾವ ಸಂಬಂಧವೂ ಕಾಣುವುದಿಲ್ಲ.

    [ಇದಲ್ಲದೆ ಕರ್ನಾಟಕ ಏಕೀಕರಣ ಚಳವಳಿಯನ್ನಾರಂಭಿಸಿದ ಆಲೂರು ವೆಂಕಟರಾಯರ ಶಿಷ್ಯರಾಗಿದ್ದ ಏಕೀಕರಣ ಹೋರಾಟಗಾರ ಮಂಗಳವೇಡೆ ಕೃಷ್ಣರಾಯರಿಗೆ ಸಂಬಂಧಿಸಿದ ವಿವರಗಳಿವೆ. ಮಂಗಳವೇಡೆಯೊಂದಿಗೆ ಬಸವಣ್ಣನಿಗೆ ಯಾವುದೇ ನಂಟು ಇದ್ದುದು ನನಗೆ ವಿಕಿಪೀಡಿಯದಲ್ಲಿ ಸಿಗಲಿಲ್ಲ.]

    ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಕರ್ಣ (ಕಳಚುರಿ)

    ಕರ್ಣ (ಕಳಚುರಿ): ಕರ್ನಾಟಕದಲ್ಲಿ ಚಾಳುಕ್ಯರ ಆಶ್ರಯದಲ್ಲಿ ಆಳುತ್ತಿದ್ದ ಕಳಚುರಿ ದೊರೆಗಳಲ್ಲೊಬ್ಬ. ಒಂದನೆಯ ಬಿಜ್ಜಳನ (ಬಿಜ್ಜ) ಮಗ. ಕನ್ನಮ, ಕೃಷ್ಣರಾಜ ಎಂದೂ ಈತನನ್ನು ಸಂಬೋಧಿಸಲಾಗಿದೆ. 1067ರಲ್ಲಿ ಈತನ ಆಳ್ವಿಕೆ ಪ್ರಾರಂಭವಾಯಿತೆಂದು ತಿಳಿದುಬರುತ್ತದೆ. ಮಂಗಳಿವೇಡದಿಂದ (ಈಗಿನ ಮಂಗಳವೇಢೆ; ಷೋಲಾರಪುರ ಜಿಲ್ಲೆ) ಅದರ ಸುತ್ತಮುತ್ತಣ ಪ್ರದೇಶಗಳನ್ನು ಈತ ಆಳುತ್ತಿದ್ದ. ಐವತ್ತು ಕದನಗಳಲ್ಲಿ ಕಾದಾಡಿ ಗೆದ್ದನೆಂದೂ ಹನ್ನೆರಡು ಮಂದಿ ದೊರೆಗಳನ್ನು ಕೊಂದು ತನ್ನ ರಾಜಧಾನಿಯನ್ನು ಶತ್ರುಗಳಿಂದ ರಕ್ಷಿಸಿದನೆಂದೂ ಇವನನ್ನು ಹೊಗಳಲಾಗಿದೆ. ಪರಮಾರರು, ಪೂರ್ವ ಚಾಳುಕ್ಯರು, ಚೋಳರು ಮುಂತಾದವರೊಂದಿಗೆ ಈತನ ಪ್ರಭುವಾದ ಒಂದನೆಯ ಸೋಮೇಶ್ವರ ಮಾಡಿದ ಕದನಗಳಲ್ಲಿ ಇವನೂ ಭಾಗವಹಿಸಿರಬೇಕೆಂದು ತೋರುತ್ತದೆ. ಈತ 1080ರ ವರೆಗೂ ರಾಜ್ಯವಾಳಿದ (ನೋಡಿ- ಕಳಚುರಿಗಳು).

    – ಸಿರಿಮನೆ ನಾಗರಾಜ್.

LEAVE A REPLY

Please enter your comment!
Please enter your name here

- Advertisment -

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...