Homeಚಳವಳಿಬಸವಣ್ಣನವರ ಪಠ್ಯ ತಿರುಚುವಿಕೆ ಕುಚೋದ್ಯ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಖಂಡನೆ - ಸಿಎಂಗೆ ಬಹಿರಂಗ ಪತ್ರ

ಬಸವಣ್ಣನವರ ಪಠ್ಯ ತಿರುಚುವಿಕೆ ಕುಚೋದ್ಯ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಖಂಡನೆ – ಸಿಎಂಗೆ ಬಹಿರಂಗ ಪತ್ರ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದ ಮುಗಿಯುವ ಯಾವ ಸೂಚನೆಗಳೂ ಕಾಣುತ್ತಿಲ್ಲ. ಬದಲಿಗೆ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಲೇ ಇದೆ. ಇದೀಗ ಬಸವಣ್ಣನವರ ಪಠ್ಯ ತಿರುಚುವಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬಹಿರಂಗ ಪತ್ರ ಬರೆದಿದೆ.

ನೂರಾರು ಲಿಂಗಾಯಿತ ಮಠಾಧೀಶರು ಇರುವ ಲಿಂಗಾಯಿತ ಮಠಾಧಿಪತಿಗಳ ಒಕ್ಕೂಟ ಬಸವಣ್ಣನವರ ಪಠ್ಯವನ್ನು ತಿರುಚಿರುವ ಕುರಿತು ಗಂಭೀರವಾದ ಆಕ್ಷೇಪ ವ್ಯಕ್ತಪಡಿಸಿದೆ. ಇದನ್ನು ಸರಿಪಡಿಸದೇ ಹೋದಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆ ಅನಿವಾರ್ಯ ಎಂಬ ಎಚ್ಚರಿಕೆಯನ್ನೂ ನೀಡಿದೆ.

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರಾದ ಭಾಲ್ಕಿಯ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದ್ದೇವರು ಮತ್ತು ಹಂದಿಗುಂದದ ವಿರಕ್ತಮಠದ  ನೇತೃತ್ವದಲ್ಲಿ ಶ್ರೀ ಶಿವಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ ಪತ್ರ ಬರೆದಿದ್ದು, ಲಿಂಗಾಯತ ಧರ್ಮಗುರು ಬಸವಣ್ಣನವರ ಕುರಿತು ಪಠ್ಯದಲ್ಲಿ ಬದಲಾವಣೆ ಮಾಡಿರುವುದು ಕುಚೋದ್ಯದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಮಸ್ತಕದಲ್ಲಿ ಉಪನಯನವಾದ ನಂತರ ಕೂಡಲಸಂಗಮಕ್ಕೆ ನಡೆದರು ಎಂದು ಬರೆಯಲಾಗಿದೆ. ಇದು ತಪ್ಪು. ಬಸವಣ್ಣನವರು ತಮ್ಮ ಸಹೋದರಿ ಅಕ್ಕನಾಗಾಯಿಗೆ ಇಲ್ಲದ ಉಪನಯನ ನನಗೇಕೆ? ಎಂದು ಧಿಕ್ಕರಿಸಿ ಕೂಡಲಸಂಗಮಕ್ಕೆ ಹೋದುದು ಐತಿಹಾಸಿಕ ಸಂಗತಿ ಎಂದು ಪತ್ರದಲ್ಲಿ ಬರೆಯಲಾಗಿದೆ.

ಅದೇ ರೀತಿ “ಶೈವ-ಗುರುಗಳ ಸಾನಿಧ್ಯದಲ್ಲಿ ಲಿಂಗದೀಕ್ಷೆಯನ್ನು ಪಡೆದು” ಎಂದು ಬರೆಯಲಾಗಿದೆ. ಇದು ಸಹ ತಪ್ಪು. ಶೈವಗುರುಗಳು ಗುಡಿ-ಗುಂಡಾರಗಳಲ್ಲಿರುವ ಸ್ಥಾವರ ಲಿಂಗಾರಾಧಕರು, ಅವರು ಹೇಗೆ ಇಷ್ಟಲಿಂಗ ದೀಕ್ಷೆ ಮಾಡಬಲ್ಲರು. ಇಷ್ಟಲಿಂಗ ಬಸವಣ್ಣನವರ ಪರಿಕಲ್ಪನೆಯಲ್ಲಿ ಮೂಡಿಬಂದದು. ಅವರೇ ಇಷ್ಟಲಿಂಗದ ಜನಕರು. ಅಲ್ಲಮಪ್ರಭುದೇವರಾದಿಯಾಗಿ ಎಲ್ಲ ಶರಣರು ತಮ್ಮ ವಚನಗಳಲ್ಲಿ ಇದನ್ನು ಉಲ್ಲೇಖಿಸಿದ್ದಾರೆ. ‘ಬಸವಣ್ಣನ ಉದರದಲ್ಲಿ ಹುಟ್ಟಿತ್ತು ಲಿಂಗ’ ಎಂದು ಚನ್ನಬಸವಣ್ಣನವರು ಉಲ್ಲೇಖಿಸಿದ್ದಾರೆ. ‘ನಿನ್ನ ನಾನರಿಯದ ಮುನ್ನ ನೀನೆಲ್ಲಿ ಇದ್ದೆ? ಎನ್ನೊಳಗಿದ್ದು ನಿನ್ನ ತೋರಲಕೆ ನೀನೆ ರೂಪಾದೆ’ ಎಂದು ಬಸವಣ್ಣನವರು ಸ್ವತಃ ತಮ್ಮ ವಚನದಲ್ಲಿ ಹೇಳಿದ್ದಾರೆ” ಎಂದು ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ.

“ಬಸವಣ್ಣನವರು ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು ಎಂದು ಈಗ ಪಠ್ಯದಲ್ಲಿ ಸೇರಿಸಲಾಗಿದೆ. ಇದು ಕೂಡ ಶುದ್ಧ ತಪ್ಪು. ವೀರಶೈವ ಶೈವದ ಶಾಖೆ. ಅದು ಮತವಿರಬಹುದು ಈಗ ಅದನ್ನು ಅಂಗಾಯತ ಧರ್ಮದ ಒಂದು ಪಂಗಡ ಎಂದು ಹೆಸರಿಸಲಾಗಿದೆ. ಸರಕಾರದ ದಾಖಲೆಗಳಲ್ಲಿ ಕ್ರಿ.ಶ.1871 ರಿಂದಲೂ ಇದನ್ನು ಕಾಣಬಹುದು. ಆದರೆ ಬಸವಣ್ಣನವರು ಅಂಗಾಯತ ಧರ್ಮದ ಸ್ಥಾಪಕರು ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಶೈವದಲ್ಲಿ ವರ್ಣಾಶ್ರಮದ ಆಚರಣೆ ಇದೆ. ಅಂಗಾಯತರಲ್ಲಿ ವರ್ಣಾಶ್ರಮ ಭೇದಗಳಲ್ಲ. ಬಸವಣ್ಣನವರು ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು ಎಂಬುದು ಶುದ್ಧ ಅನೈತಿಹಾಸಿಕ” ಎಂದು ಮಠಾಧಿಪತಿಗಳು ತಿಳಿಸಿದ್ದಾರೆ.

ಕಳೆದ ವರ್ಷ ಪಠ್ಯದಲ್ಲಿದ್ದ ವೈದಿಕ ಧರ್ಮದ ಆಚರಣೆಗಳ ನಿರಾಕರಣೆ, ಮಾನವೀಯ ಮಾಲ್ಯಗಳಿಂದ ಕೂಡಿದ ಸಿದ್ಧಾಂತದ ಪ್ರತಿಪಾದನೆ, ಅನಿಷ್ಟ ಪದ್ಧತಿಗಳ ವಿರುದ್ಧದ ಹೋರಾಟ, ಸ್ವಾವಲಂಬನೆ, ದೇಹವೇ ದೇಗುಲ ತತ್ವಗಳ ಬೋಧನೆ ಮುಂತಾದವುಗಳ ಜೊತೆಗೆ ಅವರು ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳುವಳಿಯನ್ನು ಜನಮುಖಿಯಾಗಿಸಿದರು ಎನ್ನುವಂತಹ ಸಾಲುಗಳನ್ನು ಕೈಬಿಟ್ಟಿರುವುದು ದುರ್ದೈವದ ಸಂಗತಿ ಎಂದು ಮಠಾಧಿಪತಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಈ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯದಲ್ಲಿ ಆಗಿರುವ ಈ ಎಲ್ಲ ದೋಷಗಳನ್ನು ನಿವಾರಿಸಿ ಪಠ್ಯಪುಸ್ತಕ ಮುದ್ರಿಸಬೇಕು. ಅನ್ಯಥಾ ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುವುದಲ್ಲದೆ ವೈಶಿಷ್ಟ್ಯಪೂರ್ಣವಾದ ಲಿಂಗಾಯತ ಧರ್ಮಕ್ಕೆ ಮತ್ತು ಬಸವಣ್ಣನವರಿಗೆ ಅಪಚಾರವೆಸಗಿದಂತಾಗುತ್ತದೆ. ಲಿಂಗಾಯತ ಧರ್ಮದ ಅನುಯಾಯಿ ಮತ್ತು ಬಸವಣ್ಣನವರ ಹೆಸರಿನವರಾದ ತಾವು ಮುಖ್ಯ ಮಂತ್ರಿಯಾಗಿರುವ ಸಮಯದಲ್ಲಿ ಇಂತಹ ಅಪಚಾರವಾಗಿರುವುದು ನಮಗೆ ಆಘಾತಕಾರಿಯಾಗಿದೆ. ಬಹುಸಂಖ್ಯಾತ ಲಿಂಗಾಯತರು ಮತ್ತು ಲಿಂಗಾಯತ ಮಠಾಧಿಪತಿಗಳು ಬೃಹತ್ ಪ್ರಮಾಣದ ಪ್ರತಿಭಟನೆ ನಡೆಸುವ ಮೊದಲು ಈ ತಪ್ಪು ಸರಿಪಡಿಸಿ ಪಠ್ಯ ಪುಸ್ತಕಗಳನ್ನು ಪ್ರಕಟಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಸೂಕ್ತ ಸಂದರ್ಭದಲ್ಲಿ ಹೋರಾಟ ಮಾಡುವುದು ನಮಗೆ ಅನಿವಾರ್ಯವಾಗುತ್ತದೆ” ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.

ಇದೇ ರೀತಿ ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಮತ್ತು ನಾಡಗೀತೆಯ ಬಗ್ಗೆಯೂ ಅವಹೇಳನಕಾರಿ ವಿಷಯ ಪ್ರಕಟವಾಗಿರುವುದು ಸರಿಯಾದ ರೀತಿಯಲ್ಲ. ಇದು ಅತ್ಯಂತ ಖಂಡನೀಯವಾಗಿದೆ. ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿ: 🛑 Live Updates| ಪಠ್ಯಪುಸ್ತಕ ತಿರುಚೀಕರಣ ವಿವಾದ: ಅಂಬೇಡ್ಕರ್‌ ಕುರಿತು ಚಕ್ರತೀರ್ಥ ಮಾಡಿದ್ದ ವ್ಯಂಗ್ಯದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಸವಣ್ಣ ಮಂಗಳವೇಡೆಯಿಂದ ತಮ್ಮ ಸಾಮಾಜಿಕ ಕೆಲಸಗಳನ್ನು ಆರಂಭಿಸಿದರು ಎಂಬುದಕ್ಕೆ ಸಂಬಂಧಿಸಿದಂತೆ, ಬೆಳಗಾವಿ ಜಿಲ್ಲೆಯ ಮಂಗಳವೇಡೆಗೂ ಬಸವಣ್ಣಿಗೂ ಏನು ಸಂಬಂಧ ಎಂದು ಹುಡುಕಿದರೆ ವಿಕಿಪೀಡಿಯದಲ್ಲಿ ಈ ಕೆಳಗಿನ ಒಂದು ಬರಹ ಕಾಣಸಿಗುತ್ತದೆ. ಅದರ ಪ್ರಕಾರ ಮಂಗಳವೇಡದಿಂದ ಆಳ್ವಿಕೆ ನಡೆಸಿದ ಕರ್ಣ ಎಂಬ ಸಾಮಂತರಾಜ ಕಳಚುರಿ ವಂಶದ ಒಂದನೇ ಬಿಜ್ಜಳನ ಮಗ ಎಂಬುದೊಂದನ್ನು ಬಿಟ್ಟರೆ, ಬಸವಣ್ಣನು ಬಾಗೇವಾಡಿಯಿಂದ ಹೊರಟು ತಲುಪಿದ ಕೂಡಲಸಂಗಮ ಅಥವಾ ತನ್ನ ಸಾಮಾಜಿಕ ಕಾರ್ಯಗಳನ್ನು ನಡೆಸಿದ ಬಸವಕಲ್ಯಾಣ ಇವುಗಳಿಗೂ ಮಂಗಳವೇಡೆಗೂ ಮತ್ಯಾವ ಸಂಬಂಧವೂ ಕಾಣುವುದಿಲ್ಲ.

    [ಇದಲ್ಲದೆ ಕರ್ನಾಟಕ ಏಕೀಕರಣ ಚಳವಳಿಯನ್ನಾರಂಭಿಸಿದ ಆಲೂರು ವೆಂಕಟರಾಯರ ಶಿಷ್ಯರಾಗಿದ್ದ ಏಕೀಕರಣ ಹೋರಾಟಗಾರ ಮಂಗಳವೇಡೆ ಕೃಷ್ಣರಾಯರಿಗೆ ಸಂಬಂಧಿಸಿದ ವಿವರಗಳಿವೆ. ಮಂಗಳವೇಡೆಯೊಂದಿಗೆ ಬಸವಣ್ಣನಿಗೆ ಯಾವುದೇ ನಂಟು ಇದ್ದುದು ನನಗೆ ವಿಕಿಪೀಡಿಯದಲ್ಲಿ ಸಿಗಲಿಲ್ಲ.]

    ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಕರ್ಣ (ಕಳಚುರಿ)

    ಕರ್ಣ (ಕಳಚುರಿ): ಕರ್ನಾಟಕದಲ್ಲಿ ಚಾಳುಕ್ಯರ ಆಶ್ರಯದಲ್ಲಿ ಆಳುತ್ತಿದ್ದ ಕಳಚುರಿ ದೊರೆಗಳಲ್ಲೊಬ್ಬ. ಒಂದನೆಯ ಬಿಜ್ಜಳನ (ಬಿಜ್ಜ) ಮಗ. ಕನ್ನಮ, ಕೃಷ್ಣರಾಜ ಎಂದೂ ಈತನನ್ನು ಸಂಬೋಧಿಸಲಾಗಿದೆ. 1067ರಲ್ಲಿ ಈತನ ಆಳ್ವಿಕೆ ಪ್ರಾರಂಭವಾಯಿತೆಂದು ತಿಳಿದುಬರುತ್ತದೆ. ಮಂಗಳಿವೇಡದಿಂದ (ಈಗಿನ ಮಂಗಳವೇಢೆ; ಷೋಲಾರಪುರ ಜಿಲ್ಲೆ) ಅದರ ಸುತ್ತಮುತ್ತಣ ಪ್ರದೇಶಗಳನ್ನು ಈತ ಆಳುತ್ತಿದ್ದ. ಐವತ್ತು ಕದನಗಳಲ್ಲಿ ಕಾದಾಡಿ ಗೆದ್ದನೆಂದೂ ಹನ್ನೆರಡು ಮಂದಿ ದೊರೆಗಳನ್ನು ಕೊಂದು ತನ್ನ ರಾಜಧಾನಿಯನ್ನು ಶತ್ರುಗಳಿಂದ ರಕ್ಷಿಸಿದನೆಂದೂ ಇವನನ್ನು ಹೊಗಳಲಾಗಿದೆ. ಪರಮಾರರು, ಪೂರ್ವ ಚಾಳುಕ್ಯರು, ಚೋಳರು ಮುಂತಾದವರೊಂದಿಗೆ ಈತನ ಪ್ರಭುವಾದ ಒಂದನೆಯ ಸೋಮೇಶ್ವರ ಮಾಡಿದ ಕದನಗಳಲ್ಲಿ ಇವನೂ ಭಾಗವಹಿಸಿರಬೇಕೆಂದು ತೋರುತ್ತದೆ. ಈತ 1080ರ ವರೆಗೂ ರಾಜ್ಯವಾಳಿದ (ನೋಡಿ- ಕಳಚುರಿಗಳು).

    – ಸಿರಿಮನೆ ನಾಗರಾಜ್.

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...