Homeಚಳವಳಿಬಸವಣ್ಣನವರ ಪಠ್ಯ ತಿರುಚುವಿಕೆ ಕುಚೋದ್ಯ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಖಂಡನೆ - ಸಿಎಂಗೆ ಬಹಿರಂಗ ಪತ್ರ

ಬಸವಣ್ಣನವರ ಪಠ್ಯ ತಿರುಚುವಿಕೆ ಕುಚೋದ್ಯ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಖಂಡನೆ – ಸಿಎಂಗೆ ಬಹಿರಂಗ ಪತ್ರ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದ ಮುಗಿಯುವ ಯಾವ ಸೂಚನೆಗಳೂ ಕಾಣುತ್ತಿಲ್ಲ. ಬದಲಿಗೆ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಲೇ ಇದೆ. ಇದೀಗ ಬಸವಣ್ಣನವರ ಪಠ್ಯ ತಿರುಚುವಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬಹಿರಂಗ ಪತ್ರ ಬರೆದಿದೆ.

ನೂರಾರು ಲಿಂಗಾಯಿತ ಮಠಾಧೀಶರು ಇರುವ ಲಿಂಗಾಯಿತ ಮಠಾಧಿಪತಿಗಳ ಒಕ್ಕೂಟ ಬಸವಣ್ಣನವರ ಪಠ್ಯವನ್ನು ತಿರುಚಿರುವ ಕುರಿತು ಗಂಭೀರವಾದ ಆಕ್ಷೇಪ ವ್ಯಕ್ತಪಡಿಸಿದೆ. ಇದನ್ನು ಸರಿಪಡಿಸದೇ ಹೋದಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆ ಅನಿವಾರ್ಯ ಎಂಬ ಎಚ್ಚರಿಕೆಯನ್ನೂ ನೀಡಿದೆ.

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರಾದ ಭಾಲ್ಕಿಯ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದ್ದೇವರು ಮತ್ತು ಹಂದಿಗುಂದದ ವಿರಕ್ತಮಠದ  ನೇತೃತ್ವದಲ್ಲಿ ಶ್ರೀ ಶಿವಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ ಪತ್ರ ಬರೆದಿದ್ದು, ಲಿಂಗಾಯತ ಧರ್ಮಗುರು ಬಸವಣ್ಣನವರ ಕುರಿತು ಪಠ್ಯದಲ್ಲಿ ಬದಲಾವಣೆ ಮಾಡಿರುವುದು ಕುಚೋದ್ಯದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಮಸ್ತಕದಲ್ಲಿ ಉಪನಯನವಾದ ನಂತರ ಕೂಡಲಸಂಗಮಕ್ಕೆ ನಡೆದರು ಎಂದು ಬರೆಯಲಾಗಿದೆ. ಇದು ತಪ್ಪು. ಬಸವಣ್ಣನವರು ತಮ್ಮ ಸಹೋದರಿ ಅಕ್ಕನಾಗಾಯಿಗೆ ಇಲ್ಲದ ಉಪನಯನ ನನಗೇಕೆ? ಎಂದು ಧಿಕ್ಕರಿಸಿ ಕೂಡಲಸಂಗಮಕ್ಕೆ ಹೋದುದು ಐತಿಹಾಸಿಕ ಸಂಗತಿ ಎಂದು ಪತ್ರದಲ್ಲಿ ಬರೆಯಲಾಗಿದೆ.

ಅದೇ ರೀತಿ “ಶೈವ-ಗುರುಗಳ ಸಾನಿಧ್ಯದಲ್ಲಿ ಲಿಂಗದೀಕ್ಷೆಯನ್ನು ಪಡೆದು” ಎಂದು ಬರೆಯಲಾಗಿದೆ. ಇದು ಸಹ ತಪ್ಪು. ಶೈವಗುರುಗಳು ಗುಡಿ-ಗುಂಡಾರಗಳಲ್ಲಿರುವ ಸ್ಥಾವರ ಲಿಂಗಾರಾಧಕರು, ಅವರು ಹೇಗೆ ಇಷ್ಟಲಿಂಗ ದೀಕ್ಷೆ ಮಾಡಬಲ್ಲರು. ಇಷ್ಟಲಿಂಗ ಬಸವಣ್ಣನವರ ಪರಿಕಲ್ಪನೆಯಲ್ಲಿ ಮೂಡಿಬಂದದು. ಅವರೇ ಇಷ್ಟಲಿಂಗದ ಜನಕರು. ಅಲ್ಲಮಪ್ರಭುದೇವರಾದಿಯಾಗಿ ಎಲ್ಲ ಶರಣರು ತಮ್ಮ ವಚನಗಳಲ್ಲಿ ಇದನ್ನು ಉಲ್ಲೇಖಿಸಿದ್ದಾರೆ. ‘ಬಸವಣ್ಣನ ಉದರದಲ್ಲಿ ಹುಟ್ಟಿತ್ತು ಲಿಂಗ’ ಎಂದು ಚನ್ನಬಸವಣ್ಣನವರು ಉಲ್ಲೇಖಿಸಿದ್ದಾರೆ. ‘ನಿನ್ನ ನಾನರಿಯದ ಮುನ್ನ ನೀನೆಲ್ಲಿ ಇದ್ದೆ? ಎನ್ನೊಳಗಿದ್ದು ನಿನ್ನ ತೋರಲಕೆ ನೀನೆ ರೂಪಾದೆ’ ಎಂದು ಬಸವಣ್ಣನವರು ಸ್ವತಃ ತಮ್ಮ ವಚನದಲ್ಲಿ ಹೇಳಿದ್ದಾರೆ” ಎಂದು ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ.

“ಬಸವಣ್ಣನವರು ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು ಎಂದು ಈಗ ಪಠ್ಯದಲ್ಲಿ ಸೇರಿಸಲಾಗಿದೆ. ಇದು ಕೂಡ ಶುದ್ಧ ತಪ್ಪು. ವೀರಶೈವ ಶೈವದ ಶಾಖೆ. ಅದು ಮತವಿರಬಹುದು ಈಗ ಅದನ್ನು ಅಂಗಾಯತ ಧರ್ಮದ ಒಂದು ಪಂಗಡ ಎಂದು ಹೆಸರಿಸಲಾಗಿದೆ. ಸರಕಾರದ ದಾಖಲೆಗಳಲ್ಲಿ ಕ್ರಿ.ಶ.1871 ರಿಂದಲೂ ಇದನ್ನು ಕಾಣಬಹುದು. ಆದರೆ ಬಸವಣ್ಣನವರು ಅಂಗಾಯತ ಧರ್ಮದ ಸ್ಥಾಪಕರು ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಶೈವದಲ್ಲಿ ವರ್ಣಾಶ್ರಮದ ಆಚರಣೆ ಇದೆ. ಅಂಗಾಯತರಲ್ಲಿ ವರ್ಣಾಶ್ರಮ ಭೇದಗಳಲ್ಲ. ಬಸವಣ್ಣನವರು ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು ಎಂಬುದು ಶುದ್ಧ ಅನೈತಿಹಾಸಿಕ” ಎಂದು ಮಠಾಧಿಪತಿಗಳು ತಿಳಿಸಿದ್ದಾರೆ.

ಕಳೆದ ವರ್ಷ ಪಠ್ಯದಲ್ಲಿದ್ದ ವೈದಿಕ ಧರ್ಮದ ಆಚರಣೆಗಳ ನಿರಾಕರಣೆ, ಮಾನವೀಯ ಮಾಲ್ಯಗಳಿಂದ ಕೂಡಿದ ಸಿದ್ಧಾಂತದ ಪ್ರತಿಪಾದನೆ, ಅನಿಷ್ಟ ಪದ್ಧತಿಗಳ ವಿರುದ್ಧದ ಹೋರಾಟ, ಸ್ವಾವಲಂಬನೆ, ದೇಹವೇ ದೇಗುಲ ತತ್ವಗಳ ಬೋಧನೆ ಮುಂತಾದವುಗಳ ಜೊತೆಗೆ ಅವರು ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳುವಳಿಯನ್ನು ಜನಮುಖಿಯಾಗಿಸಿದರು ಎನ್ನುವಂತಹ ಸಾಲುಗಳನ್ನು ಕೈಬಿಟ್ಟಿರುವುದು ದುರ್ದೈವದ ಸಂಗತಿ ಎಂದು ಮಠಾಧಿಪತಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಈ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯದಲ್ಲಿ ಆಗಿರುವ ಈ ಎಲ್ಲ ದೋಷಗಳನ್ನು ನಿವಾರಿಸಿ ಪಠ್ಯಪುಸ್ತಕ ಮುದ್ರಿಸಬೇಕು. ಅನ್ಯಥಾ ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುವುದಲ್ಲದೆ ವೈಶಿಷ್ಟ್ಯಪೂರ್ಣವಾದ ಲಿಂಗಾಯತ ಧರ್ಮಕ್ಕೆ ಮತ್ತು ಬಸವಣ್ಣನವರಿಗೆ ಅಪಚಾರವೆಸಗಿದಂತಾಗುತ್ತದೆ. ಲಿಂಗಾಯತ ಧರ್ಮದ ಅನುಯಾಯಿ ಮತ್ತು ಬಸವಣ್ಣನವರ ಹೆಸರಿನವರಾದ ತಾವು ಮುಖ್ಯ ಮಂತ್ರಿಯಾಗಿರುವ ಸಮಯದಲ್ಲಿ ಇಂತಹ ಅಪಚಾರವಾಗಿರುವುದು ನಮಗೆ ಆಘಾತಕಾರಿಯಾಗಿದೆ. ಬಹುಸಂಖ್ಯಾತ ಲಿಂಗಾಯತರು ಮತ್ತು ಲಿಂಗಾಯತ ಮಠಾಧಿಪತಿಗಳು ಬೃಹತ್ ಪ್ರಮಾಣದ ಪ್ರತಿಭಟನೆ ನಡೆಸುವ ಮೊದಲು ಈ ತಪ್ಪು ಸರಿಪಡಿಸಿ ಪಠ್ಯ ಪುಸ್ತಕಗಳನ್ನು ಪ್ರಕಟಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಸೂಕ್ತ ಸಂದರ್ಭದಲ್ಲಿ ಹೋರಾಟ ಮಾಡುವುದು ನಮಗೆ ಅನಿವಾರ್ಯವಾಗುತ್ತದೆ” ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.

ಇದೇ ರೀತಿ ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಮತ್ತು ನಾಡಗೀತೆಯ ಬಗ್ಗೆಯೂ ಅವಹೇಳನಕಾರಿ ವಿಷಯ ಪ್ರಕಟವಾಗಿರುವುದು ಸರಿಯಾದ ರೀತಿಯಲ್ಲ. ಇದು ಅತ್ಯಂತ ಖಂಡನೀಯವಾಗಿದೆ. ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿ: 🛑 Live Updates| ಪಠ್ಯಪುಸ್ತಕ ತಿರುಚೀಕರಣ ವಿವಾದ: ಅಂಬೇಡ್ಕರ್‌ ಕುರಿತು ಚಕ್ರತೀರ್ಥ ಮಾಡಿದ್ದ ವ್ಯಂಗ್ಯದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಸವಣ್ಣ ಮಂಗಳವೇಡೆಯಿಂದ ತಮ್ಮ ಸಾಮಾಜಿಕ ಕೆಲಸಗಳನ್ನು ಆರಂಭಿಸಿದರು ಎಂಬುದಕ್ಕೆ ಸಂಬಂಧಿಸಿದಂತೆ, ಬೆಳಗಾವಿ ಜಿಲ್ಲೆಯ ಮಂಗಳವೇಡೆಗೂ ಬಸವಣ್ಣಿಗೂ ಏನು ಸಂಬಂಧ ಎಂದು ಹುಡುಕಿದರೆ ವಿಕಿಪೀಡಿಯದಲ್ಲಿ ಈ ಕೆಳಗಿನ ಒಂದು ಬರಹ ಕಾಣಸಿಗುತ್ತದೆ. ಅದರ ಪ್ರಕಾರ ಮಂಗಳವೇಡದಿಂದ ಆಳ್ವಿಕೆ ನಡೆಸಿದ ಕರ್ಣ ಎಂಬ ಸಾಮಂತರಾಜ ಕಳಚುರಿ ವಂಶದ ಒಂದನೇ ಬಿಜ್ಜಳನ ಮಗ ಎಂಬುದೊಂದನ್ನು ಬಿಟ್ಟರೆ, ಬಸವಣ್ಣನು ಬಾಗೇವಾಡಿಯಿಂದ ಹೊರಟು ತಲುಪಿದ ಕೂಡಲಸಂಗಮ ಅಥವಾ ತನ್ನ ಸಾಮಾಜಿಕ ಕಾರ್ಯಗಳನ್ನು ನಡೆಸಿದ ಬಸವಕಲ್ಯಾಣ ಇವುಗಳಿಗೂ ಮಂಗಳವೇಡೆಗೂ ಮತ್ಯಾವ ಸಂಬಂಧವೂ ಕಾಣುವುದಿಲ್ಲ.

    [ಇದಲ್ಲದೆ ಕರ್ನಾಟಕ ಏಕೀಕರಣ ಚಳವಳಿಯನ್ನಾರಂಭಿಸಿದ ಆಲೂರು ವೆಂಕಟರಾಯರ ಶಿಷ್ಯರಾಗಿದ್ದ ಏಕೀಕರಣ ಹೋರಾಟಗಾರ ಮಂಗಳವೇಡೆ ಕೃಷ್ಣರಾಯರಿಗೆ ಸಂಬಂಧಿಸಿದ ವಿವರಗಳಿವೆ. ಮಂಗಳವೇಡೆಯೊಂದಿಗೆ ಬಸವಣ್ಣನಿಗೆ ಯಾವುದೇ ನಂಟು ಇದ್ದುದು ನನಗೆ ವಿಕಿಪೀಡಿಯದಲ್ಲಿ ಸಿಗಲಿಲ್ಲ.]

    ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಕರ್ಣ (ಕಳಚುರಿ)

    ಕರ್ಣ (ಕಳಚುರಿ): ಕರ್ನಾಟಕದಲ್ಲಿ ಚಾಳುಕ್ಯರ ಆಶ್ರಯದಲ್ಲಿ ಆಳುತ್ತಿದ್ದ ಕಳಚುರಿ ದೊರೆಗಳಲ್ಲೊಬ್ಬ. ಒಂದನೆಯ ಬಿಜ್ಜಳನ (ಬಿಜ್ಜ) ಮಗ. ಕನ್ನಮ, ಕೃಷ್ಣರಾಜ ಎಂದೂ ಈತನನ್ನು ಸಂಬೋಧಿಸಲಾಗಿದೆ. 1067ರಲ್ಲಿ ಈತನ ಆಳ್ವಿಕೆ ಪ್ರಾರಂಭವಾಯಿತೆಂದು ತಿಳಿದುಬರುತ್ತದೆ. ಮಂಗಳಿವೇಡದಿಂದ (ಈಗಿನ ಮಂಗಳವೇಢೆ; ಷೋಲಾರಪುರ ಜಿಲ್ಲೆ) ಅದರ ಸುತ್ತಮುತ್ತಣ ಪ್ರದೇಶಗಳನ್ನು ಈತ ಆಳುತ್ತಿದ್ದ. ಐವತ್ತು ಕದನಗಳಲ್ಲಿ ಕಾದಾಡಿ ಗೆದ್ದನೆಂದೂ ಹನ್ನೆರಡು ಮಂದಿ ದೊರೆಗಳನ್ನು ಕೊಂದು ತನ್ನ ರಾಜಧಾನಿಯನ್ನು ಶತ್ರುಗಳಿಂದ ರಕ್ಷಿಸಿದನೆಂದೂ ಇವನನ್ನು ಹೊಗಳಲಾಗಿದೆ. ಪರಮಾರರು, ಪೂರ್ವ ಚಾಳುಕ್ಯರು, ಚೋಳರು ಮುಂತಾದವರೊಂದಿಗೆ ಈತನ ಪ್ರಭುವಾದ ಒಂದನೆಯ ಸೋಮೇಶ್ವರ ಮಾಡಿದ ಕದನಗಳಲ್ಲಿ ಇವನೂ ಭಾಗವಹಿಸಿರಬೇಕೆಂದು ತೋರುತ್ತದೆ. ಈತ 1080ರ ವರೆಗೂ ರಾಜ್ಯವಾಳಿದ (ನೋಡಿ- ಕಳಚುರಿಗಳು).

    – ಸಿರಿಮನೆ ನಾಗರಾಜ್.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....