Homeಚಳವಳಿಬಸವಣ್ಣನವರ ಪಠ್ಯ ತಿರುಚುವಿಕೆ ಕುಚೋದ್ಯ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಖಂಡನೆ - ಸಿಎಂಗೆ ಬಹಿರಂಗ ಪತ್ರ

ಬಸವಣ್ಣನವರ ಪಠ್ಯ ತಿರುಚುವಿಕೆ ಕುಚೋದ್ಯ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಖಂಡನೆ – ಸಿಎಂಗೆ ಬಹಿರಂಗ ಪತ್ರ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದ ಮುಗಿಯುವ ಯಾವ ಸೂಚನೆಗಳೂ ಕಾಣುತ್ತಿಲ್ಲ. ಬದಲಿಗೆ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಲೇ ಇದೆ. ಇದೀಗ ಬಸವಣ್ಣನವರ ಪಠ್ಯ ತಿರುಚುವಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬಹಿರಂಗ ಪತ್ರ ಬರೆದಿದೆ.

ನೂರಾರು ಲಿಂಗಾಯಿತ ಮಠಾಧೀಶರು ಇರುವ ಲಿಂಗಾಯಿತ ಮಠಾಧಿಪತಿಗಳ ಒಕ್ಕೂಟ ಬಸವಣ್ಣನವರ ಪಠ್ಯವನ್ನು ತಿರುಚಿರುವ ಕುರಿತು ಗಂಭೀರವಾದ ಆಕ್ಷೇಪ ವ್ಯಕ್ತಪಡಿಸಿದೆ. ಇದನ್ನು ಸರಿಪಡಿಸದೇ ಹೋದಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆ ಅನಿವಾರ್ಯ ಎಂಬ ಎಚ್ಚರಿಕೆಯನ್ನೂ ನೀಡಿದೆ.

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರಾದ ಭಾಲ್ಕಿಯ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದ್ದೇವರು ಮತ್ತು ಹಂದಿಗುಂದದ ವಿರಕ್ತಮಠದ  ನೇತೃತ್ವದಲ್ಲಿ ಶ್ರೀ ಶಿವಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ ಪತ್ರ ಬರೆದಿದ್ದು, ಲಿಂಗಾಯತ ಧರ್ಮಗುರು ಬಸವಣ್ಣನವರ ಕುರಿತು ಪಠ್ಯದಲ್ಲಿ ಬದಲಾವಣೆ ಮಾಡಿರುವುದು ಕುಚೋದ್ಯದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಮಸ್ತಕದಲ್ಲಿ ಉಪನಯನವಾದ ನಂತರ ಕೂಡಲಸಂಗಮಕ್ಕೆ ನಡೆದರು ಎಂದು ಬರೆಯಲಾಗಿದೆ. ಇದು ತಪ್ಪು. ಬಸವಣ್ಣನವರು ತಮ್ಮ ಸಹೋದರಿ ಅಕ್ಕನಾಗಾಯಿಗೆ ಇಲ್ಲದ ಉಪನಯನ ನನಗೇಕೆ? ಎಂದು ಧಿಕ್ಕರಿಸಿ ಕೂಡಲಸಂಗಮಕ್ಕೆ ಹೋದುದು ಐತಿಹಾಸಿಕ ಸಂಗತಿ ಎಂದು ಪತ್ರದಲ್ಲಿ ಬರೆಯಲಾಗಿದೆ.

ಅದೇ ರೀತಿ “ಶೈವ-ಗುರುಗಳ ಸಾನಿಧ್ಯದಲ್ಲಿ ಲಿಂಗದೀಕ್ಷೆಯನ್ನು ಪಡೆದು” ಎಂದು ಬರೆಯಲಾಗಿದೆ. ಇದು ಸಹ ತಪ್ಪು. ಶೈವಗುರುಗಳು ಗುಡಿ-ಗುಂಡಾರಗಳಲ್ಲಿರುವ ಸ್ಥಾವರ ಲಿಂಗಾರಾಧಕರು, ಅವರು ಹೇಗೆ ಇಷ್ಟಲಿಂಗ ದೀಕ್ಷೆ ಮಾಡಬಲ್ಲರು. ಇಷ್ಟಲಿಂಗ ಬಸವಣ್ಣನವರ ಪರಿಕಲ್ಪನೆಯಲ್ಲಿ ಮೂಡಿಬಂದದು. ಅವರೇ ಇಷ್ಟಲಿಂಗದ ಜನಕರು. ಅಲ್ಲಮಪ್ರಭುದೇವರಾದಿಯಾಗಿ ಎಲ್ಲ ಶರಣರು ತಮ್ಮ ವಚನಗಳಲ್ಲಿ ಇದನ್ನು ಉಲ್ಲೇಖಿಸಿದ್ದಾರೆ. ‘ಬಸವಣ್ಣನ ಉದರದಲ್ಲಿ ಹುಟ್ಟಿತ್ತು ಲಿಂಗ’ ಎಂದು ಚನ್ನಬಸವಣ್ಣನವರು ಉಲ್ಲೇಖಿಸಿದ್ದಾರೆ. ‘ನಿನ್ನ ನಾನರಿಯದ ಮುನ್ನ ನೀನೆಲ್ಲಿ ಇದ್ದೆ? ಎನ್ನೊಳಗಿದ್ದು ನಿನ್ನ ತೋರಲಕೆ ನೀನೆ ರೂಪಾದೆ’ ಎಂದು ಬಸವಣ್ಣನವರು ಸ್ವತಃ ತಮ್ಮ ವಚನದಲ್ಲಿ ಹೇಳಿದ್ದಾರೆ” ಎಂದು ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ.

“ಬಸವಣ್ಣನವರು ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು ಎಂದು ಈಗ ಪಠ್ಯದಲ್ಲಿ ಸೇರಿಸಲಾಗಿದೆ. ಇದು ಕೂಡ ಶುದ್ಧ ತಪ್ಪು. ವೀರಶೈವ ಶೈವದ ಶಾಖೆ. ಅದು ಮತವಿರಬಹುದು ಈಗ ಅದನ್ನು ಅಂಗಾಯತ ಧರ್ಮದ ಒಂದು ಪಂಗಡ ಎಂದು ಹೆಸರಿಸಲಾಗಿದೆ. ಸರಕಾರದ ದಾಖಲೆಗಳಲ್ಲಿ ಕ್ರಿ.ಶ.1871 ರಿಂದಲೂ ಇದನ್ನು ಕಾಣಬಹುದು. ಆದರೆ ಬಸವಣ್ಣನವರು ಅಂಗಾಯತ ಧರ್ಮದ ಸ್ಥಾಪಕರು ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಶೈವದಲ್ಲಿ ವರ್ಣಾಶ್ರಮದ ಆಚರಣೆ ಇದೆ. ಅಂಗಾಯತರಲ್ಲಿ ವರ್ಣಾಶ್ರಮ ಭೇದಗಳಲ್ಲ. ಬಸವಣ್ಣನವರು ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು ಎಂಬುದು ಶುದ್ಧ ಅನೈತಿಹಾಸಿಕ” ಎಂದು ಮಠಾಧಿಪತಿಗಳು ತಿಳಿಸಿದ್ದಾರೆ.

ಕಳೆದ ವರ್ಷ ಪಠ್ಯದಲ್ಲಿದ್ದ ವೈದಿಕ ಧರ್ಮದ ಆಚರಣೆಗಳ ನಿರಾಕರಣೆ, ಮಾನವೀಯ ಮಾಲ್ಯಗಳಿಂದ ಕೂಡಿದ ಸಿದ್ಧಾಂತದ ಪ್ರತಿಪಾದನೆ, ಅನಿಷ್ಟ ಪದ್ಧತಿಗಳ ವಿರುದ್ಧದ ಹೋರಾಟ, ಸ್ವಾವಲಂಬನೆ, ದೇಹವೇ ದೇಗುಲ ತತ್ವಗಳ ಬೋಧನೆ ಮುಂತಾದವುಗಳ ಜೊತೆಗೆ ಅವರು ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳುವಳಿಯನ್ನು ಜನಮುಖಿಯಾಗಿಸಿದರು ಎನ್ನುವಂತಹ ಸಾಲುಗಳನ್ನು ಕೈಬಿಟ್ಟಿರುವುದು ದುರ್ದೈವದ ಸಂಗತಿ ಎಂದು ಮಠಾಧಿಪತಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಈ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯದಲ್ಲಿ ಆಗಿರುವ ಈ ಎಲ್ಲ ದೋಷಗಳನ್ನು ನಿವಾರಿಸಿ ಪಠ್ಯಪುಸ್ತಕ ಮುದ್ರಿಸಬೇಕು. ಅನ್ಯಥಾ ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುವುದಲ್ಲದೆ ವೈಶಿಷ್ಟ್ಯಪೂರ್ಣವಾದ ಲಿಂಗಾಯತ ಧರ್ಮಕ್ಕೆ ಮತ್ತು ಬಸವಣ್ಣನವರಿಗೆ ಅಪಚಾರವೆಸಗಿದಂತಾಗುತ್ತದೆ. ಲಿಂಗಾಯತ ಧರ್ಮದ ಅನುಯಾಯಿ ಮತ್ತು ಬಸವಣ್ಣನವರ ಹೆಸರಿನವರಾದ ತಾವು ಮುಖ್ಯ ಮಂತ್ರಿಯಾಗಿರುವ ಸಮಯದಲ್ಲಿ ಇಂತಹ ಅಪಚಾರವಾಗಿರುವುದು ನಮಗೆ ಆಘಾತಕಾರಿಯಾಗಿದೆ. ಬಹುಸಂಖ್ಯಾತ ಲಿಂಗಾಯತರು ಮತ್ತು ಲಿಂಗಾಯತ ಮಠಾಧಿಪತಿಗಳು ಬೃಹತ್ ಪ್ರಮಾಣದ ಪ್ರತಿಭಟನೆ ನಡೆಸುವ ಮೊದಲು ಈ ತಪ್ಪು ಸರಿಪಡಿಸಿ ಪಠ್ಯ ಪುಸ್ತಕಗಳನ್ನು ಪ್ರಕಟಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಸೂಕ್ತ ಸಂದರ್ಭದಲ್ಲಿ ಹೋರಾಟ ಮಾಡುವುದು ನಮಗೆ ಅನಿವಾರ್ಯವಾಗುತ್ತದೆ” ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.

ಇದೇ ರೀತಿ ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಮತ್ತು ನಾಡಗೀತೆಯ ಬಗ್ಗೆಯೂ ಅವಹೇಳನಕಾರಿ ವಿಷಯ ಪ್ರಕಟವಾಗಿರುವುದು ಸರಿಯಾದ ರೀತಿಯಲ್ಲ. ಇದು ಅತ್ಯಂತ ಖಂಡನೀಯವಾಗಿದೆ. ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿ: 🛑 Live Updates| ಪಠ್ಯಪುಸ್ತಕ ತಿರುಚೀಕರಣ ವಿವಾದ: ಅಂಬೇಡ್ಕರ್‌ ಕುರಿತು ಚಕ್ರತೀರ್ಥ ಮಾಡಿದ್ದ ವ್ಯಂಗ್ಯದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಸವಣ್ಣ ಮಂಗಳವೇಡೆಯಿಂದ ತಮ್ಮ ಸಾಮಾಜಿಕ ಕೆಲಸಗಳನ್ನು ಆರಂಭಿಸಿದರು ಎಂಬುದಕ್ಕೆ ಸಂಬಂಧಿಸಿದಂತೆ, ಬೆಳಗಾವಿ ಜಿಲ್ಲೆಯ ಮಂಗಳವೇಡೆಗೂ ಬಸವಣ್ಣಿಗೂ ಏನು ಸಂಬಂಧ ಎಂದು ಹುಡುಕಿದರೆ ವಿಕಿಪೀಡಿಯದಲ್ಲಿ ಈ ಕೆಳಗಿನ ಒಂದು ಬರಹ ಕಾಣಸಿಗುತ್ತದೆ. ಅದರ ಪ್ರಕಾರ ಮಂಗಳವೇಡದಿಂದ ಆಳ್ವಿಕೆ ನಡೆಸಿದ ಕರ್ಣ ಎಂಬ ಸಾಮಂತರಾಜ ಕಳಚುರಿ ವಂಶದ ಒಂದನೇ ಬಿಜ್ಜಳನ ಮಗ ಎಂಬುದೊಂದನ್ನು ಬಿಟ್ಟರೆ, ಬಸವಣ್ಣನು ಬಾಗೇವಾಡಿಯಿಂದ ಹೊರಟು ತಲುಪಿದ ಕೂಡಲಸಂಗಮ ಅಥವಾ ತನ್ನ ಸಾಮಾಜಿಕ ಕಾರ್ಯಗಳನ್ನು ನಡೆಸಿದ ಬಸವಕಲ್ಯಾಣ ಇವುಗಳಿಗೂ ಮಂಗಳವೇಡೆಗೂ ಮತ್ಯಾವ ಸಂಬಂಧವೂ ಕಾಣುವುದಿಲ್ಲ.

    [ಇದಲ್ಲದೆ ಕರ್ನಾಟಕ ಏಕೀಕರಣ ಚಳವಳಿಯನ್ನಾರಂಭಿಸಿದ ಆಲೂರು ವೆಂಕಟರಾಯರ ಶಿಷ್ಯರಾಗಿದ್ದ ಏಕೀಕರಣ ಹೋರಾಟಗಾರ ಮಂಗಳವೇಡೆ ಕೃಷ್ಣರಾಯರಿಗೆ ಸಂಬಂಧಿಸಿದ ವಿವರಗಳಿವೆ. ಮಂಗಳವೇಡೆಯೊಂದಿಗೆ ಬಸವಣ್ಣನಿಗೆ ಯಾವುದೇ ನಂಟು ಇದ್ದುದು ನನಗೆ ವಿಕಿಪೀಡಿಯದಲ್ಲಿ ಸಿಗಲಿಲ್ಲ.]

    ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಕರ್ಣ (ಕಳಚುರಿ)

    ಕರ್ಣ (ಕಳಚುರಿ): ಕರ್ನಾಟಕದಲ್ಲಿ ಚಾಳುಕ್ಯರ ಆಶ್ರಯದಲ್ಲಿ ಆಳುತ್ತಿದ್ದ ಕಳಚುರಿ ದೊರೆಗಳಲ್ಲೊಬ್ಬ. ಒಂದನೆಯ ಬಿಜ್ಜಳನ (ಬಿಜ್ಜ) ಮಗ. ಕನ್ನಮ, ಕೃಷ್ಣರಾಜ ಎಂದೂ ಈತನನ್ನು ಸಂಬೋಧಿಸಲಾಗಿದೆ. 1067ರಲ್ಲಿ ಈತನ ಆಳ್ವಿಕೆ ಪ್ರಾರಂಭವಾಯಿತೆಂದು ತಿಳಿದುಬರುತ್ತದೆ. ಮಂಗಳಿವೇಡದಿಂದ (ಈಗಿನ ಮಂಗಳವೇಢೆ; ಷೋಲಾರಪುರ ಜಿಲ್ಲೆ) ಅದರ ಸುತ್ತಮುತ್ತಣ ಪ್ರದೇಶಗಳನ್ನು ಈತ ಆಳುತ್ತಿದ್ದ. ಐವತ್ತು ಕದನಗಳಲ್ಲಿ ಕಾದಾಡಿ ಗೆದ್ದನೆಂದೂ ಹನ್ನೆರಡು ಮಂದಿ ದೊರೆಗಳನ್ನು ಕೊಂದು ತನ್ನ ರಾಜಧಾನಿಯನ್ನು ಶತ್ರುಗಳಿಂದ ರಕ್ಷಿಸಿದನೆಂದೂ ಇವನನ್ನು ಹೊಗಳಲಾಗಿದೆ. ಪರಮಾರರು, ಪೂರ್ವ ಚಾಳುಕ್ಯರು, ಚೋಳರು ಮುಂತಾದವರೊಂದಿಗೆ ಈತನ ಪ್ರಭುವಾದ ಒಂದನೆಯ ಸೋಮೇಶ್ವರ ಮಾಡಿದ ಕದನಗಳಲ್ಲಿ ಇವನೂ ಭಾಗವಹಿಸಿರಬೇಕೆಂದು ತೋರುತ್ತದೆ. ಈತ 1080ರ ವರೆಗೂ ರಾಜ್ಯವಾಳಿದ (ನೋಡಿ- ಕಳಚುರಿಗಳು).

    – ಸಿರಿಮನೆ ನಾಗರಾಜ್.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...