Homeಚಳವಳಿಬಸವಣ್ಣನವರ ಪಠ್ಯ ತಿರುಚುವಿಕೆ ಕುಚೋದ್ಯ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಖಂಡನೆ - ಸಿಎಂಗೆ ಬಹಿರಂಗ ಪತ್ರ

ಬಸವಣ್ಣನವರ ಪಠ್ಯ ತಿರುಚುವಿಕೆ ಕುಚೋದ್ಯ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಖಂಡನೆ – ಸಿಎಂಗೆ ಬಹಿರಂಗ ಪತ್ರ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದ ಮುಗಿಯುವ ಯಾವ ಸೂಚನೆಗಳೂ ಕಾಣುತ್ತಿಲ್ಲ. ಬದಲಿಗೆ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಲೇ ಇದೆ. ಇದೀಗ ಬಸವಣ್ಣನವರ ಪಠ್ಯ ತಿರುಚುವಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬಹಿರಂಗ ಪತ್ರ ಬರೆದಿದೆ.

ನೂರಾರು ಲಿಂಗಾಯಿತ ಮಠಾಧೀಶರು ಇರುವ ಲಿಂಗಾಯಿತ ಮಠಾಧಿಪತಿಗಳ ಒಕ್ಕೂಟ ಬಸವಣ್ಣನವರ ಪಠ್ಯವನ್ನು ತಿರುಚಿರುವ ಕುರಿತು ಗಂಭೀರವಾದ ಆಕ್ಷೇಪ ವ್ಯಕ್ತಪಡಿಸಿದೆ. ಇದನ್ನು ಸರಿಪಡಿಸದೇ ಹೋದಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆ ಅನಿವಾರ್ಯ ಎಂಬ ಎಚ್ಚರಿಕೆಯನ್ನೂ ನೀಡಿದೆ.

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರಾದ ಭಾಲ್ಕಿಯ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದ್ದೇವರು ಮತ್ತು ಹಂದಿಗುಂದದ ವಿರಕ್ತಮಠದ  ನೇತೃತ್ವದಲ್ಲಿ ಶ್ರೀ ಶಿವಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ ಪತ್ರ ಬರೆದಿದ್ದು, ಲಿಂಗಾಯತ ಧರ್ಮಗುರು ಬಸವಣ್ಣನವರ ಕುರಿತು ಪಠ್ಯದಲ್ಲಿ ಬದಲಾವಣೆ ಮಾಡಿರುವುದು ಕುಚೋದ್ಯದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಮಸ್ತಕದಲ್ಲಿ ಉಪನಯನವಾದ ನಂತರ ಕೂಡಲಸಂಗಮಕ್ಕೆ ನಡೆದರು ಎಂದು ಬರೆಯಲಾಗಿದೆ. ಇದು ತಪ್ಪು. ಬಸವಣ್ಣನವರು ತಮ್ಮ ಸಹೋದರಿ ಅಕ್ಕನಾಗಾಯಿಗೆ ಇಲ್ಲದ ಉಪನಯನ ನನಗೇಕೆ? ಎಂದು ಧಿಕ್ಕರಿಸಿ ಕೂಡಲಸಂಗಮಕ್ಕೆ ಹೋದುದು ಐತಿಹಾಸಿಕ ಸಂಗತಿ ಎಂದು ಪತ್ರದಲ್ಲಿ ಬರೆಯಲಾಗಿದೆ.

ಅದೇ ರೀತಿ “ಶೈವ-ಗುರುಗಳ ಸಾನಿಧ್ಯದಲ್ಲಿ ಲಿಂಗದೀಕ್ಷೆಯನ್ನು ಪಡೆದು” ಎಂದು ಬರೆಯಲಾಗಿದೆ. ಇದು ಸಹ ತಪ್ಪು. ಶೈವಗುರುಗಳು ಗುಡಿ-ಗುಂಡಾರಗಳಲ್ಲಿರುವ ಸ್ಥಾವರ ಲಿಂಗಾರಾಧಕರು, ಅವರು ಹೇಗೆ ಇಷ್ಟಲಿಂಗ ದೀಕ್ಷೆ ಮಾಡಬಲ್ಲರು. ಇಷ್ಟಲಿಂಗ ಬಸವಣ್ಣನವರ ಪರಿಕಲ್ಪನೆಯಲ್ಲಿ ಮೂಡಿಬಂದದು. ಅವರೇ ಇಷ್ಟಲಿಂಗದ ಜನಕರು. ಅಲ್ಲಮಪ್ರಭುದೇವರಾದಿಯಾಗಿ ಎಲ್ಲ ಶರಣರು ತಮ್ಮ ವಚನಗಳಲ್ಲಿ ಇದನ್ನು ಉಲ್ಲೇಖಿಸಿದ್ದಾರೆ. ‘ಬಸವಣ್ಣನ ಉದರದಲ್ಲಿ ಹುಟ್ಟಿತ್ತು ಲಿಂಗ’ ಎಂದು ಚನ್ನಬಸವಣ್ಣನವರು ಉಲ್ಲೇಖಿಸಿದ್ದಾರೆ. ‘ನಿನ್ನ ನಾನರಿಯದ ಮುನ್ನ ನೀನೆಲ್ಲಿ ಇದ್ದೆ? ಎನ್ನೊಳಗಿದ್ದು ನಿನ್ನ ತೋರಲಕೆ ನೀನೆ ರೂಪಾದೆ’ ಎಂದು ಬಸವಣ್ಣನವರು ಸ್ವತಃ ತಮ್ಮ ವಚನದಲ್ಲಿ ಹೇಳಿದ್ದಾರೆ” ಎಂದು ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ.

“ಬಸವಣ್ಣನವರು ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು ಎಂದು ಈಗ ಪಠ್ಯದಲ್ಲಿ ಸೇರಿಸಲಾಗಿದೆ. ಇದು ಕೂಡ ಶುದ್ಧ ತಪ್ಪು. ವೀರಶೈವ ಶೈವದ ಶಾಖೆ. ಅದು ಮತವಿರಬಹುದು ಈಗ ಅದನ್ನು ಅಂಗಾಯತ ಧರ್ಮದ ಒಂದು ಪಂಗಡ ಎಂದು ಹೆಸರಿಸಲಾಗಿದೆ. ಸರಕಾರದ ದಾಖಲೆಗಳಲ್ಲಿ ಕ್ರಿ.ಶ.1871 ರಿಂದಲೂ ಇದನ್ನು ಕಾಣಬಹುದು. ಆದರೆ ಬಸವಣ್ಣನವರು ಅಂಗಾಯತ ಧರ್ಮದ ಸ್ಥಾಪಕರು ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಶೈವದಲ್ಲಿ ವರ್ಣಾಶ್ರಮದ ಆಚರಣೆ ಇದೆ. ಅಂಗಾಯತರಲ್ಲಿ ವರ್ಣಾಶ್ರಮ ಭೇದಗಳಲ್ಲ. ಬಸವಣ್ಣನವರು ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು ಎಂಬುದು ಶುದ್ಧ ಅನೈತಿಹಾಸಿಕ” ಎಂದು ಮಠಾಧಿಪತಿಗಳು ತಿಳಿಸಿದ್ದಾರೆ.

ಕಳೆದ ವರ್ಷ ಪಠ್ಯದಲ್ಲಿದ್ದ ವೈದಿಕ ಧರ್ಮದ ಆಚರಣೆಗಳ ನಿರಾಕರಣೆ, ಮಾನವೀಯ ಮಾಲ್ಯಗಳಿಂದ ಕೂಡಿದ ಸಿದ್ಧಾಂತದ ಪ್ರತಿಪಾದನೆ, ಅನಿಷ್ಟ ಪದ್ಧತಿಗಳ ವಿರುದ್ಧದ ಹೋರಾಟ, ಸ್ವಾವಲಂಬನೆ, ದೇಹವೇ ದೇಗುಲ ತತ್ವಗಳ ಬೋಧನೆ ಮುಂತಾದವುಗಳ ಜೊತೆಗೆ ಅವರು ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳುವಳಿಯನ್ನು ಜನಮುಖಿಯಾಗಿಸಿದರು ಎನ್ನುವಂತಹ ಸಾಲುಗಳನ್ನು ಕೈಬಿಟ್ಟಿರುವುದು ದುರ್ದೈವದ ಸಂಗತಿ ಎಂದು ಮಠಾಧಿಪತಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಈ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯದಲ್ಲಿ ಆಗಿರುವ ಈ ಎಲ್ಲ ದೋಷಗಳನ್ನು ನಿವಾರಿಸಿ ಪಠ್ಯಪುಸ್ತಕ ಮುದ್ರಿಸಬೇಕು. ಅನ್ಯಥಾ ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುವುದಲ್ಲದೆ ವೈಶಿಷ್ಟ್ಯಪೂರ್ಣವಾದ ಲಿಂಗಾಯತ ಧರ್ಮಕ್ಕೆ ಮತ್ತು ಬಸವಣ್ಣನವರಿಗೆ ಅಪಚಾರವೆಸಗಿದಂತಾಗುತ್ತದೆ. ಲಿಂಗಾಯತ ಧರ್ಮದ ಅನುಯಾಯಿ ಮತ್ತು ಬಸವಣ್ಣನವರ ಹೆಸರಿನವರಾದ ತಾವು ಮುಖ್ಯ ಮಂತ್ರಿಯಾಗಿರುವ ಸಮಯದಲ್ಲಿ ಇಂತಹ ಅಪಚಾರವಾಗಿರುವುದು ನಮಗೆ ಆಘಾತಕಾರಿಯಾಗಿದೆ. ಬಹುಸಂಖ್ಯಾತ ಲಿಂಗಾಯತರು ಮತ್ತು ಲಿಂಗಾಯತ ಮಠಾಧಿಪತಿಗಳು ಬೃಹತ್ ಪ್ರಮಾಣದ ಪ್ರತಿಭಟನೆ ನಡೆಸುವ ಮೊದಲು ಈ ತಪ್ಪು ಸರಿಪಡಿಸಿ ಪಠ್ಯ ಪುಸ್ತಕಗಳನ್ನು ಪ್ರಕಟಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಸೂಕ್ತ ಸಂದರ್ಭದಲ್ಲಿ ಹೋರಾಟ ಮಾಡುವುದು ನಮಗೆ ಅನಿವಾರ್ಯವಾಗುತ್ತದೆ” ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.

ಇದೇ ರೀತಿ ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಮತ್ತು ನಾಡಗೀತೆಯ ಬಗ್ಗೆಯೂ ಅವಹೇಳನಕಾರಿ ವಿಷಯ ಪ್ರಕಟವಾಗಿರುವುದು ಸರಿಯಾದ ರೀತಿಯಲ್ಲ. ಇದು ಅತ್ಯಂತ ಖಂಡನೀಯವಾಗಿದೆ. ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿ: 🛑 Live Updates| ಪಠ್ಯಪುಸ್ತಕ ತಿರುಚೀಕರಣ ವಿವಾದ: ಅಂಬೇಡ್ಕರ್‌ ಕುರಿತು ಚಕ್ರತೀರ್ಥ ಮಾಡಿದ್ದ ವ್ಯಂಗ್ಯದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಸವಣ್ಣ ಮಂಗಳವೇಡೆಯಿಂದ ತಮ್ಮ ಸಾಮಾಜಿಕ ಕೆಲಸಗಳನ್ನು ಆರಂಭಿಸಿದರು ಎಂಬುದಕ್ಕೆ ಸಂಬಂಧಿಸಿದಂತೆ, ಬೆಳಗಾವಿ ಜಿಲ್ಲೆಯ ಮಂಗಳವೇಡೆಗೂ ಬಸವಣ್ಣಿಗೂ ಏನು ಸಂಬಂಧ ಎಂದು ಹುಡುಕಿದರೆ ವಿಕಿಪೀಡಿಯದಲ್ಲಿ ಈ ಕೆಳಗಿನ ಒಂದು ಬರಹ ಕಾಣಸಿಗುತ್ತದೆ. ಅದರ ಪ್ರಕಾರ ಮಂಗಳವೇಡದಿಂದ ಆಳ್ವಿಕೆ ನಡೆಸಿದ ಕರ್ಣ ಎಂಬ ಸಾಮಂತರಾಜ ಕಳಚುರಿ ವಂಶದ ಒಂದನೇ ಬಿಜ್ಜಳನ ಮಗ ಎಂಬುದೊಂದನ್ನು ಬಿಟ್ಟರೆ, ಬಸವಣ್ಣನು ಬಾಗೇವಾಡಿಯಿಂದ ಹೊರಟು ತಲುಪಿದ ಕೂಡಲಸಂಗಮ ಅಥವಾ ತನ್ನ ಸಾಮಾಜಿಕ ಕಾರ್ಯಗಳನ್ನು ನಡೆಸಿದ ಬಸವಕಲ್ಯಾಣ ಇವುಗಳಿಗೂ ಮಂಗಳವೇಡೆಗೂ ಮತ್ಯಾವ ಸಂಬಂಧವೂ ಕಾಣುವುದಿಲ್ಲ.

    [ಇದಲ್ಲದೆ ಕರ್ನಾಟಕ ಏಕೀಕರಣ ಚಳವಳಿಯನ್ನಾರಂಭಿಸಿದ ಆಲೂರು ವೆಂಕಟರಾಯರ ಶಿಷ್ಯರಾಗಿದ್ದ ಏಕೀಕರಣ ಹೋರಾಟಗಾರ ಮಂಗಳವೇಡೆ ಕೃಷ್ಣರಾಯರಿಗೆ ಸಂಬಂಧಿಸಿದ ವಿವರಗಳಿವೆ. ಮಂಗಳವೇಡೆಯೊಂದಿಗೆ ಬಸವಣ್ಣನಿಗೆ ಯಾವುದೇ ನಂಟು ಇದ್ದುದು ನನಗೆ ವಿಕಿಪೀಡಿಯದಲ್ಲಿ ಸಿಗಲಿಲ್ಲ.]

    ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಕರ್ಣ (ಕಳಚುರಿ)

    ಕರ್ಣ (ಕಳಚುರಿ): ಕರ್ನಾಟಕದಲ್ಲಿ ಚಾಳುಕ್ಯರ ಆಶ್ರಯದಲ್ಲಿ ಆಳುತ್ತಿದ್ದ ಕಳಚುರಿ ದೊರೆಗಳಲ್ಲೊಬ್ಬ. ಒಂದನೆಯ ಬಿಜ್ಜಳನ (ಬಿಜ್ಜ) ಮಗ. ಕನ್ನಮ, ಕೃಷ್ಣರಾಜ ಎಂದೂ ಈತನನ್ನು ಸಂಬೋಧಿಸಲಾಗಿದೆ. 1067ರಲ್ಲಿ ಈತನ ಆಳ್ವಿಕೆ ಪ್ರಾರಂಭವಾಯಿತೆಂದು ತಿಳಿದುಬರುತ್ತದೆ. ಮಂಗಳಿವೇಡದಿಂದ (ಈಗಿನ ಮಂಗಳವೇಢೆ; ಷೋಲಾರಪುರ ಜಿಲ್ಲೆ) ಅದರ ಸುತ್ತಮುತ್ತಣ ಪ್ರದೇಶಗಳನ್ನು ಈತ ಆಳುತ್ತಿದ್ದ. ಐವತ್ತು ಕದನಗಳಲ್ಲಿ ಕಾದಾಡಿ ಗೆದ್ದನೆಂದೂ ಹನ್ನೆರಡು ಮಂದಿ ದೊರೆಗಳನ್ನು ಕೊಂದು ತನ್ನ ರಾಜಧಾನಿಯನ್ನು ಶತ್ರುಗಳಿಂದ ರಕ್ಷಿಸಿದನೆಂದೂ ಇವನನ್ನು ಹೊಗಳಲಾಗಿದೆ. ಪರಮಾರರು, ಪೂರ್ವ ಚಾಳುಕ್ಯರು, ಚೋಳರು ಮುಂತಾದವರೊಂದಿಗೆ ಈತನ ಪ್ರಭುವಾದ ಒಂದನೆಯ ಸೋಮೇಶ್ವರ ಮಾಡಿದ ಕದನಗಳಲ್ಲಿ ಇವನೂ ಭಾಗವಹಿಸಿರಬೇಕೆಂದು ತೋರುತ್ತದೆ. ಈತ 1080ರ ವರೆಗೂ ರಾಜ್ಯವಾಳಿದ (ನೋಡಿ- ಕಳಚುರಿಗಳು).

    – ಸಿರಿಮನೆ ನಾಗರಾಜ್.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...