Homeಚಳವಳಿಬಸವಣ್ಣನವರ ಪಠ್ಯ ತಿರುಚುವಿಕೆ ಕುಚೋದ್ಯ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಖಂಡನೆ - ಸಿಎಂಗೆ ಬಹಿರಂಗ ಪತ್ರ

ಬಸವಣ್ಣನವರ ಪಠ್ಯ ತಿರುಚುವಿಕೆ ಕುಚೋದ್ಯ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಖಂಡನೆ – ಸಿಎಂಗೆ ಬಹಿರಂಗ ಪತ್ರ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದ ಮುಗಿಯುವ ಯಾವ ಸೂಚನೆಗಳೂ ಕಾಣುತ್ತಿಲ್ಲ. ಬದಲಿಗೆ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಲೇ ಇದೆ. ಇದೀಗ ಬಸವಣ್ಣನವರ ಪಠ್ಯ ತಿರುಚುವಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬಹಿರಂಗ ಪತ್ರ ಬರೆದಿದೆ.

ನೂರಾರು ಲಿಂಗಾಯಿತ ಮಠಾಧೀಶರು ಇರುವ ಲಿಂಗಾಯಿತ ಮಠಾಧಿಪತಿಗಳ ಒಕ್ಕೂಟ ಬಸವಣ್ಣನವರ ಪಠ್ಯವನ್ನು ತಿರುಚಿರುವ ಕುರಿತು ಗಂಭೀರವಾದ ಆಕ್ಷೇಪ ವ್ಯಕ್ತಪಡಿಸಿದೆ. ಇದನ್ನು ಸರಿಪಡಿಸದೇ ಹೋದಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆ ಅನಿವಾರ್ಯ ಎಂಬ ಎಚ್ಚರಿಕೆಯನ್ನೂ ನೀಡಿದೆ.

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರಾದ ಭಾಲ್ಕಿಯ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದ್ದೇವರು ಮತ್ತು ಹಂದಿಗುಂದದ ವಿರಕ್ತಮಠದ  ನೇತೃತ್ವದಲ್ಲಿ ಶ್ರೀ ಶಿವಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ ಪತ್ರ ಬರೆದಿದ್ದು, ಲಿಂಗಾಯತ ಧರ್ಮಗುರು ಬಸವಣ್ಣನವರ ಕುರಿತು ಪಠ್ಯದಲ್ಲಿ ಬದಲಾವಣೆ ಮಾಡಿರುವುದು ಕುಚೋದ್ಯದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಮಸ್ತಕದಲ್ಲಿ ಉಪನಯನವಾದ ನಂತರ ಕೂಡಲಸಂಗಮಕ್ಕೆ ನಡೆದರು ಎಂದು ಬರೆಯಲಾಗಿದೆ. ಇದು ತಪ್ಪು. ಬಸವಣ್ಣನವರು ತಮ್ಮ ಸಹೋದರಿ ಅಕ್ಕನಾಗಾಯಿಗೆ ಇಲ್ಲದ ಉಪನಯನ ನನಗೇಕೆ? ಎಂದು ಧಿಕ್ಕರಿಸಿ ಕೂಡಲಸಂಗಮಕ್ಕೆ ಹೋದುದು ಐತಿಹಾಸಿಕ ಸಂಗತಿ ಎಂದು ಪತ್ರದಲ್ಲಿ ಬರೆಯಲಾಗಿದೆ.

ಅದೇ ರೀತಿ “ಶೈವ-ಗುರುಗಳ ಸಾನಿಧ್ಯದಲ್ಲಿ ಲಿಂಗದೀಕ್ಷೆಯನ್ನು ಪಡೆದು” ಎಂದು ಬರೆಯಲಾಗಿದೆ. ಇದು ಸಹ ತಪ್ಪು. ಶೈವಗುರುಗಳು ಗುಡಿ-ಗುಂಡಾರಗಳಲ್ಲಿರುವ ಸ್ಥಾವರ ಲಿಂಗಾರಾಧಕರು, ಅವರು ಹೇಗೆ ಇಷ್ಟಲಿಂಗ ದೀಕ್ಷೆ ಮಾಡಬಲ್ಲರು. ಇಷ್ಟಲಿಂಗ ಬಸವಣ್ಣನವರ ಪರಿಕಲ್ಪನೆಯಲ್ಲಿ ಮೂಡಿಬಂದದು. ಅವರೇ ಇಷ್ಟಲಿಂಗದ ಜನಕರು. ಅಲ್ಲಮಪ್ರಭುದೇವರಾದಿಯಾಗಿ ಎಲ್ಲ ಶರಣರು ತಮ್ಮ ವಚನಗಳಲ್ಲಿ ಇದನ್ನು ಉಲ್ಲೇಖಿಸಿದ್ದಾರೆ. ‘ಬಸವಣ್ಣನ ಉದರದಲ್ಲಿ ಹುಟ್ಟಿತ್ತು ಲಿಂಗ’ ಎಂದು ಚನ್ನಬಸವಣ್ಣನವರು ಉಲ್ಲೇಖಿಸಿದ್ದಾರೆ. ‘ನಿನ್ನ ನಾನರಿಯದ ಮುನ್ನ ನೀನೆಲ್ಲಿ ಇದ್ದೆ? ಎನ್ನೊಳಗಿದ್ದು ನಿನ್ನ ತೋರಲಕೆ ನೀನೆ ರೂಪಾದೆ’ ಎಂದು ಬಸವಣ್ಣನವರು ಸ್ವತಃ ತಮ್ಮ ವಚನದಲ್ಲಿ ಹೇಳಿದ್ದಾರೆ” ಎಂದು ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ.

“ಬಸವಣ್ಣನವರು ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು ಎಂದು ಈಗ ಪಠ್ಯದಲ್ಲಿ ಸೇರಿಸಲಾಗಿದೆ. ಇದು ಕೂಡ ಶುದ್ಧ ತಪ್ಪು. ವೀರಶೈವ ಶೈವದ ಶಾಖೆ. ಅದು ಮತವಿರಬಹುದು ಈಗ ಅದನ್ನು ಅಂಗಾಯತ ಧರ್ಮದ ಒಂದು ಪಂಗಡ ಎಂದು ಹೆಸರಿಸಲಾಗಿದೆ. ಸರಕಾರದ ದಾಖಲೆಗಳಲ್ಲಿ ಕ್ರಿ.ಶ.1871 ರಿಂದಲೂ ಇದನ್ನು ಕಾಣಬಹುದು. ಆದರೆ ಬಸವಣ್ಣನವರು ಅಂಗಾಯತ ಧರ್ಮದ ಸ್ಥಾಪಕರು ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಶೈವದಲ್ಲಿ ವರ್ಣಾಶ್ರಮದ ಆಚರಣೆ ಇದೆ. ಅಂಗಾಯತರಲ್ಲಿ ವರ್ಣಾಶ್ರಮ ಭೇದಗಳಲ್ಲ. ಬಸವಣ್ಣನವರು ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು ಎಂಬುದು ಶುದ್ಧ ಅನೈತಿಹಾಸಿಕ” ಎಂದು ಮಠಾಧಿಪತಿಗಳು ತಿಳಿಸಿದ್ದಾರೆ.

ಕಳೆದ ವರ್ಷ ಪಠ್ಯದಲ್ಲಿದ್ದ ವೈದಿಕ ಧರ್ಮದ ಆಚರಣೆಗಳ ನಿರಾಕರಣೆ, ಮಾನವೀಯ ಮಾಲ್ಯಗಳಿಂದ ಕೂಡಿದ ಸಿದ್ಧಾಂತದ ಪ್ರತಿಪಾದನೆ, ಅನಿಷ್ಟ ಪದ್ಧತಿಗಳ ವಿರುದ್ಧದ ಹೋರಾಟ, ಸ್ವಾವಲಂಬನೆ, ದೇಹವೇ ದೇಗುಲ ತತ್ವಗಳ ಬೋಧನೆ ಮುಂತಾದವುಗಳ ಜೊತೆಗೆ ಅವರು ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳುವಳಿಯನ್ನು ಜನಮುಖಿಯಾಗಿಸಿದರು ಎನ್ನುವಂತಹ ಸಾಲುಗಳನ್ನು ಕೈಬಿಟ್ಟಿರುವುದು ದುರ್ದೈವದ ಸಂಗತಿ ಎಂದು ಮಠಾಧಿಪತಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಈ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯದಲ್ಲಿ ಆಗಿರುವ ಈ ಎಲ್ಲ ದೋಷಗಳನ್ನು ನಿವಾರಿಸಿ ಪಠ್ಯಪುಸ್ತಕ ಮುದ್ರಿಸಬೇಕು. ಅನ್ಯಥಾ ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುವುದಲ್ಲದೆ ವೈಶಿಷ್ಟ್ಯಪೂರ್ಣವಾದ ಲಿಂಗಾಯತ ಧರ್ಮಕ್ಕೆ ಮತ್ತು ಬಸವಣ್ಣನವರಿಗೆ ಅಪಚಾರವೆಸಗಿದಂತಾಗುತ್ತದೆ. ಲಿಂಗಾಯತ ಧರ್ಮದ ಅನುಯಾಯಿ ಮತ್ತು ಬಸವಣ್ಣನವರ ಹೆಸರಿನವರಾದ ತಾವು ಮುಖ್ಯ ಮಂತ್ರಿಯಾಗಿರುವ ಸಮಯದಲ್ಲಿ ಇಂತಹ ಅಪಚಾರವಾಗಿರುವುದು ನಮಗೆ ಆಘಾತಕಾರಿಯಾಗಿದೆ. ಬಹುಸಂಖ್ಯಾತ ಲಿಂಗಾಯತರು ಮತ್ತು ಲಿಂಗಾಯತ ಮಠಾಧಿಪತಿಗಳು ಬೃಹತ್ ಪ್ರಮಾಣದ ಪ್ರತಿಭಟನೆ ನಡೆಸುವ ಮೊದಲು ಈ ತಪ್ಪು ಸರಿಪಡಿಸಿ ಪಠ್ಯ ಪುಸ್ತಕಗಳನ್ನು ಪ್ರಕಟಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಸೂಕ್ತ ಸಂದರ್ಭದಲ್ಲಿ ಹೋರಾಟ ಮಾಡುವುದು ನಮಗೆ ಅನಿವಾರ್ಯವಾಗುತ್ತದೆ” ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.

ಇದೇ ರೀತಿ ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಮತ್ತು ನಾಡಗೀತೆಯ ಬಗ್ಗೆಯೂ ಅವಹೇಳನಕಾರಿ ವಿಷಯ ಪ್ರಕಟವಾಗಿರುವುದು ಸರಿಯಾದ ರೀತಿಯಲ್ಲ. ಇದು ಅತ್ಯಂತ ಖಂಡನೀಯವಾಗಿದೆ. ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿ: 🛑 Live Updates| ಪಠ್ಯಪುಸ್ತಕ ತಿರುಚೀಕರಣ ವಿವಾದ: ಅಂಬೇಡ್ಕರ್‌ ಕುರಿತು ಚಕ್ರತೀರ್ಥ ಮಾಡಿದ್ದ ವ್ಯಂಗ್ಯದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಸವಣ್ಣ ಮಂಗಳವೇಡೆಯಿಂದ ತಮ್ಮ ಸಾಮಾಜಿಕ ಕೆಲಸಗಳನ್ನು ಆರಂಭಿಸಿದರು ಎಂಬುದಕ್ಕೆ ಸಂಬಂಧಿಸಿದಂತೆ, ಬೆಳಗಾವಿ ಜಿಲ್ಲೆಯ ಮಂಗಳವೇಡೆಗೂ ಬಸವಣ್ಣಿಗೂ ಏನು ಸಂಬಂಧ ಎಂದು ಹುಡುಕಿದರೆ ವಿಕಿಪೀಡಿಯದಲ್ಲಿ ಈ ಕೆಳಗಿನ ಒಂದು ಬರಹ ಕಾಣಸಿಗುತ್ತದೆ. ಅದರ ಪ್ರಕಾರ ಮಂಗಳವೇಡದಿಂದ ಆಳ್ವಿಕೆ ನಡೆಸಿದ ಕರ್ಣ ಎಂಬ ಸಾಮಂತರಾಜ ಕಳಚುರಿ ವಂಶದ ಒಂದನೇ ಬಿಜ್ಜಳನ ಮಗ ಎಂಬುದೊಂದನ್ನು ಬಿಟ್ಟರೆ, ಬಸವಣ್ಣನು ಬಾಗೇವಾಡಿಯಿಂದ ಹೊರಟು ತಲುಪಿದ ಕೂಡಲಸಂಗಮ ಅಥವಾ ತನ್ನ ಸಾಮಾಜಿಕ ಕಾರ್ಯಗಳನ್ನು ನಡೆಸಿದ ಬಸವಕಲ್ಯಾಣ ಇವುಗಳಿಗೂ ಮಂಗಳವೇಡೆಗೂ ಮತ್ಯಾವ ಸಂಬಂಧವೂ ಕಾಣುವುದಿಲ್ಲ.

    [ಇದಲ್ಲದೆ ಕರ್ನಾಟಕ ಏಕೀಕರಣ ಚಳವಳಿಯನ್ನಾರಂಭಿಸಿದ ಆಲೂರು ವೆಂಕಟರಾಯರ ಶಿಷ್ಯರಾಗಿದ್ದ ಏಕೀಕರಣ ಹೋರಾಟಗಾರ ಮಂಗಳವೇಡೆ ಕೃಷ್ಣರಾಯರಿಗೆ ಸಂಬಂಧಿಸಿದ ವಿವರಗಳಿವೆ. ಮಂಗಳವೇಡೆಯೊಂದಿಗೆ ಬಸವಣ್ಣನಿಗೆ ಯಾವುದೇ ನಂಟು ಇದ್ದುದು ನನಗೆ ವಿಕಿಪೀಡಿಯದಲ್ಲಿ ಸಿಗಲಿಲ್ಲ.]

    ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಕರ್ಣ (ಕಳಚುರಿ)

    ಕರ್ಣ (ಕಳಚುರಿ): ಕರ್ನಾಟಕದಲ್ಲಿ ಚಾಳುಕ್ಯರ ಆಶ್ರಯದಲ್ಲಿ ಆಳುತ್ತಿದ್ದ ಕಳಚುರಿ ದೊರೆಗಳಲ್ಲೊಬ್ಬ. ಒಂದನೆಯ ಬಿಜ್ಜಳನ (ಬಿಜ್ಜ) ಮಗ. ಕನ್ನಮ, ಕೃಷ್ಣರಾಜ ಎಂದೂ ಈತನನ್ನು ಸಂಬೋಧಿಸಲಾಗಿದೆ. 1067ರಲ್ಲಿ ಈತನ ಆಳ್ವಿಕೆ ಪ್ರಾರಂಭವಾಯಿತೆಂದು ತಿಳಿದುಬರುತ್ತದೆ. ಮಂಗಳಿವೇಡದಿಂದ (ಈಗಿನ ಮಂಗಳವೇಢೆ; ಷೋಲಾರಪುರ ಜಿಲ್ಲೆ) ಅದರ ಸುತ್ತಮುತ್ತಣ ಪ್ರದೇಶಗಳನ್ನು ಈತ ಆಳುತ್ತಿದ್ದ. ಐವತ್ತು ಕದನಗಳಲ್ಲಿ ಕಾದಾಡಿ ಗೆದ್ದನೆಂದೂ ಹನ್ನೆರಡು ಮಂದಿ ದೊರೆಗಳನ್ನು ಕೊಂದು ತನ್ನ ರಾಜಧಾನಿಯನ್ನು ಶತ್ರುಗಳಿಂದ ರಕ್ಷಿಸಿದನೆಂದೂ ಇವನನ್ನು ಹೊಗಳಲಾಗಿದೆ. ಪರಮಾರರು, ಪೂರ್ವ ಚಾಳುಕ್ಯರು, ಚೋಳರು ಮುಂತಾದವರೊಂದಿಗೆ ಈತನ ಪ್ರಭುವಾದ ಒಂದನೆಯ ಸೋಮೇಶ್ವರ ಮಾಡಿದ ಕದನಗಳಲ್ಲಿ ಇವನೂ ಭಾಗವಹಿಸಿರಬೇಕೆಂದು ತೋರುತ್ತದೆ. ಈತ 1080ರ ವರೆಗೂ ರಾಜ್ಯವಾಳಿದ (ನೋಡಿ- ಕಳಚುರಿಗಳು).

    – ಸಿರಿಮನೆ ನಾಗರಾಜ್.

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....