HomeಮುಖಪುಟRSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

- Advertisement -
- Advertisement -

ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ನಾಡಿನ ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವರವರು ತಮ್ಮ ಪಠ್ಯ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದು, ತಮ್ಮ ಪಾಠ ಕೈಬಿಡಬೇಕೆಂದು ಪತ್ರ ಬರೆದಿದ್ದಾರೆ.

ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೂ ತಿಳಿದಿಲ್ಲ ಎಂತಲೇ ಅರ್ಥ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾತುವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ನೂತನ ಪಠ್ಯ ಪರಿಷ್ಕರಣೆಯಲ್ಲಿಯೂ ಇದೇ ಆಗಿದೆ ಎಂದು ದೇವನೂರು ಆರೋಪಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎಂದು ಹೇಳುವ ಮೂಲಕ ತಮ್ಮದೇ ಜಾತಿಯವರನ್ನು ತುಂಬಿಕೊಂಡಿದ್ದಾರೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಅವರು ಬರೆದ ಪತ್ರದ ಪೂರ್ಣ ಪಠ್ಯ ಈ ಕೆಳಗಿನಂತಿದೆ.

ಪಠ್ಯ ಪರಿಷ್ಕರಣೆಯ ವಾದ ವಿವಾದಗಳು ನಡೆಯುತ್ತಿದೆ. ಹತ್ತನೆ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿ ನನ್ನದೂ ಒಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಪಠ್ಯದ ಪಿಡಿಎಫ್ ಬರಹಗಳನ್ನು ಇಲ್ಲ ಅಂತ, ಉಂಟು ಅಂತ, ಕೆಲವು ಸಲ ಸೇರಿದ್ದನ್ನು ಕೈ ಬಿಡುವುದು, ಮತ್ತೆ ಸೇರಿಸುವುದು ಇತ್ಯಾದಿ ಗಳಿಗೆ ಗಳಿಗೆಗೂ ಬದಲಾಗುತ್ತಿದೆ. ಇರಲಿ, ನನ್ನ ಕಥನದ ಭಾಗ ಪಠ್ಯದಲ್ಲಿ ಸೇರಿಸಿರದಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತದೆ. ಸೇರಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದು ಸ್ಪಷ್ಟಪಡಿಸುವುದಕ್ಕಾಗಿ ಈ ಪ್ರಕಟಣೆ ನೀಡುತ್ತಿದ್ದೇನೆ. ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇನೆ.

ಯಾಕೆಂದರೆ,

(೧) ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೂ ತಿಳಿದಿಲ್ಲ ಎಂತಲೇ ಅರ್ಥ.

(೨) ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎನ್ನುತ್ತಾರೆ! ಭಾರತದಂತಹ ಸಂಕೀರ್ಣ ದೇಶದಲ್ಲಿ ಪ್ರಜ್ಞಾಪೂರ್ವಕವಾಗಿ ಜಾತಿಯನ್ನು ಗುರುತಿಸದಿದ್ದರೆ ಅಲ್ಲಿ ಸಹಜವಾಗಿ ಶೇ.90ರಷ್ಟು ಅವರ ಜಾತಿಯವರೇ ತುಂಬಿಕೊಳ್ಳುತ್ತಾರೆ. ಅವರವರ ಅಡಿಗೆ ಮನೆ ವಾಸನೆ ಪ್ರಿಯವಾಗುವಂತೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ. ಇದು ಈಗಿನದ್ದಲ್ಲ. ಡಾ. ಮುರಳಿ ಮನೋಹರ ಜೋಷಿಯವರು ಕೇಂದ್ರ ಶಿಕ್ಷಣ ಸಚಿವರಾಗಿದ್ದ ಕಾಲದಿಂದಲೂ ನಡೆದುಕೊಂಡು ಬಂದಿದೆ. ಚಾತುವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ಇಲ್ಲೂ ಇದೇ ಆಗಿದೆ.

ಈ ಪಠ್ಯಗಳಲ್ಲಾ ಪ್ರಕಟವಾದ ಮೇಲೆ ಅವುಗಳನ್ನು ಪರಿಶೀಲಿಸಿ, ಅಲ್ಲಿನ ತಪ್ಪು ಮತ್ತು ಕೊರತೆಗಳನ್ನು ತುಂಬಲು, ನಮ್ಮ ಶಾಲಾ ಮಕ್ಕಳಿಗೆ ಪರ್ಯಾಯ ಪಾಠಗಳನ್ನು, ಪೂರಕ ವಿಷಯಗಳನ್ನು ಮುಖ್ಯವಾಗಿ ಸಂವಿಧಾನವನ್ನು ಬಿತ್ತರಿಸುವ ವಾಟ್ಸಾಪ್, ಇ ಮೇಲ್, ಆನ್‌ಲೈನ್ ಕ್ಲಾಸ್ ಇತ್ಯಾದಿಗಳನ್ನು ರೂಪಿಸಲು ಆಲೋಚಿಸುತ್ತಿರುವ ನಾಡಿನ ಆರೋಗ್ಯವಂತ ಮನಸ್ಸುಗಳ ಜೊತೆ ನಾನಿರಲು ಬಯಸುತ್ತೇನೆ.

24ನೇ ಮೇ 2022

(ದೇವನೂರ ಮಹಾದೇವ)


ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Something is better than nothing. But nothing is better than nonsense. ತುಂಬಾ ಒಳ್ಳೆಯ ಕೆಲಸ ಮಾಡಿದ್ದೀರಾ ಗುರುಗಳೇ. 👍

  2. ಈ ದೇಶದಲ್ಲಿ ‘ದಲಿತ’ ಎಂದರೆ ಜಾತ್ಯತೀತ, ‘ಬ್ರಾಹ್ಮಣ’ ಅಂದರೆ ಜಾತಿವಾದಿ. ಅಲ್ಲವೇ?

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...