HomeಮುಖಪುಟRSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

- Advertisement -
- Advertisement -

ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ನಾಡಿನ ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವರವರು ತಮ್ಮ ಪಠ್ಯ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದು, ತಮ್ಮ ಪಾಠ ಕೈಬಿಡಬೇಕೆಂದು ಪತ್ರ ಬರೆದಿದ್ದಾರೆ.

ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೂ ತಿಳಿದಿಲ್ಲ ಎಂತಲೇ ಅರ್ಥ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾತುವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ನೂತನ ಪಠ್ಯ ಪರಿಷ್ಕರಣೆಯಲ್ಲಿಯೂ ಇದೇ ಆಗಿದೆ ಎಂದು ದೇವನೂರು ಆರೋಪಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎಂದು ಹೇಳುವ ಮೂಲಕ ತಮ್ಮದೇ ಜಾತಿಯವರನ್ನು ತುಂಬಿಕೊಂಡಿದ್ದಾರೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಅವರು ಬರೆದ ಪತ್ರದ ಪೂರ್ಣ ಪಠ್ಯ ಈ ಕೆಳಗಿನಂತಿದೆ.

ಪಠ್ಯ ಪರಿಷ್ಕರಣೆಯ ವಾದ ವಿವಾದಗಳು ನಡೆಯುತ್ತಿದೆ. ಹತ್ತನೆ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿ ನನ್ನದೂ ಒಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಪಠ್ಯದ ಪಿಡಿಎಫ್ ಬರಹಗಳನ್ನು ಇಲ್ಲ ಅಂತ, ಉಂಟು ಅಂತ, ಕೆಲವು ಸಲ ಸೇರಿದ್ದನ್ನು ಕೈ ಬಿಡುವುದು, ಮತ್ತೆ ಸೇರಿಸುವುದು ಇತ್ಯಾದಿ ಗಳಿಗೆ ಗಳಿಗೆಗೂ ಬದಲಾಗುತ್ತಿದೆ. ಇರಲಿ, ನನ್ನ ಕಥನದ ಭಾಗ ಪಠ್ಯದಲ್ಲಿ ಸೇರಿಸಿರದಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತದೆ. ಸೇರಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದು ಸ್ಪಷ್ಟಪಡಿಸುವುದಕ್ಕಾಗಿ ಈ ಪ್ರಕಟಣೆ ನೀಡುತ್ತಿದ್ದೇನೆ. ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇನೆ.

ಯಾಕೆಂದರೆ,

(೧) ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೂ ತಿಳಿದಿಲ್ಲ ಎಂತಲೇ ಅರ್ಥ.

(೨) ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎನ್ನುತ್ತಾರೆ! ಭಾರತದಂತಹ ಸಂಕೀರ್ಣ ದೇಶದಲ್ಲಿ ಪ್ರಜ್ಞಾಪೂರ್ವಕವಾಗಿ ಜಾತಿಯನ್ನು ಗುರುತಿಸದಿದ್ದರೆ ಅಲ್ಲಿ ಸಹಜವಾಗಿ ಶೇ.90ರಷ್ಟು ಅವರ ಜಾತಿಯವರೇ ತುಂಬಿಕೊಳ್ಳುತ್ತಾರೆ. ಅವರವರ ಅಡಿಗೆ ಮನೆ ವಾಸನೆ ಪ್ರಿಯವಾಗುವಂತೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ. ಇದು ಈಗಿನದ್ದಲ್ಲ. ಡಾ. ಮುರಳಿ ಮನೋಹರ ಜೋಷಿಯವರು ಕೇಂದ್ರ ಶಿಕ್ಷಣ ಸಚಿವರಾಗಿದ್ದ ಕಾಲದಿಂದಲೂ ನಡೆದುಕೊಂಡು ಬಂದಿದೆ. ಚಾತುವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ಇಲ್ಲೂ ಇದೇ ಆಗಿದೆ.

ಈ ಪಠ್ಯಗಳಲ್ಲಾ ಪ್ರಕಟವಾದ ಮೇಲೆ ಅವುಗಳನ್ನು ಪರಿಶೀಲಿಸಿ, ಅಲ್ಲಿನ ತಪ್ಪು ಮತ್ತು ಕೊರತೆಗಳನ್ನು ತುಂಬಲು, ನಮ್ಮ ಶಾಲಾ ಮಕ್ಕಳಿಗೆ ಪರ್ಯಾಯ ಪಾಠಗಳನ್ನು, ಪೂರಕ ವಿಷಯಗಳನ್ನು ಮುಖ್ಯವಾಗಿ ಸಂವಿಧಾನವನ್ನು ಬಿತ್ತರಿಸುವ ವಾಟ್ಸಾಪ್, ಇ ಮೇಲ್, ಆನ್‌ಲೈನ್ ಕ್ಲಾಸ್ ಇತ್ಯಾದಿಗಳನ್ನು ರೂಪಿಸಲು ಆಲೋಚಿಸುತ್ತಿರುವ ನಾಡಿನ ಆರೋಗ್ಯವಂತ ಮನಸ್ಸುಗಳ ಜೊತೆ ನಾನಿರಲು ಬಯಸುತ್ತೇನೆ.

24ನೇ ಮೇ 2022

(ದೇವನೂರ ಮಹಾದೇವ)


ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Something is better than nothing. But nothing is better than nonsense. ತುಂಬಾ ಒಳ್ಳೆಯ ಕೆಲಸ ಮಾಡಿದ್ದೀರಾ ಗುರುಗಳೇ. 👍

  2. ಈ ದೇಶದಲ್ಲಿ ‘ದಲಿತ’ ಎಂದರೆ ಜಾತ್ಯತೀತ, ‘ಬ್ರಾಹ್ಮಣ’ ಅಂದರೆ ಜಾತಿವಾದಿ. ಅಲ್ಲವೇ?

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...