HomeಮುಖಪುಟRSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

- Advertisement -
- Advertisement -

ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ನಾಡಿನ ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವರವರು ತಮ್ಮ ಪಠ್ಯ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದು, ತಮ್ಮ ಪಾಠ ಕೈಬಿಡಬೇಕೆಂದು ಪತ್ರ ಬರೆದಿದ್ದಾರೆ.

ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೂ ತಿಳಿದಿಲ್ಲ ಎಂತಲೇ ಅರ್ಥ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾತುವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ನೂತನ ಪಠ್ಯ ಪರಿಷ್ಕರಣೆಯಲ್ಲಿಯೂ ಇದೇ ಆಗಿದೆ ಎಂದು ದೇವನೂರು ಆರೋಪಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎಂದು ಹೇಳುವ ಮೂಲಕ ತಮ್ಮದೇ ಜಾತಿಯವರನ್ನು ತುಂಬಿಕೊಂಡಿದ್ದಾರೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಅವರು ಬರೆದ ಪತ್ರದ ಪೂರ್ಣ ಪಠ್ಯ ಈ ಕೆಳಗಿನಂತಿದೆ.

ಪಠ್ಯ ಪರಿಷ್ಕರಣೆಯ ವಾದ ವಿವಾದಗಳು ನಡೆಯುತ್ತಿದೆ. ಹತ್ತನೆ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿ ನನ್ನದೂ ಒಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಪಠ್ಯದ ಪಿಡಿಎಫ್ ಬರಹಗಳನ್ನು ಇಲ್ಲ ಅಂತ, ಉಂಟು ಅಂತ, ಕೆಲವು ಸಲ ಸೇರಿದ್ದನ್ನು ಕೈ ಬಿಡುವುದು, ಮತ್ತೆ ಸೇರಿಸುವುದು ಇತ್ಯಾದಿ ಗಳಿಗೆ ಗಳಿಗೆಗೂ ಬದಲಾಗುತ್ತಿದೆ. ಇರಲಿ, ನನ್ನ ಕಥನದ ಭಾಗ ಪಠ್ಯದಲ್ಲಿ ಸೇರಿಸಿರದಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತದೆ. ಸೇರಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದು ಸ್ಪಷ್ಟಪಡಿಸುವುದಕ್ಕಾಗಿ ಈ ಪ್ರಕಟಣೆ ನೀಡುತ್ತಿದ್ದೇನೆ. ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇನೆ.

ಯಾಕೆಂದರೆ,

(೧) ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೂ ತಿಳಿದಿಲ್ಲ ಎಂತಲೇ ಅರ್ಥ.

(೨) ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎನ್ನುತ್ತಾರೆ! ಭಾರತದಂತಹ ಸಂಕೀರ್ಣ ದೇಶದಲ್ಲಿ ಪ್ರಜ್ಞಾಪೂರ್ವಕವಾಗಿ ಜಾತಿಯನ್ನು ಗುರುತಿಸದಿದ್ದರೆ ಅಲ್ಲಿ ಸಹಜವಾಗಿ ಶೇ.90ರಷ್ಟು ಅವರ ಜಾತಿಯವರೇ ತುಂಬಿಕೊಳ್ಳುತ್ತಾರೆ. ಅವರವರ ಅಡಿಗೆ ಮನೆ ವಾಸನೆ ಪ್ರಿಯವಾಗುವಂತೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ. ಇದು ಈಗಿನದ್ದಲ್ಲ. ಡಾ. ಮುರಳಿ ಮನೋಹರ ಜೋಷಿಯವರು ಕೇಂದ್ರ ಶಿಕ್ಷಣ ಸಚಿವರಾಗಿದ್ದ ಕಾಲದಿಂದಲೂ ನಡೆದುಕೊಂಡು ಬಂದಿದೆ. ಚಾತುವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ಇಲ್ಲೂ ಇದೇ ಆಗಿದೆ.

ಈ ಪಠ್ಯಗಳಲ್ಲಾ ಪ್ರಕಟವಾದ ಮೇಲೆ ಅವುಗಳನ್ನು ಪರಿಶೀಲಿಸಿ, ಅಲ್ಲಿನ ತಪ್ಪು ಮತ್ತು ಕೊರತೆಗಳನ್ನು ತುಂಬಲು, ನಮ್ಮ ಶಾಲಾ ಮಕ್ಕಳಿಗೆ ಪರ್ಯಾಯ ಪಾಠಗಳನ್ನು, ಪೂರಕ ವಿಷಯಗಳನ್ನು ಮುಖ್ಯವಾಗಿ ಸಂವಿಧಾನವನ್ನು ಬಿತ್ತರಿಸುವ ವಾಟ್ಸಾಪ್, ಇ ಮೇಲ್, ಆನ್‌ಲೈನ್ ಕ್ಲಾಸ್ ಇತ್ಯಾದಿಗಳನ್ನು ರೂಪಿಸಲು ಆಲೋಚಿಸುತ್ತಿರುವ ನಾಡಿನ ಆರೋಗ್ಯವಂತ ಮನಸ್ಸುಗಳ ಜೊತೆ ನಾನಿರಲು ಬಯಸುತ್ತೇನೆ.

24ನೇ ಮೇ 2022

(ದೇವನೂರ ಮಹಾದೇವ)


ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Something is better than nothing. But nothing is better than nonsense. ತುಂಬಾ ಒಳ್ಳೆಯ ಕೆಲಸ ಮಾಡಿದ್ದೀರಾ ಗುರುಗಳೇ. 👍

  2. ಈ ದೇಶದಲ್ಲಿ ‘ದಲಿತ’ ಎಂದರೆ ಜಾತ್ಯತೀತ, ‘ಬ್ರಾಹ್ಮಣ’ ಅಂದರೆ ಜಾತಿವಾದಿ. ಅಲ್ಲವೇ?

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...