HomeಮುಖಪುಟRSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

- Advertisement -
- Advertisement -

ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ನಾಡಿನ ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವರವರು ತಮ್ಮ ಪಠ್ಯ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದು, ತಮ್ಮ ಪಾಠ ಕೈಬಿಡಬೇಕೆಂದು ಪತ್ರ ಬರೆದಿದ್ದಾರೆ.

ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೂ ತಿಳಿದಿಲ್ಲ ಎಂತಲೇ ಅರ್ಥ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾತುವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ನೂತನ ಪಠ್ಯ ಪರಿಷ್ಕರಣೆಯಲ್ಲಿಯೂ ಇದೇ ಆಗಿದೆ ಎಂದು ದೇವನೂರು ಆರೋಪಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎಂದು ಹೇಳುವ ಮೂಲಕ ತಮ್ಮದೇ ಜಾತಿಯವರನ್ನು ತುಂಬಿಕೊಂಡಿದ್ದಾರೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಅವರು ಬರೆದ ಪತ್ರದ ಪೂರ್ಣ ಪಠ್ಯ ಈ ಕೆಳಗಿನಂತಿದೆ.

ಪಠ್ಯ ಪರಿಷ್ಕರಣೆಯ ವಾದ ವಿವಾದಗಳು ನಡೆಯುತ್ತಿದೆ. ಹತ್ತನೆ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿ ನನ್ನದೂ ಒಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಪಠ್ಯದ ಪಿಡಿಎಫ್ ಬರಹಗಳನ್ನು ಇಲ್ಲ ಅಂತ, ಉಂಟು ಅಂತ, ಕೆಲವು ಸಲ ಸೇರಿದ್ದನ್ನು ಕೈ ಬಿಡುವುದು, ಮತ್ತೆ ಸೇರಿಸುವುದು ಇತ್ಯಾದಿ ಗಳಿಗೆ ಗಳಿಗೆಗೂ ಬದಲಾಗುತ್ತಿದೆ. ಇರಲಿ, ನನ್ನ ಕಥನದ ಭಾಗ ಪಠ್ಯದಲ್ಲಿ ಸೇರಿಸಿರದಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತದೆ. ಸೇರಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದು ಸ್ಪಷ್ಟಪಡಿಸುವುದಕ್ಕಾಗಿ ಈ ಪ್ರಕಟಣೆ ನೀಡುತ್ತಿದ್ದೇನೆ. ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇನೆ.

ಯಾಕೆಂದರೆ,

(೧) ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೂ ತಿಳಿದಿಲ್ಲ ಎಂತಲೇ ಅರ್ಥ.

(೨) ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎನ್ನುತ್ತಾರೆ! ಭಾರತದಂತಹ ಸಂಕೀರ್ಣ ದೇಶದಲ್ಲಿ ಪ್ರಜ್ಞಾಪೂರ್ವಕವಾಗಿ ಜಾತಿಯನ್ನು ಗುರುತಿಸದಿದ್ದರೆ ಅಲ್ಲಿ ಸಹಜವಾಗಿ ಶೇ.90ರಷ್ಟು ಅವರ ಜಾತಿಯವರೇ ತುಂಬಿಕೊಳ್ಳುತ್ತಾರೆ. ಅವರವರ ಅಡಿಗೆ ಮನೆ ವಾಸನೆ ಪ್ರಿಯವಾಗುವಂತೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ. ಇದು ಈಗಿನದ್ದಲ್ಲ. ಡಾ. ಮುರಳಿ ಮನೋಹರ ಜೋಷಿಯವರು ಕೇಂದ್ರ ಶಿಕ್ಷಣ ಸಚಿವರಾಗಿದ್ದ ಕಾಲದಿಂದಲೂ ನಡೆದುಕೊಂಡು ಬಂದಿದೆ. ಚಾತುವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ಇಲ್ಲೂ ಇದೇ ಆಗಿದೆ.

ಈ ಪಠ್ಯಗಳಲ್ಲಾ ಪ್ರಕಟವಾದ ಮೇಲೆ ಅವುಗಳನ್ನು ಪರಿಶೀಲಿಸಿ, ಅಲ್ಲಿನ ತಪ್ಪು ಮತ್ತು ಕೊರತೆಗಳನ್ನು ತುಂಬಲು, ನಮ್ಮ ಶಾಲಾ ಮಕ್ಕಳಿಗೆ ಪರ್ಯಾಯ ಪಾಠಗಳನ್ನು, ಪೂರಕ ವಿಷಯಗಳನ್ನು ಮುಖ್ಯವಾಗಿ ಸಂವಿಧಾನವನ್ನು ಬಿತ್ತರಿಸುವ ವಾಟ್ಸಾಪ್, ಇ ಮೇಲ್, ಆನ್‌ಲೈನ್ ಕ್ಲಾಸ್ ಇತ್ಯಾದಿಗಳನ್ನು ರೂಪಿಸಲು ಆಲೋಚಿಸುತ್ತಿರುವ ನಾಡಿನ ಆರೋಗ್ಯವಂತ ಮನಸ್ಸುಗಳ ಜೊತೆ ನಾನಿರಲು ಬಯಸುತ್ತೇನೆ.

24ನೇ ಮೇ 2022

(ದೇವನೂರ ಮಹಾದೇವ)


ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Something is better than nothing. But nothing is better than nonsense. ತುಂಬಾ ಒಳ್ಳೆಯ ಕೆಲಸ ಮಾಡಿದ್ದೀರಾ ಗುರುಗಳೇ. 👍

  2. ಈ ದೇಶದಲ್ಲಿ ‘ದಲಿತ’ ಎಂದರೆ ಜಾತ್ಯತೀತ, ‘ಬ್ರಾಹ್ಮಣ’ ಅಂದರೆ ಜಾತಿವಾದಿ. ಅಲ್ಲವೇ?

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....