HomeಮುಖಪುಟRSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

- Advertisement -
- Advertisement -

ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ನಾಡಿನ ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವರವರು ತಮ್ಮ ಪಠ್ಯ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದು, ತಮ್ಮ ಪಾಠ ಕೈಬಿಡಬೇಕೆಂದು ಪತ್ರ ಬರೆದಿದ್ದಾರೆ.

ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೂ ತಿಳಿದಿಲ್ಲ ಎಂತಲೇ ಅರ್ಥ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾತುವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ನೂತನ ಪಠ್ಯ ಪರಿಷ್ಕರಣೆಯಲ್ಲಿಯೂ ಇದೇ ಆಗಿದೆ ಎಂದು ದೇವನೂರು ಆರೋಪಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎಂದು ಹೇಳುವ ಮೂಲಕ ತಮ್ಮದೇ ಜಾತಿಯವರನ್ನು ತುಂಬಿಕೊಂಡಿದ್ದಾರೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಅವರು ಬರೆದ ಪತ್ರದ ಪೂರ್ಣ ಪಠ್ಯ ಈ ಕೆಳಗಿನಂತಿದೆ.

ಪಠ್ಯ ಪರಿಷ್ಕರಣೆಯ ವಾದ ವಿವಾದಗಳು ನಡೆಯುತ್ತಿದೆ. ಹತ್ತನೆ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿ ನನ್ನದೂ ಒಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಪಠ್ಯದ ಪಿಡಿಎಫ್ ಬರಹಗಳನ್ನು ಇಲ್ಲ ಅಂತ, ಉಂಟು ಅಂತ, ಕೆಲವು ಸಲ ಸೇರಿದ್ದನ್ನು ಕೈ ಬಿಡುವುದು, ಮತ್ತೆ ಸೇರಿಸುವುದು ಇತ್ಯಾದಿ ಗಳಿಗೆ ಗಳಿಗೆಗೂ ಬದಲಾಗುತ್ತಿದೆ. ಇರಲಿ, ನನ್ನ ಕಥನದ ಭಾಗ ಪಠ್ಯದಲ್ಲಿ ಸೇರಿಸಿರದಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತದೆ. ಸೇರಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದು ಸ್ಪಷ್ಟಪಡಿಸುವುದಕ್ಕಾಗಿ ಈ ಪ್ರಕಟಣೆ ನೀಡುತ್ತಿದ್ದೇನೆ. ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇನೆ.

ಯಾಕೆಂದರೆ,

(೧) ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೂ ತಿಳಿದಿಲ್ಲ ಎಂತಲೇ ಅರ್ಥ.

(೨) ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎನ್ನುತ್ತಾರೆ! ಭಾರತದಂತಹ ಸಂಕೀರ್ಣ ದೇಶದಲ್ಲಿ ಪ್ರಜ್ಞಾಪೂರ್ವಕವಾಗಿ ಜಾತಿಯನ್ನು ಗುರುತಿಸದಿದ್ದರೆ ಅಲ್ಲಿ ಸಹಜವಾಗಿ ಶೇ.90ರಷ್ಟು ಅವರ ಜಾತಿಯವರೇ ತುಂಬಿಕೊಳ್ಳುತ್ತಾರೆ. ಅವರವರ ಅಡಿಗೆ ಮನೆ ವಾಸನೆ ಪ್ರಿಯವಾಗುವಂತೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ. ಇದು ಈಗಿನದ್ದಲ್ಲ. ಡಾ. ಮುರಳಿ ಮನೋಹರ ಜೋಷಿಯವರು ಕೇಂದ್ರ ಶಿಕ್ಷಣ ಸಚಿವರಾಗಿದ್ದ ಕಾಲದಿಂದಲೂ ನಡೆದುಕೊಂಡು ಬಂದಿದೆ. ಚಾತುವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ಇಲ್ಲೂ ಇದೇ ಆಗಿದೆ.

ಈ ಪಠ್ಯಗಳಲ್ಲಾ ಪ್ರಕಟವಾದ ಮೇಲೆ ಅವುಗಳನ್ನು ಪರಿಶೀಲಿಸಿ, ಅಲ್ಲಿನ ತಪ್ಪು ಮತ್ತು ಕೊರತೆಗಳನ್ನು ತುಂಬಲು, ನಮ್ಮ ಶಾಲಾ ಮಕ್ಕಳಿಗೆ ಪರ್ಯಾಯ ಪಾಠಗಳನ್ನು, ಪೂರಕ ವಿಷಯಗಳನ್ನು ಮುಖ್ಯವಾಗಿ ಸಂವಿಧಾನವನ್ನು ಬಿತ್ತರಿಸುವ ವಾಟ್ಸಾಪ್, ಇ ಮೇಲ್, ಆನ್‌ಲೈನ್ ಕ್ಲಾಸ್ ಇತ್ಯಾದಿಗಳನ್ನು ರೂಪಿಸಲು ಆಲೋಚಿಸುತ್ತಿರುವ ನಾಡಿನ ಆರೋಗ್ಯವಂತ ಮನಸ್ಸುಗಳ ಜೊತೆ ನಾನಿರಲು ಬಯಸುತ್ತೇನೆ.

24ನೇ ಮೇ 2022

(ದೇವನೂರ ಮಹಾದೇವ)


ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Something is better than nothing. But nothing is better than nonsense. ತುಂಬಾ ಒಳ್ಳೆಯ ಕೆಲಸ ಮಾಡಿದ್ದೀರಾ ಗುರುಗಳೇ. 👍

  2. ಈ ದೇಶದಲ್ಲಿ ‘ದಲಿತ’ ಎಂದರೆ ಜಾತ್ಯತೀತ, ‘ಬ್ರಾಹ್ಮಣ’ ಅಂದರೆ ಜಾತಿವಾದಿ. ಅಲ್ಲವೇ?

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...