Homeಕರ್ನಾಟಕಮೊಬೈಲ್ ಪ್ರಿಪೇಯ್ಡ್ ದರಗಳ ಹೆಚ್ಚಳ ವಿರೋಧಿಸಿ ಟ್ವಿಟ್ಟರ್ ಅಭಿಯಾನ

ಮೊಬೈಲ್ ಪ್ರಿಪೇಯ್ಡ್ ದರಗಳ ಹೆಚ್ಚಳ ವಿರೋಧಿಸಿ ಟ್ವಿಟ್ಟರ್ ಅಭಿಯಾನ

- Advertisement -
- Advertisement -

ಖಾಸಗಿ ಟೆಲಿಕಾಂ ಕಂಪನಿಗಳು ಪ್ರಿಪೇಯ್ಡ್ ಇಂಟರ್ನೆಟ್ ಪ್ಯಾಕ್ ಮತ್ತು ಮೊಬೈಲ್ ರೀಚಾರ್ಜ್ ದರಗಳಲ್ಲಿ ಏರಿಸಿರುವ ಭಾರಿ ಹೆಚ್ಚಳದ ವಿರುದ್ಧ ಎಐಡಿಎಸ್‌ಓ ಮತ್ತು ಎಐಡಿವೈಓ ಸಂಘಟನೆಗಳು ಇಂದು (ಜ.26) ಮಧ್ಯಾಹ್ನ 3 ರಿಂದ ಸಂಜೆ 5ರವರೆಗೆ ರಾಷ್ಟವ್ಯಾಪಿ ಟ್ವಿಟ್ಟರ್ ಅಭಿಯಾನ ನಡೆಸಿವೆ. #SayNoToMobileTariffHike #SayNoToPrivatisation ಎಂಬ ಹ್ಯಾಶ್ ಟ್ಯಾಗ್‌ಗಳನ್ನು ಬಳಸಿ ಟ್ವಿಟರ್‌ ಟ್ರೆಂಡ್ ಮಾಡಿವೆ.

’ಕೋವಿಡ್ ಸಾಂಕ್ರಾಮಿಕದ ಈ ಸಂದರ್ಭದಲ್ಲಿ ಮೊಬೈಲ್ ಫೋನ್ ಕೂಡ ಅಗತ್ಯ ವಸ್ತುಗಳಂತೆಯೇ ಆಗಿದೆ. ಲಾಕ್‌ಡೌನ್ ಸಮಯ ಮತ್ತು ನಂತರ, ಮೊಬೈಲ್ ತಂತ್ರಜ್ಞಾನ ಮತ್ತು ಇಂಟರ್ನೆಟ್ ಸೇವೆಯ ಬಳಕೆ ಗಮನಾರ್ಹವಾಗಿ ಹೆಚ್ಚಾಗಿದೆ. ಬಹುತೇಕ ಎಲ್ಲ ತರಗತಿಗಳ ವಿದ್ಯಾರ್ಥಿಗಳಿಗೂ ಆನ್‌ಲೈನ್ ತರಗತಿಗಳಲ್ಲಿ ಪಾಲ್ಗೊಳ್ಳಲು ಮೊಬೈಲ್ ಇಂಟರ್ನೆಟ್ ಸೇವೆ ಅಗತ್ಯವಾಗಿದೆ. ಪ್ರತಿಯೊಂದು ಕ್ಷೇತ್ರದ ಡಿಜಿಟಲೀಕರಣವು ಮೊಬೈಲ್ ಫೋನ್‌ಗಳ ಬಳಕೆ ಹೆಚ್ಚಳಕ್ಕೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳು ಪ್ರಿಪೇಯ್ಡ್ ದರಗಳನ್ನು ತೀವ್ರವಾಗಿ ಹೆಚ್ಚಿಸಿದ್ದು ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಸಂಘಟನೆಗಳು ಆರೋಪಿಸಿವೆ.

’ದೇಶದ ಜನರ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು ಜಿಯೋ, ವೊಡಾಫೋನ್ ಐಡಿಯಾ, ಏರ್‌ಟೆಲ್ ಕಂಪನಿಗಳು ನೆಟ್ ಪ್ಯಾಕ್‌ಗಳು ಮತ್ತು ರೀಚಾರ್ಜ್ ದರಗಳನ್ನು 20- 25% ಹೆಚ್ಚಿಸಿವೆ ಮತ್ತು ಮುಂಬರುವ ದಿನಗಳಲ್ಲಿ ಮತ್ತಷ್ಟು ದರ ಹೆಚ್ಚಳ ಮಾಡುವುದಾಗಿ ಘೋಷಿಸಿವೆ. ಇದರಿಂದ ಮಧ್ಯಮ ವರ್ಗದವರು, ಕಡಿಮೆ ಆದಾಯವುಳ್ಳವರು, ವಿದ್ಯಾರ್ಥಿಗಳು ಮತ್ತು ನಿರುದ್ಯೋಗಿ ಯುವಕರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಖಾಸಗಿ ಟೆಲಿಕಾಂಗಳು ದರಗಳಲ್ಲಿ ಇಷ್ಟೊಂದು ಏರಿಕೆ ಮಾಡುತ್ತಿದ್ದರೂ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಯಾವ ಕ್ರಮವನ್ನು ಕೈಗೊಳ್ಳದೇ ಜಡ ಮೌನವಾಗಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

’ಜಾಗತೀಕರಣದ ನಂತರ 1995 ರಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಈ ವಲಯದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಿದ ಕೇಂದ್ರ ಸರ್ಕಾರವು, ಬಿಎಸ್‌ಎನ್‌ಎಲ್ ಗೆ 2002 ರಲ್ಲಿ ದೇಶದಲ್ಲಿ ಮೊಬೈಲ್ ಸೇವೆಯನ್ನು ಒದಗಿಸಲು ಅನುಮತಿ ನೀಡಿತ್ತು. ಆದರೆ ಮುಂದಿನ ದಶಕದಲ್ಲಿ, ಸರ್ಕಾರಗಳ ನಿರ್ಲಕ್ಷದಿಂದ ಬಿಎಸ್‌ಎನ್‌ಎಲ್ ಹಣಕಾಸಿನ ತೀವ್ರ ಕೊರತೆಯನ್ನೆದುರಿಸಿತು. ಅಕ್ಟೋಬರ್ 2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಬಿಎಸ್‌ಎನ್‌ಎಲ್ ಅನ್ನು 4ಜಿ ತರಂಗಾಂತರ ಹರಾಜು ಪ್ರಕ್ರಿಯೆಯಿಂದ ಹೊರಗಿಟ್ಟಿತು. ಜಿಯೋ, ಏರ್‌ಟೆಲ್, ಐಡಿಯಾ ಕಂಪನಿಗಳು 4ಜಿ ಸ್ಪೆಕ್ಟ್ರಮ್ ಲೈಸೆನ್ಸ್‌ನಲ್ಲಿ ಸಿಂಹ ಪಾಲು ಪಡೆದವು. 2018 ರಲ್ಲಿ ಬಿಎಸ್‌ಎನ್‌ಎಲ್‌ನ 80% ಕ್ಕಿಂತ ಹೆಚ್ಚು ಉದ್ಯೋಗಿಗಳನ್ನು ವಿ.ಆರ್.ಎಸ್ ಹೆಸರಲ್ಲಿ ಮನೆಗೆ ಕಳುಹಿಸಲಾಗಿದೆ. ಹೀಗಾಗಿ ಸಾರ್ವಜನಿಕ ವಲಯದ ಬಿಎಸ್‌ಎನ್‌ಎಲ್ ಇಂದು ಬೆನ್ನೆಲುಬು ಮುರಿದುಕೊಂಡು ಮೂಲೆ ಗುಂಪಾಗಿದ್ದರೆ ಖಾಸಗಿ ಟೆಲಿಕಾಂ ಕಂಪನಿಗಳು ಈ ವಲಯದಲ್ಲಿ ರಾರಾಜಿಸುತ್ತಿವೆ’ ಎಂದು ಒಕ್ಕೂಟ ಸರ್ಕಾರದ ವಿರುದ್ಧ ಕಿಡಿ ಕಾರಿವೆ.

’ದೇಶದ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ಈ ಪರಿಸ್ಥಿತಿಯಲ್ಲಿ, ಖಾಸಗಿ ಟೆಲಿಕಾಂ ಕಂಪನಿಗಳು ಇಂಟರ್ನೆಟ್ ಪ್ಯಾಕ್ ಮತ್ತು ಮೊಬೈಲ್ ರೀಚಾರ್ಜ್ ದರಗಳನ್ನು ಏರಿಸಿವೆ ಎಂದಿರುವ ಎಐಡಿವೈಓ ಮತ್ತು ಎಐಡಿಎಸ್‌ಓ ಸಂಘಟನೆಗಳು ಇಂದು ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ರಾಷ್ಟ್ರವ್ಯಾಪಿ ಟ್ವಿಟ್ಟರ್ ಚಳವಳಿಯನ್ನು ಹಮ್ಮಿಕೊಂಡಿದ್ದವು.


ಇದನ್ನೂ ಓದಿ: ಗ್ರಾಮೀಣ ಭಾರತಕ್ಕೆ ಬೇಕಿದೆ ಹೊಸ ’ಎಂಎಸ್‌ಪಿ’ – ’ಗರಿಷ್ಠ ಬೆಂಬಲ ನೀತಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...