Homeಕರ್ನಾಟಕಮೊಬೈಲ್ ಪ್ರಿಪೇಯ್ಡ್ ದರಗಳ ಹೆಚ್ಚಳ ವಿರೋಧಿಸಿ ಟ್ವಿಟ್ಟರ್ ಅಭಿಯಾನ

ಮೊಬೈಲ್ ಪ್ರಿಪೇಯ್ಡ್ ದರಗಳ ಹೆಚ್ಚಳ ವಿರೋಧಿಸಿ ಟ್ವಿಟ್ಟರ್ ಅಭಿಯಾನ

- Advertisement -
- Advertisement -

ಖಾಸಗಿ ಟೆಲಿಕಾಂ ಕಂಪನಿಗಳು ಪ್ರಿಪೇಯ್ಡ್ ಇಂಟರ್ನೆಟ್ ಪ್ಯಾಕ್ ಮತ್ತು ಮೊಬೈಲ್ ರೀಚಾರ್ಜ್ ದರಗಳಲ್ಲಿ ಏರಿಸಿರುವ ಭಾರಿ ಹೆಚ್ಚಳದ ವಿರುದ್ಧ ಎಐಡಿಎಸ್‌ಓ ಮತ್ತು ಎಐಡಿವೈಓ ಸಂಘಟನೆಗಳು ಇಂದು (ಜ.26) ಮಧ್ಯಾಹ್ನ 3 ರಿಂದ ಸಂಜೆ 5ರವರೆಗೆ ರಾಷ್ಟವ್ಯಾಪಿ ಟ್ವಿಟ್ಟರ್ ಅಭಿಯಾನ ನಡೆಸಿವೆ. #SayNoToMobileTariffHike #SayNoToPrivatisation ಎಂಬ ಹ್ಯಾಶ್ ಟ್ಯಾಗ್‌ಗಳನ್ನು ಬಳಸಿ ಟ್ವಿಟರ್‌ ಟ್ರೆಂಡ್ ಮಾಡಿವೆ.

’ಕೋವಿಡ್ ಸಾಂಕ್ರಾಮಿಕದ ಈ ಸಂದರ್ಭದಲ್ಲಿ ಮೊಬೈಲ್ ಫೋನ್ ಕೂಡ ಅಗತ್ಯ ವಸ್ತುಗಳಂತೆಯೇ ಆಗಿದೆ. ಲಾಕ್‌ಡೌನ್ ಸಮಯ ಮತ್ತು ನಂತರ, ಮೊಬೈಲ್ ತಂತ್ರಜ್ಞಾನ ಮತ್ತು ಇಂಟರ್ನೆಟ್ ಸೇವೆಯ ಬಳಕೆ ಗಮನಾರ್ಹವಾಗಿ ಹೆಚ್ಚಾಗಿದೆ. ಬಹುತೇಕ ಎಲ್ಲ ತರಗತಿಗಳ ವಿದ್ಯಾರ್ಥಿಗಳಿಗೂ ಆನ್‌ಲೈನ್ ತರಗತಿಗಳಲ್ಲಿ ಪಾಲ್ಗೊಳ್ಳಲು ಮೊಬೈಲ್ ಇಂಟರ್ನೆಟ್ ಸೇವೆ ಅಗತ್ಯವಾಗಿದೆ. ಪ್ರತಿಯೊಂದು ಕ್ಷೇತ್ರದ ಡಿಜಿಟಲೀಕರಣವು ಮೊಬೈಲ್ ಫೋನ್‌ಗಳ ಬಳಕೆ ಹೆಚ್ಚಳಕ್ಕೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳು ಪ್ರಿಪೇಯ್ಡ್ ದರಗಳನ್ನು ತೀವ್ರವಾಗಿ ಹೆಚ್ಚಿಸಿದ್ದು ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಸಂಘಟನೆಗಳು ಆರೋಪಿಸಿವೆ.

’ದೇಶದ ಜನರ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು ಜಿಯೋ, ವೊಡಾಫೋನ್ ಐಡಿಯಾ, ಏರ್‌ಟೆಲ್ ಕಂಪನಿಗಳು ನೆಟ್ ಪ್ಯಾಕ್‌ಗಳು ಮತ್ತು ರೀಚಾರ್ಜ್ ದರಗಳನ್ನು 20- 25% ಹೆಚ್ಚಿಸಿವೆ ಮತ್ತು ಮುಂಬರುವ ದಿನಗಳಲ್ಲಿ ಮತ್ತಷ್ಟು ದರ ಹೆಚ್ಚಳ ಮಾಡುವುದಾಗಿ ಘೋಷಿಸಿವೆ. ಇದರಿಂದ ಮಧ್ಯಮ ವರ್ಗದವರು, ಕಡಿಮೆ ಆದಾಯವುಳ್ಳವರು, ವಿದ್ಯಾರ್ಥಿಗಳು ಮತ್ತು ನಿರುದ್ಯೋಗಿ ಯುವಕರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಖಾಸಗಿ ಟೆಲಿಕಾಂಗಳು ದರಗಳಲ್ಲಿ ಇಷ್ಟೊಂದು ಏರಿಕೆ ಮಾಡುತ್ತಿದ್ದರೂ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಯಾವ ಕ್ರಮವನ್ನು ಕೈಗೊಳ್ಳದೇ ಜಡ ಮೌನವಾಗಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

’ಜಾಗತೀಕರಣದ ನಂತರ 1995 ರಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಈ ವಲಯದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಿದ ಕೇಂದ್ರ ಸರ್ಕಾರವು, ಬಿಎಸ್‌ಎನ್‌ಎಲ್ ಗೆ 2002 ರಲ್ಲಿ ದೇಶದಲ್ಲಿ ಮೊಬೈಲ್ ಸೇವೆಯನ್ನು ಒದಗಿಸಲು ಅನುಮತಿ ನೀಡಿತ್ತು. ಆದರೆ ಮುಂದಿನ ದಶಕದಲ್ಲಿ, ಸರ್ಕಾರಗಳ ನಿರ್ಲಕ್ಷದಿಂದ ಬಿಎಸ್‌ಎನ್‌ಎಲ್ ಹಣಕಾಸಿನ ತೀವ್ರ ಕೊರತೆಯನ್ನೆದುರಿಸಿತು. ಅಕ್ಟೋಬರ್ 2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಬಿಎಸ್‌ಎನ್‌ಎಲ್ ಅನ್ನು 4ಜಿ ತರಂಗಾಂತರ ಹರಾಜು ಪ್ರಕ್ರಿಯೆಯಿಂದ ಹೊರಗಿಟ್ಟಿತು. ಜಿಯೋ, ಏರ್‌ಟೆಲ್, ಐಡಿಯಾ ಕಂಪನಿಗಳು 4ಜಿ ಸ್ಪೆಕ್ಟ್ರಮ್ ಲೈಸೆನ್ಸ್‌ನಲ್ಲಿ ಸಿಂಹ ಪಾಲು ಪಡೆದವು. 2018 ರಲ್ಲಿ ಬಿಎಸ್‌ಎನ್‌ಎಲ್‌ನ 80% ಕ್ಕಿಂತ ಹೆಚ್ಚು ಉದ್ಯೋಗಿಗಳನ್ನು ವಿ.ಆರ್.ಎಸ್ ಹೆಸರಲ್ಲಿ ಮನೆಗೆ ಕಳುಹಿಸಲಾಗಿದೆ. ಹೀಗಾಗಿ ಸಾರ್ವಜನಿಕ ವಲಯದ ಬಿಎಸ್‌ಎನ್‌ಎಲ್ ಇಂದು ಬೆನ್ನೆಲುಬು ಮುರಿದುಕೊಂಡು ಮೂಲೆ ಗುಂಪಾಗಿದ್ದರೆ ಖಾಸಗಿ ಟೆಲಿಕಾಂ ಕಂಪನಿಗಳು ಈ ವಲಯದಲ್ಲಿ ರಾರಾಜಿಸುತ್ತಿವೆ’ ಎಂದು ಒಕ್ಕೂಟ ಸರ್ಕಾರದ ವಿರುದ್ಧ ಕಿಡಿ ಕಾರಿವೆ.

’ದೇಶದ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ಈ ಪರಿಸ್ಥಿತಿಯಲ್ಲಿ, ಖಾಸಗಿ ಟೆಲಿಕಾಂ ಕಂಪನಿಗಳು ಇಂಟರ್ನೆಟ್ ಪ್ಯಾಕ್ ಮತ್ತು ಮೊಬೈಲ್ ರೀಚಾರ್ಜ್ ದರಗಳನ್ನು ಏರಿಸಿವೆ ಎಂದಿರುವ ಎಐಡಿವೈಓ ಮತ್ತು ಎಐಡಿಎಸ್‌ಓ ಸಂಘಟನೆಗಳು ಇಂದು ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ರಾಷ್ಟ್ರವ್ಯಾಪಿ ಟ್ವಿಟ್ಟರ್ ಚಳವಳಿಯನ್ನು ಹಮ್ಮಿಕೊಂಡಿದ್ದವು.


ಇದನ್ನೂ ಓದಿ: ಗ್ರಾಮೀಣ ಭಾರತಕ್ಕೆ ಬೇಕಿದೆ ಹೊಸ ’ಎಂಎಸ್‌ಪಿ’ – ’ಗರಿಷ್ಠ ಬೆಂಬಲ ನೀತಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...