Homeಕರ್ನಾಟಕಮೊಬೈಲ್ ಪ್ರಿಪೇಯ್ಡ್ ದರಗಳ ಹೆಚ್ಚಳ ವಿರೋಧಿಸಿ ಟ್ವಿಟ್ಟರ್ ಅಭಿಯಾನ

ಮೊಬೈಲ್ ಪ್ರಿಪೇಯ್ಡ್ ದರಗಳ ಹೆಚ್ಚಳ ವಿರೋಧಿಸಿ ಟ್ವಿಟ್ಟರ್ ಅಭಿಯಾನ

- Advertisement -
- Advertisement -

ಖಾಸಗಿ ಟೆಲಿಕಾಂ ಕಂಪನಿಗಳು ಪ್ರಿಪೇಯ್ಡ್ ಇಂಟರ್ನೆಟ್ ಪ್ಯಾಕ್ ಮತ್ತು ಮೊಬೈಲ್ ರೀಚಾರ್ಜ್ ದರಗಳಲ್ಲಿ ಏರಿಸಿರುವ ಭಾರಿ ಹೆಚ್ಚಳದ ವಿರುದ್ಧ ಎಐಡಿಎಸ್‌ಓ ಮತ್ತು ಎಐಡಿವೈಓ ಸಂಘಟನೆಗಳು ಇಂದು (ಜ.26) ಮಧ್ಯಾಹ್ನ 3 ರಿಂದ ಸಂಜೆ 5ರವರೆಗೆ ರಾಷ್ಟವ್ಯಾಪಿ ಟ್ವಿಟ್ಟರ್ ಅಭಿಯಾನ ನಡೆಸಿವೆ. #SayNoToMobileTariffHike #SayNoToPrivatisation ಎಂಬ ಹ್ಯಾಶ್ ಟ್ಯಾಗ್‌ಗಳನ್ನು ಬಳಸಿ ಟ್ವಿಟರ್‌ ಟ್ರೆಂಡ್ ಮಾಡಿವೆ.

’ಕೋವಿಡ್ ಸಾಂಕ್ರಾಮಿಕದ ಈ ಸಂದರ್ಭದಲ್ಲಿ ಮೊಬೈಲ್ ಫೋನ್ ಕೂಡ ಅಗತ್ಯ ವಸ್ತುಗಳಂತೆಯೇ ಆಗಿದೆ. ಲಾಕ್‌ಡೌನ್ ಸಮಯ ಮತ್ತು ನಂತರ, ಮೊಬೈಲ್ ತಂತ್ರಜ್ಞಾನ ಮತ್ತು ಇಂಟರ್ನೆಟ್ ಸೇವೆಯ ಬಳಕೆ ಗಮನಾರ್ಹವಾಗಿ ಹೆಚ್ಚಾಗಿದೆ. ಬಹುತೇಕ ಎಲ್ಲ ತರಗತಿಗಳ ವಿದ್ಯಾರ್ಥಿಗಳಿಗೂ ಆನ್‌ಲೈನ್ ತರಗತಿಗಳಲ್ಲಿ ಪಾಲ್ಗೊಳ್ಳಲು ಮೊಬೈಲ್ ಇಂಟರ್ನೆಟ್ ಸೇವೆ ಅಗತ್ಯವಾಗಿದೆ. ಪ್ರತಿಯೊಂದು ಕ್ಷೇತ್ರದ ಡಿಜಿಟಲೀಕರಣವು ಮೊಬೈಲ್ ಫೋನ್‌ಗಳ ಬಳಕೆ ಹೆಚ್ಚಳಕ್ಕೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳು ಪ್ರಿಪೇಯ್ಡ್ ದರಗಳನ್ನು ತೀವ್ರವಾಗಿ ಹೆಚ್ಚಿಸಿದ್ದು ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಸಂಘಟನೆಗಳು ಆರೋಪಿಸಿವೆ.

’ದೇಶದ ಜನರ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು ಜಿಯೋ, ವೊಡಾಫೋನ್ ಐಡಿಯಾ, ಏರ್‌ಟೆಲ್ ಕಂಪನಿಗಳು ನೆಟ್ ಪ್ಯಾಕ್‌ಗಳು ಮತ್ತು ರೀಚಾರ್ಜ್ ದರಗಳನ್ನು 20- 25% ಹೆಚ್ಚಿಸಿವೆ ಮತ್ತು ಮುಂಬರುವ ದಿನಗಳಲ್ಲಿ ಮತ್ತಷ್ಟು ದರ ಹೆಚ್ಚಳ ಮಾಡುವುದಾಗಿ ಘೋಷಿಸಿವೆ. ಇದರಿಂದ ಮಧ್ಯಮ ವರ್ಗದವರು, ಕಡಿಮೆ ಆದಾಯವುಳ್ಳವರು, ವಿದ್ಯಾರ್ಥಿಗಳು ಮತ್ತು ನಿರುದ್ಯೋಗಿ ಯುವಕರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಖಾಸಗಿ ಟೆಲಿಕಾಂಗಳು ದರಗಳಲ್ಲಿ ಇಷ್ಟೊಂದು ಏರಿಕೆ ಮಾಡುತ್ತಿದ್ದರೂ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಯಾವ ಕ್ರಮವನ್ನು ಕೈಗೊಳ್ಳದೇ ಜಡ ಮೌನವಾಗಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

’ಜಾಗತೀಕರಣದ ನಂತರ 1995 ರಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಈ ವಲಯದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಿದ ಕೇಂದ್ರ ಸರ್ಕಾರವು, ಬಿಎಸ್‌ಎನ್‌ಎಲ್ ಗೆ 2002 ರಲ್ಲಿ ದೇಶದಲ್ಲಿ ಮೊಬೈಲ್ ಸೇವೆಯನ್ನು ಒದಗಿಸಲು ಅನುಮತಿ ನೀಡಿತ್ತು. ಆದರೆ ಮುಂದಿನ ದಶಕದಲ್ಲಿ, ಸರ್ಕಾರಗಳ ನಿರ್ಲಕ್ಷದಿಂದ ಬಿಎಸ್‌ಎನ್‌ಎಲ್ ಹಣಕಾಸಿನ ತೀವ್ರ ಕೊರತೆಯನ್ನೆದುರಿಸಿತು. ಅಕ್ಟೋಬರ್ 2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಬಿಎಸ್‌ಎನ್‌ಎಲ್ ಅನ್ನು 4ಜಿ ತರಂಗಾಂತರ ಹರಾಜು ಪ್ರಕ್ರಿಯೆಯಿಂದ ಹೊರಗಿಟ್ಟಿತು. ಜಿಯೋ, ಏರ್‌ಟೆಲ್, ಐಡಿಯಾ ಕಂಪನಿಗಳು 4ಜಿ ಸ್ಪೆಕ್ಟ್ರಮ್ ಲೈಸೆನ್ಸ್‌ನಲ್ಲಿ ಸಿಂಹ ಪಾಲು ಪಡೆದವು. 2018 ರಲ್ಲಿ ಬಿಎಸ್‌ಎನ್‌ಎಲ್‌ನ 80% ಕ್ಕಿಂತ ಹೆಚ್ಚು ಉದ್ಯೋಗಿಗಳನ್ನು ವಿ.ಆರ್.ಎಸ್ ಹೆಸರಲ್ಲಿ ಮನೆಗೆ ಕಳುಹಿಸಲಾಗಿದೆ. ಹೀಗಾಗಿ ಸಾರ್ವಜನಿಕ ವಲಯದ ಬಿಎಸ್‌ಎನ್‌ಎಲ್ ಇಂದು ಬೆನ್ನೆಲುಬು ಮುರಿದುಕೊಂಡು ಮೂಲೆ ಗುಂಪಾಗಿದ್ದರೆ ಖಾಸಗಿ ಟೆಲಿಕಾಂ ಕಂಪನಿಗಳು ಈ ವಲಯದಲ್ಲಿ ರಾರಾಜಿಸುತ್ತಿವೆ’ ಎಂದು ಒಕ್ಕೂಟ ಸರ್ಕಾರದ ವಿರುದ್ಧ ಕಿಡಿ ಕಾರಿವೆ.

’ದೇಶದ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ಈ ಪರಿಸ್ಥಿತಿಯಲ್ಲಿ, ಖಾಸಗಿ ಟೆಲಿಕಾಂ ಕಂಪನಿಗಳು ಇಂಟರ್ನೆಟ್ ಪ್ಯಾಕ್ ಮತ್ತು ಮೊಬೈಲ್ ರೀಚಾರ್ಜ್ ದರಗಳನ್ನು ಏರಿಸಿವೆ ಎಂದಿರುವ ಎಐಡಿವೈಓ ಮತ್ತು ಎಐಡಿಎಸ್‌ಓ ಸಂಘಟನೆಗಳು ಇಂದು ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ರಾಷ್ಟ್ರವ್ಯಾಪಿ ಟ್ವಿಟ್ಟರ್ ಚಳವಳಿಯನ್ನು ಹಮ್ಮಿಕೊಂಡಿದ್ದವು.


ಇದನ್ನೂ ಓದಿ: ಗ್ರಾಮೀಣ ಭಾರತಕ್ಕೆ ಬೇಕಿದೆ ಹೊಸ ’ಎಂಎಸ್‌ಪಿ’ – ’ಗರಿಷ್ಠ ಬೆಂಬಲ ನೀತಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....