Homeಕರ್ನಾಟಕಮೊಬೈಲ್ ಪ್ರಿಪೇಯ್ಡ್ ದರಗಳ ಹೆಚ್ಚಳ ವಿರೋಧಿಸಿ ಟ್ವಿಟ್ಟರ್ ಅಭಿಯಾನ

ಮೊಬೈಲ್ ಪ್ರಿಪೇಯ್ಡ್ ದರಗಳ ಹೆಚ್ಚಳ ವಿರೋಧಿಸಿ ಟ್ವಿಟ್ಟರ್ ಅಭಿಯಾನ

- Advertisement -
- Advertisement -

ಖಾಸಗಿ ಟೆಲಿಕಾಂ ಕಂಪನಿಗಳು ಪ್ರಿಪೇಯ್ಡ್ ಇಂಟರ್ನೆಟ್ ಪ್ಯಾಕ್ ಮತ್ತು ಮೊಬೈಲ್ ರೀಚಾರ್ಜ್ ದರಗಳಲ್ಲಿ ಏರಿಸಿರುವ ಭಾರಿ ಹೆಚ್ಚಳದ ವಿರುದ್ಧ ಎಐಡಿಎಸ್‌ಓ ಮತ್ತು ಎಐಡಿವೈಓ ಸಂಘಟನೆಗಳು ಇಂದು (ಜ.26) ಮಧ್ಯಾಹ್ನ 3 ರಿಂದ ಸಂಜೆ 5ರವರೆಗೆ ರಾಷ್ಟವ್ಯಾಪಿ ಟ್ವಿಟ್ಟರ್ ಅಭಿಯಾನ ನಡೆಸಿವೆ. #SayNoToMobileTariffHike #SayNoToPrivatisation ಎಂಬ ಹ್ಯಾಶ್ ಟ್ಯಾಗ್‌ಗಳನ್ನು ಬಳಸಿ ಟ್ವಿಟರ್‌ ಟ್ರೆಂಡ್ ಮಾಡಿವೆ.

’ಕೋವಿಡ್ ಸಾಂಕ್ರಾಮಿಕದ ಈ ಸಂದರ್ಭದಲ್ಲಿ ಮೊಬೈಲ್ ಫೋನ್ ಕೂಡ ಅಗತ್ಯ ವಸ್ತುಗಳಂತೆಯೇ ಆಗಿದೆ. ಲಾಕ್‌ಡೌನ್ ಸಮಯ ಮತ್ತು ನಂತರ, ಮೊಬೈಲ್ ತಂತ್ರಜ್ಞಾನ ಮತ್ತು ಇಂಟರ್ನೆಟ್ ಸೇವೆಯ ಬಳಕೆ ಗಮನಾರ್ಹವಾಗಿ ಹೆಚ್ಚಾಗಿದೆ. ಬಹುತೇಕ ಎಲ್ಲ ತರಗತಿಗಳ ವಿದ್ಯಾರ್ಥಿಗಳಿಗೂ ಆನ್‌ಲೈನ್ ತರಗತಿಗಳಲ್ಲಿ ಪಾಲ್ಗೊಳ್ಳಲು ಮೊಬೈಲ್ ಇಂಟರ್ನೆಟ್ ಸೇವೆ ಅಗತ್ಯವಾಗಿದೆ. ಪ್ರತಿಯೊಂದು ಕ್ಷೇತ್ರದ ಡಿಜಿಟಲೀಕರಣವು ಮೊಬೈಲ್ ಫೋನ್‌ಗಳ ಬಳಕೆ ಹೆಚ್ಚಳಕ್ಕೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳು ಪ್ರಿಪೇಯ್ಡ್ ದರಗಳನ್ನು ತೀವ್ರವಾಗಿ ಹೆಚ್ಚಿಸಿದ್ದು ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಸಂಘಟನೆಗಳು ಆರೋಪಿಸಿವೆ.

’ದೇಶದ ಜನರ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು ಜಿಯೋ, ವೊಡಾಫೋನ್ ಐಡಿಯಾ, ಏರ್‌ಟೆಲ್ ಕಂಪನಿಗಳು ನೆಟ್ ಪ್ಯಾಕ್‌ಗಳು ಮತ್ತು ರೀಚಾರ್ಜ್ ದರಗಳನ್ನು 20- 25% ಹೆಚ್ಚಿಸಿವೆ ಮತ್ತು ಮುಂಬರುವ ದಿನಗಳಲ್ಲಿ ಮತ್ತಷ್ಟು ದರ ಹೆಚ್ಚಳ ಮಾಡುವುದಾಗಿ ಘೋಷಿಸಿವೆ. ಇದರಿಂದ ಮಧ್ಯಮ ವರ್ಗದವರು, ಕಡಿಮೆ ಆದಾಯವುಳ್ಳವರು, ವಿದ್ಯಾರ್ಥಿಗಳು ಮತ್ತು ನಿರುದ್ಯೋಗಿ ಯುವಕರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಖಾಸಗಿ ಟೆಲಿಕಾಂಗಳು ದರಗಳಲ್ಲಿ ಇಷ್ಟೊಂದು ಏರಿಕೆ ಮಾಡುತ್ತಿದ್ದರೂ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಯಾವ ಕ್ರಮವನ್ನು ಕೈಗೊಳ್ಳದೇ ಜಡ ಮೌನವಾಗಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

’ಜಾಗತೀಕರಣದ ನಂತರ 1995 ರಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಈ ವಲಯದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಿದ ಕೇಂದ್ರ ಸರ್ಕಾರವು, ಬಿಎಸ್‌ಎನ್‌ಎಲ್ ಗೆ 2002 ರಲ್ಲಿ ದೇಶದಲ್ಲಿ ಮೊಬೈಲ್ ಸೇವೆಯನ್ನು ಒದಗಿಸಲು ಅನುಮತಿ ನೀಡಿತ್ತು. ಆದರೆ ಮುಂದಿನ ದಶಕದಲ್ಲಿ, ಸರ್ಕಾರಗಳ ನಿರ್ಲಕ್ಷದಿಂದ ಬಿಎಸ್‌ಎನ್‌ಎಲ್ ಹಣಕಾಸಿನ ತೀವ್ರ ಕೊರತೆಯನ್ನೆದುರಿಸಿತು. ಅಕ್ಟೋಬರ್ 2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಬಿಎಸ್‌ಎನ್‌ಎಲ್ ಅನ್ನು 4ಜಿ ತರಂಗಾಂತರ ಹರಾಜು ಪ್ರಕ್ರಿಯೆಯಿಂದ ಹೊರಗಿಟ್ಟಿತು. ಜಿಯೋ, ಏರ್‌ಟೆಲ್, ಐಡಿಯಾ ಕಂಪನಿಗಳು 4ಜಿ ಸ್ಪೆಕ್ಟ್ರಮ್ ಲೈಸೆನ್ಸ್‌ನಲ್ಲಿ ಸಿಂಹ ಪಾಲು ಪಡೆದವು. 2018 ರಲ್ಲಿ ಬಿಎಸ್‌ಎನ್‌ಎಲ್‌ನ 80% ಕ್ಕಿಂತ ಹೆಚ್ಚು ಉದ್ಯೋಗಿಗಳನ್ನು ವಿ.ಆರ್.ಎಸ್ ಹೆಸರಲ್ಲಿ ಮನೆಗೆ ಕಳುಹಿಸಲಾಗಿದೆ. ಹೀಗಾಗಿ ಸಾರ್ವಜನಿಕ ವಲಯದ ಬಿಎಸ್‌ಎನ್‌ಎಲ್ ಇಂದು ಬೆನ್ನೆಲುಬು ಮುರಿದುಕೊಂಡು ಮೂಲೆ ಗುಂಪಾಗಿದ್ದರೆ ಖಾಸಗಿ ಟೆಲಿಕಾಂ ಕಂಪನಿಗಳು ಈ ವಲಯದಲ್ಲಿ ರಾರಾಜಿಸುತ್ತಿವೆ’ ಎಂದು ಒಕ್ಕೂಟ ಸರ್ಕಾರದ ವಿರುದ್ಧ ಕಿಡಿ ಕಾರಿವೆ.

’ದೇಶದ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ಈ ಪರಿಸ್ಥಿತಿಯಲ್ಲಿ, ಖಾಸಗಿ ಟೆಲಿಕಾಂ ಕಂಪನಿಗಳು ಇಂಟರ್ನೆಟ್ ಪ್ಯಾಕ್ ಮತ್ತು ಮೊಬೈಲ್ ರೀಚಾರ್ಜ್ ದರಗಳನ್ನು ಏರಿಸಿವೆ ಎಂದಿರುವ ಎಐಡಿವೈಓ ಮತ್ತು ಎಐಡಿಎಸ್‌ಓ ಸಂಘಟನೆಗಳು ಇಂದು ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ರಾಷ್ಟ್ರವ್ಯಾಪಿ ಟ್ವಿಟ್ಟರ್ ಚಳವಳಿಯನ್ನು ಹಮ್ಮಿಕೊಂಡಿದ್ದವು.


ಇದನ್ನೂ ಓದಿ: ಗ್ರಾಮೀಣ ಭಾರತಕ್ಕೆ ಬೇಕಿದೆ ಹೊಸ ’ಎಂಎಸ್‌ಪಿ’ – ’ಗರಿಷ್ಠ ಬೆಂಬಲ ನೀತಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...