Homeಕರ್ನಾಟಕಮೊಬೈಲ್ ಪ್ರಿಪೇಯ್ಡ್ ದರಗಳ ಹೆಚ್ಚಳ ವಿರೋಧಿಸಿ ಟ್ವಿಟ್ಟರ್ ಅಭಿಯಾನ

ಮೊಬೈಲ್ ಪ್ರಿಪೇಯ್ಡ್ ದರಗಳ ಹೆಚ್ಚಳ ವಿರೋಧಿಸಿ ಟ್ವಿಟ್ಟರ್ ಅಭಿಯಾನ

- Advertisement -
- Advertisement -

ಖಾಸಗಿ ಟೆಲಿಕಾಂ ಕಂಪನಿಗಳು ಪ್ರಿಪೇಯ್ಡ್ ಇಂಟರ್ನೆಟ್ ಪ್ಯಾಕ್ ಮತ್ತು ಮೊಬೈಲ್ ರೀಚಾರ್ಜ್ ದರಗಳಲ್ಲಿ ಏರಿಸಿರುವ ಭಾರಿ ಹೆಚ್ಚಳದ ವಿರುದ್ಧ ಎಐಡಿಎಸ್‌ಓ ಮತ್ತು ಎಐಡಿವೈಓ ಸಂಘಟನೆಗಳು ಇಂದು (ಜ.26) ಮಧ್ಯಾಹ್ನ 3 ರಿಂದ ಸಂಜೆ 5ರವರೆಗೆ ರಾಷ್ಟವ್ಯಾಪಿ ಟ್ವಿಟ್ಟರ್ ಅಭಿಯಾನ ನಡೆಸಿವೆ. #SayNoToMobileTariffHike #SayNoToPrivatisation ಎಂಬ ಹ್ಯಾಶ್ ಟ್ಯಾಗ್‌ಗಳನ್ನು ಬಳಸಿ ಟ್ವಿಟರ್‌ ಟ್ರೆಂಡ್ ಮಾಡಿವೆ.

’ಕೋವಿಡ್ ಸಾಂಕ್ರಾಮಿಕದ ಈ ಸಂದರ್ಭದಲ್ಲಿ ಮೊಬೈಲ್ ಫೋನ್ ಕೂಡ ಅಗತ್ಯ ವಸ್ತುಗಳಂತೆಯೇ ಆಗಿದೆ. ಲಾಕ್‌ಡೌನ್ ಸಮಯ ಮತ್ತು ನಂತರ, ಮೊಬೈಲ್ ತಂತ್ರಜ್ಞಾನ ಮತ್ತು ಇಂಟರ್ನೆಟ್ ಸೇವೆಯ ಬಳಕೆ ಗಮನಾರ್ಹವಾಗಿ ಹೆಚ್ಚಾಗಿದೆ. ಬಹುತೇಕ ಎಲ್ಲ ತರಗತಿಗಳ ವಿದ್ಯಾರ್ಥಿಗಳಿಗೂ ಆನ್‌ಲೈನ್ ತರಗತಿಗಳಲ್ಲಿ ಪಾಲ್ಗೊಳ್ಳಲು ಮೊಬೈಲ್ ಇಂಟರ್ನೆಟ್ ಸೇವೆ ಅಗತ್ಯವಾಗಿದೆ. ಪ್ರತಿಯೊಂದು ಕ್ಷೇತ್ರದ ಡಿಜಿಟಲೀಕರಣವು ಮೊಬೈಲ್ ಫೋನ್‌ಗಳ ಬಳಕೆ ಹೆಚ್ಚಳಕ್ಕೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳು ಪ್ರಿಪೇಯ್ಡ್ ದರಗಳನ್ನು ತೀವ್ರವಾಗಿ ಹೆಚ್ಚಿಸಿದ್ದು ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಸಂಘಟನೆಗಳು ಆರೋಪಿಸಿವೆ.

’ದೇಶದ ಜನರ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು ಜಿಯೋ, ವೊಡಾಫೋನ್ ಐಡಿಯಾ, ಏರ್‌ಟೆಲ್ ಕಂಪನಿಗಳು ನೆಟ್ ಪ್ಯಾಕ್‌ಗಳು ಮತ್ತು ರೀಚಾರ್ಜ್ ದರಗಳನ್ನು 20- 25% ಹೆಚ್ಚಿಸಿವೆ ಮತ್ತು ಮುಂಬರುವ ದಿನಗಳಲ್ಲಿ ಮತ್ತಷ್ಟು ದರ ಹೆಚ್ಚಳ ಮಾಡುವುದಾಗಿ ಘೋಷಿಸಿವೆ. ಇದರಿಂದ ಮಧ್ಯಮ ವರ್ಗದವರು, ಕಡಿಮೆ ಆದಾಯವುಳ್ಳವರು, ವಿದ್ಯಾರ್ಥಿಗಳು ಮತ್ತು ನಿರುದ್ಯೋಗಿ ಯುವಕರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಖಾಸಗಿ ಟೆಲಿಕಾಂಗಳು ದರಗಳಲ್ಲಿ ಇಷ್ಟೊಂದು ಏರಿಕೆ ಮಾಡುತ್ತಿದ್ದರೂ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಯಾವ ಕ್ರಮವನ್ನು ಕೈಗೊಳ್ಳದೇ ಜಡ ಮೌನವಾಗಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

’ಜಾಗತೀಕರಣದ ನಂತರ 1995 ರಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಈ ವಲಯದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಿದ ಕೇಂದ್ರ ಸರ್ಕಾರವು, ಬಿಎಸ್‌ಎನ್‌ಎಲ್ ಗೆ 2002 ರಲ್ಲಿ ದೇಶದಲ್ಲಿ ಮೊಬೈಲ್ ಸೇವೆಯನ್ನು ಒದಗಿಸಲು ಅನುಮತಿ ನೀಡಿತ್ತು. ಆದರೆ ಮುಂದಿನ ದಶಕದಲ್ಲಿ, ಸರ್ಕಾರಗಳ ನಿರ್ಲಕ್ಷದಿಂದ ಬಿಎಸ್‌ಎನ್‌ಎಲ್ ಹಣಕಾಸಿನ ತೀವ್ರ ಕೊರತೆಯನ್ನೆದುರಿಸಿತು. ಅಕ್ಟೋಬರ್ 2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಬಿಎಸ್‌ಎನ್‌ಎಲ್ ಅನ್ನು 4ಜಿ ತರಂಗಾಂತರ ಹರಾಜು ಪ್ರಕ್ರಿಯೆಯಿಂದ ಹೊರಗಿಟ್ಟಿತು. ಜಿಯೋ, ಏರ್‌ಟೆಲ್, ಐಡಿಯಾ ಕಂಪನಿಗಳು 4ಜಿ ಸ್ಪೆಕ್ಟ್ರಮ್ ಲೈಸೆನ್ಸ್‌ನಲ್ಲಿ ಸಿಂಹ ಪಾಲು ಪಡೆದವು. 2018 ರಲ್ಲಿ ಬಿಎಸ್‌ಎನ್‌ಎಲ್‌ನ 80% ಕ್ಕಿಂತ ಹೆಚ್ಚು ಉದ್ಯೋಗಿಗಳನ್ನು ವಿ.ಆರ್.ಎಸ್ ಹೆಸರಲ್ಲಿ ಮನೆಗೆ ಕಳುಹಿಸಲಾಗಿದೆ. ಹೀಗಾಗಿ ಸಾರ್ವಜನಿಕ ವಲಯದ ಬಿಎಸ್‌ಎನ್‌ಎಲ್ ಇಂದು ಬೆನ್ನೆಲುಬು ಮುರಿದುಕೊಂಡು ಮೂಲೆ ಗುಂಪಾಗಿದ್ದರೆ ಖಾಸಗಿ ಟೆಲಿಕಾಂ ಕಂಪನಿಗಳು ಈ ವಲಯದಲ್ಲಿ ರಾರಾಜಿಸುತ್ತಿವೆ’ ಎಂದು ಒಕ್ಕೂಟ ಸರ್ಕಾರದ ವಿರುದ್ಧ ಕಿಡಿ ಕಾರಿವೆ.

’ದೇಶದ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ಈ ಪರಿಸ್ಥಿತಿಯಲ್ಲಿ, ಖಾಸಗಿ ಟೆಲಿಕಾಂ ಕಂಪನಿಗಳು ಇಂಟರ್ನೆಟ್ ಪ್ಯಾಕ್ ಮತ್ತು ಮೊಬೈಲ್ ರೀಚಾರ್ಜ್ ದರಗಳನ್ನು ಏರಿಸಿವೆ ಎಂದಿರುವ ಎಐಡಿವೈಓ ಮತ್ತು ಎಐಡಿಎಸ್‌ಓ ಸಂಘಟನೆಗಳು ಇಂದು ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ರಾಷ್ಟ್ರವ್ಯಾಪಿ ಟ್ವಿಟ್ಟರ್ ಚಳವಳಿಯನ್ನು ಹಮ್ಮಿಕೊಂಡಿದ್ದವು.


ಇದನ್ನೂ ಓದಿ: ಗ್ರಾಮೀಣ ಭಾರತಕ್ಕೆ ಬೇಕಿದೆ ಹೊಸ ’ಎಂಎಸ್‌ಪಿ’ – ’ಗರಿಷ್ಠ ಬೆಂಬಲ ನೀತಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...