Homeಕರ್ನಾಟಕಮೊಬೈಲ್ ಪ್ರಿಪೇಯ್ಡ್ ದರಗಳ ಹೆಚ್ಚಳ ವಿರೋಧಿಸಿ ಟ್ವಿಟ್ಟರ್ ಅಭಿಯಾನ

ಮೊಬೈಲ್ ಪ್ರಿಪೇಯ್ಡ್ ದರಗಳ ಹೆಚ್ಚಳ ವಿರೋಧಿಸಿ ಟ್ವಿಟ್ಟರ್ ಅಭಿಯಾನ

- Advertisement -
- Advertisement -

ಖಾಸಗಿ ಟೆಲಿಕಾಂ ಕಂಪನಿಗಳು ಪ್ರಿಪೇಯ್ಡ್ ಇಂಟರ್ನೆಟ್ ಪ್ಯಾಕ್ ಮತ್ತು ಮೊಬೈಲ್ ರೀಚಾರ್ಜ್ ದರಗಳಲ್ಲಿ ಏರಿಸಿರುವ ಭಾರಿ ಹೆಚ್ಚಳದ ವಿರುದ್ಧ ಎಐಡಿಎಸ್‌ಓ ಮತ್ತು ಎಐಡಿವೈಓ ಸಂಘಟನೆಗಳು ಇಂದು (ಜ.26) ಮಧ್ಯಾಹ್ನ 3 ರಿಂದ ಸಂಜೆ 5ರವರೆಗೆ ರಾಷ್ಟವ್ಯಾಪಿ ಟ್ವಿಟ್ಟರ್ ಅಭಿಯಾನ ನಡೆಸಿವೆ. #SayNoToMobileTariffHike #SayNoToPrivatisation ಎಂಬ ಹ್ಯಾಶ್ ಟ್ಯಾಗ್‌ಗಳನ್ನು ಬಳಸಿ ಟ್ವಿಟರ್‌ ಟ್ರೆಂಡ್ ಮಾಡಿವೆ.

’ಕೋವಿಡ್ ಸಾಂಕ್ರಾಮಿಕದ ಈ ಸಂದರ್ಭದಲ್ಲಿ ಮೊಬೈಲ್ ಫೋನ್ ಕೂಡ ಅಗತ್ಯ ವಸ್ತುಗಳಂತೆಯೇ ಆಗಿದೆ. ಲಾಕ್‌ಡೌನ್ ಸಮಯ ಮತ್ತು ನಂತರ, ಮೊಬೈಲ್ ತಂತ್ರಜ್ಞಾನ ಮತ್ತು ಇಂಟರ್ನೆಟ್ ಸೇವೆಯ ಬಳಕೆ ಗಮನಾರ್ಹವಾಗಿ ಹೆಚ್ಚಾಗಿದೆ. ಬಹುತೇಕ ಎಲ್ಲ ತರಗತಿಗಳ ವಿದ್ಯಾರ್ಥಿಗಳಿಗೂ ಆನ್‌ಲೈನ್ ತರಗತಿಗಳಲ್ಲಿ ಪಾಲ್ಗೊಳ್ಳಲು ಮೊಬೈಲ್ ಇಂಟರ್ನೆಟ್ ಸೇವೆ ಅಗತ್ಯವಾಗಿದೆ. ಪ್ರತಿಯೊಂದು ಕ್ಷೇತ್ರದ ಡಿಜಿಟಲೀಕರಣವು ಮೊಬೈಲ್ ಫೋನ್‌ಗಳ ಬಳಕೆ ಹೆಚ್ಚಳಕ್ಕೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳು ಪ್ರಿಪೇಯ್ಡ್ ದರಗಳನ್ನು ತೀವ್ರವಾಗಿ ಹೆಚ್ಚಿಸಿದ್ದು ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಸಂಘಟನೆಗಳು ಆರೋಪಿಸಿವೆ.

’ದೇಶದ ಜನರ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು ಜಿಯೋ, ವೊಡಾಫೋನ್ ಐಡಿಯಾ, ಏರ್‌ಟೆಲ್ ಕಂಪನಿಗಳು ನೆಟ್ ಪ್ಯಾಕ್‌ಗಳು ಮತ್ತು ರೀಚಾರ್ಜ್ ದರಗಳನ್ನು 20- 25% ಹೆಚ್ಚಿಸಿವೆ ಮತ್ತು ಮುಂಬರುವ ದಿನಗಳಲ್ಲಿ ಮತ್ತಷ್ಟು ದರ ಹೆಚ್ಚಳ ಮಾಡುವುದಾಗಿ ಘೋಷಿಸಿವೆ. ಇದರಿಂದ ಮಧ್ಯಮ ವರ್ಗದವರು, ಕಡಿಮೆ ಆದಾಯವುಳ್ಳವರು, ವಿದ್ಯಾರ್ಥಿಗಳು ಮತ್ತು ನಿರುದ್ಯೋಗಿ ಯುವಕರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಖಾಸಗಿ ಟೆಲಿಕಾಂಗಳು ದರಗಳಲ್ಲಿ ಇಷ್ಟೊಂದು ಏರಿಕೆ ಮಾಡುತ್ತಿದ್ದರೂ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಯಾವ ಕ್ರಮವನ್ನು ಕೈಗೊಳ್ಳದೇ ಜಡ ಮೌನವಾಗಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

’ಜಾಗತೀಕರಣದ ನಂತರ 1995 ರಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಈ ವಲಯದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಿದ ಕೇಂದ್ರ ಸರ್ಕಾರವು, ಬಿಎಸ್‌ಎನ್‌ಎಲ್ ಗೆ 2002 ರಲ್ಲಿ ದೇಶದಲ್ಲಿ ಮೊಬೈಲ್ ಸೇವೆಯನ್ನು ಒದಗಿಸಲು ಅನುಮತಿ ನೀಡಿತ್ತು. ಆದರೆ ಮುಂದಿನ ದಶಕದಲ್ಲಿ, ಸರ್ಕಾರಗಳ ನಿರ್ಲಕ್ಷದಿಂದ ಬಿಎಸ್‌ಎನ್‌ಎಲ್ ಹಣಕಾಸಿನ ತೀವ್ರ ಕೊರತೆಯನ್ನೆದುರಿಸಿತು. ಅಕ್ಟೋಬರ್ 2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಬಿಎಸ್‌ಎನ್‌ಎಲ್ ಅನ್ನು 4ಜಿ ತರಂಗಾಂತರ ಹರಾಜು ಪ್ರಕ್ರಿಯೆಯಿಂದ ಹೊರಗಿಟ್ಟಿತು. ಜಿಯೋ, ಏರ್‌ಟೆಲ್, ಐಡಿಯಾ ಕಂಪನಿಗಳು 4ಜಿ ಸ್ಪೆಕ್ಟ್ರಮ್ ಲೈಸೆನ್ಸ್‌ನಲ್ಲಿ ಸಿಂಹ ಪಾಲು ಪಡೆದವು. 2018 ರಲ್ಲಿ ಬಿಎಸ್‌ಎನ್‌ಎಲ್‌ನ 80% ಕ್ಕಿಂತ ಹೆಚ್ಚು ಉದ್ಯೋಗಿಗಳನ್ನು ವಿ.ಆರ್.ಎಸ್ ಹೆಸರಲ್ಲಿ ಮನೆಗೆ ಕಳುಹಿಸಲಾಗಿದೆ. ಹೀಗಾಗಿ ಸಾರ್ವಜನಿಕ ವಲಯದ ಬಿಎಸ್‌ಎನ್‌ಎಲ್ ಇಂದು ಬೆನ್ನೆಲುಬು ಮುರಿದುಕೊಂಡು ಮೂಲೆ ಗುಂಪಾಗಿದ್ದರೆ ಖಾಸಗಿ ಟೆಲಿಕಾಂ ಕಂಪನಿಗಳು ಈ ವಲಯದಲ್ಲಿ ರಾರಾಜಿಸುತ್ತಿವೆ’ ಎಂದು ಒಕ್ಕೂಟ ಸರ್ಕಾರದ ವಿರುದ್ಧ ಕಿಡಿ ಕಾರಿವೆ.

’ದೇಶದ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ಈ ಪರಿಸ್ಥಿತಿಯಲ್ಲಿ, ಖಾಸಗಿ ಟೆಲಿಕಾಂ ಕಂಪನಿಗಳು ಇಂಟರ್ನೆಟ್ ಪ್ಯಾಕ್ ಮತ್ತು ಮೊಬೈಲ್ ರೀಚಾರ್ಜ್ ದರಗಳನ್ನು ಏರಿಸಿವೆ ಎಂದಿರುವ ಎಐಡಿವೈಓ ಮತ್ತು ಎಐಡಿಎಸ್‌ಓ ಸಂಘಟನೆಗಳು ಇಂದು ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ರಾಷ್ಟ್ರವ್ಯಾಪಿ ಟ್ವಿಟ್ಟರ್ ಚಳವಳಿಯನ್ನು ಹಮ್ಮಿಕೊಂಡಿದ್ದವು.


ಇದನ್ನೂ ಓದಿ: ಗ್ರಾಮೀಣ ಭಾರತಕ್ಕೆ ಬೇಕಿದೆ ಹೊಸ ’ಎಂಎಸ್‌ಪಿ’ – ’ಗರಿಷ್ಠ ಬೆಂಬಲ ನೀತಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿದ ಪ್ರಕರಣ : ತನಿಖೆಗೆ ಆದೇಶಿಸಿದ ಸರ್ಕಾರ

ಹೊಸದಾಗಿ ಚಾಲನೆ ನೀಡಲಾದ ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೊದಲ ಸಂಚಾರದ ವೇಳೆ ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ (ಗಾನ ಗೀತಂ) ಹಾಡಿದ ಬಗ್ಗೆ ತನಿಖೆಗೆ ಕೇರಳದ ಪ್ರಾಥಮಿಕ ಶಿಕ್ಷಣ ಸಚಿವ...

ಬಿಹಾರ ಚುನಾವಣೆ | ಎಲ್‌ಜೆಪಿ ಸಂಸದೆಯ ಎರಡೂ ಕೈಗಳಲ್ಲಿ ಮತದಾನದ ಶಾಯಿ ಗುರುತು; ಮತಗಳ್ಳತನ ಆರೋಪ

ಬಿಹಾರದಲ್ಲಿ ನವೆಂಬರ್ 6ರಂದು ನಡೆದ ಮೊದಲ ಹಂತದ ಮತದಾನದ ವೇಳೆ ಎನ್‌ಡಿಎ ಭಾಗವಾಗಿರುವ ಲೋಕಜನಶಕ್ತಿ ಪಕ್ಷ (ಎಲ್‌ಜೆಪಿ) ಸಂಸದೆ ಶಾಂಭವಿ ಚೌಧರಿ ಅವರ ಎರಡೂ ಕೈಗಳಲ್ಲಿ ಮತದಾನದ ಗುರುತಿನ ಶಾಯಿ ಕಂಡುಬಂದಿದೆ. ಈ...

ಗೋಲ್ಪಾರದಲ್ಲಿ ತೆರವು ಕಾರ್ಯಾಚರಣೆ ಪುನರಾರಂಭಿಸಿದ ಅಸ್ಸಾಂ ಸರ್ಕಾರ : ನೆಲೆ ಕಳೆದುಕೊಳ್ಳಲಿರುವ 600 ಕುಟುಂಬಗಳು

ದಹಿಕಾಟಾ ಮೀಸಲು ಅರಣ್ಯದೊಳಗಿನ 1,140 ಬಿಘಾ (376 ಎಕರೆಗೂ ಹೆಚ್ಚು) ಅರಣ್ಯ ಭೂಮಿಯ ಮೇಲಿನ ಅತಿಕ್ರಮಣವನ್ನು ತೆರವುಗೊಳಿಸಲು ಅಸ್ಸಾಂ ಸರ್ಕಾರ ಭಾನುವಾರ (ನ.9) ಗೋಲ್ಪಾರ ಜಿಲ್ಲೆಯಲ್ಲಿ ತನ್ನ ತೆರವು ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಇದರಿಂದ...

ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಆರೋಪ : ತನಿಖೆಗೆ ಆದೇಶಿಸಿದ ಸರ್ಕಾರ

ತಿರುವನಂತಪುರದ ಕೇರಳ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪದ ಕುರಿತ ತನಿಖೆಗೆ ಉನ್ನತ ಶಿಕ್ಷಣ ಸಚಿವೆ ಆರ್‌.ಬಿಂದು ಶನಿವಾರ (ನ.8) ಆದೇಶಿಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ...

ಅಂಡಮಾನ್, ನಿಕೋಬಾರ್ ದ್ವೀಪಗಳಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು (ನ.9, 2025) ಮಧ್ಯಾಹ್ನ 12:06ಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಭೂಮಿಯ 90 ಕಿಲೋ ಮೀಟರ್ ಆಳದಲ್ಲಿ...

ತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

ಎಂಟು ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಮಧ್ಯಪ್ರದೇಶದ ಸುಮಾರು 4,000 ಹೊಸದಾಗಿ ನೇಮಕಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ಗಳು ಹಿಂದೂ ಮಾಸದ ಮಾರ್ಗಶಿರದಲ್ಲಿ ಪ್ರತಿದಿನ ಸಂಜೆ 'ಭಗವದ್ಗೀತೆ'ಯ ಅಧ್ಯಾಯಗಳನ್ನು ಓದಲು ನಿರ್ದೇಶಿಸಲಾಗಿದೆ. ತರಬೇತಿಯಲ್ಲಿರುವ ಕಾನ್‌ಸ್ಟೆಬಲ್‌ಗಳಿಗೆ ನೀತಿವಂತ ಮತ್ತು ಶಿಸ್ತಿನ...

ಪಶ್ಚಿಮ ಬಂಗಾಳ : ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ

ನಾಲ್ಕು ವರ್ಷ ವಯಸ್ಸಿನ ಹೆಣ್ಣು ಮಗುವನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಶುಕ್ರವಾರ (ನ.7) ರಾತ್ರಿ ಈ ಘಟನೆ ನಡೆದಿದೆ. ಅಪರಿಚಿತರು ದುಷ್ಕೃತ್ಯವೆಸಗಿದ್ದಾರೆ. ಮಗುವಿನ...

ವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ ವಿರೋಧ

ಶನಿವಾರ (ನ.8) ಎರ್ನಾಕುಲಂ-ಬೆಂಗಳೂರು ನಡುವಿನ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ಆರ್‌ಎಸ್‌ಎಸ್‌ ಗೀತೆ ಹಾಡಿರುವ ವಿಡಿಯೋವನ್ನು ದಕ್ಷಿಣ ರೈಲ್ವೆ ಹಂಚಿಕೊಂಡಿದ್ದು, ಕೇರಳದಲ್ಲಿ ತೀವ್ರ ಆಕ್ಷೇಪ...

ಶಾಲಾ ಮಕ್ಕಳಿಗೆ ನ್ಯೂಸ್ ಪೇಪರ್‌ನಲ್ಲಿ ಬಿಸಿಯೂಟ ಬಡಿಸಿದ ವಿಡಿಯೋ ವೈರಲ್ : ಪ್ರಧಾನಿ, ಸಿಎಂಗೆ ನಾಚಿಕೆಯಾಗ್ಬೇಕು ಎಂದ ರಾಹುಲ್ ಗಾಂಧಿ

ಮಧ್ಯಪ್ರದೇಶದ ಶಾಲೆಯೊಂದರ ಮಕ್ಕಳು ನ್ಯೂಸ್‌ ಪೇಪರ್‌ನಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿಡಿಯೋ ಹಂಚಿಕೊಂಡಿರುವ ರಾಹುಲ್ ಗಾಂಧಿ, "ಇಂತಹ ದಯನೀಯ ಸ್ಥಿತಿಯಲ್ಲಿ ಭಾರತದ ಭವಿಷ್ಯ ಬೆಳಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಮೋಹನ್...

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ಬಿಹಾರದ ಸಮಸ್ತಿಪುರ ಜಿಲ್ಲೆಯ ಶೀತಲ್‌ಪಟ್ಟಿ ಗ್ರಾಮದ ಎಸ್‌ಆರ್ ಕಾಲೇಜು ಬಳಿ ಭಾರೀ ಸಂಖ್ಯೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್‌) ಸ್ಲಿಪ್‌ಗಳು ಪತ್ತೆಯಾಗಿದ್ದು, ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ...