Homeಕರ್ನಾಟಕಮೊಬೈಲ್ ಪ್ರಿಪೇಯ್ಡ್ ದರಗಳ ಹೆಚ್ಚಳ ವಿರೋಧಿಸಿ ಟ್ವಿಟ್ಟರ್ ಅಭಿಯಾನ

ಮೊಬೈಲ್ ಪ್ರಿಪೇಯ್ಡ್ ದರಗಳ ಹೆಚ್ಚಳ ವಿರೋಧಿಸಿ ಟ್ವಿಟ್ಟರ್ ಅಭಿಯಾನ

- Advertisement -
- Advertisement -

ಖಾಸಗಿ ಟೆಲಿಕಾಂ ಕಂಪನಿಗಳು ಪ್ರಿಪೇಯ್ಡ್ ಇಂಟರ್ನೆಟ್ ಪ್ಯಾಕ್ ಮತ್ತು ಮೊಬೈಲ್ ರೀಚಾರ್ಜ್ ದರಗಳಲ್ಲಿ ಏರಿಸಿರುವ ಭಾರಿ ಹೆಚ್ಚಳದ ವಿರುದ್ಧ ಎಐಡಿಎಸ್‌ಓ ಮತ್ತು ಎಐಡಿವೈಓ ಸಂಘಟನೆಗಳು ಇಂದು (ಜ.26) ಮಧ್ಯಾಹ್ನ 3 ರಿಂದ ಸಂಜೆ 5ರವರೆಗೆ ರಾಷ್ಟವ್ಯಾಪಿ ಟ್ವಿಟ್ಟರ್ ಅಭಿಯಾನ ನಡೆಸಿವೆ. #SayNoToMobileTariffHike #SayNoToPrivatisation ಎಂಬ ಹ್ಯಾಶ್ ಟ್ಯಾಗ್‌ಗಳನ್ನು ಬಳಸಿ ಟ್ವಿಟರ್‌ ಟ್ರೆಂಡ್ ಮಾಡಿವೆ.

’ಕೋವಿಡ್ ಸಾಂಕ್ರಾಮಿಕದ ಈ ಸಂದರ್ಭದಲ್ಲಿ ಮೊಬೈಲ್ ಫೋನ್ ಕೂಡ ಅಗತ್ಯ ವಸ್ತುಗಳಂತೆಯೇ ಆಗಿದೆ. ಲಾಕ್‌ಡೌನ್ ಸಮಯ ಮತ್ತು ನಂತರ, ಮೊಬೈಲ್ ತಂತ್ರಜ್ಞಾನ ಮತ್ತು ಇಂಟರ್ನೆಟ್ ಸೇವೆಯ ಬಳಕೆ ಗಮನಾರ್ಹವಾಗಿ ಹೆಚ್ಚಾಗಿದೆ. ಬಹುತೇಕ ಎಲ್ಲ ತರಗತಿಗಳ ವಿದ್ಯಾರ್ಥಿಗಳಿಗೂ ಆನ್‌ಲೈನ್ ತರಗತಿಗಳಲ್ಲಿ ಪಾಲ್ಗೊಳ್ಳಲು ಮೊಬೈಲ್ ಇಂಟರ್ನೆಟ್ ಸೇವೆ ಅಗತ್ಯವಾಗಿದೆ. ಪ್ರತಿಯೊಂದು ಕ್ಷೇತ್ರದ ಡಿಜಿಟಲೀಕರಣವು ಮೊಬೈಲ್ ಫೋನ್‌ಗಳ ಬಳಕೆ ಹೆಚ್ಚಳಕ್ಕೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳು ಪ್ರಿಪೇಯ್ಡ್ ದರಗಳನ್ನು ತೀವ್ರವಾಗಿ ಹೆಚ್ಚಿಸಿದ್ದು ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಸಂಘಟನೆಗಳು ಆರೋಪಿಸಿವೆ.

’ದೇಶದ ಜನರ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು ಜಿಯೋ, ವೊಡಾಫೋನ್ ಐಡಿಯಾ, ಏರ್‌ಟೆಲ್ ಕಂಪನಿಗಳು ನೆಟ್ ಪ್ಯಾಕ್‌ಗಳು ಮತ್ತು ರೀಚಾರ್ಜ್ ದರಗಳನ್ನು 20- 25% ಹೆಚ್ಚಿಸಿವೆ ಮತ್ತು ಮುಂಬರುವ ದಿನಗಳಲ್ಲಿ ಮತ್ತಷ್ಟು ದರ ಹೆಚ್ಚಳ ಮಾಡುವುದಾಗಿ ಘೋಷಿಸಿವೆ. ಇದರಿಂದ ಮಧ್ಯಮ ವರ್ಗದವರು, ಕಡಿಮೆ ಆದಾಯವುಳ್ಳವರು, ವಿದ್ಯಾರ್ಥಿಗಳು ಮತ್ತು ನಿರುದ್ಯೋಗಿ ಯುವಕರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಖಾಸಗಿ ಟೆಲಿಕಾಂಗಳು ದರಗಳಲ್ಲಿ ಇಷ್ಟೊಂದು ಏರಿಕೆ ಮಾಡುತ್ತಿದ್ದರೂ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಯಾವ ಕ್ರಮವನ್ನು ಕೈಗೊಳ್ಳದೇ ಜಡ ಮೌನವಾಗಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

’ಜಾಗತೀಕರಣದ ನಂತರ 1995 ರಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಈ ವಲಯದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಿದ ಕೇಂದ್ರ ಸರ್ಕಾರವು, ಬಿಎಸ್‌ಎನ್‌ಎಲ್ ಗೆ 2002 ರಲ್ಲಿ ದೇಶದಲ್ಲಿ ಮೊಬೈಲ್ ಸೇವೆಯನ್ನು ಒದಗಿಸಲು ಅನುಮತಿ ನೀಡಿತ್ತು. ಆದರೆ ಮುಂದಿನ ದಶಕದಲ್ಲಿ, ಸರ್ಕಾರಗಳ ನಿರ್ಲಕ್ಷದಿಂದ ಬಿಎಸ್‌ಎನ್‌ಎಲ್ ಹಣಕಾಸಿನ ತೀವ್ರ ಕೊರತೆಯನ್ನೆದುರಿಸಿತು. ಅಕ್ಟೋಬರ್ 2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಬಿಎಸ್‌ಎನ್‌ಎಲ್ ಅನ್ನು 4ಜಿ ತರಂಗಾಂತರ ಹರಾಜು ಪ್ರಕ್ರಿಯೆಯಿಂದ ಹೊರಗಿಟ್ಟಿತು. ಜಿಯೋ, ಏರ್‌ಟೆಲ್, ಐಡಿಯಾ ಕಂಪನಿಗಳು 4ಜಿ ಸ್ಪೆಕ್ಟ್ರಮ್ ಲೈಸೆನ್ಸ್‌ನಲ್ಲಿ ಸಿಂಹ ಪಾಲು ಪಡೆದವು. 2018 ರಲ್ಲಿ ಬಿಎಸ್‌ಎನ್‌ಎಲ್‌ನ 80% ಕ್ಕಿಂತ ಹೆಚ್ಚು ಉದ್ಯೋಗಿಗಳನ್ನು ವಿ.ಆರ್.ಎಸ್ ಹೆಸರಲ್ಲಿ ಮನೆಗೆ ಕಳುಹಿಸಲಾಗಿದೆ. ಹೀಗಾಗಿ ಸಾರ್ವಜನಿಕ ವಲಯದ ಬಿಎಸ್‌ಎನ್‌ಎಲ್ ಇಂದು ಬೆನ್ನೆಲುಬು ಮುರಿದುಕೊಂಡು ಮೂಲೆ ಗುಂಪಾಗಿದ್ದರೆ ಖಾಸಗಿ ಟೆಲಿಕಾಂ ಕಂಪನಿಗಳು ಈ ವಲಯದಲ್ಲಿ ರಾರಾಜಿಸುತ್ತಿವೆ’ ಎಂದು ಒಕ್ಕೂಟ ಸರ್ಕಾರದ ವಿರುದ್ಧ ಕಿಡಿ ಕಾರಿವೆ.

’ದೇಶದ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ಈ ಪರಿಸ್ಥಿತಿಯಲ್ಲಿ, ಖಾಸಗಿ ಟೆಲಿಕಾಂ ಕಂಪನಿಗಳು ಇಂಟರ್ನೆಟ್ ಪ್ಯಾಕ್ ಮತ್ತು ಮೊಬೈಲ್ ರೀಚಾರ್ಜ್ ದರಗಳನ್ನು ಏರಿಸಿವೆ ಎಂದಿರುವ ಎಐಡಿವೈಓ ಮತ್ತು ಎಐಡಿಎಸ್‌ಓ ಸಂಘಟನೆಗಳು ಇಂದು ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ರಾಷ್ಟ್ರವ್ಯಾಪಿ ಟ್ವಿಟ್ಟರ್ ಚಳವಳಿಯನ್ನು ಹಮ್ಮಿಕೊಂಡಿದ್ದವು.


ಇದನ್ನೂ ಓದಿ: ಗ್ರಾಮೀಣ ಭಾರತಕ್ಕೆ ಬೇಕಿದೆ ಹೊಸ ’ಎಂಎಸ್‌ಪಿ’ – ’ಗರಿಷ್ಠ ಬೆಂಬಲ ನೀತಿ’

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...