Homeಮುಖಪುಟಕಾಂಗ್ರೆಸ್ ಇಲ್ಲದೆ ಪ್ರತಿಪಕ್ಷಗಳು ಒಗ್ಗೂಡಲು ಸಾಧ್ಯವಿಲ್ಲ: ಕಾಂಗ್ರೆಸ್‌

ಕಾಂಗ್ರೆಸ್ ಇಲ್ಲದೆ ಪ್ರತಿಪಕ್ಷಗಳು ಒಗ್ಗೂಡಲು ಸಾಧ್ಯವಿಲ್ಲ: ಕಾಂಗ್ರೆಸ್‌

- Advertisement -
- Advertisement -

ಕಾಂಗ್ರೆಸ್ ಇಲ್ಲದೆ ಪ್ರತಿಪಕ್ಷಗಳು ಒಗ್ಗೂಡಲು ಸಾಧ್ಯವಿಲ್ಲ. 2024ರ ಲೋಕಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷಗಳು ಒಗ್ಗೂಡಬೇಕಾದರೆ ಕಾಂಗ್ರೆಸ್ ಇರಲೇಬೇಕು ಎಂದು ಕಾಂಗ್ರೆಸ್ ನಾಯಕರು ಭಾನುವಾರ ತಿಳಿಸಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ವಿರುದ್ಧ ಮೈತ್ರಿ ಮಾಡಿಕೊಳ್ಳಲು ವಿವಿಧ ಪಕ್ಷಗಳನ್ನು ಒಟ್ಟುಗೂಡಿಸುವಲ್ಲಿ ಕಾಂಗ್ರೆಸ್ ತನ್ನ ಪಾತ್ರವನ್ನು ಅರಿತುಕೊಂಡಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.

“ಕಾಂಗ್ರೆಸ್ ಈಗಾಗಲೇ ಕ್ರಮವನ್ನು ತೆಗೆದುಕೊಂಡಿದೆ ಮತ್ತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ಸಂಪರ್ಕದಲ್ಲಿದೆ” ಎಂದು ವೇಣುಗೋಪಾಲ್ ತಿಳಿಸಿದ್ದಾರೆ. “ನಾವು ಖಂಡಿತವಾಗಿಯೂ ಪ್ರತಿಪಕ್ಷಗಳನ್ನು ಬಿಜೆಪಿ ವಿರುದ್ಧ ಒಗ್ಗೂಡಿಸುತ್ತೇವೆ” ಎಂದಿದ್ದಾರೆ.

“ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಕಾಂಗ್ರೆಸ್‌ ಗಳಿಸಿರುವ ಪ್ರಭಾವವನ್ನು ವಿರೋಧ ಪಕ್ಷಗಳನ್ನು ಒಟ್ಟುಗೂಡಿಸಲು ಕಾಂಗ್ರೆಸ್ ಬಳಸಿಕೊಳ್ಳಬೇಕು” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಲಹೆ ನೀಡಿದ ಒಂದು ದಿನದ ನಂತರ ಕಾಂಗ್ರೆಸ್ ನಾಯಕರ ಹೇಳಿಕೆಗಳು ಹೊರಬಿದ್ದಿವೆ.

“ಕಾಂಗ್ರೆಸ್ ನನ್ನ ಮಾತು ಕೇಳಿದರೆ ಭಾರತೀಯ ಜನತಾ ಪಕ್ಷವು 100 ಸ್ಥಾನಗಳನ್ನು ದಾಟುವುದಿಲ್ಲ” ಎಂದು ನಿತೀಶ್‌ಕುಮಾರ್‌ ತಿಳಿಸಿದ್ದರು.

“ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಕುರಿತು ಹೆಚ್ಚಿನ ಚರ್ಚೆಗಳನ್ನು ಫೆಬ್ರವರಿ 24ರಂದು ರಾಯಪುರದಲ್ಲಿ ಆರಂಭವಾಗಲಿರುವ ಪಕ್ಷದ ಮೂರು ದಿನಗಳ ಸರ್ವಸದಸ್ಯರ ಅಧಿವೇಶನದಲ್ಲಿ ನಡೆಸಲಾಗುವುದು” ಎಂದು ಕಾಂಗ್ರೆಸ್ ಸಂವಹನದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

“ನಾವು ಮುನ್ನಡೆಸಬೇಕು ಎಂದು ಯಾರೂ ನಮಗೆ ಪ್ರಮಾಣಪತ್ರವನ್ನು ನೀಡುವ ಅಗತ್ಯವಿಲ್ಲ. ಏಕೆಂದರೆ ಕಾಂಗ್ರೆಸ್ ಇಲ್ಲದೆ ಯಾವುದೇ ಪ್ರತಿಪಕ್ಷಗಳ ಒಗ್ಗಟ್ಟು ಯಶಸ್ವಿಯಾಗುವುದಿಲ್ಲ” ಎಂದು ರಮೇಶ್ ಸ್ಪಷ್ಟಪಡಿಸಿದ್ದಾರೆ. “ಆದ್ದರಿಂದ, ನಿತೀಶ್ ಕುಮಾರ್ ಅವರ ಹೇಳಿಕೆಯನ್ನು ನಾವು ಸ್ವಾಗತಿಸುತ್ತೇವೆ … ಇದರ ಕುರಿತು ಪಕ್ಷದ ಸರ್ವಸದಸ್ಯರ ಸಭೆಯಲ್ಲಿ ಚರ್ಚಿಸಲಾಗುವುದು” ಎಂದಿದ್ದಾರೆ.

ಚುನಾವಣಾ ಪೂರ್ವ ಮೈತ್ರಿ ಮತ್ತು ಇತರ ವಿಧಾನಗಳ ಬಗ್ಗೆಯೂ ಕಾಂಗ್ರೆಸ್ ಚರ್ಚಿಸಲಿದೆ ಎಂದು ರಮೇಶ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: 1985ರಿಂದ ಕರ್ನಾಟಕದಲ್ಲಿ ಯಾವುದೇ ಪಕ್ಷದ ಸರ್ಕಾರ ಮರು ಆಯ್ಕೆಯಾಗಿಲ್ಲ; ಈ ಬಾರಿ ಏನಾಗಲಿದೆ?

ರಾಹುಲ್ ಗಾಂಧಿಯವರ ನೇತೃತ್ವದ ಭಾರತ್ ಜೋಡೋ ಯಾತ್ರೆಯ ಪ್ರಭಾವವನ್ನು ಒಪ್ಪಿಕೊಂಡಿದ್ದಕ್ಕಾಗಿ ನಿತೀಶ್‌ ಕುಮಾರ್ ಅವರಿಗೆ ಧನ್ಯವಾದವನ್ನೂ ರಮೇಶ್‌ ಅರ್ಪಿಸಿದ್ದಾರೆ.

“ಇದು ಭಾರತೀಯ ರಾಜಕೀಯಕ್ಕೆ ಪರಿವರ್ತನೆಯ ಕ್ಷಣವಾಗಿದೆ, ಅವರು ಅದನ್ನು ಒಪ್ಪಿಕೊಂಡಿದ್ದಾರೆ” ಎಂದು ಶ್ಲಾಘಿಸಿದ್ದಾರೆ.

ಭಾರತೀಯ ಜನತಾ ಪಕ್ಷವು ಪ್ರತಿಪಾದಿಸುವ ದ್ವೇಷದ ರಾಜಕೀಯವನ್ನು ಎದುರಿಸುವ ಗುರಿಯನ್ನು ಭಾರತ್ ಜೋಡೋ ಯಾತ್ರೆಯು ಹೊಂದಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ರಾಹುಲ್‌ ಗಾಂಧಿಯವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ (12 ರಾಜ್ಯಗಳನ್ನು ಕಾಲ್ನಡಿಗೆಯಲ್ಲಿ) ಕ್ರಮಿಸಿದ ಬಳಿಕ ಭಾರತ್ ಜೋಡೋ ಯಾತ್ರೆಯು ಜನವರಿ 30ರಂದು ಕೊನೆಗೊಂಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...