Homeಮುಖಪುಟಬೆಂಗಳೂರಿನಲ್ಲಿ ಇಂದಿನಿಂದ ವಿಪಕ್ಷಗಳ ಸಮಾವೇಶ; ಆಪ್ ಸೇರಿ 26 ರಾಜಕೀಯ ಪಕ್ಷಗಳು ಭಾಗಿ

ಬೆಂಗಳೂರಿನಲ್ಲಿ ಇಂದಿನಿಂದ ವಿಪಕ್ಷಗಳ ಸಮಾವೇಶ; ಆಪ್ ಸೇರಿ 26 ರಾಜಕೀಯ ಪಕ್ಷಗಳು ಭಾಗಿ

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗೂಡಿ ಹೋರಾಡುವುದಕ್ಕಾಗಿ ತಮ್ಮ ಪ್ರಯತ್ನವನ್ನು ಮುಂದುವರಿಸಿರುವ ಪ್ರತಿಪಕ್ಷ ನಾಯಕರು ಸೋಮವಾರ ಬೆಂಗಳೂರಿನಲ್ಲಿ ಸಭೆ ಸೇರಲಿದ್ದಾರೆ.

ಮೂರು ವಾರಗಳ ಹಿಂದೆ ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಮಾವೇಶದಲ್ಲಿ ಅಂಗೀಕರಿಸಿದ ನಿರ್ಣಯಗಳನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ವಿಪಕ್ಷ ನಾಯಕರು ಈ ಸಮಾವೇಶವನ್ನು ನಡೆಸುತ್ತಿದ್ದಾರೆ. ಸೋಮವಾರದ ಪ್ರತಿಪಕ್ಷ ನಾಯಕರ ಸಮಾವೇಶದಲ್ಲಿ ಕನಿಷ್ಠ 26 ರಾಜಕೀಯ ಪಕ್ಷಗಳು ಪಾಲ್ಗೊಳ್ಳಲಿವೆ.

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಬೆಂಗಳೂರಿನ ಪ್ರತಿಪಕ್ಷಗಳ ಸಮಾವೇಶದಲ್ಲಿ ಉಪಸ್ಥಿತರಿರುತ್ತಾರೆ. ವಿವಾದಾತ್ಮಕ ವಿಷಯಗಳ ಬಗ್ಗೆ ಚರ್ಚಿಸುವ ಸಂದರ್ಭದಲ್ಲಿ ಪ್ರತಿಪಕ್ಷಗಳ ನಾಯಕರ ನಡುವೆ ಸಹಮತ ಮೂಡಿಸುವುದಕ್ಕೆ ನೆರವಾಗಲಿದೆ ಎಂದು ಪ್ರತಿಪಕ್ಷ ಮೂಲಗಳು ತಿಳಿಸಿವೆ.

ಈ ಮಧ್ಯೆ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಾಗಿ ಆಮ್ ಆದ್ಮಿ ಪಾರ್ಟಿ (AAP) ಭಾನುವಾರ ಘೋಷಿಸಿದೆ. ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿಯ ಎಎಪಿ ಸರ್ಕಾರವನ್ನು ಬೆಂಬಲಿಸಲು ಕಾಂಗ್ರೆಸ್ ಒಪ್ಪಿದ ಬೆನ್ನಲ್ಲೇ ಈ ನಿರ್ಧಾರ ಪ್ರಕಟಿಸಲಾಗಿದೆ. ಇದಕ್ಕೂ ಮುನ್ನ, ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿ ಸರ್ಕಾರವನ್ನು ಬೆಂಬಲಿಸುವುದಾಗಿ ಕಾಂಗ್ರೆಸ್ ನಾಯಕ ಪವನ್ ಖೇರಾ ತಿಳಿಸಿದ್ದರು.

ಎಎಪಿಯ ರಾಜಕೀಯ ಕ್ರಿಯಾ ಸಮಿತಿ ಸಭೆ ಇಂದು ನಡೆಯಿತು. ಪ್ರತಿಯೊಂದು ಅಂಶವನ್ನು ವಿವರವಾಗಿ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯು ಸ್ಪಷ್ಟವಾಗಿ ರಾಷ್ಟ್ರವಿರೋಧಿಯಾಗಿದೆ ಎಂದು ಎಎಪಿ ಸಂಸದ ರಾಘವ್ ಚಡ್ಡಾ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್‌ನಿಂದ ತೊಡಗಿ ಆರ್‌ಜೆಡಿ, ಜೆಡಿಯು, ಎನ್‌ಸಿಪಿ, ಸಮಾಜವಾದಿ ಪಕ್ಷ, ಉದ್ಧವ್ ಠಾಕ್ರೆ ಅವರ ಶಿವಸೇನೆ ಎಲ್ಲರೂ ಈ ದೇಶವಿರೋಧಿ ಸುಗ್ರೀವಾಜ್ಞೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಇದನ್ನು ಸೋಲಿಸಲು ನಾವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ರಾಘವ್ ಹೇಳಿದ್ದಾರೆ.

ಜೂನ್ 23 ರಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆದ ಮೊದಲ ಪ್ರತಿಪಕ್ಷಗಳ ಸಮಾವೇಶದ ನಂತರ, ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿ ಸರ್ಕಾರ ಮತ್ತು ಎಎಪಿಯನ್ನು ಬೆಂಬಲಿಸದ ಪ್ರತಿಪಕ್ಷಗಳ ವಿರುದ್ಧ ಕೇಜ್ರಿವಾಲ್ ಪಕ್ಷ ಆಕ್ರೋಶ ವ್ಯಕ್ತಪಡಿಸಿತ್ತು. ಅದರ ಬೆನ್ನಲ್ಲೇ ಕಾಂಗ್ರೆಸ್ ಹೊರತುಪಡಿಸಿ ಎಲ್ಲಾ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಸುಗ್ರೀವಾಜ್ಞೆ ವಿರುದ್ಧ ಹೋರಾಟಕ್ಕೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡಿದ್ದವು. ಇದೀಗ ಕಾಂಗ್ರೆಸ್ ಸಹ ಅದೇ ಹಾದಿ ಹಿಡಿದಿದ್ದು, ಎಎಪಿ ಕೂಡ ಪ್ರತಿಪಕ್ಷಗಳ ಒಕ್ಕೂಟ ಸೇರಲು ಕಾರಣವಾಗಿದೆ.

ಸಮಾವೇಶವು ಮೊದಲಿಗೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯುವುದೆಂದು ನಿಗದಿಯಾಗಿತ್ತಾದರೂ ಅಲ್ಲಿನ ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಅದನ್ನು ಬೆಂಗಳೂರಿಗೆ ವರ್ಗಾಯಿಸಲಾಗಿತ್ತು. ಮಹಾರಾಷ್ಟ್ರದಲ್ಲಿ ತನ್ನ ಚಿಕ್ಕಪ್ಪ ಶರದ್ ಪವಾರ್ ವಿರುದ್ಧ ಸಿಡಿದೆದ್ದ ಅಜಿತ್ ಪವಾರ್ ಎನ್‌ ಡಿಎ ಸರಕಾರದ ಜೊತೆ ಕೈಜೋಡಿಸಿರುವುದರಿದ ಎನ್‌ಸಿಪಿಯಲ್ಲಿ ವಿಭಜನೆಯುಂಟಾಗಿರುವ ಸಂದರ್ಭದಲ್ಲೇ ಪ್ರತಿಪಕ್ಷ ನಾಯಕರ ಸಮಾವೇಶ ನಡೆಯುತ್ತಿರುವುದು ಹೆಚ್ಚಿನ ಮಹತ್ವ ಪಡೆದಿದೆ.

ಪ್ರತಿಪಕ್ಷಗಳ ಏಕತೆಗೆ ಸಂಬಂಧಿಸಿದಂತೆ ಪಾಟ್ನಾ ಸಮಾವೇಶದಲ್ಲಿ ಕೈಗೊಂಡ ನಿರ್ಣಯಗಳ ಅನು ಷ್ಠಾನವನ್ನು ಚುರುಕುಗೊಳಿಸುವುದು ಹಾಗೂ ಮಾತುಕತೆಗಳನ್ನು ಮುಂದುವರಿಸುವುದು ಮುಖ್ಯವಾಗಿದೆ ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿಪಕ್ಷ ನಾಯಕರನ್ನು ಸಮಾವೇಶಕ್ಕೆ ಆಮಂತ್ರಿಸಿ ಬರೆದ ಪತ್ರದಲ್ಲಿ ತಿಳಿಸಿದ್ದರು.

”ನಮ್ಮ ದೇಶವು ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ಕಂಡುಹಿಡಿಯಲು ನಾವೆಲ್ಲರೂ ಜೊತೆಯಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ” ಎಂದು ಅವರು ಪತ್ರದಲ್ಲಿ ಹೇಳಿದ್ದರು.

ಪಶ್ಚಿಮಬಂಗಾಳದ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಎಡರಂಗದ ನಾಯಕರ ಜೊತೆ ವಾಕ್ಸಮರ ನಡೆಸಿದ್ದ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೂಡಾ ಬೆಂಗಳೂರಿನ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಇತ್ತೀಚೆಗೆ ಅವರ ಎಡಮಂಡಿಗೆ ಗಾಯವಾಗಿರುವ ಹಿನ್ನೆಲೆಯಲ್ಲಿ ಜಾಗರೂಕತೆಯಿಂದ ನಡೆದಾಡುವಂತೆ ವೈದ್ಯರು ಸಲಹೆ ನೀಡಿರುವುದರಿಂದ ಅವರು ಭೋಜನಕೂಟದಲ್ಲಿ ಪಾಲ್ಗೊಳ್ಳುವುದಿಲ್ಲವೆಂದು ತಿಳಿದುಬಂದಿದೆ.

ಮುಂದಿನ ತಿಂಗಳು ಮೋದಿ ಸರಕಾರದ ವಿರುದ್ಧ ಜಂಟಿ ರಾಲಿಯೊಂದನ್ನು ಆಯೋಜಿಸುವ ಸಾಧ್ಯತೆಯ ಬಗ್ಗೆಯೂ ವಿಪಕ್ಷ ನಾಯಕರು ಚರ್ಚಿಸುವ ಸಾಧ್ಯತೆಯಿದೆ.

ಬೆಂಗಳೂರು ಸಮಾವೇಶದಲ್ಲಿ ಕೃಷ್ಣ ಪಟೇಲ್ ನೇತೃತ್ವದ ಅಪ್ಪಾ ದಳ (ಕೆ) ಹಾಗೂ ತಮಿಳುನಾಡಿನ ಮನಿದನೇಯ ಮಕ್ಕಳ ಕಚ್ಚಿ (ಎಂಎಂಕೆ) ಪಕ್ಷಗಳು ಹೊಸದಾಗಿ ಸೇರ್ಪಡೆಗೊಂಡಿವೆ. ಇದರೊಂದಿಗೆ ವಿಪಕ್ಷ ನಾಯಕರ ಸಭೆಯಲ್ಲಿ ಪಾಲ್ಗೊಳ್ಳುವ ಪಕ್ಷಗಳ ಸಂಖ್ಯೆ 26ಕೇರಿದೆ.

ಪಾಟ್ನಾ ಸಮಾವೇಶದಲ್ಲಿ ಮುಸ್ಲಿಮ್‌ಗ್, ಕೇರಳ ಕಾಂಗ್ರೆಸ್‌ (ಜೋಸೆಫ್), ಕೇರಳ ಕಾಂಗ್ರೆಸ್ (ಮಾಣಿ), ಎಂಡಿಎಂಕೆ, ಕೆಡಿಎಂಕೆ,ಎಸಿಕೆ, ಫಾರ್ವಡ್್ರ ಬ್ಲಾಕ್ ಹಾಗೂ ಆರ್‌ ಎಸ್‌ಪಿ ಪಕ್ಷಗಳು ಕೂಡಾ ಸಮಾವೇಶದಲ್ಲಿ ಭಾಗವಹಿಸಲಿವೆ. ಜೆಡಿಯು ಆಯೋಜಿಸಿದ ಪಾಟ್ನಾ ಸಮಾವೇಶದಲ್ಲಿ ಕಾಂಗ್ರೆಸ್, ಡಿಎಂಕೆ, ತೃಣಮೂಲ ಕಾಂಗ್ರೆಸ್, ಆರ್‌ಎಲ್‌ಡಿ, ಆರ್‌ಜೆಡಿ, ಎನ್‌ ಸಿಪಿ, ಆಪ್, ಸಿಪಿಎಂ, ಸಿಪಿಐ, ಸಿಪಿಎಂಎಲ್(ಎಲ್), ಸಮಾಜವಾದಿ ಪಕ್ಷ, ನ್ಯಾಶನಲ್ ಕಾನರೆನ್ಸ್, ಪಿಡಿಪಿ, ಶಿವಸೇನಾ, (ಯುಬಿಟಿ) ಹಾಗೂ ಜೆಎಂಎಂ ಪಕ್ಷಗಳು ಭಾಗವಹಿಸಿದ್ದವು.

ಇದನ್ನೂ ಓದಿ: ಬಿಜೆಪಿ ಸೋಲಿಸಲು ವಿಪಕ್ಷಗಳ ಒಗ್ಗಟ್ಟು: ಬಿಹಾರದಲ್ಲಿ ಸೇರಿದ 6 ಸಿಎಂಗಳು, 18 ಪ್ರತಿ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...