Homeಮುಖಪುಟಬೆಂಗಳೂರಿನಲ್ಲಿ ಇಂದಿನಿಂದ ವಿಪಕ್ಷಗಳ ಸಮಾವೇಶ; ಆಪ್ ಸೇರಿ 26 ರಾಜಕೀಯ ಪಕ್ಷಗಳು ಭಾಗಿ

ಬೆಂಗಳೂರಿನಲ್ಲಿ ಇಂದಿನಿಂದ ವಿಪಕ್ಷಗಳ ಸಮಾವೇಶ; ಆಪ್ ಸೇರಿ 26 ರಾಜಕೀಯ ಪಕ್ಷಗಳು ಭಾಗಿ

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗೂಡಿ ಹೋರಾಡುವುದಕ್ಕಾಗಿ ತಮ್ಮ ಪ್ರಯತ್ನವನ್ನು ಮುಂದುವರಿಸಿರುವ ಪ್ರತಿಪಕ್ಷ ನಾಯಕರು ಸೋಮವಾರ ಬೆಂಗಳೂರಿನಲ್ಲಿ ಸಭೆ ಸೇರಲಿದ್ದಾರೆ.

ಮೂರು ವಾರಗಳ ಹಿಂದೆ ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಮಾವೇಶದಲ್ಲಿ ಅಂಗೀಕರಿಸಿದ ನಿರ್ಣಯಗಳನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ವಿಪಕ್ಷ ನಾಯಕರು ಈ ಸಮಾವೇಶವನ್ನು ನಡೆಸುತ್ತಿದ್ದಾರೆ. ಸೋಮವಾರದ ಪ್ರತಿಪಕ್ಷ ನಾಯಕರ ಸಮಾವೇಶದಲ್ಲಿ ಕನಿಷ್ಠ 26 ರಾಜಕೀಯ ಪಕ್ಷಗಳು ಪಾಲ್ಗೊಳ್ಳಲಿವೆ.

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಬೆಂಗಳೂರಿನ ಪ್ರತಿಪಕ್ಷಗಳ ಸಮಾವೇಶದಲ್ಲಿ ಉಪಸ್ಥಿತರಿರುತ್ತಾರೆ. ವಿವಾದಾತ್ಮಕ ವಿಷಯಗಳ ಬಗ್ಗೆ ಚರ್ಚಿಸುವ ಸಂದರ್ಭದಲ್ಲಿ ಪ್ರತಿಪಕ್ಷಗಳ ನಾಯಕರ ನಡುವೆ ಸಹಮತ ಮೂಡಿಸುವುದಕ್ಕೆ ನೆರವಾಗಲಿದೆ ಎಂದು ಪ್ರತಿಪಕ್ಷ ಮೂಲಗಳು ತಿಳಿಸಿವೆ.

ಈ ಮಧ್ಯೆ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಾಗಿ ಆಮ್ ಆದ್ಮಿ ಪಾರ್ಟಿ (AAP) ಭಾನುವಾರ ಘೋಷಿಸಿದೆ. ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿಯ ಎಎಪಿ ಸರ್ಕಾರವನ್ನು ಬೆಂಬಲಿಸಲು ಕಾಂಗ್ರೆಸ್ ಒಪ್ಪಿದ ಬೆನ್ನಲ್ಲೇ ಈ ನಿರ್ಧಾರ ಪ್ರಕಟಿಸಲಾಗಿದೆ. ಇದಕ್ಕೂ ಮುನ್ನ, ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿ ಸರ್ಕಾರವನ್ನು ಬೆಂಬಲಿಸುವುದಾಗಿ ಕಾಂಗ್ರೆಸ್ ನಾಯಕ ಪವನ್ ಖೇರಾ ತಿಳಿಸಿದ್ದರು.

ಎಎಪಿಯ ರಾಜಕೀಯ ಕ್ರಿಯಾ ಸಮಿತಿ ಸಭೆ ಇಂದು ನಡೆಯಿತು. ಪ್ರತಿಯೊಂದು ಅಂಶವನ್ನು ವಿವರವಾಗಿ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯು ಸ್ಪಷ್ಟವಾಗಿ ರಾಷ್ಟ್ರವಿರೋಧಿಯಾಗಿದೆ ಎಂದು ಎಎಪಿ ಸಂಸದ ರಾಘವ್ ಚಡ್ಡಾ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್‌ನಿಂದ ತೊಡಗಿ ಆರ್‌ಜೆಡಿ, ಜೆಡಿಯು, ಎನ್‌ಸಿಪಿ, ಸಮಾಜವಾದಿ ಪಕ್ಷ, ಉದ್ಧವ್ ಠಾಕ್ರೆ ಅವರ ಶಿವಸೇನೆ ಎಲ್ಲರೂ ಈ ದೇಶವಿರೋಧಿ ಸುಗ್ರೀವಾಜ್ಞೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಇದನ್ನು ಸೋಲಿಸಲು ನಾವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ರಾಘವ್ ಹೇಳಿದ್ದಾರೆ.

ಜೂನ್ 23 ರಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆದ ಮೊದಲ ಪ್ರತಿಪಕ್ಷಗಳ ಸಮಾವೇಶದ ನಂತರ, ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿ ಸರ್ಕಾರ ಮತ್ತು ಎಎಪಿಯನ್ನು ಬೆಂಬಲಿಸದ ಪ್ರತಿಪಕ್ಷಗಳ ವಿರುದ್ಧ ಕೇಜ್ರಿವಾಲ್ ಪಕ್ಷ ಆಕ್ರೋಶ ವ್ಯಕ್ತಪಡಿಸಿತ್ತು. ಅದರ ಬೆನ್ನಲ್ಲೇ ಕಾಂಗ್ರೆಸ್ ಹೊರತುಪಡಿಸಿ ಎಲ್ಲಾ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಸುಗ್ರೀವಾಜ್ಞೆ ವಿರುದ್ಧ ಹೋರಾಟಕ್ಕೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡಿದ್ದವು. ಇದೀಗ ಕಾಂಗ್ರೆಸ್ ಸಹ ಅದೇ ಹಾದಿ ಹಿಡಿದಿದ್ದು, ಎಎಪಿ ಕೂಡ ಪ್ರತಿಪಕ್ಷಗಳ ಒಕ್ಕೂಟ ಸೇರಲು ಕಾರಣವಾಗಿದೆ.

ಸಮಾವೇಶವು ಮೊದಲಿಗೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯುವುದೆಂದು ನಿಗದಿಯಾಗಿತ್ತಾದರೂ ಅಲ್ಲಿನ ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಅದನ್ನು ಬೆಂಗಳೂರಿಗೆ ವರ್ಗಾಯಿಸಲಾಗಿತ್ತು. ಮಹಾರಾಷ್ಟ್ರದಲ್ಲಿ ತನ್ನ ಚಿಕ್ಕಪ್ಪ ಶರದ್ ಪವಾರ್ ವಿರುದ್ಧ ಸಿಡಿದೆದ್ದ ಅಜಿತ್ ಪವಾರ್ ಎನ್‌ ಡಿಎ ಸರಕಾರದ ಜೊತೆ ಕೈಜೋಡಿಸಿರುವುದರಿದ ಎನ್‌ಸಿಪಿಯಲ್ಲಿ ವಿಭಜನೆಯುಂಟಾಗಿರುವ ಸಂದರ್ಭದಲ್ಲೇ ಪ್ರತಿಪಕ್ಷ ನಾಯಕರ ಸಮಾವೇಶ ನಡೆಯುತ್ತಿರುವುದು ಹೆಚ್ಚಿನ ಮಹತ್ವ ಪಡೆದಿದೆ.

ಪ್ರತಿಪಕ್ಷಗಳ ಏಕತೆಗೆ ಸಂಬಂಧಿಸಿದಂತೆ ಪಾಟ್ನಾ ಸಮಾವೇಶದಲ್ಲಿ ಕೈಗೊಂಡ ನಿರ್ಣಯಗಳ ಅನು ಷ್ಠಾನವನ್ನು ಚುರುಕುಗೊಳಿಸುವುದು ಹಾಗೂ ಮಾತುಕತೆಗಳನ್ನು ಮುಂದುವರಿಸುವುದು ಮುಖ್ಯವಾಗಿದೆ ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿಪಕ್ಷ ನಾಯಕರನ್ನು ಸಮಾವೇಶಕ್ಕೆ ಆಮಂತ್ರಿಸಿ ಬರೆದ ಪತ್ರದಲ್ಲಿ ತಿಳಿಸಿದ್ದರು.

”ನಮ್ಮ ದೇಶವು ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ಕಂಡುಹಿಡಿಯಲು ನಾವೆಲ್ಲರೂ ಜೊತೆಯಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ” ಎಂದು ಅವರು ಪತ್ರದಲ್ಲಿ ಹೇಳಿದ್ದರು.

ಪಶ್ಚಿಮಬಂಗಾಳದ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಎಡರಂಗದ ನಾಯಕರ ಜೊತೆ ವಾಕ್ಸಮರ ನಡೆಸಿದ್ದ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೂಡಾ ಬೆಂಗಳೂರಿನ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಇತ್ತೀಚೆಗೆ ಅವರ ಎಡಮಂಡಿಗೆ ಗಾಯವಾಗಿರುವ ಹಿನ್ನೆಲೆಯಲ್ಲಿ ಜಾಗರೂಕತೆಯಿಂದ ನಡೆದಾಡುವಂತೆ ವೈದ್ಯರು ಸಲಹೆ ನೀಡಿರುವುದರಿಂದ ಅವರು ಭೋಜನಕೂಟದಲ್ಲಿ ಪಾಲ್ಗೊಳ್ಳುವುದಿಲ್ಲವೆಂದು ತಿಳಿದುಬಂದಿದೆ.

ಮುಂದಿನ ತಿಂಗಳು ಮೋದಿ ಸರಕಾರದ ವಿರುದ್ಧ ಜಂಟಿ ರಾಲಿಯೊಂದನ್ನು ಆಯೋಜಿಸುವ ಸಾಧ್ಯತೆಯ ಬಗ್ಗೆಯೂ ವಿಪಕ್ಷ ನಾಯಕರು ಚರ್ಚಿಸುವ ಸಾಧ್ಯತೆಯಿದೆ.

ಬೆಂಗಳೂರು ಸಮಾವೇಶದಲ್ಲಿ ಕೃಷ್ಣ ಪಟೇಲ್ ನೇತೃತ್ವದ ಅಪ್ಪಾ ದಳ (ಕೆ) ಹಾಗೂ ತಮಿಳುನಾಡಿನ ಮನಿದನೇಯ ಮಕ್ಕಳ ಕಚ್ಚಿ (ಎಂಎಂಕೆ) ಪಕ್ಷಗಳು ಹೊಸದಾಗಿ ಸೇರ್ಪಡೆಗೊಂಡಿವೆ. ಇದರೊಂದಿಗೆ ವಿಪಕ್ಷ ನಾಯಕರ ಸಭೆಯಲ್ಲಿ ಪಾಲ್ಗೊಳ್ಳುವ ಪಕ್ಷಗಳ ಸಂಖ್ಯೆ 26ಕೇರಿದೆ.

ಪಾಟ್ನಾ ಸಮಾವೇಶದಲ್ಲಿ ಮುಸ್ಲಿಮ್‌ಗ್, ಕೇರಳ ಕಾಂಗ್ರೆಸ್‌ (ಜೋಸೆಫ್), ಕೇರಳ ಕಾಂಗ್ರೆಸ್ (ಮಾಣಿ), ಎಂಡಿಎಂಕೆ, ಕೆಡಿಎಂಕೆ,ಎಸಿಕೆ, ಫಾರ್ವಡ್್ರ ಬ್ಲಾಕ್ ಹಾಗೂ ಆರ್‌ ಎಸ್‌ಪಿ ಪಕ್ಷಗಳು ಕೂಡಾ ಸಮಾವೇಶದಲ್ಲಿ ಭಾಗವಹಿಸಲಿವೆ. ಜೆಡಿಯು ಆಯೋಜಿಸಿದ ಪಾಟ್ನಾ ಸಮಾವೇಶದಲ್ಲಿ ಕಾಂಗ್ರೆಸ್, ಡಿಎಂಕೆ, ತೃಣಮೂಲ ಕಾಂಗ್ರೆಸ್, ಆರ್‌ಎಲ್‌ಡಿ, ಆರ್‌ಜೆಡಿ, ಎನ್‌ ಸಿಪಿ, ಆಪ್, ಸಿಪಿಎಂ, ಸಿಪಿಐ, ಸಿಪಿಎಂಎಲ್(ಎಲ್), ಸಮಾಜವಾದಿ ಪಕ್ಷ, ನ್ಯಾಶನಲ್ ಕಾನರೆನ್ಸ್, ಪಿಡಿಪಿ, ಶಿವಸೇನಾ, (ಯುಬಿಟಿ) ಹಾಗೂ ಜೆಎಂಎಂ ಪಕ್ಷಗಳು ಭಾಗವಹಿಸಿದ್ದವು.

ಇದನ್ನೂ ಓದಿ: ಬಿಜೆಪಿ ಸೋಲಿಸಲು ವಿಪಕ್ಷಗಳ ಒಗ್ಗಟ್ಟು: ಬಿಹಾರದಲ್ಲಿ ಸೇರಿದ 6 ಸಿಎಂಗಳು, 18 ಪ್ರತಿ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...