Homeಮುಖಪುಟಅದಾನಿ ವಂಚನೆ ಕುರಿತ ತನಿಖೆಗೆ ಪ್ರತಿಪಕ್ಷಗಳ ಪಟ್ಟು: ಸಂಸತ್ತಿನಲ್ಲಿ ಪ್ರತಿಭಟನೆ

ಅದಾನಿ ವಂಚನೆ ಕುರಿತ ತನಿಖೆಗೆ ಪ್ರತಿಪಕ್ಷಗಳ ಪಟ್ಟು: ಸಂಸತ್ತಿನಲ್ಲಿ ಪ್ರತಿಭಟನೆ

- Advertisement -
- Advertisement -

ಅದಾನಿ ಗ್ರೂಪ್‌ನಿಂದ ದೊಡ್ಡ ಪ್ರಮಾಣದ ಕಾರ್ಪೊರೇಟ್ ವಂಚನೆ ನಡೆದಿದೆ ಎಂಬ ಆರೋಪ ಬಂದಿರುವ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಿ ಶುಕ್ರವಾರ ಸಂಸತ್ತಿನಲ್ಲಿ ಸತತ ಎರಡನೇ ದಿನವೂ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದವು.

ಗದ್ದಲದಿಂದಾಗಿ ಲೋಕಸಭೆ ಮತ್ತು ರಾಜ್ಯಸಭೆಯನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಯಿತು. ಇದಕ್ಕೂ ಮುನ್ನ ಶುಕ್ರವಾರ 16 ವಿರೋಧ ಪಕ್ಷಗಳ ನಾಯಕರು ಕಾಂಗ್ರೆಸ್ ಮುಖ್ಯಸ್ಥರಾದ ಮಲ್ಲಿಕಾರ್ಜುನ ಖರ್ಗೆಯವರ ಚೇಂಬರ್‌ನಲ್ಲಿ ಸಭೆ ನಡೆಸಿದ್ದರು.

ಸರ್ಕಾರಿ ಸ್ವಾಮ್ಯದ ಜೀವ ವಿಮಾ ನಿಗಮ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆಗಳು ಅದಾನಿ ಸಂಸ್ಥೆಯ ಜೊತೆಯಲ್ಲಿ ಹೂಡಿಕೆ ಮಾಡಿರುವುದರಿಂದ ಸಾಮಾನ್ಯ ನಾಗರಿಕರ ಹಣ ಕಳೆದುಹೋಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. “ಈ ಕುರಿತು ಸಂಪೂರ್ಣ ತನಿಖೆಯಾಗಬೇಕೆಂದು ವಿರೋಧ ಪಕ್ಷಗಳ ಒಕ್ಕೂಟವು ಒತ್ತಾಯಿಸುತ್ತವೆ” ಎಂದು ಕಾಂಗ್ರೆಸ್‌ ಟ್ವೀಟ್ ಮಾಡಿದೆ.

ದಶಕಗಳ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಲೆಕ್ಕಪತ್ರ ವಂಚನೆಯಲ್ಲಿ ಅದಾನಿ ಗ್ರೂಪ್ ತೊಡಗಿದೆ ಎಂದು ಅಮೆರಿಕ ಮೂಲದ ಕಂಪನಿ ಹಿಂಡೆನ್‌ಬರ್ಗ್ ರಿಸರ್ಚ್‌ ಆರೋಪ ಮಾಡಿದೆ. ಈ ಕುರಿತು ಜಂಟಿ ಸಂಸದೀಯ ಸಮಿತಿ ಅಥವಾ ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯಿಂದ ತನಿಖೆ ನಡೆಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿವೆ.

ಶುಕ್ರವಾರ ಲೋಕಸಭೆಯ ಕಲಾಪ ಆರಂಭವಾದ ಕೂಡಲೇ ವಿರೋಧ ಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗಿದರು. ಗೌತಮ್ ಅದಾನಿ ಗ್ರೂಪಿನ ವ್ಯವಹಾರ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಚರ್ಚೆಯಲ್ಲಿ ಪಾಲ್ಗೊಳ್ಳುವಂತೆ ಸ್ಪೀಕರ್ ಓಂ ಬಿರ್ಲಾ ಅವರು ಸಂಸದರಿಗೆ ಸೂಚಿಸಿದರು ಎಂದು ಪಿಟಿಐ ವರದಿ ಮಾಡಿದೆ. ಪ್ರತಿಪಕ್ಷಗಳು ಈ ಬಗ್ಗೆ ಸೂಕ್ತ ಸೂಚನೆ ನೀಡಿದರೆ ಚರ್ಚೆಗೆ ಸಾಕಷ್ಟು ಕಾಲಾವಕಾಶ ನೀಡಲು ಸಿದ್ಧ ಎಂದಿದ್ದಾರೆ.

ಆದಾಗ್ಯೂ, ಪ್ರತಿಪಕ್ಷಗಳು ಘೋಷಣೆಗಳನ್ನು ಮುಂದುವರೆಸಿದವು, ಇದರಿಂದಾಗಿ ಬಿರ್ಲಾ ಅವರು ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಅದಾನಿ ಗ್ರೂಪ್‌ನ ಬಿಕ್ಕಟ್ಟಿನ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳ ಸಂಸದರು ಸಲ್ಲಿಸಿದ್ದ 15 ಮುಂದೂಡಿಕೆ ಸೂಚನೆಗಳನ್ನು ರಾಜ್ಯಸಭೆಯಲ್ಲಿ ಸಭಾಪತಿ ಜಗದೀಪ್ ಧಂಖರ್ ತಿರಸ್ಕರಿಸಿದ್ದಾರೆ. “ನಿಯಮ 267 ರ ಅವಶ್ಯಕತೆಗಳನ್ನು ಪೂರೈಸದ ಕಾರಣ ಪ್ರತಿಪಕ್ಷಗಳು ಹೇಳಿದ್ದನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಪಿಟಿಐಗೆ ಅವರು ತಿಳಿಸಿದ್ದಾರೆ.

ಎಲ್‌ಐಸಿ, ಎಸ್‌ಬಿಎಂ ಮುಂದೆ ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜು

ಫೆಬ್ರವರಿ 6 ರಂದು ಜೀವ ವಿಮಾ ನಿಗಮ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಚೇರಿಗಳ ಮುಂದೆ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಕಾಂಗ್ರೆಸ್ ಪಕ್ಷದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಗುರುವಾರ ತಿಳಿಸಿದ್ದಾರೆ.

“ಎಲ್‌ಐಸಿಯು ಅದಾನಿ ಗ್ರೂಪ್‌ನಲ್ಲಿ 36 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆ ಮಾಡಿದೆ ಮತ್ತು ಭಾರತೀಯ ಬ್ಯಾಂಕ್‌ಗಳು ಅದಾನಿಯಲ್ಲಿ ಸುಮಾರು 80 ಸಾವಿರ ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಿವೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...