Homeಕರ್ನಾಟಕವಿಧಾನಸಭೆಯಲ್ಲಿ 'ಜನಸಂದಣಿ ನಿಯಂತ್ರಣ ವಿಧೇಯಕ' ಮಂಡನೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ

ವಿಧಾನಸಭೆಯಲ್ಲಿ ‘ಜನಸಂದಣಿ ನಿಯಂತ್ರಣ ವಿಧೇಯಕ’ ಮಂಡನೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ

- Advertisement -
- Advertisement -

ಭಾರೀ ದಂಡ ಮತ್ತು ಜೈಲು ಶಿಕ್ಷೆ ವಿಧಿಸಬಹುದಾದ ನಿಬಂಧನೆಗಳನ್ನು ಹೊಂದಿರುವ ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮಗಳು ಮತ್ತು ಸಭೆ ನಡೆಯುವ ಸ್ಥಳಗಳಲ್ಲಿ ಜನಸಂದಣಿಯನ್ನು ನಿರ್ವಹಿಸುವುದು) ವಿಧೇಯಕ ವಿಧಾನಸಭೆಯಲ್ಲಿ ಮಂಡನೆಯಾಗಿದೆ.

ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿ ದುರಂತದಿಂದ ಎಚ್ಚೆತ್ತ ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಮಸೂದೆಯನ್ನು ರೂಪಿಸಿದೆ.

ಪ್ರಸ್ತಾವಿತ ಕಾನೂನು ಪ್ರತಿಭಟನೆಗಳನ್ನು ಮೊಟಕುಗೊಳಿಸಬಹುದು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲೆ ಪರಿಣಾಮ ಬೀರಬಹುದು ಎಂದು ವಿರೋಧ ಪಕ್ಷದ ಶಾಸಕರು ಕಳವಳ ವ್ಯಕ್ತಪಡಿಸಿದ ನಂತರ ಮಸೂದೆಯನ್ನು ಸದನ ಸಮಿತಿಗೆ ಕಳುಹಿಸಲು ಸರ್ಕಾರ ಒಪ್ಪಿಕೊಂಡಿದೆ.

ಮಸೂದೆ ಮಂಡಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, “ಚಿನ್ನಸ್ವಾಮಿ ಕ್ರೀಡಾಂಗಣದ ದುರಂತವು ನಮಗೆ ‘ಎಚ್ಚರಿಕೆಯ ಕರೆ ಗಂಟೆಯಾಗಿದೆ’. ಪ್ರಸ್ತಾವಿತ ಮಸೂದೆ ಪ್ರಕಾರ ಮುಂದೆ ಇಂತಹ ದುರಂತಗಳು ಸಂಭವಿಸಿದರೆ ಕಾರ್ಯಕ್ರಮ ಆಯೋಜಕರು ಹೊಣೆಗಾರಾಗುತ್ತಾರೆ ಎಂದರು.

ಮಸೂದೆಯು ಕನಿಷ್ಠ 7,000 ಜನರು ಸೇರುವ ಯಾವುದೇ ಕಾರ್ಯಕ್ರಮಕ್ಕೆ ಪೊಲೀಸ್ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸುತ್ತದೆ. ಆಯೋಜಕರು ಉದ್ದೇಶಿತ ಕಾರ್ಯಕ್ರಮಕ್ಕೆ 10 ದಿನಗಳ ಮೊದಲು ಅನುಮತಿಗಾಗಿ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮ ಸಂಘಟಕರು 1 ಕೋಟಿ ರೂಪಾಯಿಗಳ ಪರಿಹಾರ ಬಾಂಡ್ ಸಲ್ಲಿಸಬೇಕು ಎಂದು ವರದಿಗಳು ಹೇಳಿವೆ.

ಅನುಮತಿಯಿಲ್ಲದೆ ಕಾರ್ಯಕ್ರಮಗಳನ್ನು ಆಯೋಜಿಸುವವರಿಗೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಕೋಟಿ ರೂಪಾಯಿ ದಂಡ ವಿಧಿಸಲಾಗುತ್ತದೆ. ಯಾವುದೇ ಘಟನೆಯಲ್ಲಿ ಗಾಯಗಳಾದರೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಸಾವು ನೋವುಗಳಿಗೆ 10 ವರ್ಷ ಅಥವಾ ಜೀವಾವಧಿ ಶಿಕ್ಷೆ ವಿಧಿಸಬಹುದು. ಕಾರ್ಯಕ್ರಮದಲ್ಲಿ ಗಲಭೆ ಉಂಟುಮಾಡಿದರೆ ಅಥವಾ ಶಾಂತಿ ಕದಡಿದರೆ ಮೂರು ವರ್ಷ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಲಾಗುತ್ತದೆ ಎಂದು ವರದಿಗಳು ವಿವರಿಸಿವೆ.  

ಖಾಸಗಿ ಜಾಗದಲ್ಲಿ ನಡೆಸುವ ಮದುವೆಗಳಂತಹ ಕೌಟುಂಬಿಕ ಕಾರ್ಯಕ್ರಮಗಳಿಗೆ ಮಸೂದೆಯ ನಿಬಂಧನೆಗಳ ಅಡಿಯಲ್ಲಿ ವಿನಾಯಿತಿ ಇದೆ.

“ಇತ್ತೀಚೆಗೆ, ಯಾವುದೇ ಕಾನೂನು ಚೌಕಟ್ಟು ಇಲ್ಲದೆ ಜನದಟ್ಟಣೆಯ ಕಾರ್ಯಕ್ರಮಗಳು ನಡೆಯುವುದನ್ನು ನಾವು ನೋಡುತ್ತಿದ್ದೇವೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಮಯದಲ್ಲಿ ರೈತರ ಮೇಲೆ ಲಾಠಿ ಪ್ರಹಾರ ಮಾಡಲಾಯಿತು. ಅಂತಹ ಸಂದರ್ಭಗಳಿಗೆ ಕಾರಣವೇನು? ನಿಯಮಗಳು ಇತ್ತೇ? ಅನುಮತಿ ಪಡೆಯಲಾಗಿದೆಯೇ? ಅಂತಹ ಹಲವಾರು ಪ್ರಶ್ನೆಗಳಿವೆ. ಪ್ರತಿಭಟಿಸುವುದು ಒಂದು ಹಕ್ಕು. ಆದರೆ ಅದು ಸಾರ್ವಜನಿಕ ಜೀವನವನ್ನು ಅನಾನುಕೂಲಗೊಳಿಸಬಾರದು” ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.

ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಈ ಮಸೂದೆಯನ್ನು ‘ಅಂತ್ಯಂತ ಕಠಿಣ’ ಎಂದು ಹೇಳಿವೆ. 

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಮಸೂದೆಯು ಪೊಲೀಸರಿಗೆ ‘ಆಯುಧ’ವಾಗಬಾರದು ಎಂದು ಹೇಳಿದರು. ಎಲ್ಲಾ ರಾಜಕೀಯ ಪಕ್ಷಗಳು ಕಾರ್ಯಕ್ರಮಗಳನ್ನು ನಡೆಸುತ್ತವೆ. ಏನಾದರೂ ತಪ್ಪಾದಲ್ಲಿ, ಆ ಪಕ್ಷದ ಗತಿಯೇನು? ಇದರ ಬಗ್ಗೆ ಯೋಚಿಸಬೇಕು ಎಂದರು.

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಈ ಮಸೂದೆಯು ಪ್ರತಿಭಟನೆಗಳನ್ನು ಕೊಲ್ಲುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ಇದು ಬ್ರಿಟಿಷ್ ಯುಗದ ಕಾನೂನಿಗಿಂತ ಹೆಚ್ಚು ಕ್ರೂರವಾಗಿದೆ ಎಂದ ಯತ್ನಾಳ್, ಒಂದು ಸಮುದಾಯವು ದಿನಕ್ಕೆ ಐದು ಬಾರಿ ಕೂಗಲು ಯಾವುದೇ ಅನುಮತಿಯ ಅಗತ್ಯವಿಲ್ಲ. ಗಣೇಶ ಹಬ್ಬದ ಸಮಯದಲ್ಲಿ ಧ್ವನಿವರ್ಧಕ ಬಳಸುವ ವಿಷಯಕ್ಕೆ ಬಂದಾಗ ಸಮಸ್ಯೆ ಸೃಷ್ಟಿಯಾಗುತ್ತದೆ. ಈ ಮಸೂದೆಯು ಒಂದು ಧರ್ಮದ ಕಾರ್ಯಕ್ರಮಗಳನ್ನು ಗುರಿಯಾಗಿಸಿಕೊಂಡು ಪ್ರತಿಭಟನೆಗಳನ್ನು ಮೊಟಕುಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕೆಲವೊಮ್ಮೆ ಪ್ರತಿಭಟನೆಗಳನ್ನು ರಾತ್ರೋರಾತ್ರಿ ಆಯೋಜಿಸಲಾಗುತ್ತದೆ. ಹೀಗಿರುವಾಗ 10 ದಿನಗಳ ಮೊದಲೇ ಅನುಮತಿಗಾಗಿ ಅರ್ಜಿ ಸಲ್ಲಿಸುವುದು ಹೇಗೆ? ಈ ಮೂಲಕ ಸ್ಥಳೀಯ ಪೊಲೀಸ್ ಠಾಣೆಗಳು ಪ್ರತಿಭಟನೆಗಳನ್ನು ಹತ್ತಿಕ್ಕುತ್ತದೆ ಎಂದು ಸುನಿಲ್ ಕುಮಾರ್ ಹೇಳಿದರು. ಜಾತ್ರೆಗಳು ಮತ್ತು ಹಬ್ಬಗಳ ಕಥೆಯೇನು? ಒಂದು ದೇವಾಲಯವು 1 ಕೋಟಿ ರೂ.ಗಳ ಬಾಂಡ್ ಹೇಗೆ ನೀಡುತ್ತದೆ? ಸರ್ಕಾರಿ ಕಾರ್ಯಕ್ರಮದಲ್ಲಿ ಏನಾದರೂ ತಪ್ಪಾದಲ್ಲಿ ಯಾರು ಹೊಣೆಗಾರರಾಗುತ್ತಾರೆ? ಎಂದು ಪ್ರಶ್ನಿಸಿದರು.

ಮೈಲಾಪುರ ಜಾತ್ರೆಯು ಒಂದು ಲಕ್ಷ ಜನರನ್ನು ಆಕರ್ಷಿಸುತ್ತದೆ ಎಂದು ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಹೇಳಿದರು. ನಮ್ಮಲ್ಲಿ 50,000-60,000 ಜನರು ಒಂದು ವಾರದವರೆಗೆ ಉಳಿಯುವ ಅಬ್ಬೆತುಮ್ಕೂರು ಜಾತ್ರೆ ಇದೆ. ಇದು ಬ್ರಿಟಿಷ್ ಕಾನೂನಿನಂತಿದೆ ಎಂದು ಅವರು ಹೇಳಿದರು.

ಧಾರ್ಮಿಕ ಕಾರ್ಯಕ್ರಮದ ಸಮಯದಲ್ಲಿ ‘ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಸಮಸ್ಯೆಗಳನ್ನು ಸೃಷ್ಟಿಸಿದರೆ’ ದೇವಾಲಯವನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ? ಎಂದು ಬಿಜೆಪಿಯ ಉಮಾನಾಥ್ ಕೋಟ್ಯಾನ್ ಸರ್ಕಾರವನ್ನು ಪ್ರಶ್ನಿಸಿದರು.

ಈ ವೇಳೆ, 10 ದಿನಗಳ ಷರತ್ತನ್ನು ಐದಕ್ಕೆ ಇಳಿಸಲಾಗುವುದು ಎಂದು ಘೋಷಿಸುವ ಮೂಲಕ ಗೃಹ ಸಚಿವ ಪರಮೇಶ್ವರ್ ಕಳವಳಗಳನ್ನು ಕಡಿಮೆ ಮಾಡಲು ಯತ್ನಿಸಿದರು. ಧಾರ್ಮಿಕ ಕಾರ್ಯಕ್ರಮಗಳಿಗೆ ಪರಿಹಾರ ಬಾಂಡ್ ಅನ್ನು ಕೂಡ ಅರ್ಧಕ್ಕೆ ಇಳಿಸುತ್ತೇವೆ ಎಂದು ಹೇಳಿದರು. ಧಾರ್ಮಿಕ ಕಾರ್ಯಕ್ರಮಗಳು, ಸಾಮೂಹಿಕ ವಿವಾಹಗಳು ಮತ್ತು ಸರ್ಕಾರಿ ಕಾರ್ಯಕ್ರಮಗಳಿಗೆ ವಿನಾಯಿತಿ ನೀಡಲಾಗುವುದು ಎಂದರು.

ವಿರೋಧ ಪಕ್ಷಕ್ಕೆ ಇದು ಮನವರಿಕೆಯಾಗಿಲ್ಲ. ವಾಣಿಜ್ಯ ಮತ್ತು ವಾಣಿಜ್ಯೇತರ ಕಾರ್ಯಕ್ರಮಗಳ ನಡುವೆ ವ್ಯತ್ಯಾಸವನ್ನು ಗುರುತಿಸಬೇಕು ಎಂದು ಆರ್. ಅಶೋಕ್ ಹೇಳಿದರು. ಕೊನೆಗೆ, ವಿರೋಧ ಪಕ್ಷದ ಬೇಡಿಕೆಗೆ ಮಣಿದ ಗೃಹ ಸಚಿವ ಪರಮೇಶ್ವರ್ ಮಸೂದೆಯನ್ನು ಸದನ ಸಮಿತಿಗೆ ಕಳುಹಿಸಲು ಒಪ್ಪಿಕೊಂಡರು.

ಲೋಕಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ಮಸೂದೆಗೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...