Homeಕರ್ನಾಟಕವಿಧಾನಸಭೆಯಲ್ಲಿ 'ಜನಸಂದಣಿ ನಿಯಂತ್ರಣ ವಿಧೇಯಕ' ಮಂಡನೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ

ವಿಧಾನಸಭೆಯಲ್ಲಿ ‘ಜನಸಂದಣಿ ನಿಯಂತ್ರಣ ವಿಧೇಯಕ’ ಮಂಡನೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ

- Advertisement -
- Advertisement -

ಭಾರೀ ದಂಡ ಮತ್ತು ಜೈಲು ಶಿಕ್ಷೆ ವಿಧಿಸಬಹುದಾದ ನಿಬಂಧನೆಗಳನ್ನು ಹೊಂದಿರುವ ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮಗಳು ಮತ್ತು ಸಭೆ ನಡೆಯುವ ಸ್ಥಳಗಳಲ್ಲಿ ಜನಸಂದಣಿಯನ್ನು ನಿರ್ವಹಿಸುವುದು) ವಿಧೇಯಕ ವಿಧಾನಸಭೆಯಲ್ಲಿ ಮಂಡನೆಯಾಗಿದೆ.

ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿ ದುರಂತದಿಂದ ಎಚ್ಚೆತ್ತ ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಮಸೂದೆಯನ್ನು ರೂಪಿಸಿದೆ.

ಪ್ರಸ್ತಾವಿತ ಕಾನೂನು ಪ್ರತಿಭಟನೆಗಳನ್ನು ಮೊಟಕುಗೊಳಿಸಬಹುದು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲೆ ಪರಿಣಾಮ ಬೀರಬಹುದು ಎಂದು ವಿರೋಧ ಪಕ್ಷದ ಶಾಸಕರು ಕಳವಳ ವ್ಯಕ್ತಪಡಿಸಿದ ನಂತರ ಮಸೂದೆಯನ್ನು ಸದನ ಸಮಿತಿಗೆ ಕಳುಹಿಸಲು ಸರ್ಕಾರ ಒಪ್ಪಿಕೊಂಡಿದೆ.

ಮಸೂದೆ ಮಂಡಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, “ಚಿನ್ನಸ್ವಾಮಿ ಕ್ರೀಡಾಂಗಣದ ದುರಂತವು ನಮಗೆ ‘ಎಚ್ಚರಿಕೆಯ ಕರೆ ಗಂಟೆಯಾಗಿದೆ’. ಪ್ರಸ್ತಾವಿತ ಮಸೂದೆ ಪ್ರಕಾರ ಮುಂದೆ ಇಂತಹ ದುರಂತಗಳು ಸಂಭವಿಸಿದರೆ ಕಾರ್ಯಕ್ರಮ ಆಯೋಜಕರು ಹೊಣೆಗಾರಾಗುತ್ತಾರೆ ಎಂದರು.

ಮಸೂದೆಯು ಕನಿಷ್ಠ 7,000 ಜನರು ಸೇರುವ ಯಾವುದೇ ಕಾರ್ಯಕ್ರಮಕ್ಕೆ ಪೊಲೀಸ್ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸುತ್ತದೆ. ಆಯೋಜಕರು ಉದ್ದೇಶಿತ ಕಾರ್ಯಕ್ರಮಕ್ಕೆ 10 ದಿನಗಳ ಮೊದಲು ಅನುಮತಿಗಾಗಿ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮ ಸಂಘಟಕರು 1 ಕೋಟಿ ರೂಪಾಯಿಗಳ ಪರಿಹಾರ ಬಾಂಡ್ ಸಲ್ಲಿಸಬೇಕು ಎಂದು ವರದಿಗಳು ಹೇಳಿವೆ.

ಅನುಮತಿಯಿಲ್ಲದೆ ಕಾರ್ಯಕ್ರಮಗಳನ್ನು ಆಯೋಜಿಸುವವರಿಗೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಕೋಟಿ ರೂಪಾಯಿ ದಂಡ ವಿಧಿಸಲಾಗುತ್ತದೆ. ಯಾವುದೇ ಘಟನೆಯಲ್ಲಿ ಗಾಯಗಳಾದರೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಸಾವು ನೋವುಗಳಿಗೆ 10 ವರ್ಷ ಅಥವಾ ಜೀವಾವಧಿ ಶಿಕ್ಷೆ ವಿಧಿಸಬಹುದು. ಕಾರ್ಯಕ್ರಮದಲ್ಲಿ ಗಲಭೆ ಉಂಟುಮಾಡಿದರೆ ಅಥವಾ ಶಾಂತಿ ಕದಡಿದರೆ ಮೂರು ವರ್ಷ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಲಾಗುತ್ತದೆ ಎಂದು ವರದಿಗಳು ವಿವರಿಸಿವೆ.  

ಖಾಸಗಿ ಜಾಗದಲ್ಲಿ ನಡೆಸುವ ಮದುವೆಗಳಂತಹ ಕೌಟುಂಬಿಕ ಕಾರ್ಯಕ್ರಮಗಳಿಗೆ ಮಸೂದೆಯ ನಿಬಂಧನೆಗಳ ಅಡಿಯಲ್ಲಿ ವಿನಾಯಿತಿ ಇದೆ.

“ಇತ್ತೀಚೆಗೆ, ಯಾವುದೇ ಕಾನೂನು ಚೌಕಟ್ಟು ಇಲ್ಲದೆ ಜನದಟ್ಟಣೆಯ ಕಾರ್ಯಕ್ರಮಗಳು ನಡೆಯುವುದನ್ನು ನಾವು ನೋಡುತ್ತಿದ್ದೇವೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಮಯದಲ್ಲಿ ರೈತರ ಮೇಲೆ ಲಾಠಿ ಪ್ರಹಾರ ಮಾಡಲಾಯಿತು. ಅಂತಹ ಸಂದರ್ಭಗಳಿಗೆ ಕಾರಣವೇನು? ನಿಯಮಗಳು ಇತ್ತೇ? ಅನುಮತಿ ಪಡೆಯಲಾಗಿದೆಯೇ? ಅಂತಹ ಹಲವಾರು ಪ್ರಶ್ನೆಗಳಿವೆ. ಪ್ರತಿಭಟಿಸುವುದು ಒಂದು ಹಕ್ಕು. ಆದರೆ ಅದು ಸಾರ್ವಜನಿಕ ಜೀವನವನ್ನು ಅನಾನುಕೂಲಗೊಳಿಸಬಾರದು” ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.

ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಈ ಮಸೂದೆಯನ್ನು ‘ಅಂತ್ಯಂತ ಕಠಿಣ’ ಎಂದು ಹೇಳಿವೆ. 

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಮಸೂದೆಯು ಪೊಲೀಸರಿಗೆ ‘ಆಯುಧ’ವಾಗಬಾರದು ಎಂದು ಹೇಳಿದರು. ಎಲ್ಲಾ ರಾಜಕೀಯ ಪಕ್ಷಗಳು ಕಾರ್ಯಕ್ರಮಗಳನ್ನು ನಡೆಸುತ್ತವೆ. ಏನಾದರೂ ತಪ್ಪಾದಲ್ಲಿ, ಆ ಪಕ್ಷದ ಗತಿಯೇನು? ಇದರ ಬಗ್ಗೆ ಯೋಚಿಸಬೇಕು ಎಂದರು.

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಈ ಮಸೂದೆಯು ಪ್ರತಿಭಟನೆಗಳನ್ನು ಕೊಲ್ಲುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ಇದು ಬ್ರಿಟಿಷ್ ಯುಗದ ಕಾನೂನಿಗಿಂತ ಹೆಚ್ಚು ಕ್ರೂರವಾಗಿದೆ ಎಂದ ಯತ್ನಾಳ್, ಒಂದು ಸಮುದಾಯವು ದಿನಕ್ಕೆ ಐದು ಬಾರಿ ಕೂಗಲು ಯಾವುದೇ ಅನುಮತಿಯ ಅಗತ್ಯವಿಲ್ಲ. ಗಣೇಶ ಹಬ್ಬದ ಸಮಯದಲ್ಲಿ ಧ್ವನಿವರ್ಧಕ ಬಳಸುವ ವಿಷಯಕ್ಕೆ ಬಂದಾಗ ಸಮಸ್ಯೆ ಸೃಷ್ಟಿಯಾಗುತ್ತದೆ. ಈ ಮಸೂದೆಯು ಒಂದು ಧರ್ಮದ ಕಾರ್ಯಕ್ರಮಗಳನ್ನು ಗುರಿಯಾಗಿಸಿಕೊಂಡು ಪ್ರತಿಭಟನೆಗಳನ್ನು ಮೊಟಕುಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕೆಲವೊಮ್ಮೆ ಪ್ರತಿಭಟನೆಗಳನ್ನು ರಾತ್ರೋರಾತ್ರಿ ಆಯೋಜಿಸಲಾಗುತ್ತದೆ. ಹೀಗಿರುವಾಗ 10 ದಿನಗಳ ಮೊದಲೇ ಅನುಮತಿಗಾಗಿ ಅರ್ಜಿ ಸಲ್ಲಿಸುವುದು ಹೇಗೆ? ಈ ಮೂಲಕ ಸ್ಥಳೀಯ ಪೊಲೀಸ್ ಠಾಣೆಗಳು ಪ್ರತಿಭಟನೆಗಳನ್ನು ಹತ್ತಿಕ್ಕುತ್ತದೆ ಎಂದು ಸುನಿಲ್ ಕುಮಾರ್ ಹೇಳಿದರು. ಜಾತ್ರೆಗಳು ಮತ್ತು ಹಬ್ಬಗಳ ಕಥೆಯೇನು? ಒಂದು ದೇವಾಲಯವು 1 ಕೋಟಿ ರೂ.ಗಳ ಬಾಂಡ್ ಹೇಗೆ ನೀಡುತ್ತದೆ? ಸರ್ಕಾರಿ ಕಾರ್ಯಕ್ರಮದಲ್ಲಿ ಏನಾದರೂ ತಪ್ಪಾದಲ್ಲಿ ಯಾರು ಹೊಣೆಗಾರರಾಗುತ್ತಾರೆ? ಎಂದು ಪ್ರಶ್ನಿಸಿದರು.

ಮೈಲಾಪುರ ಜಾತ್ರೆಯು ಒಂದು ಲಕ್ಷ ಜನರನ್ನು ಆಕರ್ಷಿಸುತ್ತದೆ ಎಂದು ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಹೇಳಿದರು. ನಮ್ಮಲ್ಲಿ 50,000-60,000 ಜನರು ಒಂದು ವಾರದವರೆಗೆ ಉಳಿಯುವ ಅಬ್ಬೆತುಮ್ಕೂರು ಜಾತ್ರೆ ಇದೆ. ಇದು ಬ್ರಿಟಿಷ್ ಕಾನೂನಿನಂತಿದೆ ಎಂದು ಅವರು ಹೇಳಿದರು.

ಧಾರ್ಮಿಕ ಕಾರ್ಯಕ್ರಮದ ಸಮಯದಲ್ಲಿ ‘ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಸಮಸ್ಯೆಗಳನ್ನು ಸೃಷ್ಟಿಸಿದರೆ’ ದೇವಾಲಯವನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ? ಎಂದು ಬಿಜೆಪಿಯ ಉಮಾನಾಥ್ ಕೋಟ್ಯಾನ್ ಸರ್ಕಾರವನ್ನು ಪ್ರಶ್ನಿಸಿದರು.

ಈ ವೇಳೆ, 10 ದಿನಗಳ ಷರತ್ತನ್ನು ಐದಕ್ಕೆ ಇಳಿಸಲಾಗುವುದು ಎಂದು ಘೋಷಿಸುವ ಮೂಲಕ ಗೃಹ ಸಚಿವ ಪರಮೇಶ್ವರ್ ಕಳವಳಗಳನ್ನು ಕಡಿಮೆ ಮಾಡಲು ಯತ್ನಿಸಿದರು. ಧಾರ್ಮಿಕ ಕಾರ್ಯಕ್ರಮಗಳಿಗೆ ಪರಿಹಾರ ಬಾಂಡ್ ಅನ್ನು ಕೂಡ ಅರ್ಧಕ್ಕೆ ಇಳಿಸುತ್ತೇವೆ ಎಂದು ಹೇಳಿದರು. ಧಾರ್ಮಿಕ ಕಾರ್ಯಕ್ರಮಗಳು, ಸಾಮೂಹಿಕ ವಿವಾಹಗಳು ಮತ್ತು ಸರ್ಕಾರಿ ಕಾರ್ಯಕ್ರಮಗಳಿಗೆ ವಿನಾಯಿತಿ ನೀಡಲಾಗುವುದು ಎಂದರು.

ವಿರೋಧ ಪಕ್ಷಕ್ಕೆ ಇದು ಮನವರಿಕೆಯಾಗಿಲ್ಲ. ವಾಣಿಜ್ಯ ಮತ್ತು ವಾಣಿಜ್ಯೇತರ ಕಾರ್ಯಕ್ರಮಗಳ ನಡುವೆ ವ್ಯತ್ಯಾಸವನ್ನು ಗುರುತಿಸಬೇಕು ಎಂದು ಆರ್. ಅಶೋಕ್ ಹೇಳಿದರು. ಕೊನೆಗೆ, ವಿರೋಧ ಪಕ್ಷದ ಬೇಡಿಕೆಗೆ ಮಣಿದ ಗೃಹ ಸಚಿವ ಪರಮೇಶ್ವರ್ ಮಸೂದೆಯನ್ನು ಸದನ ಸಮಿತಿಗೆ ಕಳುಹಿಸಲು ಒಪ್ಪಿಕೊಂಡರು.

ಲೋಕಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ಮಸೂದೆಗೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...