Homeಕರ್ನಾಟಕವಿಧಾನಸಭೆಯಲ್ಲಿ 'ಜನಸಂದಣಿ ನಿಯಂತ್ರಣ ವಿಧೇಯಕ' ಮಂಡನೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ

ವಿಧಾನಸಭೆಯಲ್ಲಿ ‘ಜನಸಂದಣಿ ನಿಯಂತ್ರಣ ವಿಧೇಯಕ’ ಮಂಡನೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ

- Advertisement -
- Advertisement -

ಭಾರೀ ದಂಡ ಮತ್ತು ಜೈಲು ಶಿಕ್ಷೆ ವಿಧಿಸಬಹುದಾದ ನಿಬಂಧನೆಗಳನ್ನು ಹೊಂದಿರುವ ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮಗಳು ಮತ್ತು ಸಭೆ ನಡೆಯುವ ಸ್ಥಳಗಳಲ್ಲಿ ಜನಸಂದಣಿಯನ್ನು ನಿರ್ವಹಿಸುವುದು) ವಿಧೇಯಕ ವಿಧಾನಸಭೆಯಲ್ಲಿ ಮಂಡನೆಯಾಗಿದೆ.

ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿ ದುರಂತದಿಂದ ಎಚ್ಚೆತ್ತ ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಮಸೂದೆಯನ್ನು ರೂಪಿಸಿದೆ.

ಪ್ರಸ್ತಾವಿತ ಕಾನೂನು ಪ್ರತಿಭಟನೆಗಳನ್ನು ಮೊಟಕುಗೊಳಿಸಬಹುದು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲೆ ಪರಿಣಾಮ ಬೀರಬಹುದು ಎಂದು ವಿರೋಧ ಪಕ್ಷದ ಶಾಸಕರು ಕಳವಳ ವ್ಯಕ್ತಪಡಿಸಿದ ನಂತರ ಮಸೂದೆಯನ್ನು ಸದನ ಸಮಿತಿಗೆ ಕಳುಹಿಸಲು ಸರ್ಕಾರ ಒಪ್ಪಿಕೊಂಡಿದೆ.

ಮಸೂದೆ ಮಂಡಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, “ಚಿನ್ನಸ್ವಾಮಿ ಕ್ರೀಡಾಂಗಣದ ದುರಂತವು ನಮಗೆ ‘ಎಚ್ಚರಿಕೆಯ ಕರೆ ಗಂಟೆಯಾಗಿದೆ’. ಪ್ರಸ್ತಾವಿತ ಮಸೂದೆ ಪ್ರಕಾರ ಮುಂದೆ ಇಂತಹ ದುರಂತಗಳು ಸಂಭವಿಸಿದರೆ ಕಾರ್ಯಕ್ರಮ ಆಯೋಜಕರು ಹೊಣೆಗಾರಾಗುತ್ತಾರೆ ಎಂದರು.

ಮಸೂದೆಯು ಕನಿಷ್ಠ 7,000 ಜನರು ಸೇರುವ ಯಾವುದೇ ಕಾರ್ಯಕ್ರಮಕ್ಕೆ ಪೊಲೀಸ್ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸುತ್ತದೆ. ಆಯೋಜಕರು ಉದ್ದೇಶಿತ ಕಾರ್ಯಕ್ರಮಕ್ಕೆ 10 ದಿನಗಳ ಮೊದಲು ಅನುಮತಿಗಾಗಿ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮ ಸಂಘಟಕರು 1 ಕೋಟಿ ರೂಪಾಯಿಗಳ ಪರಿಹಾರ ಬಾಂಡ್ ಸಲ್ಲಿಸಬೇಕು ಎಂದು ವರದಿಗಳು ಹೇಳಿವೆ.

ಅನುಮತಿಯಿಲ್ಲದೆ ಕಾರ್ಯಕ್ರಮಗಳನ್ನು ಆಯೋಜಿಸುವವರಿಗೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಕೋಟಿ ರೂಪಾಯಿ ದಂಡ ವಿಧಿಸಲಾಗುತ್ತದೆ. ಯಾವುದೇ ಘಟನೆಯಲ್ಲಿ ಗಾಯಗಳಾದರೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಸಾವು ನೋವುಗಳಿಗೆ 10 ವರ್ಷ ಅಥವಾ ಜೀವಾವಧಿ ಶಿಕ್ಷೆ ವಿಧಿಸಬಹುದು. ಕಾರ್ಯಕ್ರಮದಲ್ಲಿ ಗಲಭೆ ಉಂಟುಮಾಡಿದರೆ ಅಥವಾ ಶಾಂತಿ ಕದಡಿದರೆ ಮೂರು ವರ್ಷ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಲಾಗುತ್ತದೆ ಎಂದು ವರದಿಗಳು ವಿವರಿಸಿವೆ.  

ಖಾಸಗಿ ಜಾಗದಲ್ಲಿ ನಡೆಸುವ ಮದುವೆಗಳಂತಹ ಕೌಟುಂಬಿಕ ಕಾರ್ಯಕ್ರಮಗಳಿಗೆ ಮಸೂದೆಯ ನಿಬಂಧನೆಗಳ ಅಡಿಯಲ್ಲಿ ವಿನಾಯಿತಿ ಇದೆ.

“ಇತ್ತೀಚೆಗೆ, ಯಾವುದೇ ಕಾನೂನು ಚೌಕಟ್ಟು ಇಲ್ಲದೆ ಜನದಟ್ಟಣೆಯ ಕಾರ್ಯಕ್ರಮಗಳು ನಡೆಯುವುದನ್ನು ನಾವು ನೋಡುತ್ತಿದ್ದೇವೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಮಯದಲ್ಲಿ ರೈತರ ಮೇಲೆ ಲಾಠಿ ಪ್ರಹಾರ ಮಾಡಲಾಯಿತು. ಅಂತಹ ಸಂದರ್ಭಗಳಿಗೆ ಕಾರಣವೇನು? ನಿಯಮಗಳು ಇತ್ತೇ? ಅನುಮತಿ ಪಡೆಯಲಾಗಿದೆಯೇ? ಅಂತಹ ಹಲವಾರು ಪ್ರಶ್ನೆಗಳಿವೆ. ಪ್ರತಿಭಟಿಸುವುದು ಒಂದು ಹಕ್ಕು. ಆದರೆ ಅದು ಸಾರ್ವಜನಿಕ ಜೀವನವನ್ನು ಅನಾನುಕೂಲಗೊಳಿಸಬಾರದು” ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.

ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಈ ಮಸೂದೆಯನ್ನು ‘ಅಂತ್ಯಂತ ಕಠಿಣ’ ಎಂದು ಹೇಳಿವೆ. 

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಮಸೂದೆಯು ಪೊಲೀಸರಿಗೆ ‘ಆಯುಧ’ವಾಗಬಾರದು ಎಂದು ಹೇಳಿದರು. ಎಲ್ಲಾ ರಾಜಕೀಯ ಪಕ್ಷಗಳು ಕಾರ್ಯಕ್ರಮಗಳನ್ನು ನಡೆಸುತ್ತವೆ. ಏನಾದರೂ ತಪ್ಪಾದಲ್ಲಿ, ಆ ಪಕ್ಷದ ಗತಿಯೇನು? ಇದರ ಬಗ್ಗೆ ಯೋಚಿಸಬೇಕು ಎಂದರು.

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಈ ಮಸೂದೆಯು ಪ್ರತಿಭಟನೆಗಳನ್ನು ಕೊಲ್ಲುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ಇದು ಬ್ರಿಟಿಷ್ ಯುಗದ ಕಾನೂನಿಗಿಂತ ಹೆಚ್ಚು ಕ್ರೂರವಾಗಿದೆ ಎಂದ ಯತ್ನಾಳ್, ಒಂದು ಸಮುದಾಯವು ದಿನಕ್ಕೆ ಐದು ಬಾರಿ ಕೂಗಲು ಯಾವುದೇ ಅನುಮತಿಯ ಅಗತ್ಯವಿಲ್ಲ. ಗಣೇಶ ಹಬ್ಬದ ಸಮಯದಲ್ಲಿ ಧ್ವನಿವರ್ಧಕ ಬಳಸುವ ವಿಷಯಕ್ಕೆ ಬಂದಾಗ ಸಮಸ್ಯೆ ಸೃಷ್ಟಿಯಾಗುತ್ತದೆ. ಈ ಮಸೂದೆಯು ಒಂದು ಧರ್ಮದ ಕಾರ್ಯಕ್ರಮಗಳನ್ನು ಗುರಿಯಾಗಿಸಿಕೊಂಡು ಪ್ರತಿಭಟನೆಗಳನ್ನು ಮೊಟಕುಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕೆಲವೊಮ್ಮೆ ಪ್ರತಿಭಟನೆಗಳನ್ನು ರಾತ್ರೋರಾತ್ರಿ ಆಯೋಜಿಸಲಾಗುತ್ತದೆ. ಹೀಗಿರುವಾಗ 10 ದಿನಗಳ ಮೊದಲೇ ಅನುಮತಿಗಾಗಿ ಅರ್ಜಿ ಸಲ್ಲಿಸುವುದು ಹೇಗೆ? ಈ ಮೂಲಕ ಸ್ಥಳೀಯ ಪೊಲೀಸ್ ಠಾಣೆಗಳು ಪ್ರತಿಭಟನೆಗಳನ್ನು ಹತ್ತಿಕ್ಕುತ್ತದೆ ಎಂದು ಸುನಿಲ್ ಕುಮಾರ್ ಹೇಳಿದರು. ಜಾತ್ರೆಗಳು ಮತ್ತು ಹಬ್ಬಗಳ ಕಥೆಯೇನು? ಒಂದು ದೇವಾಲಯವು 1 ಕೋಟಿ ರೂ.ಗಳ ಬಾಂಡ್ ಹೇಗೆ ನೀಡುತ್ತದೆ? ಸರ್ಕಾರಿ ಕಾರ್ಯಕ್ರಮದಲ್ಲಿ ಏನಾದರೂ ತಪ್ಪಾದಲ್ಲಿ ಯಾರು ಹೊಣೆಗಾರರಾಗುತ್ತಾರೆ? ಎಂದು ಪ್ರಶ್ನಿಸಿದರು.

ಮೈಲಾಪುರ ಜಾತ್ರೆಯು ಒಂದು ಲಕ್ಷ ಜನರನ್ನು ಆಕರ್ಷಿಸುತ್ತದೆ ಎಂದು ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಹೇಳಿದರು. ನಮ್ಮಲ್ಲಿ 50,000-60,000 ಜನರು ಒಂದು ವಾರದವರೆಗೆ ಉಳಿಯುವ ಅಬ್ಬೆತುಮ್ಕೂರು ಜಾತ್ರೆ ಇದೆ. ಇದು ಬ್ರಿಟಿಷ್ ಕಾನೂನಿನಂತಿದೆ ಎಂದು ಅವರು ಹೇಳಿದರು.

ಧಾರ್ಮಿಕ ಕಾರ್ಯಕ್ರಮದ ಸಮಯದಲ್ಲಿ ‘ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಸಮಸ್ಯೆಗಳನ್ನು ಸೃಷ್ಟಿಸಿದರೆ’ ದೇವಾಲಯವನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ? ಎಂದು ಬಿಜೆಪಿಯ ಉಮಾನಾಥ್ ಕೋಟ್ಯಾನ್ ಸರ್ಕಾರವನ್ನು ಪ್ರಶ್ನಿಸಿದರು.

ಈ ವೇಳೆ, 10 ದಿನಗಳ ಷರತ್ತನ್ನು ಐದಕ್ಕೆ ಇಳಿಸಲಾಗುವುದು ಎಂದು ಘೋಷಿಸುವ ಮೂಲಕ ಗೃಹ ಸಚಿವ ಪರಮೇಶ್ವರ್ ಕಳವಳಗಳನ್ನು ಕಡಿಮೆ ಮಾಡಲು ಯತ್ನಿಸಿದರು. ಧಾರ್ಮಿಕ ಕಾರ್ಯಕ್ರಮಗಳಿಗೆ ಪರಿಹಾರ ಬಾಂಡ್ ಅನ್ನು ಕೂಡ ಅರ್ಧಕ್ಕೆ ಇಳಿಸುತ್ತೇವೆ ಎಂದು ಹೇಳಿದರು. ಧಾರ್ಮಿಕ ಕಾರ್ಯಕ್ರಮಗಳು, ಸಾಮೂಹಿಕ ವಿವಾಹಗಳು ಮತ್ತು ಸರ್ಕಾರಿ ಕಾರ್ಯಕ್ರಮಗಳಿಗೆ ವಿನಾಯಿತಿ ನೀಡಲಾಗುವುದು ಎಂದರು.

ವಿರೋಧ ಪಕ್ಷಕ್ಕೆ ಇದು ಮನವರಿಕೆಯಾಗಿಲ್ಲ. ವಾಣಿಜ್ಯ ಮತ್ತು ವಾಣಿಜ್ಯೇತರ ಕಾರ್ಯಕ್ರಮಗಳ ನಡುವೆ ವ್ಯತ್ಯಾಸವನ್ನು ಗುರುತಿಸಬೇಕು ಎಂದು ಆರ್. ಅಶೋಕ್ ಹೇಳಿದರು. ಕೊನೆಗೆ, ವಿರೋಧ ಪಕ್ಷದ ಬೇಡಿಕೆಗೆ ಮಣಿದ ಗೃಹ ಸಚಿವ ಪರಮೇಶ್ವರ್ ಮಸೂದೆಯನ್ನು ಸದನ ಸಮಿತಿಗೆ ಕಳುಹಿಸಲು ಒಪ್ಪಿಕೊಂಡರು.

ಲೋಕಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ಮಸೂದೆಗೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...