Homeಕರ್ನಾಟಕವಿಧಾನಸಭೆಯಲ್ಲಿ 'ಜನಸಂದಣಿ ನಿಯಂತ್ರಣ ವಿಧೇಯಕ' ಮಂಡನೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ

ವಿಧಾನಸಭೆಯಲ್ಲಿ ‘ಜನಸಂದಣಿ ನಿಯಂತ್ರಣ ವಿಧೇಯಕ’ ಮಂಡನೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ

- Advertisement -
- Advertisement -

ಭಾರೀ ದಂಡ ಮತ್ತು ಜೈಲು ಶಿಕ್ಷೆ ವಿಧಿಸಬಹುದಾದ ನಿಬಂಧನೆಗಳನ್ನು ಹೊಂದಿರುವ ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮಗಳು ಮತ್ತು ಸಭೆ ನಡೆಯುವ ಸ್ಥಳಗಳಲ್ಲಿ ಜನಸಂದಣಿಯನ್ನು ನಿರ್ವಹಿಸುವುದು) ವಿಧೇಯಕ ವಿಧಾನಸಭೆಯಲ್ಲಿ ಮಂಡನೆಯಾಗಿದೆ.

ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿ ದುರಂತದಿಂದ ಎಚ್ಚೆತ್ತ ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಮಸೂದೆಯನ್ನು ರೂಪಿಸಿದೆ.

ಪ್ರಸ್ತಾವಿತ ಕಾನೂನು ಪ್ರತಿಭಟನೆಗಳನ್ನು ಮೊಟಕುಗೊಳಿಸಬಹುದು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲೆ ಪರಿಣಾಮ ಬೀರಬಹುದು ಎಂದು ವಿರೋಧ ಪಕ್ಷದ ಶಾಸಕರು ಕಳವಳ ವ್ಯಕ್ತಪಡಿಸಿದ ನಂತರ ಮಸೂದೆಯನ್ನು ಸದನ ಸಮಿತಿಗೆ ಕಳುಹಿಸಲು ಸರ್ಕಾರ ಒಪ್ಪಿಕೊಂಡಿದೆ.

ಮಸೂದೆ ಮಂಡಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, “ಚಿನ್ನಸ್ವಾಮಿ ಕ್ರೀಡಾಂಗಣದ ದುರಂತವು ನಮಗೆ ‘ಎಚ್ಚರಿಕೆಯ ಕರೆ ಗಂಟೆಯಾಗಿದೆ’. ಪ್ರಸ್ತಾವಿತ ಮಸೂದೆ ಪ್ರಕಾರ ಮುಂದೆ ಇಂತಹ ದುರಂತಗಳು ಸಂಭವಿಸಿದರೆ ಕಾರ್ಯಕ್ರಮ ಆಯೋಜಕರು ಹೊಣೆಗಾರಾಗುತ್ತಾರೆ ಎಂದರು.

ಮಸೂದೆಯು ಕನಿಷ್ಠ 7,000 ಜನರು ಸೇರುವ ಯಾವುದೇ ಕಾರ್ಯಕ್ರಮಕ್ಕೆ ಪೊಲೀಸ್ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸುತ್ತದೆ. ಆಯೋಜಕರು ಉದ್ದೇಶಿತ ಕಾರ್ಯಕ್ರಮಕ್ಕೆ 10 ದಿನಗಳ ಮೊದಲು ಅನುಮತಿಗಾಗಿ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮ ಸಂಘಟಕರು 1 ಕೋಟಿ ರೂಪಾಯಿಗಳ ಪರಿಹಾರ ಬಾಂಡ್ ಸಲ್ಲಿಸಬೇಕು ಎಂದು ವರದಿಗಳು ಹೇಳಿವೆ.

ಅನುಮತಿಯಿಲ್ಲದೆ ಕಾರ್ಯಕ್ರಮಗಳನ್ನು ಆಯೋಜಿಸುವವರಿಗೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಕೋಟಿ ರೂಪಾಯಿ ದಂಡ ವಿಧಿಸಲಾಗುತ್ತದೆ. ಯಾವುದೇ ಘಟನೆಯಲ್ಲಿ ಗಾಯಗಳಾದರೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಸಾವು ನೋವುಗಳಿಗೆ 10 ವರ್ಷ ಅಥವಾ ಜೀವಾವಧಿ ಶಿಕ್ಷೆ ವಿಧಿಸಬಹುದು. ಕಾರ್ಯಕ್ರಮದಲ್ಲಿ ಗಲಭೆ ಉಂಟುಮಾಡಿದರೆ ಅಥವಾ ಶಾಂತಿ ಕದಡಿದರೆ ಮೂರು ವರ್ಷ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಲಾಗುತ್ತದೆ ಎಂದು ವರದಿಗಳು ವಿವರಿಸಿವೆ.  

ಖಾಸಗಿ ಜಾಗದಲ್ಲಿ ನಡೆಸುವ ಮದುವೆಗಳಂತಹ ಕೌಟುಂಬಿಕ ಕಾರ್ಯಕ್ರಮಗಳಿಗೆ ಮಸೂದೆಯ ನಿಬಂಧನೆಗಳ ಅಡಿಯಲ್ಲಿ ವಿನಾಯಿತಿ ಇದೆ.

“ಇತ್ತೀಚೆಗೆ, ಯಾವುದೇ ಕಾನೂನು ಚೌಕಟ್ಟು ಇಲ್ಲದೆ ಜನದಟ್ಟಣೆಯ ಕಾರ್ಯಕ್ರಮಗಳು ನಡೆಯುವುದನ್ನು ನಾವು ನೋಡುತ್ತಿದ್ದೇವೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಮಯದಲ್ಲಿ ರೈತರ ಮೇಲೆ ಲಾಠಿ ಪ್ರಹಾರ ಮಾಡಲಾಯಿತು. ಅಂತಹ ಸಂದರ್ಭಗಳಿಗೆ ಕಾರಣವೇನು? ನಿಯಮಗಳು ಇತ್ತೇ? ಅನುಮತಿ ಪಡೆಯಲಾಗಿದೆಯೇ? ಅಂತಹ ಹಲವಾರು ಪ್ರಶ್ನೆಗಳಿವೆ. ಪ್ರತಿಭಟಿಸುವುದು ಒಂದು ಹಕ್ಕು. ಆದರೆ ಅದು ಸಾರ್ವಜನಿಕ ಜೀವನವನ್ನು ಅನಾನುಕೂಲಗೊಳಿಸಬಾರದು” ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.

ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಈ ಮಸೂದೆಯನ್ನು ‘ಅಂತ್ಯಂತ ಕಠಿಣ’ ಎಂದು ಹೇಳಿವೆ. 

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಮಸೂದೆಯು ಪೊಲೀಸರಿಗೆ ‘ಆಯುಧ’ವಾಗಬಾರದು ಎಂದು ಹೇಳಿದರು. ಎಲ್ಲಾ ರಾಜಕೀಯ ಪಕ್ಷಗಳು ಕಾರ್ಯಕ್ರಮಗಳನ್ನು ನಡೆಸುತ್ತವೆ. ಏನಾದರೂ ತಪ್ಪಾದಲ್ಲಿ, ಆ ಪಕ್ಷದ ಗತಿಯೇನು? ಇದರ ಬಗ್ಗೆ ಯೋಚಿಸಬೇಕು ಎಂದರು.

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಈ ಮಸೂದೆಯು ಪ್ರತಿಭಟನೆಗಳನ್ನು ಕೊಲ್ಲುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ಇದು ಬ್ರಿಟಿಷ್ ಯುಗದ ಕಾನೂನಿಗಿಂತ ಹೆಚ್ಚು ಕ್ರೂರವಾಗಿದೆ ಎಂದ ಯತ್ನಾಳ್, ಒಂದು ಸಮುದಾಯವು ದಿನಕ್ಕೆ ಐದು ಬಾರಿ ಕೂಗಲು ಯಾವುದೇ ಅನುಮತಿಯ ಅಗತ್ಯವಿಲ್ಲ. ಗಣೇಶ ಹಬ್ಬದ ಸಮಯದಲ್ಲಿ ಧ್ವನಿವರ್ಧಕ ಬಳಸುವ ವಿಷಯಕ್ಕೆ ಬಂದಾಗ ಸಮಸ್ಯೆ ಸೃಷ್ಟಿಯಾಗುತ್ತದೆ. ಈ ಮಸೂದೆಯು ಒಂದು ಧರ್ಮದ ಕಾರ್ಯಕ್ರಮಗಳನ್ನು ಗುರಿಯಾಗಿಸಿಕೊಂಡು ಪ್ರತಿಭಟನೆಗಳನ್ನು ಮೊಟಕುಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕೆಲವೊಮ್ಮೆ ಪ್ರತಿಭಟನೆಗಳನ್ನು ರಾತ್ರೋರಾತ್ರಿ ಆಯೋಜಿಸಲಾಗುತ್ತದೆ. ಹೀಗಿರುವಾಗ 10 ದಿನಗಳ ಮೊದಲೇ ಅನುಮತಿಗಾಗಿ ಅರ್ಜಿ ಸಲ್ಲಿಸುವುದು ಹೇಗೆ? ಈ ಮೂಲಕ ಸ್ಥಳೀಯ ಪೊಲೀಸ್ ಠಾಣೆಗಳು ಪ್ರತಿಭಟನೆಗಳನ್ನು ಹತ್ತಿಕ್ಕುತ್ತದೆ ಎಂದು ಸುನಿಲ್ ಕುಮಾರ್ ಹೇಳಿದರು. ಜಾತ್ರೆಗಳು ಮತ್ತು ಹಬ್ಬಗಳ ಕಥೆಯೇನು? ಒಂದು ದೇವಾಲಯವು 1 ಕೋಟಿ ರೂ.ಗಳ ಬಾಂಡ್ ಹೇಗೆ ನೀಡುತ್ತದೆ? ಸರ್ಕಾರಿ ಕಾರ್ಯಕ್ರಮದಲ್ಲಿ ಏನಾದರೂ ತಪ್ಪಾದಲ್ಲಿ ಯಾರು ಹೊಣೆಗಾರರಾಗುತ್ತಾರೆ? ಎಂದು ಪ್ರಶ್ನಿಸಿದರು.

ಮೈಲಾಪುರ ಜಾತ್ರೆಯು ಒಂದು ಲಕ್ಷ ಜನರನ್ನು ಆಕರ್ಷಿಸುತ್ತದೆ ಎಂದು ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಹೇಳಿದರು. ನಮ್ಮಲ್ಲಿ 50,000-60,000 ಜನರು ಒಂದು ವಾರದವರೆಗೆ ಉಳಿಯುವ ಅಬ್ಬೆತುಮ್ಕೂರು ಜಾತ್ರೆ ಇದೆ. ಇದು ಬ್ರಿಟಿಷ್ ಕಾನೂನಿನಂತಿದೆ ಎಂದು ಅವರು ಹೇಳಿದರು.

ಧಾರ್ಮಿಕ ಕಾರ್ಯಕ್ರಮದ ಸಮಯದಲ್ಲಿ ‘ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಸಮಸ್ಯೆಗಳನ್ನು ಸೃಷ್ಟಿಸಿದರೆ’ ದೇವಾಲಯವನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ? ಎಂದು ಬಿಜೆಪಿಯ ಉಮಾನಾಥ್ ಕೋಟ್ಯಾನ್ ಸರ್ಕಾರವನ್ನು ಪ್ರಶ್ನಿಸಿದರು.

ಈ ವೇಳೆ, 10 ದಿನಗಳ ಷರತ್ತನ್ನು ಐದಕ್ಕೆ ಇಳಿಸಲಾಗುವುದು ಎಂದು ಘೋಷಿಸುವ ಮೂಲಕ ಗೃಹ ಸಚಿವ ಪರಮೇಶ್ವರ್ ಕಳವಳಗಳನ್ನು ಕಡಿಮೆ ಮಾಡಲು ಯತ್ನಿಸಿದರು. ಧಾರ್ಮಿಕ ಕಾರ್ಯಕ್ರಮಗಳಿಗೆ ಪರಿಹಾರ ಬಾಂಡ್ ಅನ್ನು ಕೂಡ ಅರ್ಧಕ್ಕೆ ಇಳಿಸುತ್ತೇವೆ ಎಂದು ಹೇಳಿದರು. ಧಾರ್ಮಿಕ ಕಾರ್ಯಕ್ರಮಗಳು, ಸಾಮೂಹಿಕ ವಿವಾಹಗಳು ಮತ್ತು ಸರ್ಕಾರಿ ಕಾರ್ಯಕ್ರಮಗಳಿಗೆ ವಿನಾಯಿತಿ ನೀಡಲಾಗುವುದು ಎಂದರು.

ವಿರೋಧ ಪಕ್ಷಕ್ಕೆ ಇದು ಮನವರಿಕೆಯಾಗಿಲ್ಲ. ವಾಣಿಜ್ಯ ಮತ್ತು ವಾಣಿಜ್ಯೇತರ ಕಾರ್ಯಕ್ರಮಗಳ ನಡುವೆ ವ್ಯತ್ಯಾಸವನ್ನು ಗುರುತಿಸಬೇಕು ಎಂದು ಆರ್. ಅಶೋಕ್ ಹೇಳಿದರು. ಕೊನೆಗೆ, ವಿರೋಧ ಪಕ್ಷದ ಬೇಡಿಕೆಗೆ ಮಣಿದ ಗೃಹ ಸಚಿವ ಪರಮೇಶ್ವರ್ ಮಸೂದೆಯನ್ನು ಸದನ ಸಮಿತಿಗೆ ಕಳುಹಿಸಲು ಒಪ್ಪಿಕೊಂಡರು.

ಲೋಕಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ಮಸೂದೆಗೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...