Homeಕರ್ನಾಟಕವಿಧಾನಸಭೆಯಲ್ಲಿ 'ಜನಸಂದಣಿ ನಿಯಂತ್ರಣ ವಿಧೇಯಕ' ಮಂಡನೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ

ವಿಧಾನಸಭೆಯಲ್ಲಿ ‘ಜನಸಂದಣಿ ನಿಯಂತ್ರಣ ವಿಧೇಯಕ’ ಮಂಡನೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ

- Advertisement -
- Advertisement -

ಭಾರೀ ದಂಡ ಮತ್ತು ಜೈಲು ಶಿಕ್ಷೆ ವಿಧಿಸಬಹುದಾದ ನಿಬಂಧನೆಗಳನ್ನು ಹೊಂದಿರುವ ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮಗಳು ಮತ್ತು ಸಭೆ ನಡೆಯುವ ಸ್ಥಳಗಳಲ್ಲಿ ಜನಸಂದಣಿಯನ್ನು ನಿರ್ವಹಿಸುವುದು) ವಿಧೇಯಕ ವಿಧಾನಸಭೆಯಲ್ಲಿ ಮಂಡನೆಯಾಗಿದೆ.

ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿ ದುರಂತದಿಂದ ಎಚ್ಚೆತ್ತ ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಮಸೂದೆಯನ್ನು ರೂಪಿಸಿದೆ.

ಪ್ರಸ್ತಾವಿತ ಕಾನೂನು ಪ್ರತಿಭಟನೆಗಳನ್ನು ಮೊಟಕುಗೊಳಿಸಬಹುದು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲೆ ಪರಿಣಾಮ ಬೀರಬಹುದು ಎಂದು ವಿರೋಧ ಪಕ್ಷದ ಶಾಸಕರು ಕಳವಳ ವ್ಯಕ್ತಪಡಿಸಿದ ನಂತರ ಮಸೂದೆಯನ್ನು ಸದನ ಸಮಿತಿಗೆ ಕಳುಹಿಸಲು ಸರ್ಕಾರ ಒಪ್ಪಿಕೊಂಡಿದೆ.

ಮಸೂದೆ ಮಂಡಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, “ಚಿನ್ನಸ್ವಾಮಿ ಕ್ರೀಡಾಂಗಣದ ದುರಂತವು ನಮಗೆ ‘ಎಚ್ಚರಿಕೆಯ ಕರೆ ಗಂಟೆಯಾಗಿದೆ’. ಪ್ರಸ್ತಾವಿತ ಮಸೂದೆ ಪ್ರಕಾರ ಮುಂದೆ ಇಂತಹ ದುರಂತಗಳು ಸಂಭವಿಸಿದರೆ ಕಾರ್ಯಕ್ರಮ ಆಯೋಜಕರು ಹೊಣೆಗಾರಾಗುತ್ತಾರೆ ಎಂದರು.

ಮಸೂದೆಯು ಕನಿಷ್ಠ 7,000 ಜನರು ಸೇರುವ ಯಾವುದೇ ಕಾರ್ಯಕ್ರಮಕ್ಕೆ ಪೊಲೀಸ್ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸುತ್ತದೆ. ಆಯೋಜಕರು ಉದ್ದೇಶಿತ ಕಾರ್ಯಕ್ರಮಕ್ಕೆ 10 ದಿನಗಳ ಮೊದಲು ಅನುಮತಿಗಾಗಿ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮ ಸಂಘಟಕರು 1 ಕೋಟಿ ರೂಪಾಯಿಗಳ ಪರಿಹಾರ ಬಾಂಡ್ ಸಲ್ಲಿಸಬೇಕು ಎಂದು ವರದಿಗಳು ಹೇಳಿವೆ.

ಅನುಮತಿಯಿಲ್ಲದೆ ಕಾರ್ಯಕ್ರಮಗಳನ್ನು ಆಯೋಜಿಸುವವರಿಗೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಕೋಟಿ ರೂಪಾಯಿ ದಂಡ ವಿಧಿಸಲಾಗುತ್ತದೆ. ಯಾವುದೇ ಘಟನೆಯಲ್ಲಿ ಗಾಯಗಳಾದರೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಸಾವು ನೋವುಗಳಿಗೆ 10 ವರ್ಷ ಅಥವಾ ಜೀವಾವಧಿ ಶಿಕ್ಷೆ ವಿಧಿಸಬಹುದು. ಕಾರ್ಯಕ್ರಮದಲ್ಲಿ ಗಲಭೆ ಉಂಟುಮಾಡಿದರೆ ಅಥವಾ ಶಾಂತಿ ಕದಡಿದರೆ ಮೂರು ವರ್ಷ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಲಾಗುತ್ತದೆ ಎಂದು ವರದಿಗಳು ವಿವರಿಸಿವೆ.  

ಖಾಸಗಿ ಜಾಗದಲ್ಲಿ ನಡೆಸುವ ಮದುವೆಗಳಂತಹ ಕೌಟುಂಬಿಕ ಕಾರ್ಯಕ್ರಮಗಳಿಗೆ ಮಸೂದೆಯ ನಿಬಂಧನೆಗಳ ಅಡಿಯಲ್ಲಿ ವಿನಾಯಿತಿ ಇದೆ.

“ಇತ್ತೀಚೆಗೆ, ಯಾವುದೇ ಕಾನೂನು ಚೌಕಟ್ಟು ಇಲ್ಲದೆ ಜನದಟ್ಟಣೆಯ ಕಾರ್ಯಕ್ರಮಗಳು ನಡೆಯುವುದನ್ನು ನಾವು ನೋಡುತ್ತಿದ್ದೇವೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಮಯದಲ್ಲಿ ರೈತರ ಮೇಲೆ ಲಾಠಿ ಪ್ರಹಾರ ಮಾಡಲಾಯಿತು. ಅಂತಹ ಸಂದರ್ಭಗಳಿಗೆ ಕಾರಣವೇನು? ನಿಯಮಗಳು ಇತ್ತೇ? ಅನುಮತಿ ಪಡೆಯಲಾಗಿದೆಯೇ? ಅಂತಹ ಹಲವಾರು ಪ್ರಶ್ನೆಗಳಿವೆ. ಪ್ರತಿಭಟಿಸುವುದು ಒಂದು ಹಕ್ಕು. ಆದರೆ ಅದು ಸಾರ್ವಜನಿಕ ಜೀವನವನ್ನು ಅನಾನುಕೂಲಗೊಳಿಸಬಾರದು” ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.

ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಈ ಮಸೂದೆಯನ್ನು ‘ಅಂತ್ಯಂತ ಕಠಿಣ’ ಎಂದು ಹೇಳಿವೆ. 

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಮಸೂದೆಯು ಪೊಲೀಸರಿಗೆ ‘ಆಯುಧ’ವಾಗಬಾರದು ಎಂದು ಹೇಳಿದರು. ಎಲ್ಲಾ ರಾಜಕೀಯ ಪಕ್ಷಗಳು ಕಾರ್ಯಕ್ರಮಗಳನ್ನು ನಡೆಸುತ್ತವೆ. ಏನಾದರೂ ತಪ್ಪಾದಲ್ಲಿ, ಆ ಪಕ್ಷದ ಗತಿಯೇನು? ಇದರ ಬಗ್ಗೆ ಯೋಚಿಸಬೇಕು ಎಂದರು.

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಈ ಮಸೂದೆಯು ಪ್ರತಿಭಟನೆಗಳನ್ನು ಕೊಲ್ಲುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ಇದು ಬ್ರಿಟಿಷ್ ಯುಗದ ಕಾನೂನಿಗಿಂತ ಹೆಚ್ಚು ಕ್ರೂರವಾಗಿದೆ ಎಂದ ಯತ್ನಾಳ್, ಒಂದು ಸಮುದಾಯವು ದಿನಕ್ಕೆ ಐದು ಬಾರಿ ಕೂಗಲು ಯಾವುದೇ ಅನುಮತಿಯ ಅಗತ್ಯವಿಲ್ಲ. ಗಣೇಶ ಹಬ್ಬದ ಸಮಯದಲ್ಲಿ ಧ್ವನಿವರ್ಧಕ ಬಳಸುವ ವಿಷಯಕ್ಕೆ ಬಂದಾಗ ಸಮಸ್ಯೆ ಸೃಷ್ಟಿಯಾಗುತ್ತದೆ. ಈ ಮಸೂದೆಯು ಒಂದು ಧರ್ಮದ ಕಾರ್ಯಕ್ರಮಗಳನ್ನು ಗುರಿಯಾಗಿಸಿಕೊಂಡು ಪ್ರತಿಭಟನೆಗಳನ್ನು ಮೊಟಕುಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕೆಲವೊಮ್ಮೆ ಪ್ರತಿಭಟನೆಗಳನ್ನು ರಾತ್ರೋರಾತ್ರಿ ಆಯೋಜಿಸಲಾಗುತ್ತದೆ. ಹೀಗಿರುವಾಗ 10 ದಿನಗಳ ಮೊದಲೇ ಅನುಮತಿಗಾಗಿ ಅರ್ಜಿ ಸಲ್ಲಿಸುವುದು ಹೇಗೆ? ಈ ಮೂಲಕ ಸ್ಥಳೀಯ ಪೊಲೀಸ್ ಠಾಣೆಗಳು ಪ್ರತಿಭಟನೆಗಳನ್ನು ಹತ್ತಿಕ್ಕುತ್ತದೆ ಎಂದು ಸುನಿಲ್ ಕುಮಾರ್ ಹೇಳಿದರು. ಜಾತ್ರೆಗಳು ಮತ್ತು ಹಬ್ಬಗಳ ಕಥೆಯೇನು? ಒಂದು ದೇವಾಲಯವು 1 ಕೋಟಿ ರೂ.ಗಳ ಬಾಂಡ್ ಹೇಗೆ ನೀಡುತ್ತದೆ? ಸರ್ಕಾರಿ ಕಾರ್ಯಕ್ರಮದಲ್ಲಿ ಏನಾದರೂ ತಪ್ಪಾದಲ್ಲಿ ಯಾರು ಹೊಣೆಗಾರರಾಗುತ್ತಾರೆ? ಎಂದು ಪ್ರಶ್ನಿಸಿದರು.

ಮೈಲಾಪುರ ಜಾತ್ರೆಯು ಒಂದು ಲಕ್ಷ ಜನರನ್ನು ಆಕರ್ಷಿಸುತ್ತದೆ ಎಂದು ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಹೇಳಿದರು. ನಮ್ಮಲ್ಲಿ 50,000-60,000 ಜನರು ಒಂದು ವಾರದವರೆಗೆ ಉಳಿಯುವ ಅಬ್ಬೆತುಮ್ಕೂರು ಜಾತ್ರೆ ಇದೆ. ಇದು ಬ್ರಿಟಿಷ್ ಕಾನೂನಿನಂತಿದೆ ಎಂದು ಅವರು ಹೇಳಿದರು.

ಧಾರ್ಮಿಕ ಕಾರ್ಯಕ್ರಮದ ಸಮಯದಲ್ಲಿ ‘ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಸಮಸ್ಯೆಗಳನ್ನು ಸೃಷ್ಟಿಸಿದರೆ’ ದೇವಾಲಯವನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ? ಎಂದು ಬಿಜೆಪಿಯ ಉಮಾನಾಥ್ ಕೋಟ್ಯಾನ್ ಸರ್ಕಾರವನ್ನು ಪ್ರಶ್ನಿಸಿದರು.

ಈ ವೇಳೆ, 10 ದಿನಗಳ ಷರತ್ತನ್ನು ಐದಕ್ಕೆ ಇಳಿಸಲಾಗುವುದು ಎಂದು ಘೋಷಿಸುವ ಮೂಲಕ ಗೃಹ ಸಚಿವ ಪರಮೇಶ್ವರ್ ಕಳವಳಗಳನ್ನು ಕಡಿಮೆ ಮಾಡಲು ಯತ್ನಿಸಿದರು. ಧಾರ್ಮಿಕ ಕಾರ್ಯಕ್ರಮಗಳಿಗೆ ಪರಿಹಾರ ಬಾಂಡ್ ಅನ್ನು ಕೂಡ ಅರ್ಧಕ್ಕೆ ಇಳಿಸುತ್ತೇವೆ ಎಂದು ಹೇಳಿದರು. ಧಾರ್ಮಿಕ ಕಾರ್ಯಕ್ರಮಗಳು, ಸಾಮೂಹಿಕ ವಿವಾಹಗಳು ಮತ್ತು ಸರ್ಕಾರಿ ಕಾರ್ಯಕ್ರಮಗಳಿಗೆ ವಿನಾಯಿತಿ ನೀಡಲಾಗುವುದು ಎಂದರು.

ವಿರೋಧ ಪಕ್ಷಕ್ಕೆ ಇದು ಮನವರಿಕೆಯಾಗಿಲ್ಲ. ವಾಣಿಜ್ಯ ಮತ್ತು ವಾಣಿಜ್ಯೇತರ ಕಾರ್ಯಕ್ರಮಗಳ ನಡುವೆ ವ್ಯತ್ಯಾಸವನ್ನು ಗುರುತಿಸಬೇಕು ಎಂದು ಆರ್. ಅಶೋಕ್ ಹೇಳಿದರು. ಕೊನೆಗೆ, ವಿರೋಧ ಪಕ್ಷದ ಬೇಡಿಕೆಗೆ ಮಣಿದ ಗೃಹ ಸಚಿವ ಪರಮೇಶ್ವರ್ ಮಸೂದೆಯನ್ನು ಸದನ ಸಮಿತಿಗೆ ಕಳುಹಿಸಲು ಒಪ್ಪಿಕೊಂಡರು.

ಲೋಕಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ಮಸೂದೆಗೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...