Homeಕರ್ನಾಟಕವಿಧಾನಸಭೆಯಲ್ಲಿ 'ಜನಸಂದಣಿ ನಿಯಂತ್ರಣ ವಿಧೇಯಕ' ಮಂಡನೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ

ವಿಧಾನಸಭೆಯಲ್ಲಿ ‘ಜನಸಂದಣಿ ನಿಯಂತ್ರಣ ವಿಧೇಯಕ’ ಮಂಡನೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ

- Advertisement -
- Advertisement -

ಭಾರೀ ದಂಡ ಮತ್ತು ಜೈಲು ಶಿಕ್ಷೆ ವಿಧಿಸಬಹುದಾದ ನಿಬಂಧನೆಗಳನ್ನು ಹೊಂದಿರುವ ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮಗಳು ಮತ್ತು ಸಭೆ ನಡೆಯುವ ಸ್ಥಳಗಳಲ್ಲಿ ಜನಸಂದಣಿಯನ್ನು ನಿರ್ವಹಿಸುವುದು) ವಿಧೇಯಕ ವಿಧಾನಸಭೆಯಲ್ಲಿ ಮಂಡನೆಯಾಗಿದೆ.

ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿ ದುರಂತದಿಂದ ಎಚ್ಚೆತ್ತ ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಮಸೂದೆಯನ್ನು ರೂಪಿಸಿದೆ.

ಪ್ರಸ್ತಾವಿತ ಕಾನೂನು ಪ್ರತಿಭಟನೆಗಳನ್ನು ಮೊಟಕುಗೊಳಿಸಬಹುದು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲೆ ಪರಿಣಾಮ ಬೀರಬಹುದು ಎಂದು ವಿರೋಧ ಪಕ್ಷದ ಶಾಸಕರು ಕಳವಳ ವ್ಯಕ್ತಪಡಿಸಿದ ನಂತರ ಮಸೂದೆಯನ್ನು ಸದನ ಸಮಿತಿಗೆ ಕಳುಹಿಸಲು ಸರ್ಕಾರ ಒಪ್ಪಿಕೊಂಡಿದೆ.

ಮಸೂದೆ ಮಂಡಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, “ಚಿನ್ನಸ್ವಾಮಿ ಕ್ರೀಡಾಂಗಣದ ದುರಂತವು ನಮಗೆ ‘ಎಚ್ಚರಿಕೆಯ ಕರೆ ಗಂಟೆಯಾಗಿದೆ’. ಪ್ರಸ್ತಾವಿತ ಮಸೂದೆ ಪ್ರಕಾರ ಮುಂದೆ ಇಂತಹ ದುರಂತಗಳು ಸಂಭವಿಸಿದರೆ ಕಾರ್ಯಕ್ರಮ ಆಯೋಜಕರು ಹೊಣೆಗಾರಾಗುತ್ತಾರೆ ಎಂದರು.

ಮಸೂದೆಯು ಕನಿಷ್ಠ 7,000 ಜನರು ಸೇರುವ ಯಾವುದೇ ಕಾರ್ಯಕ್ರಮಕ್ಕೆ ಪೊಲೀಸ್ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸುತ್ತದೆ. ಆಯೋಜಕರು ಉದ್ದೇಶಿತ ಕಾರ್ಯಕ್ರಮಕ್ಕೆ 10 ದಿನಗಳ ಮೊದಲು ಅನುಮತಿಗಾಗಿ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮ ಸಂಘಟಕರು 1 ಕೋಟಿ ರೂಪಾಯಿಗಳ ಪರಿಹಾರ ಬಾಂಡ್ ಸಲ್ಲಿಸಬೇಕು ಎಂದು ವರದಿಗಳು ಹೇಳಿವೆ.

ಅನುಮತಿಯಿಲ್ಲದೆ ಕಾರ್ಯಕ್ರಮಗಳನ್ನು ಆಯೋಜಿಸುವವರಿಗೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಕೋಟಿ ರೂಪಾಯಿ ದಂಡ ವಿಧಿಸಲಾಗುತ್ತದೆ. ಯಾವುದೇ ಘಟನೆಯಲ್ಲಿ ಗಾಯಗಳಾದರೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಸಾವು ನೋವುಗಳಿಗೆ 10 ವರ್ಷ ಅಥವಾ ಜೀವಾವಧಿ ಶಿಕ್ಷೆ ವಿಧಿಸಬಹುದು. ಕಾರ್ಯಕ್ರಮದಲ್ಲಿ ಗಲಭೆ ಉಂಟುಮಾಡಿದರೆ ಅಥವಾ ಶಾಂತಿ ಕದಡಿದರೆ ಮೂರು ವರ್ಷ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಲಾಗುತ್ತದೆ ಎಂದು ವರದಿಗಳು ವಿವರಿಸಿವೆ.  

ಖಾಸಗಿ ಜಾಗದಲ್ಲಿ ನಡೆಸುವ ಮದುವೆಗಳಂತಹ ಕೌಟುಂಬಿಕ ಕಾರ್ಯಕ್ರಮಗಳಿಗೆ ಮಸೂದೆಯ ನಿಬಂಧನೆಗಳ ಅಡಿಯಲ್ಲಿ ವಿನಾಯಿತಿ ಇದೆ.

“ಇತ್ತೀಚೆಗೆ, ಯಾವುದೇ ಕಾನೂನು ಚೌಕಟ್ಟು ಇಲ್ಲದೆ ಜನದಟ್ಟಣೆಯ ಕಾರ್ಯಕ್ರಮಗಳು ನಡೆಯುವುದನ್ನು ನಾವು ನೋಡುತ್ತಿದ್ದೇವೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಮಯದಲ್ಲಿ ರೈತರ ಮೇಲೆ ಲಾಠಿ ಪ್ರಹಾರ ಮಾಡಲಾಯಿತು. ಅಂತಹ ಸಂದರ್ಭಗಳಿಗೆ ಕಾರಣವೇನು? ನಿಯಮಗಳು ಇತ್ತೇ? ಅನುಮತಿ ಪಡೆಯಲಾಗಿದೆಯೇ? ಅಂತಹ ಹಲವಾರು ಪ್ರಶ್ನೆಗಳಿವೆ. ಪ್ರತಿಭಟಿಸುವುದು ಒಂದು ಹಕ್ಕು. ಆದರೆ ಅದು ಸಾರ್ವಜನಿಕ ಜೀವನವನ್ನು ಅನಾನುಕೂಲಗೊಳಿಸಬಾರದು” ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.

ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಈ ಮಸೂದೆಯನ್ನು ‘ಅಂತ್ಯಂತ ಕಠಿಣ’ ಎಂದು ಹೇಳಿವೆ. 

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಮಸೂದೆಯು ಪೊಲೀಸರಿಗೆ ‘ಆಯುಧ’ವಾಗಬಾರದು ಎಂದು ಹೇಳಿದರು. ಎಲ್ಲಾ ರಾಜಕೀಯ ಪಕ್ಷಗಳು ಕಾರ್ಯಕ್ರಮಗಳನ್ನು ನಡೆಸುತ್ತವೆ. ಏನಾದರೂ ತಪ್ಪಾದಲ್ಲಿ, ಆ ಪಕ್ಷದ ಗತಿಯೇನು? ಇದರ ಬಗ್ಗೆ ಯೋಚಿಸಬೇಕು ಎಂದರು.

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಈ ಮಸೂದೆಯು ಪ್ರತಿಭಟನೆಗಳನ್ನು ಕೊಲ್ಲುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ಇದು ಬ್ರಿಟಿಷ್ ಯುಗದ ಕಾನೂನಿಗಿಂತ ಹೆಚ್ಚು ಕ್ರೂರವಾಗಿದೆ ಎಂದ ಯತ್ನಾಳ್, ಒಂದು ಸಮುದಾಯವು ದಿನಕ್ಕೆ ಐದು ಬಾರಿ ಕೂಗಲು ಯಾವುದೇ ಅನುಮತಿಯ ಅಗತ್ಯವಿಲ್ಲ. ಗಣೇಶ ಹಬ್ಬದ ಸಮಯದಲ್ಲಿ ಧ್ವನಿವರ್ಧಕ ಬಳಸುವ ವಿಷಯಕ್ಕೆ ಬಂದಾಗ ಸಮಸ್ಯೆ ಸೃಷ್ಟಿಯಾಗುತ್ತದೆ. ಈ ಮಸೂದೆಯು ಒಂದು ಧರ್ಮದ ಕಾರ್ಯಕ್ರಮಗಳನ್ನು ಗುರಿಯಾಗಿಸಿಕೊಂಡು ಪ್ರತಿಭಟನೆಗಳನ್ನು ಮೊಟಕುಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕೆಲವೊಮ್ಮೆ ಪ್ರತಿಭಟನೆಗಳನ್ನು ರಾತ್ರೋರಾತ್ರಿ ಆಯೋಜಿಸಲಾಗುತ್ತದೆ. ಹೀಗಿರುವಾಗ 10 ದಿನಗಳ ಮೊದಲೇ ಅನುಮತಿಗಾಗಿ ಅರ್ಜಿ ಸಲ್ಲಿಸುವುದು ಹೇಗೆ? ಈ ಮೂಲಕ ಸ್ಥಳೀಯ ಪೊಲೀಸ್ ಠಾಣೆಗಳು ಪ್ರತಿಭಟನೆಗಳನ್ನು ಹತ್ತಿಕ್ಕುತ್ತದೆ ಎಂದು ಸುನಿಲ್ ಕುಮಾರ್ ಹೇಳಿದರು. ಜಾತ್ರೆಗಳು ಮತ್ತು ಹಬ್ಬಗಳ ಕಥೆಯೇನು? ಒಂದು ದೇವಾಲಯವು 1 ಕೋಟಿ ರೂ.ಗಳ ಬಾಂಡ್ ಹೇಗೆ ನೀಡುತ್ತದೆ? ಸರ್ಕಾರಿ ಕಾರ್ಯಕ್ರಮದಲ್ಲಿ ಏನಾದರೂ ತಪ್ಪಾದಲ್ಲಿ ಯಾರು ಹೊಣೆಗಾರರಾಗುತ್ತಾರೆ? ಎಂದು ಪ್ರಶ್ನಿಸಿದರು.

ಮೈಲಾಪುರ ಜಾತ್ರೆಯು ಒಂದು ಲಕ್ಷ ಜನರನ್ನು ಆಕರ್ಷಿಸುತ್ತದೆ ಎಂದು ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಹೇಳಿದರು. ನಮ್ಮಲ್ಲಿ 50,000-60,000 ಜನರು ಒಂದು ವಾರದವರೆಗೆ ಉಳಿಯುವ ಅಬ್ಬೆತುಮ್ಕೂರು ಜಾತ್ರೆ ಇದೆ. ಇದು ಬ್ರಿಟಿಷ್ ಕಾನೂನಿನಂತಿದೆ ಎಂದು ಅವರು ಹೇಳಿದರು.

ಧಾರ್ಮಿಕ ಕಾರ್ಯಕ್ರಮದ ಸಮಯದಲ್ಲಿ ‘ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಸಮಸ್ಯೆಗಳನ್ನು ಸೃಷ್ಟಿಸಿದರೆ’ ದೇವಾಲಯವನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ? ಎಂದು ಬಿಜೆಪಿಯ ಉಮಾನಾಥ್ ಕೋಟ್ಯಾನ್ ಸರ್ಕಾರವನ್ನು ಪ್ರಶ್ನಿಸಿದರು.

ಈ ವೇಳೆ, 10 ದಿನಗಳ ಷರತ್ತನ್ನು ಐದಕ್ಕೆ ಇಳಿಸಲಾಗುವುದು ಎಂದು ಘೋಷಿಸುವ ಮೂಲಕ ಗೃಹ ಸಚಿವ ಪರಮೇಶ್ವರ್ ಕಳವಳಗಳನ್ನು ಕಡಿಮೆ ಮಾಡಲು ಯತ್ನಿಸಿದರು. ಧಾರ್ಮಿಕ ಕಾರ್ಯಕ್ರಮಗಳಿಗೆ ಪರಿಹಾರ ಬಾಂಡ್ ಅನ್ನು ಕೂಡ ಅರ್ಧಕ್ಕೆ ಇಳಿಸುತ್ತೇವೆ ಎಂದು ಹೇಳಿದರು. ಧಾರ್ಮಿಕ ಕಾರ್ಯಕ್ರಮಗಳು, ಸಾಮೂಹಿಕ ವಿವಾಹಗಳು ಮತ್ತು ಸರ್ಕಾರಿ ಕಾರ್ಯಕ್ರಮಗಳಿಗೆ ವಿನಾಯಿತಿ ನೀಡಲಾಗುವುದು ಎಂದರು.

ವಿರೋಧ ಪಕ್ಷಕ್ಕೆ ಇದು ಮನವರಿಕೆಯಾಗಿಲ್ಲ. ವಾಣಿಜ್ಯ ಮತ್ತು ವಾಣಿಜ್ಯೇತರ ಕಾರ್ಯಕ್ರಮಗಳ ನಡುವೆ ವ್ಯತ್ಯಾಸವನ್ನು ಗುರುತಿಸಬೇಕು ಎಂದು ಆರ್. ಅಶೋಕ್ ಹೇಳಿದರು. ಕೊನೆಗೆ, ವಿರೋಧ ಪಕ್ಷದ ಬೇಡಿಕೆಗೆ ಮಣಿದ ಗೃಹ ಸಚಿವ ಪರಮೇಶ್ವರ್ ಮಸೂದೆಯನ್ನು ಸದನ ಸಮಿತಿಗೆ ಕಳುಹಿಸಲು ಒಪ್ಪಿಕೊಂಡರು.

ಲೋಕಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ಮಸೂದೆಗೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...