Homeಕರ್ನಾಟಕದಸರಾ ಉದ್ಘಾಟಿಸಲು ಆಯ್ಕೆ ಮಾಡಿದ್ದಕ್ಕೆ ಕೋಮುವಾದಿಗಳಿಂದ ವಿರೋಧ: ಬಾನು ಮುಷ್ತಾಕ್ ಏನಂದ್ರು?

ದಸರಾ ಉದ್ಘಾಟಿಸಲು ಆಯ್ಕೆ ಮಾಡಿದ್ದಕ್ಕೆ ಕೋಮುವಾದಿಗಳಿಂದ ವಿರೋಧ: ಬಾನು ಮುಷ್ತಾಕ್ ಏನಂದ್ರು?

- Advertisement -
- Advertisement -

ಅಂತಾರಾಷ್ಟೀಯ ‘ಬೂಕರ್ ಪ್ರಶಸ್ತಿ’ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು 2025ರ ಮೈಸೂರು ದಸರಾ ಉದ್ಘಾಟಿಸಲು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದರ ವಿರುದ್ದ ಕೋಮುವಾದಿಗಳ ಅರಚಾಟ ಜೋರಾಗಿದೆ.

ಜಾಗತಿಕವಾಗಿ ಕನ್ನಡಕ್ಕೆ ಕೀರ್ತಿ ತಂದ ಶ್ರೇಷ್ಠ ಸಾಹಿತಿಯೊಬ್ಬರನ್ನು ಧರ್ಮ, ರಾಜಕೀಯ, ಕೋಮು ವಿಷದ ಮಾನದಂಡಗಳ ಮೂಲಕ ಅಳೆಯುವ ನೀಚ ರಾಜಕಾರಣ ಗರಿಗೆದರಿದೆ.

ಬಾನು ಮುಷ್ತಾಕ್ ಅವರ ಆಯ್ಕೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಾನು ಮುಷ್ತಾಕ್, ತಮ್ಮ ಮನದಾಳವನ್ನು ಹಂಚಿಕೊಂಡಿದ್ದಾರೆ.

ಮಂಗಳವಾರ (ಆ.26) ಕನ್ನಡ ಸಾಹಿತ್ಯ ಪರಿಷತ್‌ನಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ದಸರಾ ಉದ್ಘಾಟಿಸಲು ಆಯ್ಕೆ ಮಾಡಿರುವುದಕ್ಕೆ ಧನ್ಯವಾದ ತಿಳಿಸಿದ್ದಾರೆ.

“ಕನ್ನಡವನ್ನು ನನ್ನಷ್ಟು ಪ್ರೀತಿಸಿ, ನನ್ನಷ್ಟು ಬಳಕೆಗೆ ತನ್ನಿ, ಕನ್ನಡವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿ. ಇಷ್ಟು ಸಾಧನೆ ಮಾಡಿದರೆ ನೀವು ನನ್ನ ಮೇಲೆ ಕೆಸರೆರಚಾಟ ಮಾಡುವ ಅರ್ಹತೆ ಪಡೆಯುತ್ತೀರಿ” ಎಂದು ತನ್ನ ಆಯ್ಕೆಯನ್ನು ವಿರೋಧಿಸುತ್ತಿರುವವರಿಗೆ ಹೇಳಿದ್ದಾರೆ.

ಬಾನು ಮುಷ್ತಾಕ್ ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಲಿ ಎಂಬ ಕೆಲ ರಾಜಕಾರಣಿಗಳ ಮಾತಿಗೆ ಪ್ರತಿಕ್ರಿಯಿಸಿದ ಅವರು, ಬೂಕರ್ ಪ್ರಶಸ್ತಿಗೆ ನನ್ನ ಪುಸ್ತಕ ಸಲ್ಲಿಕೆಯಾಗಿ ಪಟ್ಟಿಯಾದ ಸಂದರ್ಭದಲ್ಲಿ ಮೈಸೂರಿನ ನಿವಾಸಿಯಾದ ನನ್ನ ಗೆಳತಿ, ಲೇಖಕಿ ಮೀನಾ ಮೈಸೂರು ನನಗೆ ಕರೆ ಮಾಡಿ, “ನಾನು ನಿಮಗೆ ಬೂಕರ್ ಬರಲಿ ಎಂದು ಚಾಮುಂಡೇಶ್ವರಿಗೆ ಹರಕೆ ಕಟ್ಟಿದ್ದೇನೆ” ಎಂದು ಹೇಳಿದ್ದರು. ನಾನು ಬಹಳ ಸಂತೋಷದಿಂದ “ನನಗೂ ನಿಮಗೂ ಒಳ್ಳೆಯದಾಗಲಿ” ಎಂಬ ಮಾತನ್ನು ಹೇಳಿದ್ದೆ” ಎಂದಿದ್ದಾರೆ.

ಮುಂದುವರಿದು, “ಬೂಕರ್ ಬಂದ ಬಳಿಕ ನನಗೆ ಮೈಸೂರಿಗೆ ಹೋಗುವ ಅವಕಾಶ ಸಿಕ್ಕಿರಲಿಲ್ಲ. ಬಳಿಕ ‘ಮೈಸೂರು ಲಿಟ್ ಫೆಸ್ಟ್‌’ಗೆ ಹೋದಾಗ ಸುತ್ತೂರು ಮಠದ ಸ್ವಾಮಿಗಳು ಸಾಹಿತಿಗಳಿಗೆ ಉಪಹಾರ ಕೂಟ ಏರ್ಪಡಿಸಿದ್ದರು. ಅಲ್ಲಿ ಸಿಕ್ಕಿದ್ದ ಮೀನಾ, “ಇವತ್ತು ಚಾಮುಂಡಿ ಬೆಟ್ಟಕ್ಕೆ ಹೋಗಿ ನನ್ನ ಹರಕೆ ತೀರಿಸೋಣ” ಎಂದಿದ್ದರು. ಆದರೆ, ನಾನು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರಿಂದ ಅದಕ್ಕೆ ಸಮಯ ಸಿಕ್ಕಿರಲಿಲ್ಲ. ಈಗ ಚಾಮುಂಡೇಶ್ವರಿ ತಾಯಿಯೇ ನನ್ನನ್ನು ಮೈಸೂರಿಗೆ ಕರೆಸಿಕೊಳ್ಳುತ್ತಿದ್ದಾಳೆ” ಎಂದು ಹೇಳಿದ್ದಾರೆ.

ರಾಜಕಾರಣಿಗಳ ಟೀಕೆಗಳ ಬಗ್ಗೆ ಮಾತನಾಡಿದ ಅವರು, “ಯಾವ ವಿಚಾರದಲ್ಲಿ ರಾಜಕಾರಣ ಮಾಡಬೇಕು, ಯಾವ ವಿಚಾರದಲ್ಲಿ ಮಾಡಬಾರದು ಎಂಬ ಪ್ರಜ್ಞೆ ಸಕ್ರಿಯ ರಾಜಕಾರಣಿಗಳಿಗೆ ಇರಬೇಕು. ಬೂಕರ್ ಎನ್ನುವಂತಹ ಬಹುಮಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿಗುವುದು ಸುಲಭದ ಮಾತಲ್ಲ. ಅದರ ಬಗ್ಗೆಯೂ ಒಂದಿಬ್ಬರು ಕೇವಲವಾಗಿ ಮಾತನಾಡುತ್ತಿದ್ದಾರೆ. ಅವರು ಮಾತನಾಡಲಿ, ನನಗೆ ಅದರ ಬಗ್ಗೆ ಬೇಸರಿವಿಲ್ಲ. ಏಕೆಂದರೆ, ಅವರು ಅವರ ಅರ್ಹತೆಗೆ ತಕ್ಕಂತೆ ಮಾತನಾಡುತ್ತಾರೆ” ಎಂದು ತಿರುಗೇಟು ನೀಡಿದ್ದಾರೆ.

“2023ರಲ್ಲಿ ನಾನು ಜನ ಸಾಹಿತ್ಯ ಸಮ್ಮೇಳನದಲ್ಲಿ ಆಡಿದ ಮಾತಿನ ಕೆಲ ತುಣುಕುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ನನ್ನ ವಿರುದ್ದ ದೊಡ್ಡ ಆರೋಪಗಳನ್ನು ಮಾಡಲಾಗುತ್ತಿದ್ದೆ. ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಸಾಹಿತಿಗಳನ್ನು ದೂರ ಇಟ್ಟಿದ್ದಕ್ಕೆ ಪ್ರತಿರೋಧವಾಗಿ ಜನ ಸಾಹಿತ್ಯ ಸಮ್ಮೇಳನ ಮಾಡಲಾಗಿತ್ತು. ಆ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ನಾನು ಮಹಿಳೆಯರು, ಅಲ್ಪ ಸಂಖ್ಯಾತರು ಮತ್ತು ತುಳಿತಕ್ಕೊಳಗಾದವರ ಪರ ಮಾತನಾಡಿದ್ದೆ” ಎಂದಿದ್ದಾರೆ.

“ನನ್ನ ಭಾಷಣದಲ್ಲಿ ಕನ್ನಡವನ್ನು ಭಾಷೆಯಾಗಿ ಬಳಸುವ ಬದಲು ಭಾವುಕವಾಗಿ ಬಳಸುತ್ತಿದ್ದೀರಿ. ದೇವತೆಯನ್ನಾಗಿ ಮಾಡಿ, ಮಂದಹಾಸದಲ್ಲಿದ್ದಾಗ ಅದಕ್ಕೆ ಕೈ ಮುಗಿದು ಬಂದರೆ ನಮ್ಮ ಕೆಲಸ ಮುಗಿಯಿತು ಎಂಬ ಭಾವನೆಯಲ್ಲಿ ಇದ್ದೀರಿ. ಭಾಷೆಯನ್ನು ಭಾಷೆಯಾಗಿ ಪರಿಗಣಿಸಿದಾಗ ನಾನೂ ಓದಬೇಕಾಗುತ್ತದೆ, ನೀವು ಓದಬೇಕಾಗುತ್ತದೆ. ನಮ್ಮ ಮಕ್ಕಳು ಕೂಡ ಓದಬೇಕಾಗುತ್ತದೆ. ಪ್ರತಿಯೊಬ್ಬರು ಓದಬೇಕಾಗುತ್ತದೆ ಎಂದಿದ್ದೆ.”

ಜೊತೆಗೆ, “ಹಾವೇರಿ ಸಮ್ಮೇಳನದಂತಹ ಕನ್ನಡ ಕಾರ್ಯಕ್ರಮಗಳಲ್ಲಿ ಅಲ್ಪಸಂಖ್ಯಾತ ಸಮುದಾಯದವರು ಎಲ್ಲಿ ನಿಲ್ಲಬೇಕು ಎಂಬ ಪ್ರಶ್ನೆಗೆ ‘ನೀವು ದೂರ ನಿಲ್ಲಬೇಡಿ, ಹತ್ತಿರ ಬನ್ನಿ’ ಎಂಬ ಆತ್ಮ ವಿಶ್ವಾಸವನ್ನು ವೃದ್ದಿಸುವ ಮಾತುಗಳನ್ನು ಆಡಿದ್ದೆ” ಎಂದು ತಿಳಿಸಿದ್ದಾರೆ.

“ಗೋಕಾಕ್ ಸಮಿತಿಯ ವರದಿ ಬಂದಾಗ ಹಾಸನದಲ್ಲಿ ಬಹಳ ದೊಡ್ಡ ಕಾರ್ಯಕ್ರಮ ನಡೆದಿತ್ತು. ಅದರಲ್ಲಿ ನಾನು ಒಬ್ಬಳು ಸಾಮಾನ್ಯ ಮಹಿಳೆಯಾಗಿ ಭಾಗವಹಿಸಿದ್ದೆ. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಭಿಕರು ‘ತಮ್ಮ ಮಕ್ಕಳನ್ನು ಕನ್ನಡ ಶಾಲೆಗೆ ಸೇರಿಸಿದವರು ಮಾತ್ರ ಮಾತನಾಡಿ’ ಎಂಬ ಕರಾರನ್ನು ವಿಧಿಸಿದ್ದರು. ಆ ಸಂದರ್ಭದಲ್ಲಿ ವೇದಿಕೆಗೆ ಬಂದವಳು ನಾನೊಬ್ಬಳೆ, ಏಕೆಂದರೆ ನನ್ನ ಮೂವರು ಹೆಣ್ಣು ಮಕ್ಕಳು ಕೂಡ ಕನ್ನಡ ಶಾಲೆಯಲ್ಲಿ ಓದುತ್ತಿದ್ದರು. ಈ ಕುರಿತ ವರದಿಗಳನ್ನು ನೋಡಬಹುದು” ಎಂದಿದ್ದಾರೆ.

“ನಾನು ಹೇಳಿದಂತಹ ಮಾತುಗಳನ್ನು ತಿರುಚುವ ಅಗತ್ಯವಿಲ್ಲ. ನನ್ನ ಮತ್ತು ಕನ್ನಡದ ನಡುವಿನ ನಂಟನ್ನು ಅನುಮಾನದಿಂದ ನೋಡುವಂತಹ ಎಲ್ಲರಿಗೆ ನಾನು ಹೇಳುವುದು ಏನೆಂದರೆ, ಕನ್ನಡವನ್ನು ನನ್ನಷ್ಟು ಪ್ರೀತಿಸಿ ನನ್ನಷ್ಟು ಬಳಕೆಗೆ ತನ್ನಿ, ಕನ್ನಡವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿ. ಇಷ್ಟು ಸಾಧನೆ ಮಾಡಿದರೆ ನೀವು ನನ್ನ ಮೇಲೆ ಕೆಸರೆರಚಾಟ ಮಾಡುವ ಅರ್ಹತೆ ಪಡೆಯುತ್ತೀರಿ. ಇಲ್ಲದಿದ್ದರೆ, ನಿಮ್ಮ ಯಾವುದೇ ಮಾತಿನಿಂದ ಯಾವುದೇ ಸ್ಪಷ್ಟತೆ ಸಿಗುವುದಿಲ್ಲ, ಧ್ವಂದ್ವಗಳಿರುತ್ತದೆ. ಕನ್ನಡ ನಂಬಿದವರನ್ನು ಯಾವತ್ತಿಗೂ ಕೈ ಬಿಡುವುದಿಲ್ಲ ಎನ್ನುವುದಕ್ಕೆ ನಾನೇ ಸಾಕ್ಷಿ” ಎಂದು ಬಾನು ಮುಷ್ತಾಕ್ ಹೇಳಿದ್ದಾರೆ.

ಕುಂಕುಮ ಹಚ್ಚುವ ನೆಪದಲ್ಲಿ ಲೈಂಗಿಕ ಕಿರುಕುಳ ಆರೋಪ: ತುಮಕೂರು ದೇವಾಲಯದಲ್ಲಿ ಅರ್ಚಕನ ಮೇಲೆ ಹಲ್ಲೆ-VIDEO

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...