Homeಕರ್ನಾಟಕದಸರಾ ಉದ್ಘಾಟಿಸಲು ಆಯ್ಕೆ ಮಾಡಿದ್ದಕ್ಕೆ ಕೋಮುವಾದಿಗಳಿಂದ ವಿರೋಧ: ಬಾನು ಮುಷ್ತಾಕ್ ಏನಂದ್ರು?

ದಸರಾ ಉದ್ಘಾಟಿಸಲು ಆಯ್ಕೆ ಮಾಡಿದ್ದಕ್ಕೆ ಕೋಮುವಾದಿಗಳಿಂದ ವಿರೋಧ: ಬಾನು ಮುಷ್ತಾಕ್ ಏನಂದ್ರು?

- Advertisement -
- Advertisement -

ಅಂತಾರಾಷ್ಟೀಯ ‘ಬೂಕರ್ ಪ್ರಶಸ್ತಿ’ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು 2025ರ ಮೈಸೂರು ದಸರಾ ಉದ್ಘಾಟಿಸಲು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದರ ವಿರುದ್ದ ಕೋಮುವಾದಿಗಳ ಅರಚಾಟ ಜೋರಾಗಿದೆ.

ಜಾಗತಿಕವಾಗಿ ಕನ್ನಡಕ್ಕೆ ಕೀರ್ತಿ ತಂದ ಶ್ರೇಷ್ಠ ಸಾಹಿತಿಯೊಬ್ಬರನ್ನು ಧರ್ಮ, ರಾಜಕೀಯ, ಕೋಮು ವಿಷದ ಮಾನದಂಡಗಳ ಮೂಲಕ ಅಳೆಯುವ ನೀಚ ರಾಜಕಾರಣ ಗರಿಗೆದರಿದೆ.

ಬಾನು ಮುಷ್ತಾಕ್ ಅವರ ಆಯ್ಕೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಾನು ಮುಷ್ತಾಕ್, ತಮ್ಮ ಮನದಾಳವನ್ನು ಹಂಚಿಕೊಂಡಿದ್ದಾರೆ.

ಮಂಗಳವಾರ (ಆ.26) ಕನ್ನಡ ಸಾಹಿತ್ಯ ಪರಿಷತ್‌ನಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ದಸರಾ ಉದ್ಘಾಟಿಸಲು ಆಯ್ಕೆ ಮಾಡಿರುವುದಕ್ಕೆ ಧನ್ಯವಾದ ತಿಳಿಸಿದ್ದಾರೆ.

“ಕನ್ನಡವನ್ನು ನನ್ನಷ್ಟು ಪ್ರೀತಿಸಿ, ನನ್ನಷ್ಟು ಬಳಕೆಗೆ ತನ್ನಿ, ಕನ್ನಡವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿ. ಇಷ್ಟು ಸಾಧನೆ ಮಾಡಿದರೆ ನೀವು ನನ್ನ ಮೇಲೆ ಕೆಸರೆರಚಾಟ ಮಾಡುವ ಅರ್ಹತೆ ಪಡೆಯುತ್ತೀರಿ” ಎಂದು ತನ್ನ ಆಯ್ಕೆಯನ್ನು ವಿರೋಧಿಸುತ್ತಿರುವವರಿಗೆ ಹೇಳಿದ್ದಾರೆ.

ಬಾನು ಮುಷ್ತಾಕ್ ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಲಿ ಎಂಬ ಕೆಲ ರಾಜಕಾರಣಿಗಳ ಮಾತಿಗೆ ಪ್ರತಿಕ್ರಿಯಿಸಿದ ಅವರು, ಬೂಕರ್ ಪ್ರಶಸ್ತಿಗೆ ನನ್ನ ಪುಸ್ತಕ ಸಲ್ಲಿಕೆಯಾಗಿ ಪಟ್ಟಿಯಾದ ಸಂದರ್ಭದಲ್ಲಿ ಮೈಸೂರಿನ ನಿವಾಸಿಯಾದ ನನ್ನ ಗೆಳತಿ, ಲೇಖಕಿ ಮೀನಾ ಮೈಸೂರು ನನಗೆ ಕರೆ ಮಾಡಿ, “ನಾನು ನಿಮಗೆ ಬೂಕರ್ ಬರಲಿ ಎಂದು ಚಾಮುಂಡೇಶ್ವರಿಗೆ ಹರಕೆ ಕಟ್ಟಿದ್ದೇನೆ” ಎಂದು ಹೇಳಿದ್ದರು. ನಾನು ಬಹಳ ಸಂತೋಷದಿಂದ “ನನಗೂ ನಿಮಗೂ ಒಳ್ಳೆಯದಾಗಲಿ” ಎಂಬ ಮಾತನ್ನು ಹೇಳಿದ್ದೆ” ಎಂದಿದ್ದಾರೆ.

ಮುಂದುವರಿದು, “ಬೂಕರ್ ಬಂದ ಬಳಿಕ ನನಗೆ ಮೈಸೂರಿಗೆ ಹೋಗುವ ಅವಕಾಶ ಸಿಕ್ಕಿರಲಿಲ್ಲ. ಬಳಿಕ ‘ಮೈಸೂರು ಲಿಟ್ ಫೆಸ್ಟ್‌’ಗೆ ಹೋದಾಗ ಸುತ್ತೂರು ಮಠದ ಸ್ವಾಮಿಗಳು ಸಾಹಿತಿಗಳಿಗೆ ಉಪಹಾರ ಕೂಟ ಏರ್ಪಡಿಸಿದ್ದರು. ಅಲ್ಲಿ ಸಿಕ್ಕಿದ್ದ ಮೀನಾ, “ಇವತ್ತು ಚಾಮುಂಡಿ ಬೆಟ್ಟಕ್ಕೆ ಹೋಗಿ ನನ್ನ ಹರಕೆ ತೀರಿಸೋಣ” ಎಂದಿದ್ದರು. ಆದರೆ, ನಾನು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರಿಂದ ಅದಕ್ಕೆ ಸಮಯ ಸಿಕ್ಕಿರಲಿಲ್ಲ. ಈಗ ಚಾಮುಂಡೇಶ್ವರಿ ತಾಯಿಯೇ ನನ್ನನ್ನು ಮೈಸೂರಿಗೆ ಕರೆಸಿಕೊಳ್ಳುತ್ತಿದ್ದಾಳೆ” ಎಂದು ಹೇಳಿದ್ದಾರೆ.

ರಾಜಕಾರಣಿಗಳ ಟೀಕೆಗಳ ಬಗ್ಗೆ ಮಾತನಾಡಿದ ಅವರು, “ಯಾವ ವಿಚಾರದಲ್ಲಿ ರಾಜಕಾರಣ ಮಾಡಬೇಕು, ಯಾವ ವಿಚಾರದಲ್ಲಿ ಮಾಡಬಾರದು ಎಂಬ ಪ್ರಜ್ಞೆ ಸಕ್ರಿಯ ರಾಜಕಾರಣಿಗಳಿಗೆ ಇರಬೇಕು. ಬೂಕರ್ ಎನ್ನುವಂತಹ ಬಹುಮಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿಗುವುದು ಸುಲಭದ ಮಾತಲ್ಲ. ಅದರ ಬಗ್ಗೆಯೂ ಒಂದಿಬ್ಬರು ಕೇವಲವಾಗಿ ಮಾತನಾಡುತ್ತಿದ್ದಾರೆ. ಅವರು ಮಾತನಾಡಲಿ, ನನಗೆ ಅದರ ಬಗ್ಗೆ ಬೇಸರಿವಿಲ್ಲ. ಏಕೆಂದರೆ, ಅವರು ಅವರ ಅರ್ಹತೆಗೆ ತಕ್ಕಂತೆ ಮಾತನಾಡುತ್ತಾರೆ” ಎಂದು ತಿರುಗೇಟು ನೀಡಿದ್ದಾರೆ.

“2023ರಲ್ಲಿ ನಾನು ಜನ ಸಾಹಿತ್ಯ ಸಮ್ಮೇಳನದಲ್ಲಿ ಆಡಿದ ಮಾತಿನ ಕೆಲ ತುಣುಕುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ನನ್ನ ವಿರುದ್ದ ದೊಡ್ಡ ಆರೋಪಗಳನ್ನು ಮಾಡಲಾಗುತ್ತಿದ್ದೆ. ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಸಾಹಿತಿಗಳನ್ನು ದೂರ ಇಟ್ಟಿದ್ದಕ್ಕೆ ಪ್ರತಿರೋಧವಾಗಿ ಜನ ಸಾಹಿತ್ಯ ಸಮ್ಮೇಳನ ಮಾಡಲಾಗಿತ್ತು. ಆ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ನಾನು ಮಹಿಳೆಯರು, ಅಲ್ಪ ಸಂಖ್ಯಾತರು ಮತ್ತು ತುಳಿತಕ್ಕೊಳಗಾದವರ ಪರ ಮಾತನಾಡಿದ್ದೆ” ಎಂದಿದ್ದಾರೆ.

“ನನ್ನ ಭಾಷಣದಲ್ಲಿ ಕನ್ನಡವನ್ನು ಭಾಷೆಯಾಗಿ ಬಳಸುವ ಬದಲು ಭಾವುಕವಾಗಿ ಬಳಸುತ್ತಿದ್ದೀರಿ. ದೇವತೆಯನ್ನಾಗಿ ಮಾಡಿ, ಮಂದಹಾಸದಲ್ಲಿದ್ದಾಗ ಅದಕ್ಕೆ ಕೈ ಮುಗಿದು ಬಂದರೆ ನಮ್ಮ ಕೆಲಸ ಮುಗಿಯಿತು ಎಂಬ ಭಾವನೆಯಲ್ಲಿ ಇದ್ದೀರಿ. ಭಾಷೆಯನ್ನು ಭಾಷೆಯಾಗಿ ಪರಿಗಣಿಸಿದಾಗ ನಾನೂ ಓದಬೇಕಾಗುತ್ತದೆ, ನೀವು ಓದಬೇಕಾಗುತ್ತದೆ. ನಮ್ಮ ಮಕ್ಕಳು ಕೂಡ ಓದಬೇಕಾಗುತ್ತದೆ. ಪ್ರತಿಯೊಬ್ಬರು ಓದಬೇಕಾಗುತ್ತದೆ ಎಂದಿದ್ದೆ.”

ಜೊತೆಗೆ, “ಹಾವೇರಿ ಸಮ್ಮೇಳನದಂತಹ ಕನ್ನಡ ಕಾರ್ಯಕ್ರಮಗಳಲ್ಲಿ ಅಲ್ಪಸಂಖ್ಯಾತ ಸಮುದಾಯದವರು ಎಲ್ಲಿ ನಿಲ್ಲಬೇಕು ಎಂಬ ಪ್ರಶ್ನೆಗೆ ‘ನೀವು ದೂರ ನಿಲ್ಲಬೇಡಿ, ಹತ್ತಿರ ಬನ್ನಿ’ ಎಂಬ ಆತ್ಮ ವಿಶ್ವಾಸವನ್ನು ವೃದ್ದಿಸುವ ಮಾತುಗಳನ್ನು ಆಡಿದ್ದೆ” ಎಂದು ತಿಳಿಸಿದ್ದಾರೆ.

“ಗೋಕಾಕ್ ಸಮಿತಿಯ ವರದಿ ಬಂದಾಗ ಹಾಸನದಲ್ಲಿ ಬಹಳ ದೊಡ್ಡ ಕಾರ್ಯಕ್ರಮ ನಡೆದಿತ್ತು. ಅದರಲ್ಲಿ ನಾನು ಒಬ್ಬಳು ಸಾಮಾನ್ಯ ಮಹಿಳೆಯಾಗಿ ಭಾಗವಹಿಸಿದ್ದೆ. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಭಿಕರು ‘ತಮ್ಮ ಮಕ್ಕಳನ್ನು ಕನ್ನಡ ಶಾಲೆಗೆ ಸೇರಿಸಿದವರು ಮಾತ್ರ ಮಾತನಾಡಿ’ ಎಂಬ ಕರಾರನ್ನು ವಿಧಿಸಿದ್ದರು. ಆ ಸಂದರ್ಭದಲ್ಲಿ ವೇದಿಕೆಗೆ ಬಂದವಳು ನಾನೊಬ್ಬಳೆ, ಏಕೆಂದರೆ ನನ್ನ ಮೂವರು ಹೆಣ್ಣು ಮಕ್ಕಳು ಕೂಡ ಕನ್ನಡ ಶಾಲೆಯಲ್ಲಿ ಓದುತ್ತಿದ್ದರು. ಈ ಕುರಿತ ವರದಿಗಳನ್ನು ನೋಡಬಹುದು” ಎಂದಿದ್ದಾರೆ.

“ನಾನು ಹೇಳಿದಂತಹ ಮಾತುಗಳನ್ನು ತಿರುಚುವ ಅಗತ್ಯವಿಲ್ಲ. ನನ್ನ ಮತ್ತು ಕನ್ನಡದ ನಡುವಿನ ನಂಟನ್ನು ಅನುಮಾನದಿಂದ ನೋಡುವಂತಹ ಎಲ್ಲರಿಗೆ ನಾನು ಹೇಳುವುದು ಏನೆಂದರೆ, ಕನ್ನಡವನ್ನು ನನ್ನಷ್ಟು ಪ್ರೀತಿಸಿ ನನ್ನಷ್ಟು ಬಳಕೆಗೆ ತನ್ನಿ, ಕನ್ನಡವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿ. ಇಷ್ಟು ಸಾಧನೆ ಮಾಡಿದರೆ ನೀವು ನನ್ನ ಮೇಲೆ ಕೆಸರೆರಚಾಟ ಮಾಡುವ ಅರ್ಹತೆ ಪಡೆಯುತ್ತೀರಿ. ಇಲ್ಲದಿದ್ದರೆ, ನಿಮ್ಮ ಯಾವುದೇ ಮಾತಿನಿಂದ ಯಾವುದೇ ಸ್ಪಷ್ಟತೆ ಸಿಗುವುದಿಲ್ಲ, ಧ್ವಂದ್ವಗಳಿರುತ್ತದೆ. ಕನ್ನಡ ನಂಬಿದವರನ್ನು ಯಾವತ್ತಿಗೂ ಕೈ ಬಿಡುವುದಿಲ್ಲ ಎನ್ನುವುದಕ್ಕೆ ನಾನೇ ಸಾಕ್ಷಿ” ಎಂದು ಬಾನು ಮುಷ್ತಾಕ್ ಹೇಳಿದ್ದಾರೆ.

ಕುಂಕುಮ ಹಚ್ಚುವ ನೆಪದಲ್ಲಿ ಲೈಂಗಿಕ ಕಿರುಕುಳ ಆರೋಪ: ತುಮಕೂರು ದೇವಾಲಯದಲ್ಲಿ ಅರ್ಚಕನ ಮೇಲೆ ಹಲ್ಲೆ-VIDEO

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...