Homeಕರ್ನಾಟಕದಸರಾ ಉದ್ಘಾಟಿಸಲು ಆಯ್ಕೆ ಮಾಡಿದ್ದಕ್ಕೆ ಕೋಮುವಾದಿಗಳಿಂದ ವಿರೋಧ: ಬಾನು ಮುಷ್ತಾಕ್ ಏನಂದ್ರು?

ದಸರಾ ಉದ್ಘಾಟಿಸಲು ಆಯ್ಕೆ ಮಾಡಿದ್ದಕ್ಕೆ ಕೋಮುವಾದಿಗಳಿಂದ ವಿರೋಧ: ಬಾನು ಮುಷ್ತಾಕ್ ಏನಂದ್ರು?

- Advertisement -
- Advertisement -

ಅಂತಾರಾಷ್ಟೀಯ ‘ಬೂಕರ್ ಪ್ರಶಸ್ತಿ’ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು 2025ರ ಮೈಸೂರು ದಸರಾ ಉದ್ಘಾಟಿಸಲು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದರ ವಿರುದ್ದ ಕೋಮುವಾದಿಗಳ ಅರಚಾಟ ಜೋರಾಗಿದೆ.

ಜಾಗತಿಕವಾಗಿ ಕನ್ನಡಕ್ಕೆ ಕೀರ್ತಿ ತಂದ ಶ್ರೇಷ್ಠ ಸಾಹಿತಿಯೊಬ್ಬರನ್ನು ಧರ್ಮ, ರಾಜಕೀಯ, ಕೋಮು ವಿಷದ ಮಾನದಂಡಗಳ ಮೂಲಕ ಅಳೆಯುವ ನೀಚ ರಾಜಕಾರಣ ಗರಿಗೆದರಿದೆ.

ಬಾನು ಮುಷ್ತಾಕ್ ಅವರ ಆಯ್ಕೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಾನು ಮುಷ್ತಾಕ್, ತಮ್ಮ ಮನದಾಳವನ್ನು ಹಂಚಿಕೊಂಡಿದ್ದಾರೆ.

ಮಂಗಳವಾರ (ಆ.26) ಕನ್ನಡ ಸಾಹಿತ್ಯ ಪರಿಷತ್‌ನಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ದಸರಾ ಉದ್ಘಾಟಿಸಲು ಆಯ್ಕೆ ಮಾಡಿರುವುದಕ್ಕೆ ಧನ್ಯವಾದ ತಿಳಿಸಿದ್ದಾರೆ.

“ಕನ್ನಡವನ್ನು ನನ್ನಷ್ಟು ಪ್ರೀತಿಸಿ, ನನ್ನಷ್ಟು ಬಳಕೆಗೆ ತನ್ನಿ, ಕನ್ನಡವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿ. ಇಷ್ಟು ಸಾಧನೆ ಮಾಡಿದರೆ ನೀವು ನನ್ನ ಮೇಲೆ ಕೆಸರೆರಚಾಟ ಮಾಡುವ ಅರ್ಹತೆ ಪಡೆಯುತ್ತೀರಿ” ಎಂದು ತನ್ನ ಆಯ್ಕೆಯನ್ನು ವಿರೋಧಿಸುತ್ತಿರುವವರಿಗೆ ಹೇಳಿದ್ದಾರೆ.

ಬಾನು ಮುಷ್ತಾಕ್ ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಲಿ ಎಂಬ ಕೆಲ ರಾಜಕಾರಣಿಗಳ ಮಾತಿಗೆ ಪ್ರತಿಕ್ರಿಯಿಸಿದ ಅವರು, ಬೂಕರ್ ಪ್ರಶಸ್ತಿಗೆ ನನ್ನ ಪುಸ್ತಕ ಸಲ್ಲಿಕೆಯಾಗಿ ಪಟ್ಟಿಯಾದ ಸಂದರ್ಭದಲ್ಲಿ ಮೈಸೂರಿನ ನಿವಾಸಿಯಾದ ನನ್ನ ಗೆಳತಿ, ಲೇಖಕಿ ಮೀನಾ ಮೈಸೂರು ನನಗೆ ಕರೆ ಮಾಡಿ, “ನಾನು ನಿಮಗೆ ಬೂಕರ್ ಬರಲಿ ಎಂದು ಚಾಮುಂಡೇಶ್ವರಿಗೆ ಹರಕೆ ಕಟ್ಟಿದ್ದೇನೆ” ಎಂದು ಹೇಳಿದ್ದರು. ನಾನು ಬಹಳ ಸಂತೋಷದಿಂದ “ನನಗೂ ನಿಮಗೂ ಒಳ್ಳೆಯದಾಗಲಿ” ಎಂಬ ಮಾತನ್ನು ಹೇಳಿದ್ದೆ” ಎಂದಿದ್ದಾರೆ.

ಮುಂದುವರಿದು, “ಬೂಕರ್ ಬಂದ ಬಳಿಕ ನನಗೆ ಮೈಸೂರಿಗೆ ಹೋಗುವ ಅವಕಾಶ ಸಿಕ್ಕಿರಲಿಲ್ಲ. ಬಳಿಕ ‘ಮೈಸೂರು ಲಿಟ್ ಫೆಸ್ಟ್‌’ಗೆ ಹೋದಾಗ ಸುತ್ತೂರು ಮಠದ ಸ್ವಾಮಿಗಳು ಸಾಹಿತಿಗಳಿಗೆ ಉಪಹಾರ ಕೂಟ ಏರ್ಪಡಿಸಿದ್ದರು. ಅಲ್ಲಿ ಸಿಕ್ಕಿದ್ದ ಮೀನಾ, “ಇವತ್ತು ಚಾಮುಂಡಿ ಬೆಟ್ಟಕ್ಕೆ ಹೋಗಿ ನನ್ನ ಹರಕೆ ತೀರಿಸೋಣ” ಎಂದಿದ್ದರು. ಆದರೆ, ನಾನು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರಿಂದ ಅದಕ್ಕೆ ಸಮಯ ಸಿಕ್ಕಿರಲಿಲ್ಲ. ಈಗ ಚಾಮುಂಡೇಶ್ವರಿ ತಾಯಿಯೇ ನನ್ನನ್ನು ಮೈಸೂರಿಗೆ ಕರೆಸಿಕೊಳ್ಳುತ್ತಿದ್ದಾಳೆ” ಎಂದು ಹೇಳಿದ್ದಾರೆ.

ರಾಜಕಾರಣಿಗಳ ಟೀಕೆಗಳ ಬಗ್ಗೆ ಮಾತನಾಡಿದ ಅವರು, “ಯಾವ ವಿಚಾರದಲ್ಲಿ ರಾಜಕಾರಣ ಮಾಡಬೇಕು, ಯಾವ ವಿಚಾರದಲ್ಲಿ ಮಾಡಬಾರದು ಎಂಬ ಪ್ರಜ್ಞೆ ಸಕ್ರಿಯ ರಾಜಕಾರಣಿಗಳಿಗೆ ಇರಬೇಕು. ಬೂಕರ್ ಎನ್ನುವಂತಹ ಬಹುಮಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿಗುವುದು ಸುಲಭದ ಮಾತಲ್ಲ. ಅದರ ಬಗ್ಗೆಯೂ ಒಂದಿಬ್ಬರು ಕೇವಲವಾಗಿ ಮಾತನಾಡುತ್ತಿದ್ದಾರೆ. ಅವರು ಮಾತನಾಡಲಿ, ನನಗೆ ಅದರ ಬಗ್ಗೆ ಬೇಸರಿವಿಲ್ಲ. ಏಕೆಂದರೆ, ಅವರು ಅವರ ಅರ್ಹತೆಗೆ ತಕ್ಕಂತೆ ಮಾತನಾಡುತ್ತಾರೆ” ಎಂದು ತಿರುಗೇಟು ನೀಡಿದ್ದಾರೆ.

“2023ರಲ್ಲಿ ನಾನು ಜನ ಸಾಹಿತ್ಯ ಸಮ್ಮೇಳನದಲ್ಲಿ ಆಡಿದ ಮಾತಿನ ಕೆಲ ತುಣುಕುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ನನ್ನ ವಿರುದ್ದ ದೊಡ್ಡ ಆರೋಪಗಳನ್ನು ಮಾಡಲಾಗುತ್ತಿದ್ದೆ. ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಸಾಹಿತಿಗಳನ್ನು ದೂರ ಇಟ್ಟಿದ್ದಕ್ಕೆ ಪ್ರತಿರೋಧವಾಗಿ ಜನ ಸಾಹಿತ್ಯ ಸಮ್ಮೇಳನ ಮಾಡಲಾಗಿತ್ತು. ಆ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ನಾನು ಮಹಿಳೆಯರು, ಅಲ್ಪ ಸಂಖ್ಯಾತರು ಮತ್ತು ತುಳಿತಕ್ಕೊಳಗಾದವರ ಪರ ಮಾತನಾಡಿದ್ದೆ” ಎಂದಿದ್ದಾರೆ.

“ನನ್ನ ಭಾಷಣದಲ್ಲಿ ಕನ್ನಡವನ್ನು ಭಾಷೆಯಾಗಿ ಬಳಸುವ ಬದಲು ಭಾವುಕವಾಗಿ ಬಳಸುತ್ತಿದ್ದೀರಿ. ದೇವತೆಯನ್ನಾಗಿ ಮಾಡಿ, ಮಂದಹಾಸದಲ್ಲಿದ್ದಾಗ ಅದಕ್ಕೆ ಕೈ ಮುಗಿದು ಬಂದರೆ ನಮ್ಮ ಕೆಲಸ ಮುಗಿಯಿತು ಎಂಬ ಭಾವನೆಯಲ್ಲಿ ಇದ್ದೀರಿ. ಭಾಷೆಯನ್ನು ಭಾಷೆಯಾಗಿ ಪರಿಗಣಿಸಿದಾಗ ನಾನೂ ಓದಬೇಕಾಗುತ್ತದೆ, ನೀವು ಓದಬೇಕಾಗುತ್ತದೆ. ನಮ್ಮ ಮಕ್ಕಳು ಕೂಡ ಓದಬೇಕಾಗುತ್ತದೆ. ಪ್ರತಿಯೊಬ್ಬರು ಓದಬೇಕಾಗುತ್ತದೆ ಎಂದಿದ್ದೆ.”

ಜೊತೆಗೆ, “ಹಾವೇರಿ ಸಮ್ಮೇಳನದಂತಹ ಕನ್ನಡ ಕಾರ್ಯಕ್ರಮಗಳಲ್ಲಿ ಅಲ್ಪಸಂಖ್ಯಾತ ಸಮುದಾಯದವರು ಎಲ್ಲಿ ನಿಲ್ಲಬೇಕು ಎಂಬ ಪ್ರಶ್ನೆಗೆ ‘ನೀವು ದೂರ ನಿಲ್ಲಬೇಡಿ, ಹತ್ತಿರ ಬನ್ನಿ’ ಎಂಬ ಆತ್ಮ ವಿಶ್ವಾಸವನ್ನು ವೃದ್ದಿಸುವ ಮಾತುಗಳನ್ನು ಆಡಿದ್ದೆ” ಎಂದು ತಿಳಿಸಿದ್ದಾರೆ.

“ಗೋಕಾಕ್ ಸಮಿತಿಯ ವರದಿ ಬಂದಾಗ ಹಾಸನದಲ್ಲಿ ಬಹಳ ದೊಡ್ಡ ಕಾರ್ಯಕ್ರಮ ನಡೆದಿತ್ತು. ಅದರಲ್ಲಿ ನಾನು ಒಬ್ಬಳು ಸಾಮಾನ್ಯ ಮಹಿಳೆಯಾಗಿ ಭಾಗವಹಿಸಿದ್ದೆ. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಭಿಕರು ‘ತಮ್ಮ ಮಕ್ಕಳನ್ನು ಕನ್ನಡ ಶಾಲೆಗೆ ಸೇರಿಸಿದವರು ಮಾತ್ರ ಮಾತನಾಡಿ’ ಎಂಬ ಕರಾರನ್ನು ವಿಧಿಸಿದ್ದರು. ಆ ಸಂದರ್ಭದಲ್ಲಿ ವೇದಿಕೆಗೆ ಬಂದವಳು ನಾನೊಬ್ಬಳೆ, ಏಕೆಂದರೆ ನನ್ನ ಮೂವರು ಹೆಣ್ಣು ಮಕ್ಕಳು ಕೂಡ ಕನ್ನಡ ಶಾಲೆಯಲ್ಲಿ ಓದುತ್ತಿದ್ದರು. ಈ ಕುರಿತ ವರದಿಗಳನ್ನು ನೋಡಬಹುದು” ಎಂದಿದ್ದಾರೆ.

“ನಾನು ಹೇಳಿದಂತಹ ಮಾತುಗಳನ್ನು ತಿರುಚುವ ಅಗತ್ಯವಿಲ್ಲ. ನನ್ನ ಮತ್ತು ಕನ್ನಡದ ನಡುವಿನ ನಂಟನ್ನು ಅನುಮಾನದಿಂದ ನೋಡುವಂತಹ ಎಲ್ಲರಿಗೆ ನಾನು ಹೇಳುವುದು ಏನೆಂದರೆ, ಕನ್ನಡವನ್ನು ನನ್ನಷ್ಟು ಪ್ರೀತಿಸಿ ನನ್ನಷ್ಟು ಬಳಕೆಗೆ ತನ್ನಿ, ಕನ್ನಡವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿ. ಇಷ್ಟು ಸಾಧನೆ ಮಾಡಿದರೆ ನೀವು ನನ್ನ ಮೇಲೆ ಕೆಸರೆರಚಾಟ ಮಾಡುವ ಅರ್ಹತೆ ಪಡೆಯುತ್ತೀರಿ. ಇಲ್ಲದಿದ್ದರೆ, ನಿಮ್ಮ ಯಾವುದೇ ಮಾತಿನಿಂದ ಯಾವುದೇ ಸ್ಪಷ್ಟತೆ ಸಿಗುವುದಿಲ್ಲ, ಧ್ವಂದ್ವಗಳಿರುತ್ತದೆ. ಕನ್ನಡ ನಂಬಿದವರನ್ನು ಯಾವತ್ತಿಗೂ ಕೈ ಬಿಡುವುದಿಲ್ಲ ಎನ್ನುವುದಕ್ಕೆ ನಾನೇ ಸಾಕ್ಷಿ” ಎಂದು ಬಾನು ಮುಷ್ತಾಕ್ ಹೇಳಿದ್ದಾರೆ.

ಕುಂಕುಮ ಹಚ್ಚುವ ನೆಪದಲ್ಲಿ ಲೈಂಗಿಕ ಕಿರುಕುಳ ಆರೋಪ: ತುಮಕೂರು ದೇವಾಲಯದಲ್ಲಿ ಅರ್ಚಕನ ಮೇಲೆ ಹಲ್ಲೆ-VIDEO

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...