Homeಮುಖಪುಟಇಸ್ರೇಲ್ ವಿರೋಧಿ ಹೇಳಿಕೆಗೆ ಪಕ್ಷದ ವರಿಷ್ಠರಿಂದ ವಿರೋಧ; ಜೆಡಿಯು ವಕ್ತಾರ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕೆಸಿ...

ಇಸ್ರೇಲ್ ವಿರೋಧಿ ಹೇಳಿಕೆಗೆ ಪಕ್ಷದ ವರಿಷ್ಠರಿಂದ ವಿರೋಧ; ಜೆಡಿಯು ವಕ್ತಾರ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕೆಸಿ ತ್ಯಾಗಿ

- Advertisement -
- Advertisement -

ಪ್ಯಾಲೇಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ಖಂಡಿಸಿದ್ದ ಜೆಡಿಯುನ ಹಿರಿಯ ನಾಯಕ ಕೆಸಿ ತ್ಯಾಗಿ ಅವರು ಪಕ್ಷದ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಸ್ಥಾನಕ್ಕೆ ರಾಜೀವ್ ರಂಜನ್ ಪ್ರಸಾದ್ ಅವರನ್ನು ನೇಮಕ ಮಾಡಿದ್ದಾರೆ.

“ವೈಯಕ್ತಿಕ ಕಾರಣಗಳಿಗಾಗಿ ತ್ಯಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ” ಎಂದು ಪಕ್ಷವು ಹೇಳಿದ್ದರೂ, ಪ್ರಮುಖ ವಿಷಯಗಳ ಕುರಿತು ತ್ಯಾಗಿ ಅವರ ಹೇಳಿಕೆಗಳು ಜೆಡಿಯು ಮಿತ್ರಪಕ್ಷವಾದ ಬಿಜೆಪಿ ನಾಯಕತ್ವಕ್ಕೆ  ಸರಿಹೋಗದ ಕಾರಣ ವರಿಷ್ಠರು ಅವರ ರಾಜೀನಾಮೆ ಪಡೆದಿದ್ದಾರೆ ಎನ್ನಲಾಗಿದೆ.

“ಜನತಾದಳ (ಯುನೈಟೆಡ್) ರಾಷ್ಟ್ರೀಯ ಅಧ್ಯಕ್ಷರಾದ ನಿತೀಶ್ ಕುಮಾರ್ (ಮುಖ್ಯಮಂತ್ರಿ, ಬಿಹಾರ) ಅವರು ರಾಜೀವ್ ರಂಜನ್ ಪ್ರಸಾದ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿದ್ದಾರೆ. ವಕ್ತಾರ ಹುದ್ದೆಗೆ ಪಕ್ಷದಲ್ಲಿರುವ ಕೆ.ಸಿ. ತ್ಯಾಗಿ ಅವರು ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣದಿಂದ ಪಕ್ಷದ ವಕ್ತಾರ ಹುದ್ದೆಗೆ ಸ್ಥಾನ ನೀಡಲಾಗಿದೆ” ಎಂದು ಜೆಡಿಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜೆಡಿಯು ಬಿಡುಗಡೆ ಮಾಡಿರುವ ಪತ್ರದಲ್ಲಿ, ತ್ಯಾಗಿ ಅವರು ಈ ಹಿಂದೆಯೂ ಸಹ ಸಾಂಸ್ಥಿಕ ಜವಾಬ್ದಾರಿಯಿಂದ ಮುಕ್ತರಾಗಲು ವಿನಂತಿಸಿದ್ದರು ಎಂದು ಹೇಳಿದ್ದಾರೆ. “ಕಳೆದ ಕೆಲವು ತಿಂಗಳುಗಳಿಂದ ನಾನು ಟಿವಿ ಚರ್ಚೆಗಳಿಂದ ದೂರವಿರುವುದನ್ನು ನೀವು ಗಮನಿಸಿರಬೇಕು. ಬೇರೆ ಕೆಲಸದ ಕಾರಣದಿಂದ ನಾನು ವಕ್ತಾರ ಹುದ್ದೆಗೆ ನ್ಯಾಯ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು ಈ ಜವಾಬ್ದಾರಿಯಿಂದ ನನ್ನನ್ನು ಮುಕ್ತಗೊಳಿಸಿ. ಬಿಹಾರ ಸರ್ಕಾರದ ಸಾಧನೆಗಳ ಕುರಿತು ಪ್ರಚಾರಕ್ಕೆ ನಾನು ಲಭ್ಯವಿದ್ದೇನೆ” ಎಂದು ಅವರು ಬರೆದಿದ್ದಾರೆ.

ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತದ ಕೊರತೆಯ ನಂತರ ನರೇಂದ್ರ ಮೋದಿ ಸರ್ಕಾರವನ್ನು ಬೆಂಬಲಿಸಿದ ಪ್ರಮುಖ ಮಿತ್ರಪಕ್ಷಗಳಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು ಸೇರಿದೆ. ಆಡಳಿತಾರೂಢ ಎನ್‌ಡಿಎ ಬಣದಲ್ಲಿ ಸಮನ್ವಯತೆ ಕಾಯ್ದುಕೊಳ್ಳುವಂತೆ ಬಿಜೆಪಿಯು ಮಿತ್ರಪಕ್ಷಗಳನ್ನು ಕೇಳುತ್ತಿದೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ, ವಕ್ಫ್ ತಿದ್ದುಪಡಿ ಮಸೂದೆ, ಏಕರೂಪ ನಾಗರಿಕ ಸಂಹಿತೆ ಮತ್ತು ಗಾಜಾದಲ್ಲಿನ ಯುದ್ಧದಂತಹ ಪ್ರಮುಖ ವಿಷಯಗಳ ಕುರಿತು ತ್ಯಾಗಿ ಅವರ ಟೀಕೆಗಳು ಜೆಡಿಯು ನಾಯಕರ ಕಣ್ಣು ಕೆಂಪಾಗುವಂತೆ ಮಾಡಿತು.

ಇತ್ತೀಚೆಗೆ, ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡು ಹೇಳಿಕೆಯನ್ನು ನೀಡಿದ ಸಂಸದರು ಮತ್ತು ಮಾಜಿ ಸಂಸದರಲ್ಲಿ ತ್ಯಾಗಿಯೂ ಸೇರಿದ್ದಾರೆ. “ನಾವು, ರಾಜಕೀಯ ಸ್ಪೆಕ್ಟ್ರಮ್‌ನ ಕೆಳಗಿನ ಸಹಿ ಮಾಡಲಾದ ಸಂಸದರು, ನಡೆಯುತ್ತಿರುವ ಜಿಯೋನಿಸ್ಟ್ ಆಕ್ರಮಣವನ್ನು ಮತ್ತು ಇಸ್ರೇಲ್‌ನಿಂದ ಪ್ಯಾಲೇಸ್ಟಿನಿಯನ್ ಜನರ ಘೋರ ನರಮೇಧವನ್ನು ನಿಸ್ಸಂದಿಗ್ಧವಾಗಿ ಖಂಡಿಸುತ್ತೇವೆ. ಈ ಕ್ರೂರ ಆಕ್ರಮಣವು ಮಾನವೀಯತೆಯ ಅವಮಾನ ಮಾತ್ರವಲ್ಲದೆ ಅಂತರರಾಷ್ಟ್ರೀಯ ಕಾನೂನು ಮತ್ತು ತತ್ವಗಳ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಹೇಳಿಕೆಯಲ್ಲಿ ಇದ್ರೇಲ್ ಆಕ್ರಮಣಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ.

“ನ್ಯಾಯ ಮತ್ತು ಮಾನವ ಹಕ್ಕುಗಳ ಕಾರಣಕ್ಕಾಗಿ ಯಾವಾಗಲೂ ಹೋರಾಡುವ ರಾಷ್ಟ್ರವಾಗಿ, ಭಾರತವು ಈ ನರಮೇಧದಲ್ಲಿ ಭಾಗಿಯಾಗಲು ಸಾಧ್ಯವಿಲ್ಲ” ಎಂದು ಹೇಳಿಯಲ್ಲಿದೆ. ಹಲವಾರು ವಿರೋಧ ಪಕ್ಷದ ರಾಜಕಾರಣಿಗಳಲ್ಲದೆ, ತ್ಯಾಗಿ ಕೂಡ ಈ ಹೇಳಿಕೆಗೆ ತಮ್ಮ ಸಹಮತ ವ್ಯಕ್ತಪಡಿಸಿ ಸಹಿ ಹಾಕಿದ್ದರು.

73ರ ಹರೆಯದ ತ್ಯಾಗಿ, ಹಲವು ವಿಚಾರಗಳಲ್ಲಿ ತಮ್ಮದೇ ಆದ ನಿಲುವು ತಳೆದು ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದಾರೆ ಎಂದು ಜೆಡಿಯು ಮೂಲಗಳು ತಿಳಿಸಿವೆ. ಜೆಡಿಯು ಮತ್ತು ಅದರ ಮಿತ್ರ ಪಕ್ಷವಾದ ಬಿಜೆಪಿ ನಡುವೆ “ಗೊಂದಲ ಮತ್ತು ಅನಗತ್ಯ ಘರ್ಷಣೆಯನ್ನು ಸೃಷ್ಟಿಸುವ” ವಿವಾದಾತ್ಮಕ ವಿಷಯಗಳ ಬಗ್ಗೆ ಸಾರ್ವಜನಿಕ ಹೇಳಿಕೆಗಳನ್ನು ನೀಡುವ ಮೊದಲು ತ್ಯಾಗಿ ಸಮಾಲೋಚನೆ ನಡೆಸಬೇಕಿತ್ತು ಎಂದು ಪಕ್ಷದ ನಾಯಕತ್ವವು ಭಾವಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ; ‘ಕಾನೂನು ವ್ಯವಸ್ಥೆಯಲ್ಲಿ ನನಗೆ ನಂಬಿಕೆಯಿದೆ..’; ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಮೌನ ಮುರಿದ ಮಲಯಾಳಂ ನಟ ಜಯಸೂರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...