Homeಮುಖಪುಟಇಸ್ರೇಲ್ ವಿರೋಧಿ ಹೇಳಿಕೆಗೆ ಪಕ್ಷದ ವರಿಷ್ಠರಿಂದ ವಿರೋಧ; ಜೆಡಿಯು ವಕ್ತಾರ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕೆಸಿ...

ಇಸ್ರೇಲ್ ವಿರೋಧಿ ಹೇಳಿಕೆಗೆ ಪಕ್ಷದ ವರಿಷ್ಠರಿಂದ ವಿರೋಧ; ಜೆಡಿಯು ವಕ್ತಾರ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕೆಸಿ ತ್ಯಾಗಿ

- Advertisement -
- Advertisement -

ಪ್ಯಾಲೇಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ಖಂಡಿಸಿದ್ದ ಜೆಡಿಯುನ ಹಿರಿಯ ನಾಯಕ ಕೆಸಿ ತ್ಯಾಗಿ ಅವರು ಪಕ್ಷದ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಸ್ಥಾನಕ್ಕೆ ರಾಜೀವ್ ರಂಜನ್ ಪ್ರಸಾದ್ ಅವರನ್ನು ನೇಮಕ ಮಾಡಿದ್ದಾರೆ.

“ವೈಯಕ್ತಿಕ ಕಾರಣಗಳಿಗಾಗಿ ತ್ಯಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ” ಎಂದು ಪಕ್ಷವು ಹೇಳಿದ್ದರೂ, ಪ್ರಮುಖ ವಿಷಯಗಳ ಕುರಿತು ತ್ಯಾಗಿ ಅವರ ಹೇಳಿಕೆಗಳು ಜೆಡಿಯು ಮಿತ್ರಪಕ್ಷವಾದ ಬಿಜೆಪಿ ನಾಯಕತ್ವಕ್ಕೆ  ಸರಿಹೋಗದ ಕಾರಣ ವರಿಷ್ಠರು ಅವರ ರಾಜೀನಾಮೆ ಪಡೆದಿದ್ದಾರೆ ಎನ್ನಲಾಗಿದೆ.

“ಜನತಾದಳ (ಯುನೈಟೆಡ್) ರಾಷ್ಟ್ರೀಯ ಅಧ್ಯಕ್ಷರಾದ ನಿತೀಶ್ ಕುಮಾರ್ (ಮುಖ್ಯಮಂತ್ರಿ, ಬಿಹಾರ) ಅವರು ರಾಜೀವ್ ರಂಜನ್ ಪ್ರಸಾದ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿದ್ದಾರೆ. ವಕ್ತಾರ ಹುದ್ದೆಗೆ ಪಕ್ಷದಲ್ಲಿರುವ ಕೆ.ಸಿ. ತ್ಯಾಗಿ ಅವರು ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣದಿಂದ ಪಕ್ಷದ ವಕ್ತಾರ ಹುದ್ದೆಗೆ ಸ್ಥಾನ ನೀಡಲಾಗಿದೆ” ಎಂದು ಜೆಡಿಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜೆಡಿಯು ಬಿಡುಗಡೆ ಮಾಡಿರುವ ಪತ್ರದಲ್ಲಿ, ತ್ಯಾಗಿ ಅವರು ಈ ಹಿಂದೆಯೂ ಸಹ ಸಾಂಸ್ಥಿಕ ಜವಾಬ್ದಾರಿಯಿಂದ ಮುಕ್ತರಾಗಲು ವಿನಂತಿಸಿದ್ದರು ಎಂದು ಹೇಳಿದ್ದಾರೆ. “ಕಳೆದ ಕೆಲವು ತಿಂಗಳುಗಳಿಂದ ನಾನು ಟಿವಿ ಚರ್ಚೆಗಳಿಂದ ದೂರವಿರುವುದನ್ನು ನೀವು ಗಮನಿಸಿರಬೇಕು. ಬೇರೆ ಕೆಲಸದ ಕಾರಣದಿಂದ ನಾನು ವಕ್ತಾರ ಹುದ್ದೆಗೆ ನ್ಯಾಯ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು ಈ ಜವಾಬ್ದಾರಿಯಿಂದ ನನ್ನನ್ನು ಮುಕ್ತಗೊಳಿಸಿ. ಬಿಹಾರ ಸರ್ಕಾರದ ಸಾಧನೆಗಳ ಕುರಿತು ಪ್ರಚಾರಕ್ಕೆ ನಾನು ಲಭ್ಯವಿದ್ದೇನೆ” ಎಂದು ಅವರು ಬರೆದಿದ್ದಾರೆ.

ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತದ ಕೊರತೆಯ ನಂತರ ನರೇಂದ್ರ ಮೋದಿ ಸರ್ಕಾರವನ್ನು ಬೆಂಬಲಿಸಿದ ಪ್ರಮುಖ ಮಿತ್ರಪಕ್ಷಗಳಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು ಸೇರಿದೆ. ಆಡಳಿತಾರೂಢ ಎನ್‌ಡಿಎ ಬಣದಲ್ಲಿ ಸಮನ್ವಯತೆ ಕಾಯ್ದುಕೊಳ್ಳುವಂತೆ ಬಿಜೆಪಿಯು ಮಿತ್ರಪಕ್ಷಗಳನ್ನು ಕೇಳುತ್ತಿದೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ, ವಕ್ಫ್ ತಿದ್ದುಪಡಿ ಮಸೂದೆ, ಏಕರೂಪ ನಾಗರಿಕ ಸಂಹಿತೆ ಮತ್ತು ಗಾಜಾದಲ್ಲಿನ ಯುದ್ಧದಂತಹ ಪ್ರಮುಖ ವಿಷಯಗಳ ಕುರಿತು ತ್ಯಾಗಿ ಅವರ ಟೀಕೆಗಳು ಜೆಡಿಯು ನಾಯಕರ ಕಣ್ಣು ಕೆಂಪಾಗುವಂತೆ ಮಾಡಿತು.

ಇತ್ತೀಚೆಗೆ, ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡು ಹೇಳಿಕೆಯನ್ನು ನೀಡಿದ ಸಂಸದರು ಮತ್ತು ಮಾಜಿ ಸಂಸದರಲ್ಲಿ ತ್ಯಾಗಿಯೂ ಸೇರಿದ್ದಾರೆ. “ನಾವು, ರಾಜಕೀಯ ಸ್ಪೆಕ್ಟ್ರಮ್‌ನ ಕೆಳಗಿನ ಸಹಿ ಮಾಡಲಾದ ಸಂಸದರು, ನಡೆಯುತ್ತಿರುವ ಜಿಯೋನಿಸ್ಟ್ ಆಕ್ರಮಣವನ್ನು ಮತ್ತು ಇಸ್ರೇಲ್‌ನಿಂದ ಪ್ಯಾಲೇಸ್ಟಿನಿಯನ್ ಜನರ ಘೋರ ನರಮೇಧವನ್ನು ನಿಸ್ಸಂದಿಗ್ಧವಾಗಿ ಖಂಡಿಸುತ್ತೇವೆ. ಈ ಕ್ರೂರ ಆಕ್ರಮಣವು ಮಾನವೀಯತೆಯ ಅವಮಾನ ಮಾತ್ರವಲ್ಲದೆ ಅಂತರರಾಷ್ಟ್ರೀಯ ಕಾನೂನು ಮತ್ತು ತತ್ವಗಳ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಹೇಳಿಕೆಯಲ್ಲಿ ಇದ್ರೇಲ್ ಆಕ್ರಮಣಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ.

“ನ್ಯಾಯ ಮತ್ತು ಮಾನವ ಹಕ್ಕುಗಳ ಕಾರಣಕ್ಕಾಗಿ ಯಾವಾಗಲೂ ಹೋರಾಡುವ ರಾಷ್ಟ್ರವಾಗಿ, ಭಾರತವು ಈ ನರಮೇಧದಲ್ಲಿ ಭಾಗಿಯಾಗಲು ಸಾಧ್ಯವಿಲ್ಲ” ಎಂದು ಹೇಳಿಯಲ್ಲಿದೆ. ಹಲವಾರು ವಿರೋಧ ಪಕ್ಷದ ರಾಜಕಾರಣಿಗಳಲ್ಲದೆ, ತ್ಯಾಗಿ ಕೂಡ ಈ ಹೇಳಿಕೆಗೆ ತಮ್ಮ ಸಹಮತ ವ್ಯಕ್ತಪಡಿಸಿ ಸಹಿ ಹಾಕಿದ್ದರು.

73ರ ಹರೆಯದ ತ್ಯಾಗಿ, ಹಲವು ವಿಚಾರಗಳಲ್ಲಿ ತಮ್ಮದೇ ಆದ ನಿಲುವು ತಳೆದು ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದಾರೆ ಎಂದು ಜೆಡಿಯು ಮೂಲಗಳು ತಿಳಿಸಿವೆ. ಜೆಡಿಯು ಮತ್ತು ಅದರ ಮಿತ್ರ ಪಕ್ಷವಾದ ಬಿಜೆಪಿ ನಡುವೆ “ಗೊಂದಲ ಮತ್ತು ಅನಗತ್ಯ ಘರ್ಷಣೆಯನ್ನು ಸೃಷ್ಟಿಸುವ” ವಿವಾದಾತ್ಮಕ ವಿಷಯಗಳ ಬಗ್ಗೆ ಸಾರ್ವಜನಿಕ ಹೇಳಿಕೆಗಳನ್ನು ನೀಡುವ ಮೊದಲು ತ್ಯಾಗಿ ಸಮಾಲೋಚನೆ ನಡೆಸಬೇಕಿತ್ತು ಎಂದು ಪಕ್ಷದ ನಾಯಕತ್ವವು ಭಾವಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ; ‘ಕಾನೂನು ವ್ಯವಸ್ಥೆಯಲ್ಲಿ ನನಗೆ ನಂಬಿಕೆಯಿದೆ..’; ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಮೌನ ಮುರಿದ ಮಲಯಾಳಂ ನಟ ಜಯಸೂರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...