Homeಮುಖಪುಟದೆಹಲಿಯಲ್ಲಿ ವಿರೋಧ; ತೆಲಂಗಾಣದಲ್ಲಿ ಪರ - ಅದಾನಿ ಬಗ್ಗೆ ಕಾಂಗ್ರೆಸ್‌ನ ದ್ವಂದ್ವ ನಿಲುವು

ದೆಹಲಿಯಲ್ಲಿ ವಿರೋಧ; ತೆಲಂಗಾಣದಲ್ಲಿ ಪರ – ಅದಾನಿ ಬಗ್ಗೆ ಕಾಂಗ್ರೆಸ್‌ನ ದ್ವಂದ್ವ ನಿಲುವು

- Advertisement -
- Advertisement -

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿಯ ಅದಾನಿ ಗ್ರೂಪ್ ಮತ್ತು ತೆಲಂಗಾಣದ ಕಾಂಗ್ರೆಸ್ ಸರ್ಕಾರ ನಡುವೆ ನಡೆದ ಒಪ್ಪಂದವನ್ನು ವಿರೋಧಿಸುವ ಘೋಷವಾಕ್ಯವಿರುವ ಟಿ-ಶರ್ಟ್ ಧರಿಸಿ ರಾಜ್ಯದ ವಿಧಾನಸಭೆಯ ಅಧಿವೇಶನದ ಮೊದಲ ದಿನ ಹಾಜರಾಗಲು ಯತ್ನಿಸಿದ ಬಿಆರ್‌ಎಸ್‌ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ ಮತ್ತು ಮಾಜಿ ಸಚಿವ ಟಿ.ಹರೀಶ್ ರಾವ್ ಸೇರಿದಂತೆ ಪಕ್ಷದ ಹಲವು ಶಾಸಕರು ಮತ್ತು ಎಂಎಲ್‌ಸಿಗಳನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿಯಲ್ಲಿ ವಿರೋಧ

ಗನ್ ಪಾರ್ಕ್ ಬಳಿಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ಬಿಆರ್‌ಎಸ್ ಶಾಸಕರು ಮತ್ತು ಎಂಎಲ್‌ಸಿಗಳು ನಂತರ ವಿಧಾನಸಭೆಯತ್ತ ತೆರಳುತ್ತಿದ್ದಾಗ ಪೊಲೀಸರು ತಡೆದಿದ್ದಾರೆ. ಪೊಲೀಸರು ಅವರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು. ಬಿಆರ್‌ಎಸ್ ಶಾಸಕರು ಧರಿಸಿದ್ದ ಟೀ ಶರ್ಟ್‌ಗಳಲ್ಲಿ ಅದಾನಿ-ರೇವಂತ್ ಭಾಯ್ ಭಾಯಿ ಎಂಬ ಘೋಷಣೆಯನ್ನು ಬರೆಯಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಗನ್ ಪಾರ್ಕ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್, “ದೇಶದ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಅದಾನಿಯನ್ನು ಟೀಕಿಸುತ್ತಿದೆ. ಆದರೆ, ತೆಲಂಗಾಣದಲ್ಲಿ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಮತ್ತು ಅದಾನಿ ಒಂದಾಗಿದ್ದಾರೆ. ರೇವಂತ್ ರೆಡ್ಡಿ ಮತ್ತು ಅದಾನಿ ನಡುವಿನ ಸ್ನೇಹ ಸಂಬಂಧವನ್ನು ಈಗ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಬಹಿರಂಗಪಡಿಸುತ್ತೇವೆ” ಎಂದು ಹೇಳಿದ್ದಾರೆ. ದೆಹಲಿಯಲ್ಲಿ ವಿರೋಧ

ನಂತರ ತೆಲಂಗಾಣ ಭವನದಲ್ಲಿ ಜಮಾಯಿಸಿದ ಬಿಆರ್‌ಎಸ್ ಶಾಸಕರು ಮತ್ತು ಎಂಎಲ್‌ಸಿಗಳು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಜಗದೀಶ್ ರೆಡ್ಡಿ, ಇದೇ ಮೊದಲ ಬಾರಿಗೆ ಶಾಸಕರನ್ನು ವಿಧಾನಸಭೆಯ ಸದನಕ್ಕೆ ಬಿಡಲಿಲ್ಲ ಎಂದು ಆರೋಪಿಸಿದ್ದಾರೆ. “ಶಾಸಕರು ಯಾವ ರೀತಿಯ ಡ್ರೆಸ್ ಧರಿಸಬೇಕು ಎಂಬುದನ್ನು ರಾಜ್ಯ ವಿಧಾನಸಭಾಧ್ಯಕ್ಷರು ತಿಳಿಸಬೇಕೆ. ಅದಾನಿ-ರೇವಂತ್ ವಿರೋಧಿಸಿ ಟೀಶರ್ಟ್ ಧರಿಸುವುದರಲ್ಲಿ ತಪ್ಪೇನು” ಎಂದು ಅವರು ಪ್ರಶ್ನಿಸಿದ್ದಾರೆ.

ಎಐಸಿಸಿ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಅದಾನಿ ವಿರುದ್ಧ ಮಾತನಾಡುತ್ತಿದ್ದಾರೆ. ಆದರೆ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ರಾಜ್ಯದಲ್ಲಿ ಅದಾನಿಯನ್ನು ಬೆಂಬಲಿಸುತ್ತಿದ್ದಾರೆ ಎಂದು ಜಗದೀಶ್ ರೆಡ್ಡಿ ಹೇಳಿದ್ದಾರೆ. ಇದೇ ವಿಷಯವನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ಒಳಗೆ ಬಿಡಲಾಯಿತು. ಆದರೆ ಬಿಆರ್‌ಎಸ್ ನಾಯಕರು ಅದಾನಿ ಟಿ-ಶರ್ಟ್ ಧರಿಸಿ ಕಾಣಿಸಿಕೊಂಡಾಗ ಸ್ಪೀಕರ್ ಅವರನ್ನು ವಿಧಾನಸಭೆಯೊಳಗೆ ಬಿಡಲಿಲ್ಲ ಎಂದು ಅವರು ನೆನಪಿಸಿಕೊಂಡಿದ್ದಾರೆ.

ರಾಜ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಮಧುಸೂದನ ಚಾರಿ ಮಾತನಾಡಿ, ಶಾಸಕರಿಗೆ ಅಧಿವೇಶನಕ್ಕೆ ಹಾಜರಾಗಲು ಅವಕಾಶ ನೀಡದಿರುವುದು ಅವರ ಹಕ್ಕುಗಳನ್ನು ಹತ್ತಿಕ್ಕುವ ಕೆಲಸವಲ್ಲದೆ ಮತ್ತೇನೂ ಅಲ್ಲ. ಪರಿಷತ್ ಸಭಾಪತಿ ಹಾಗೂ ವಿಧಾನಸಭಾಧ್ಯಕ್ಷರು ಯಾವುದೇ ಒತ್ತಡಕ್ಕೆ ಮಣಿಯದೆ ಮುಕ್ತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿರಿಯಾದಲ್ಲಿರುವ ಎಲ್ಲಾ ಭಾರತೀಯರು ಸುರಕ್ಷಿತ: ಅಧಿಕಾರಿಗಳ ಸ್ಪಷ್ಟನೆ

ಸಿರಿಯಾದಲ್ಲಿರುವ ಎಲ್ಲಾ ಭಾರತೀಯರು ಸುರಕ್ಷಿತ: ಅಧಿಕಾರಿಗಳ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...