HomeUncategorizedವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಒಗ್ಗಟ್ಟಿನಲ್ಲಿದೆ - ಅಖಿಲೇಶ್ ಯಾದವ್

ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಒಗ್ಗಟ್ಟಿನಲ್ಲಿದೆ – ಅಖಿಲೇಶ್ ಯಾದವ್

- Advertisement -
- Advertisement -

ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಯು ಒಗ್ಗಟ್ಟಿನಲ್ಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಮೈತ್ರಿಕೂಟದ ನಾಯಕತ್ವ ಮತ್ತು ಕಾಂಗ್ರೆಸ್ ಪಾತ್ರದ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆ ಅವರು ಈ ಹೇಳಿಕೆ ನೀಡಿದ್ದಾರೆ. 

ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಇಂಡಿಯಾ ಮೈತ್ರಿಯ ಭವಿಷ್ಯದ ಬಗ್ಗೆ ಸ್ಪಷ್ಟ ನಿಲುವಿಗೆ ಬರುವಂತೆ ಕರೆ ನೀಡಿದ್ದರು, ಈ ನಡುವೆ ಅಖಿಲೇಶ್ ಈ ಹೇಳಿಕೆ ನೀಡಿದ್ದಾರೆ. ಸಮಾಜವಾದಿ ಪಕ್ಷ ಮತ್ತು ಒಮರ್‌ ಅಬ್ದುಲ್ಲಾ ಅವರ ನ್ಯಾಷನಲ್ ಕಾನ್ಫರೆನ್ಸ್‌ ರಾಷ್ಟ್ರೀಯ ಮಟ್ಟದಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾಗಿದೆ.

ಇಂಡಿಯಾ ಮೈತ್ರಿಕೂಟವನ್ನು ಬಲಪಡಿಸಲು ಸಮಾಜವಾದಿ ಪಕ್ಷ ಇನ್ನೂ ಅದೇ ಮಾರ್ಗವನ್ನು ಅನುಸರಿಸುತ್ತಿದೆ ಎಂದು ಅಖಿಲೇಶ್ ಯಾದವ್ ಭಾನುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇತರ ಪಕ್ಷಗಳು ಸಮಾಜವಾದಿ ಪಕ್ಷದ ಜೊತೆ ನಿಲ್ಲಬೇಕು ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಫೆಬ್ರವರಿ 8 ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಆಮ್ ಆದ್ಮಿ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಕಳೆದ ವಾರ ಘೋಷಣೆ ಮಾಡಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷ ಮತ್ತು ಕಾಂಗ್ರೆಸ್ ಎರಡೂ ಇಂಡಿಯಾ ಮೈತ್ರಿಯ ಭಾಗವಾಗಿದ್ದರೂ, ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿವೆ. ವಿರೋಧ ಪಕ್ಷಗಳ

ಜನವರಿ 9 ರಂದು ಒಮರ್ ಅಬ್ದುಲ್ಲಾ ಅವರು ಮೈತ್ರಿಕೂಟವು ಒಂದಾ ಒಟ್ಟಾಗಿ ಕೆಲಸ ಮಾಡಬೇಕು ಅಥವಾ ಮೈತ್ರಿಕೂಟದ ಉದ್ದೇಶವು 2024 ರ ಲೋಕಸಭಾ ಚುನಾವಣೆಗೆ ಸೀಮಿತವಾಗಿದ್ದರೆ ಅದನ್ನು ವಿಸರ್ಜಿಸಬೇಕು ಎಂದು ಹೇಳಿದ್ದರು. ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯ ನಂತರ ಮೈತ್ರಿಕೂಟದ ಉದ್ದೇಶಗಳನ್ನು ಪರಿಹರಿಸಲು ಸಭೆ ಕರೆಯುವಂತೆ ಒಮರ್ ಅಬ್ದುಲ್ಲಾ ಅವರ ಪಕ್ಷದ ಸದಸ್ಯರನ್ನು ಒತ್ತಾಯಿಸಿದ್ದಾರೆ.

ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಮತ್ತು ಇತರ ರಾಜಕೀಯ ಪಕ್ಷಗಳು ಬಿಜೆಪಿ ವಿರುದ್ಧ ಪರಿಣಾಮಕಾರಿಯಾಗಿ ಹೇಗೆ ಕೆಲಸ ಮಾಡಬಹುದು ಎಂಬುದನ್ನು ನಿರ್ಧರಿಸಬೇಕು ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕರೂ ಆಗಿರುವ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಅದಕ್ಕೂ& ಒಂದು ದಿನದ ಮೊದಲು, ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು ಎದುರಿಸಲು ಮಾತ್ರ ಇಂಡಿಯಾ ಮೈತ್ರಿಯನ್ನು ರಚಿಸಲಾಗಿದೆ ಎಂದು ಹೇಳಿದ್ದರು. “ಮೈತ್ರಿಕೂಟಕ್ಕೆ ಅದಕ್ಕಿಂತ ಹೆಚ್ಚಿನ ಮಹತ್ವವಿರಲಿಲ್ಲ” ಎಂದು ಅವರು ತಿಳಿಸಿದ್ದಾರೆ.

ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಕೂಡಾ ಶನಿವಾರ ಮಹಾರಾಷ್ಟ್ರದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ತಮ್ಮ ಪಕ್ಷವೂ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದೆ.

ಇದನ್ನೂ ಓದಿ: ದೆಹಲಿ ವಿಧಾನಸಭೆ ಚುನಾವಣೆ| ದಲಿತ ಪ್ರಾಬಲ್ಯದ 30 ಸ್ಥಾನಗಳ ಮೇಲೆ ಕಣ್ಣಿಟ್ಟ ಬಿಜೆಪಿ

ದೆಹಲಿ ವಿಧಾನಸಭೆ ಚುನಾವಣೆ| ದಲಿತ ಪ್ರಾಬಲ್ಯದ 30 ಸ್ಥಾನಗಳ ಮೇಲೆ ಕಣ್ಣಿಟ್ಟ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...