Homeಮುಖಪುಟಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಬಂಧನವಾದರೆ ಹುದ್ದೆಯಿಂದ ವಜಾಗೊಳಿಸಲು ಮಸೂದೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕರು

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಬಂಧನವಾದರೆ ಹುದ್ದೆಯಿಂದ ವಜಾಗೊಳಿಸಲು ಮಸೂದೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕರು

"ಹೊಸ ಮಸೂದೆಗಳು ಕೇಂದ್ರ ಸರ್ಕಾರ ಇಡಿ, ಸಿಬಿಐ ಬಳಸಿಕೊಂಡು ವಿರೋಧ ಪಕ್ಷಗಳ ಚುನಾಯಿತ ಮುಖ್ಯಮಂತ್ರಿ, ಸಚಿವರನ್ನು ಸುಳ್ಳು ಆರೋಪಗಳ ಮೇಲೆ ಬಂಧಿಸಲು ಮತ್ತು ನ್ಯಾಯಾಲಯದಲ್ಲಿ ತಪ್ಪಿತಸ್ಥರೆಂದು ಸಾಬೀತಾಗದೆ ಅವರನ್ನು ಹುದ್ದೆಯಿಂದ ವಜಾಗೊಳಿಸಲು ಅನುವು ಮಾಡಿಕೊಡುತ್ತದೆ"

- Advertisement -
- Advertisement -

ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಬಂಧಿಸಲ್ಪಟ್ಟ ಮತ್ತು ಬಂಧನದಲ್ಲಿರುವ ಪ್ರಧಾನಿ, ಕೇಂದ್ರ ಸಚಿವರು, ಮುಖ್ಯಮಂತ್ರಿ, ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ಸಚಿವರನ್ನು ಪದಚ್ಯುತಗೊಳಿಸಲು ಅನುವು ಮಾಡಿಕೊಡುವ ಮೂರು ಮಸೂದೆಗಳನ್ನು ಬುಧವಾರ (ಆ.20) ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ 2025; ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ 2025; ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡನೆ (ತಿದ್ದುಪಡಿ) ಮಸೂದೆ 2025 ಈ ಮೂರು ಮಸೂದೆಗಳಾಗಿವೆ.

ಈ ಮೂರು ಮಸೂದೆಗಳನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಪ್ರಸ್ತಾವನೆ ಮಂಡಿಸುವ ಸಾಧ್ಯತೆ ಇದೆ.

ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ 2025ರ ಉದ್ದೇಶ ಮತ್ತು ಕಾರಣಗಳ ಹೇಳಿಕೆಯ ಪ್ರಕಾರ, ಗಂಭೀರ ಕ್ರಿಮಿನಲ್ ಆರೋಪಗಳ ಕಾರಣದಿಂದಾಗಿ ಬಂಧಿಸಲ್ಪಟ್ಟ ಮತ್ತು ಬಂಧನದಲ್ಲಿರುವ ಮುಖ್ಯಮಂತ್ರಿ ಅಥವಾ ಸಚಿವರನ್ನು ಪದಚ್ಯುತಗೊಳಿಸಲು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ ಕಾಯ್ದೆ, (1963ರ ಸೆಕ್ಷನ್ 20) ಅಡಿಯಲ್ಲಿ ಯಾವುದೇ ಅವಕಾಶವಿಲ್ಲ.

ಆದ್ದರಿಂದ, ಅಂತಹ ಸಂದರ್ಭಗಳಲ್ಲಿ ಮುಖ್ಯಮಂತ್ರಿ ಅಥವಾ ಸಚಿವರನ್ನು ಪದಚ್ಯುತಗೊಳಿಸಲು ಕಾನೂನು ಚೌಕಟ್ಟನ್ನು ಒದಗಿಸಲು 1963ರ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರದ ಕಾಯ್ದೆಯ ಸೆಕ್ಷನ್‌ 45ಕ್ಕೆ ತಿದ್ದುಪಡಿ ತರುವ ಅವಶ್ಯಕತೆಯಿದೆ.

ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ, 2025ರ ಉದ್ದೇಶಗಳು, ಗಂಭೀರ ಕ್ರಿಮಿನಲ್ ಆರೋಪಗಳ ಕಾರಣದಿಂದಾಗಿ ಬಂಧಿಸಲ್ಪಟ್ಟ ಮತ್ತು ಬಂಧನದಲ್ಲಿರಿಸಲ್ಪಟ್ಟ ಸಚಿವರನ್ನು ತೆಗೆದುಹಾಕಲು ಸಂವಿಧಾನದ ಅಡಿಯಲ್ಲಿ ಯಾವುದೇ ಅವಕಾಶವಿಲ್ಲ ಎಂದು ಹೇಳುತ್ತದೆ.

ಆದ್ದರಿಂದ, ಅಂತಹ ಸಂದರ್ಭಗಳಲ್ಲಿ ಪ್ರಧಾನಿ ಅಥವಾ ಕೇಂದ್ರ ಸಚಿವ ಸಂಪುಟದ ಸಚಿವರನ್ನು, ಮುಖ್ಯಮಂತ್ರಿ ಅಥವಾ ರಾಜ್ಯ ಸಚಿವ ಸಂಪುಟದ ಸಚಿವರನ್ನು ಹಾಗೂ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸಚಿವರನ್ನು ಪದಚ್ಯುತಗೊಳಿಸಲು ಕಾನೂನು ಚೌಕಟ್ಟನ್ನು ಒದಗಿಸಲು ಸಂವಿಧಾನದ 75, 164 ಮತ್ತು 239ಎಎ ವಿಧಿಗಳನ್ನು ತಿದ್ದುಪಡಿ ಮಾಡುವ ಅವಶ್ಯಕತೆಯಿದೆ.

ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡನೆ (ತಿದ್ದುಪಡಿ) ಮಸೂದೆ, 2025ರ ಉದ್ದೇಶಗಳು, ಗಂಭೀರ ಕ್ರಿಮಿನಲ್ ಆರೋಪಗಳ ಕಾರಣದಿಂದಾಗಿ ಬಂಧಿಸಲ್ಪಟ್ಟ ಮತ್ತು ಬಂಧನದಲ್ಲಿರುವ ಮುಖ್ಯಮಂತ್ರಿ ಅಥವಾ ಸಚಿವರನ್ನು ಪದಚ್ಯುತಗೊಳಿಸಲು ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡನೆ ಕಾಯ್ದೆ, 2019 (2019 ರ 34) ಅಡಿಯಲ್ಲಿ ಯಾವುದೇ ಅವಕಾಶವಿಲ್ಲ ಎಂದು ಹೇಳುತ್ತದೆ.

ಆದ್ದರಿಂದ, ಅಂತಹ ಸಂದರ್ಭಗಳಲ್ಲಿ ಮುಖ್ಯಮಂತ್ರಿ ಅಥವಾ ಸಚಿವರನ್ನು ಪದಚ್ಯುತಗೊಳಿಸಲು ಕಾನೂನು ಚೌಕಟ್ಟನ್ನು ಒದಗಿಸಲು ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡನೆ ಕಾಯ್ದೆ, 2019 ರ ಸೆಕ್ಷನ್ 54 ಅನ್ನು ತಿದ್ದುಪಡಿ ಮಾಡುವ ಅವಶ್ಯಕತೆಯಿದೆ.

ಪ್ರತಿಪಕ್ಷ ನಾಯಕರಿಂದ ವಿರೋಧ

ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಲು ಮುಂದಾಗಿರುವ ಮಸೂದೆಗಳನ್ನು ಪ್ರತಿಪಕ್ಷಗಳ ನಾಯಕರು ವಿರೋಧಿಸಿದ್ದಾರೆ. ಇದು ಸಂವಿಧಾನ ಬದಲಾಯಿಸುವ ಯತ್ನ ಎಂದು ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು, “ವಿರೋಧ ಪಕ್ಷದ ಭವಿಷ್ಯವಾಣಿಗಳು ನಿಜವಾಗಿದೆ. ಕೇವಲ 240 ಸಂಸದರನ್ನು ಹೊಂದಿರುವ ಬಿಜೆಪಿ ಸಂವಿಧಾನ ಬದಲಾಯಿಸುತ್ತಿದೆ. ಹೊಸ ಮಸೂದೆ ಒಕ್ಕೂಟ ವ್ಯವಸ್ಥೆ ಮತ್ತು ನ್ಯಾಯಾಂಗ ಎರಡನ್ನೂ ಮೀರಿದೆ. ಕೇಂದ್ರ ಸರ್ಕಾರ ಇಡಿ, ಸಿಬಿಐ ಬಳಸಿಕೊಂಡು ಚುನಾಯಿತ ವಿರೋಧ ಪಕ್ಷದ ಮುಖ್ಯಮಂತ್ರಿಯನ್ನು ಸುಳ್ಳು ಆರೋಪಗಳ ಮೇಲೆ ಬಂಧಿಸಬಹುದು ಮತ್ತು ನ್ಯಾಯಾಲಯದಿಂದ ತಪ್ಪಿತಸ್ಥರೆಂದು ಸಾಬೀತಾಗದೆ ಅವರನ್ನು ವಜಾಗೊಳಿಸಬಹುದು” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

“ಮತಗಳ್ಳತನ ಬಹಿರಂಗವಾದಾಗ ಮೋದಿ-ಶಾ ಹೊಸ ತಂತ್ರಗಳನ್ನು ಹುಡುಕುತ್ತಿದ್ದಾರೆ. ಸಿಬಿಐ-ಇಡಿ ಬಿಜೆಪಿಗಾಗಿ ರಾಜ್ಯ ಸರ್ಕಾರಗಳನ್ನು ನೇರವಾಗಿ ಉರುಳಿಸಲು ಅನುವು ಮಾಡಿಕೊಡುವ ಹೊಸ ಮಸೂದೆಯನ್ನು ಇಂದು ಮಂಡಿಸಲಾಗುತ್ತಿದೆ. ನ್ಯಾಯಾಲಯವು ಶಿಕ್ಷೆ ವಿಧಿಸಿದಾಗ ಮಾತ್ರ ಒಬ್ಬರು ವ್ಯಕ್ತಿ ಅಪರಾಧಿಯಾಗುತ್ತಾರೆ. ಅಲ್ಲಿಯವರೆಗೆ ಅವರು ‘ಆರೋಪಿ’ ಆಗಿರುತ್ತಾರೆ. ಕೇವಲ ಆರೋಪದ ಮೇಲೆ ನೀವು ಮುಖ್ಯಮಂತ್ರಿ/ಸಚಿವರನ್ನು ಪದಚ್ಯುತಗೊಳಿಸಲು ಸಾಧ್ಯವಿಲ್ಲ. ಮೋದಿ-ಶಾ ಅವರ ಕೇಂದ್ರೀಯ ಸಂಸ್ಥೆಗಳ ಬಂಧನವು ಅಪರಾಧದ ಸಾಬೀತಲ್ಲ” ಎಂದು ಮತ್ತೋರ್ವ ಟಿಎಂಸಿ ಸಂಸದ ಸಾಕೇತ್ ಗೋಖಲೆ ಬರೆದುಕೊಂಡಿದ್ಧಾರೆ.

ಮುಂದುವರಿದು, “ಕುತೂಹಲಕಾರಿ ಸಂಗತಿಯೆಂದರೆ ಕಳೆದ 11 ವರ್ಷಗಳಲ್ಲಿ ಬಿಜೆಪಿಯ ಯಾವುದೇ ಕೇಂದ್ರ/ರಾಜ್ಯ ಸಚಿವರ ಬಂಧನವಾಗಿಲ್ಲ. ಎಲ್ಲಾ ಬಂಧನಗಳು ವಿರೋಧ ಪಕ್ಷದ ನಾಯಕರದ್ದು ಮಾತ್ರ” ಎಂದು ಹೇಳಿದ್ದಾರೆ.

“ಗೃಹ ಸಚಿವ ಅಮಿತ್ ಶಾ ಅವರ ಮಸೂದೆಗಳು ರಾಹುಲ್ ಗಾಂಧಿಯವರ ಮತ ಅಧಿಕಾರ ಯಾತ್ರೆಯಿಂದ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯುವ ಹತಾಶ ಪ್ರಯತ್ನವಲ್ಲದೆ ಬೇರೇನೂ ಅಲ್ಲ. ಮೊದಲು ಸಿಎಸ್‌ಡಿಎಸ್ – ಬಿಜೆಪಿ ಐಟಿ ಸೆಲ್ ನಾಟಕ ಮತ್ತು ಈಗ ಈ ಮಸೂದೆಗಳು. ಬಿಹಾರದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿರುವುದು ಸ್ಪಷ್ಟ” ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೋಯ್ ಬರೆದುಕೊಂಡಿದ್ದಾರೆ.

“ಇದೊಂದು ವಿಕೃತ ಚಕ್ರವ್ಯೂಹವೇ ಸರಿ!. ಇಲ್ಲಿ ಬಂಧನಕ್ಕೆ ಸಂಬಂಧಪಟ್ಟ ಯಾವುದೇ ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿಲ್ಲ!. ವಿರೋಧ ಪಕ್ಷಗಳ ನಾಯಕರ ಬಂಧನಗಳು ಅತಿರೇಕವಾಗಿ ಹಾಗೂ ಅನಿಯಮಿತವಾಗಿ ನಡೆಯುತ್ತಿರುವಾಗ, ಹೊಸ ಪ್ರಸ್ತಾಪಿತ ಕಾನೂನು ಅನ್ವಯ, ಯಾರಾದರು ಮುಖ್ಯಮಂತ್ರಿ ಬಂಧಿತರಾದರೆ ಅವರನ್ನು ತಕ್ಷಣವೇ ಅಧಿಕಾರದಿಂದ ವಜಾಗೊಳಿಸಲಾಗುತ್ತದೆ.”

ವಿರೋಧ ಪಕ್ಷವನ್ನು ಅಸ್ಥಿರಗೊಳಿಸುವ ಅತ್ಯುತ್ತಮ ಮಾರ್ಗವೇಂದರೆ, ಪಕ್ಷಪಾತಿ ಕೇಂದ್ರ ಸಂಸ್ಥೆಗಳ ಸಹಾಯದಿಂದ ವಿರೋಧ ಪಕ್ಷದ ಮುಖ್ಯಮಂತ್ರಿಗಳನ್ನು ಬಂಧಿಸುವುದು. ಚುನಾವಣೆಗಳಲ್ಲಿ ಸೋಲಿಸಲು ಸಾಧ್ಯವಾಗದ ಕಾರಣ, ಇಂಥ ಏಕಪಕ್ಷೀಯ ಬಂಧನಗಳ ಮೂಲಕ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಲಾಗುತ್ತಿದೆ. ಇದವರೆಗೆ ಆಡಳಿತ ಪಕ್ಷದ ಯಾವುದೇ ಮುಖ್ಯಮಂತ್ರಿಯನ್ನು ಟಚ್ ಮಾಡಿದ್ದಿಲ್ಲ” ಎಂದು ಹಿರಿಯ ವಕೀಲ ಹಾಗೂ ರಾಜ್ಯಸಭಾ ಸಂಸದ ಅಭಿಷೇಕ್ ಮನು ಸಿಂಘ್ವಿ ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರತಿಪಕ್ಷ ನಾಯಕ ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳನ್ನು ಗಮನಿಸಿದರೆ, ಅಮಿತ್ ಶಾ ಇಂದು ಲೋಕಸಭೆಯಲ್ಲಿ ಮಸೂದೆ ಮಂಡಿಸುವಾಗ ಗದ್ದಲ ಉಂಟಾಗುವ ಸಾಧ್ಯತೆ ಇದೆ.

‘ದಿ ವೈರ್‌’ನ ಸಿದ್ಧಾರ್ಥ್ ವರದರಾಜನ್, ಕರಣ್ ಥಾಪರ್ ವಿರುದ್ಧ ದೇಶದ್ರೋಹ ಪ್ರಕರಣ: ಪತ್ರಕರ್ತರ ಸಂಘಗಳಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...