Homeಮುಖಪುಟಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಬಂಧನವಾದರೆ ಹುದ್ದೆಯಿಂದ ವಜಾಗೊಳಿಸಲು ಮಸೂದೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕರು

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಬಂಧನವಾದರೆ ಹುದ್ದೆಯಿಂದ ವಜಾಗೊಳಿಸಲು ಮಸೂದೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕರು

"ಹೊಸ ಮಸೂದೆಗಳು ಕೇಂದ್ರ ಸರ್ಕಾರ ಇಡಿ, ಸಿಬಿಐ ಬಳಸಿಕೊಂಡು ವಿರೋಧ ಪಕ್ಷಗಳ ಚುನಾಯಿತ ಮುಖ್ಯಮಂತ್ರಿ, ಸಚಿವರನ್ನು ಸುಳ್ಳು ಆರೋಪಗಳ ಮೇಲೆ ಬಂಧಿಸಲು ಮತ್ತು ನ್ಯಾಯಾಲಯದಲ್ಲಿ ತಪ್ಪಿತಸ್ಥರೆಂದು ಸಾಬೀತಾಗದೆ ಅವರನ್ನು ಹುದ್ದೆಯಿಂದ ವಜಾಗೊಳಿಸಲು ಅನುವು ಮಾಡಿಕೊಡುತ್ತದೆ"

- Advertisement -
- Advertisement -

ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಬಂಧಿಸಲ್ಪಟ್ಟ ಮತ್ತು ಬಂಧನದಲ್ಲಿರುವ ಪ್ರಧಾನಿ, ಕೇಂದ್ರ ಸಚಿವರು, ಮುಖ್ಯಮಂತ್ರಿ, ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ಸಚಿವರನ್ನು ಪದಚ್ಯುತಗೊಳಿಸಲು ಅನುವು ಮಾಡಿಕೊಡುವ ಮೂರು ಮಸೂದೆಗಳನ್ನು ಬುಧವಾರ (ಆ.20) ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ 2025; ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ 2025; ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡನೆ (ತಿದ್ದುಪಡಿ) ಮಸೂದೆ 2025 ಈ ಮೂರು ಮಸೂದೆಗಳಾಗಿವೆ.

ಈ ಮೂರು ಮಸೂದೆಗಳನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಪ್ರಸ್ತಾವನೆ ಮಂಡಿಸುವ ಸಾಧ್ಯತೆ ಇದೆ.

ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ 2025ರ ಉದ್ದೇಶ ಮತ್ತು ಕಾರಣಗಳ ಹೇಳಿಕೆಯ ಪ್ರಕಾರ, ಗಂಭೀರ ಕ್ರಿಮಿನಲ್ ಆರೋಪಗಳ ಕಾರಣದಿಂದಾಗಿ ಬಂಧಿಸಲ್ಪಟ್ಟ ಮತ್ತು ಬಂಧನದಲ್ಲಿರುವ ಮುಖ್ಯಮಂತ್ರಿ ಅಥವಾ ಸಚಿವರನ್ನು ಪದಚ್ಯುತಗೊಳಿಸಲು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ ಕಾಯ್ದೆ, (1963ರ ಸೆಕ್ಷನ್ 20) ಅಡಿಯಲ್ಲಿ ಯಾವುದೇ ಅವಕಾಶವಿಲ್ಲ.

ಆದ್ದರಿಂದ, ಅಂತಹ ಸಂದರ್ಭಗಳಲ್ಲಿ ಮುಖ್ಯಮಂತ್ರಿ ಅಥವಾ ಸಚಿವರನ್ನು ಪದಚ್ಯುತಗೊಳಿಸಲು ಕಾನೂನು ಚೌಕಟ್ಟನ್ನು ಒದಗಿಸಲು 1963ರ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರದ ಕಾಯ್ದೆಯ ಸೆಕ್ಷನ್‌ 45ಕ್ಕೆ ತಿದ್ದುಪಡಿ ತರುವ ಅವಶ್ಯಕತೆಯಿದೆ.

ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ, 2025ರ ಉದ್ದೇಶಗಳು, ಗಂಭೀರ ಕ್ರಿಮಿನಲ್ ಆರೋಪಗಳ ಕಾರಣದಿಂದಾಗಿ ಬಂಧಿಸಲ್ಪಟ್ಟ ಮತ್ತು ಬಂಧನದಲ್ಲಿರಿಸಲ್ಪಟ್ಟ ಸಚಿವರನ್ನು ತೆಗೆದುಹಾಕಲು ಸಂವಿಧಾನದ ಅಡಿಯಲ್ಲಿ ಯಾವುದೇ ಅವಕಾಶವಿಲ್ಲ ಎಂದು ಹೇಳುತ್ತದೆ.

ಆದ್ದರಿಂದ, ಅಂತಹ ಸಂದರ್ಭಗಳಲ್ಲಿ ಪ್ರಧಾನಿ ಅಥವಾ ಕೇಂದ್ರ ಸಚಿವ ಸಂಪುಟದ ಸಚಿವರನ್ನು, ಮುಖ್ಯಮಂತ್ರಿ ಅಥವಾ ರಾಜ್ಯ ಸಚಿವ ಸಂಪುಟದ ಸಚಿವರನ್ನು ಹಾಗೂ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸಚಿವರನ್ನು ಪದಚ್ಯುತಗೊಳಿಸಲು ಕಾನೂನು ಚೌಕಟ್ಟನ್ನು ಒದಗಿಸಲು ಸಂವಿಧಾನದ 75, 164 ಮತ್ತು 239ಎಎ ವಿಧಿಗಳನ್ನು ತಿದ್ದುಪಡಿ ಮಾಡುವ ಅವಶ್ಯಕತೆಯಿದೆ.

ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡನೆ (ತಿದ್ದುಪಡಿ) ಮಸೂದೆ, 2025ರ ಉದ್ದೇಶಗಳು, ಗಂಭೀರ ಕ್ರಿಮಿನಲ್ ಆರೋಪಗಳ ಕಾರಣದಿಂದಾಗಿ ಬಂಧಿಸಲ್ಪಟ್ಟ ಮತ್ತು ಬಂಧನದಲ್ಲಿರುವ ಮುಖ್ಯಮಂತ್ರಿ ಅಥವಾ ಸಚಿವರನ್ನು ಪದಚ್ಯುತಗೊಳಿಸಲು ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡನೆ ಕಾಯ್ದೆ, 2019 (2019 ರ 34) ಅಡಿಯಲ್ಲಿ ಯಾವುದೇ ಅವಕಾಶವಿಲ್ಲ ಎಂದು ಹೇಳುತ್ತದೆ.

ಆದ್ದರಿಂದ, ಅಂತಹ ಸಂದರ್ಭಗಳಲ್ಲಿ ಮುಖ್ಯಮಂತ್ರಿ ಅಥವಾ ಸಚಿವರನ್ನು ಪದಚ್ಯುತಗೊಳಿಸಲು ಕಾನೂನು ಚೌಕಟ್ಟನ್ನು ಒದಗಿಸಲು ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡನೆ ಕಾಯ್ದೆ, 2019 ರ ಸೆಕ್ಷನ್ 54 ಅನ್ನು ತಿದ್ದುಪಡಿ ಮಾಡುವ ಅವಶ್ಯಕತೆಯಿದೆ.

ಪ್ರತಿಪಕ್ಷ ನಾಯಕರಿಂದ ವಿರೋಧ

ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಲು ಮುಂದಾಗಿರುವ ಮಸೂದೆಗಳನ್ನು ಪ್ರತಿಪಕ್ಷಗಳ ನಾಯಕರು ವಿರೋಧಿಸಿದ್ದಾರೆ. ಇದು ಸಂವಿಧಾನ ಬದಲಾಯಿಸುವ ಯತ್ನ ಎಂದು ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು, “ವಿರೋಧ ಪಕ್ಷದ ಭವಿಷ್ಯವಾಣಿಗಳು ನಿಜವಾಗಿದೆ. ಕೇವಲ 240 ಸಂಸದರನ್ನು ಹೊಂದಿರುವ ಬಿಜೆಪಿ ಸಂವಿಧಾನ ಬದಲಾಯಿಸುತ್ತಿದೆ. ಹೊಸ ಮಸೂದೆ ಒಕ್ಕೂಟ ವ್ಯವಸ್ಥೆ ಮತ್ತು ನ್ಯಾಯಾಂಗ ಎರಡನ್ನೂ ಮೀರಿದೆ. ಕೇಂದ್ರ ಸರ್ಕಾರ ಇಡಿ, ಸಿಬಿಐ ಬಳಸಿಕೊಂಡು ಚುನಾಯಿತ ವಿರೋಧ ಪಕ್ಷದ ಮುಖ್ಯಮಂತ್ರಿಯನ್ನು ಸುಳ್ಳು ಆರೋಪಗಳ ಮೇಲೆ ಬಂಧಿಸಬಹುದು ಮತ್ತು ನ್ಯಾಯಾಲಯದಿಂದ ತಪ್ಪಿತಸ್ಥರೆಂದು ಸಾಬೀತಾಗದೆ ಅವರನ್ನು ವಜಾಗೊಳಿಸಬಹುದು” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

“ಮತಗಳ್ಳತನ ಬಹಿರಂಗವಾದಾಗ ಮೋದಿ-ಶಾ ಹೊಸ ತಂತ್ರಗಳನ್ನು ಹುಡುಕುತ್ತಿದ್ದಾರೆ. ಸಿಬಿಐ-ಇಡಿ ಬಿಜೆಪಿಗಾಗಿ ರಾಜ್ಯ ಸರ್ಕಾರಗಳನ್ನು ನೇರವಾಗಿ ಉರುಳಿಸಲು ಅನುವು ಮಾಡಿಕೊಡುವ ಹೊಸ ಮಸೂದೆಯನ್ನು ಇಂದು ಮಂಡಿಸಲಾಗುತ್ತಿದೆ. ನ್ಯಾಯಾಲಯವು ಶಿಕ್ಷೆ ವಿಧಿಸಿದಾಗ ಮಾತ್ರ ಒಬ್ಬರು ವ್ಯಕ್ತಿ ಅಪರಾಧಿಯಾಗುತ್ತಾರೆ. ಅಲ್ಲಿಯವರೆಗೆ ಅವರು ‘ಆರೋಪಿ’ ಆಗಿರುತ್ತಾರೆ. ಕೇವಲ ಆರೋಪದ ಮೇಲೆ ನೀವು ಮುಖ್ಯಮಂತ್ರಿ/ಸಚಿವರನ್ನು ಪದಚ್ಯುತಗೊಳಿಸಲು ಸಾಧ್ಯವಿಲ್ಲ. ಮೋದಿ-ಶಾ ಅವರ ಕೇಂದ್ರೀಯ ಸಂಸ್ಥೆಗಳ ಬಂಧನವು ಅಪರಾಧದ ಸಾಬೀತಲ್ಲ” ಎಂದು ಮತ್ತೋರ್ವ ಟಿಎಂಸಿ ಸಂಸದ ಸಾಕೇತ್ ಗೋಖಲೆ ಬರೆದುಕೊಂಡಿದ್ಧಾರೆ.

ಮುಂದುವರಿದು, “ಕುತೂಹಲಕಾರಿ ಸಂಗತಿಯೆಂದರೆ ಕಳೆದ 11 ವರ್ಷಗಳಲ್ಲಿ ಬಿಜೆಪಿಯ ಯಾವುದೇ ಕೇಂದ್ರ/ರಾಜ್ಯ ಸಚಿವರ ಬಂಧನವಾಗಿಲ್ಲ. ಎಲ್ಲಾ ಬಂಧನಗಳು ವಿರೋಧ ಪಕ್ಷದ ನಾಯಕರದ್ದು ಮಾತ್ರ” ಎಂದು ಹೇಳಿದ್ದಾರೆ.

“ಗೃಹ ಸಚಿವ ಅಮಿತ್ ಶಾ ಅವರ ಮಸೂದೆಗಳು ರಾಹುಲ್ ಗಾಂಧಿಯವರ ಮತ ಅಧಿಕಾರ ಯಾತ್ರೆಯಿಂದ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯುವ ಹತಾಶ ಪ್ರಯತ್ನವಲ್ಲದೆ ಬೇರೇನೂ ಅಲ್ಲ. ಮೊದಲು ಸಿಎಸ್‌ಡಿಎಸ್ – ಬಿಜೆಪಿ ಐಟಿ ಸೆಲ್ ನಾಟಕ ಮತ್ತು ಈಗ ಈ ಮಸೂದೆಗಳು. ಬಿಹಾರದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿರುವುದು ಸ್ಪಷ್ಟ” ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೋಯ್ ಬರೆದುಕೊಂಡಿದ್ದಾರೆ.

“ಇದೊಂದು ವಿಕೃತ ಚಕ್ರವ್ಯೂಹವೇ ಸರಿ!. ಇಲ್ಲಿ ಬಂಧನಕ್ಕೆ ಸಂಬಂಧಪಟ್ಟ ಯಾವುದೇ ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿಲ್ಲ!. ವಿರೋಧ ಪಕ್ಷಗಳ ನಾಯಕರ ಬಂಧನಗಳು ಅತಿರೇಕವಾಗಿ ಹಾಗೂ ಅನಿಯಮಿತವಾಗಿ ನಡೆಯುತ್ತಿರುವಾಗ, ಹೊಸ ಪ್ರಸ್ತಾಪಿತ ಕಾನೂನು ಅನ್ವಯ, ಯಾರಾದರು ಮುಖ್ಯಮಂತ್ರಿ ಬಂಧಿತರಾದರೆ ಅವರನ್ನು ತಕ್ಷಣವೇ ಅಧಿಕಾರದಿಂದ ವಜಾಗೊಳಿಸಲಾಗುತ್ತದೆ.”

ವಿರೋಧ ಪಕ್ಷವನ್ನು ಅಸ್ಥಿರಗೊಳಿಸುವ ಅತ್ಯುತ್ತಮ ಮಾರ್ಗವೇಂದರೆ, ಪಕ್ಷಪಾತಿ ಕೇಂದ್ರ ಸಂಸ್ಥೆಗಳ ಸಹಾಯದಿಂದ ವಿರೋಧ ಪಕ್ಷದ ಮುಖ್ಯಮಂತ್ರಿಗಳನ್ನು ಬಂಧಿಸುವುದು. ಚುನಾವಣೆಗಳಲ್ಲಿ ಸೋಲಿಸಲು ಸಾಧ್ಯವಾಗದ ಕಾರಣ, ಇಂಥ ಏಕಪಕ್ಷೀಯ ಬಂಧನಗಳ ಮೂಲಕ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಲಾಗುತ್ತಿದೆ. ಇದವರೆಗೆ ಆಡಳಿತ ಪಕ್ಷದ ಯಾವುದೇ ಮುಖ್ಯಮಂತ್ರಿಯನ್ನು ಟಚ್ ಮಾಡಿದ್ದಿಲ್ಲ” ಎಂದು ಹಿರಿಯ ವಕೀಲ ಹಾಗೂ ರಾಜ್ಯಸಭಾ ಸಂಸದ ಅಭಿಷೇಕ್ ಮನು ಸಿಂಘ್ವಿ ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರತಿಪಕ್ಷ ನಾಯಕ ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳನ್ನು ಗಮನಿಸಿದರೆ, ಅಮಿತ್ ಶಾ ಇಂದು ಲೋಕಸಭೆಯಲ್ಲಿ ಮಸೂದೆ ಮಂಡಿಸುವಾಗ ಗದ್ದಲ ಉಂಟಾಗುವ ಸಾಧ್ಯತೆ ಇದೆ.

‘ದಿ ವೈರ್‌’ನ ಸಿದ್ಧಾರ್ಥ್ ವರದರಾಜನ್, ಕರಣ್ ಥಾಪರ್ ವಿರುದ್ಧ ದೇಶದ್ರೋಹ ಪ್ರಕರಣ: ಪತ್ರಕರ್ತರ ಸಂಘಗಳಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...