Homeಮುಖಪುಟಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಬಂಧನವಾದರೆ ಹುದ್ದೆಯಿಂದ ವಜಾಗೊಳಿಸಲು ಮಸೂದೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕರು

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಬಂಧನವಾದರೆ ಹುದ್ದೆಯಿಂದ ವಜಾಗೊಳಿಸಲು ಮಸೂದೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕರು

"ಹೊಸ ಮಸೂದೆಗಳು ಕೇಂದ್ರ ಸರ್ಕಾರ ಇಡಿ, ಸಿಬಿಐ ಬಳಸಿಕೊಂಡು ವಿರೋಧ ಪಕ್ಷಗಳ ಚುನಾಯಿತ ಮುಖ್ಯಮಂತ್ರಿ, ಸಚಿವರನ್ನು ಸುಳ್ಳು ಆರೋಪಗಳ ಮೇಲೆ ಬಂಧಿಸಲು ಮತ್ತು ನ್ಯಾಯಾಲಯದಲ್ಲಿ ತಪ್ಪಿತಸ್ಥರೆಂದು ಸಾಬೀತಾಗದೆ ಅವರನ್ನು ಹುದ್ದೆಯಿಂದ ವಜಾಗೊಳಿಸಲು ಅನುವು ಮಾಡಿಕೊಡುತ್ತದೆ"

- Advertisement -
- Advertisement -

ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಬಂಧಿಸಲ್ಪಟ್ಟ ಮತ್ತು ಬಂಧನದಲ್ಲಿರುವ ಪ್ರಧಾನಿ, ಕೇಂದ್ರ ಸಚಿವರು, ಮುಖ್ಯಮಂತ್ರಿ, ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ಸಚಿವರನ್ನು ಪದಚ್ಯುತಗೊಳಿಸಲು ಅನುವು ಮಾಡಿಕೊಡುವ ಮೂರು ಮಸೂದೆಗಳನ್ನು ಬುಧವಾರ (ಆ.20) ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ 2025; ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ 2025; ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡನೆ (ತಿದ್ದುಪಡಿ) ಮಸೂದೆ 2025 ಈ ಮೂರು ಮಸೂದೆಗಳಾಗಿವೆ.

ಈ ಮೂರು ಮಸೂದೆಗಳನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಪ್ರಸ್ತಾವನೆ ಮಂಡಿಸುವ ಸಾಧ್ಯತೆ ಇದೆ.

ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ 2025ರ ಉದ್ದೇಶ ಮತ್ತು ಕಾರಣಗಳ ಹೇಳಿಕೆಯ ಪ್ರಕಾರ, ಗಂಭೀರ ಕ್ರಿಮಿನಲ್ ಆರೋಪಗಳ ಕಾರಣದಿಂದಾಗಿ ಬಂಧಿಸಲ್ಪಟ್ಟ ಮತ್ತು ಬಂಧನದಲ್ಲಿರುವ ಮುಖ್ಯಮಂತ್ರಿ ಅಥವಾ ಸಚಿವರನ್ನು ಪದಚ್ಯುತಗೊಳಿಸಲು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ ಕಾಯ್ದೆ, (1963ರ ಸೆಕ್ಷನ್ 20) ಅಡಿಯಲ್ಲಿ ಯಾವುದೇ ಅವಕಾಶವಿಲ್ಲ.

ಆದ್ದರಿಂದ, ಅಂತಹ ಸಂದರ್ಭಗಳಲ್ಲಿ ಮುಖ್ಯಮಂತ್ರಿ ಅಥವಾ ಸಚಿವರನ್ನು ಪದಚ್ಯುತಗೊಳಿಸಲು ಕಾನೂನು ಚೌಕಟ್ಟನ್ನು ಒದಗಿಸಲು 1963ರ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರದ ಕಾಯ್ದೆಯ ಸೆಕ್ಷನ್‌ 45ಕ್ಕೆ ತಿದ್ದುಪಡಿ ತರುವ ಅವಶ್ಯಕತೆಯಿದೆ.

ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ, 2025ರ ಉದ್ದೇಶಗಳು, ಗಂಭೀರ ಕ್ರಿಮಿನಲ್ ಆರೋಪಗಳ ಕಾರಣದಿಂದಾಗಿ ಬಂಧಿಸಲ್ಪಟ್ಟ ಮತ್ತು ಬಂಧನದಲ್ಲಿರಿಸಲ್ಪಟ್ಟ ಸಚಿವರನ್ನು ತೆಗೆದುಹಾಕಲು ಸಂವಿಧಾನದ ಅಡಿಯಲ್ಲಿ ಯಾವುದೇ ಅವಕಾಶವಿಲ್ಲ ಎಂದು ಹೇಳುತ್ತದೆ.

ಆದ್ದರಿಂದ, ಅಂತಹ ಸಂದರ್ಭಗಳಲ್ಲಿ ಪ್ರಧಾನಿ ಅಥವಾ ಕೇಂದ್ರ ಸಚಿವ ಸಂಪುಟದ ಸಚಿವರನ್ನು, ಮುಖ್ಯಮಂತ್ರಿ ಅಥವಾ ರಾಜ್ಯ ಸಚಿವ ಸಂಪುಟದ ಸಚಿವರನ್ನು ಹಾಗೂ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸಚಿವರನ್ನು ಪದಚ್ಯುತಗೊಳಿಸಲು ಕಾನೂನು ಚೌಕಟ್ಟನ್ನು ಒದಗಿಸಲು ಸಂವಿಧಾನದ 75, 164 ಮತ್ತು 239ಎಎ ವಿಧಿಗಳನ್ನು ತಿದ್ದುಪಡಿ ಮಾಡುವ ಅವಶ್ಯಕತೆಯಿದೆ.

ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡನೆ (ತಿದ್ದುಪಡಿ) ಮಸೂದೆ, 2025ರ ಉದ್ದೇಶಗಳು, ಗಂಭೀರ ಕ್ರಿಮಿನಲ್ ಆರೋಪಗಳ ಕಾರಣದಿಂದಾಗಿ ಬಂಧಿಸಲ್ಪಟ್ಟ ಮತ್ತು ಬಂಧನದಲ್ಲಿರುವ ಮುಖ್ಯಮಂತ್ರಿ ಅಥವಾ ಸಚಿವರನ್ನು ಪದಚ್ಯುತಗೊಳಿಸಲು ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡನೆ ಕಾಯ್ದೆ, 2019 (2019 ರ 34) ಅಡಿಯಲ್ಲಿ ಯಾವುದೇ ಅವಕಾಶವಿಲ್ಲ ಎಂದು ಹೇಳುತ್ತದೆ.

ಆದ್ದರಿಂದ, ಅಂತಹ ಸಂದರ್ಭಗಳಲ್ಲಿ ಮುಖ್ಯಮಂತ್ರಿ ಅಥವಾ ಸಚಿವರನ್ನು ಪದಚ್ಯುತಗೊಳಿಸಲು ಕಾನೂನು ಚೌಕಟ್ಟನ್ನು ಒದಗಿಸಲು ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡನೆ ಕಾಯ್ದೆ, 2019 ರ ಸೆಕ್ಷನ್ 54 ಅನ್ನು ತಿದ್ದುಪಡಿ ಮಾಡುವ ಅವಶ್ಯಕತೆಯಿದೆ.

ಪ್ರತಿಪಕ್ಷ ನಾಯಕರಿಂದ ವಿರೋಧ

ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಲು ಮುಂದಾಗಿರುವ ಮಸೂದೆಗಳನ್ನು ಪ್ರತಿಪಕ್ಷಗಳ ನಾಯಕರು ವಿರೋಧಿಸಿದ್ದಾರೆ. ಇದು ಸಂವಿಧಾನ ಬದಲಾಯಿಸುವ ಯತ್ನ ಎಂದು ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು, “ವಿರೋಧ ಪಕ್ಷದ ಭವಿಷ್ಯವಾಣಿಗಳು ನಿಜವಾಗಿದೆ. ಕೇವಲ 240 ಸಂಸದರನ್ನು ಹೊಂದಿರುವ ಬಿಜೆಪಿ ಸಂವಿಧಾನ ಬದಲಾಯಿಸುತ್ತಿದೆ. ಹೊಸ ಮಸೂದೆ ಒಕ್ಕೂಟ ವ್ಯವಸ್ಥೆ ಮತ್ತು ನ್ಯಾಯಾಂಗ ಎರಡನ್ನೂ ಮೀರಿದೆ. ಕೇಂದ್ರ ಸರ್ಕಾರ ಇಡಿ, ಸಿಬಿಐ ಬಳಸಿಕೊಂಡು ಚುನಾಯಿತ ವಿರೋಧ ಪಕ್ಷದ ಮುಖ್ಯಮಂತ್ರಿಯನ್ನು ಸುಳ್ಳು ಆರೋಪಗಳ ಮೇಲೆ ಬಂಧಿಸಬಹುದು ಮತ್ತು ನ್ಯಾಯಾಲಯದಿಂದ ತಪ್ಪಿತಸ್ಥರೆಂದು ಸಾಬೀತಾಗದೆ ಅವರನ್ನು ವಜಾಗೊಳಿಸಬಹುದು” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

“ಮತಗಳ್ಳತನ ಬಹಿರಂಗವಾದಾಗ ಮೋದಿ-ಶಾ ಹೊಸ ತಂತ್ರಗಳನ್ನು ಹುಡುಕುತ್ತಿದ್ದಾರೆ. ಸಿಬಿಐ-ಇಡಿ ಬಿಜೆಪಿಗಾಗಿ ರಾಜ್ಯ ಸರ್ಕಾರಗಳನ್ನು ನೇರವಾಗಿ ಉರುಳಿಸಲು ಅನುವು ಮಾಡಿಕೊಡುವ ಹೊಸ ಮಸೂದೆಯನ್ನು ಇಂದು ಮಂಡಿಸಲಾಗುತ್ತಿದೆ. ನ್ಯಾಯಾಲಯವು ಶಿಕ್ಷೆ ವಿಧಿಸಿದಾಗ ಮಾತ್ರ ಒಬ್ಬರು ವ್ಯಕ್ತಿ ಅಪರಾಧಿಯಾಗುತ್ತಾರೆ. ಅಲ್ಲಿಯವರೆಗೆ ಅವರು ‘ಆರೋಪಿ’ ಆಗಿರುತ್ತಾರೆ. ಕೇವಲ ಆರೋಪದ ಮೇಲೆ ನೀವು ಮುಖ್ಯಮಂತ್ರಿ/ಸಚಿವರನ್ನು ಪದಚ್ಯುತಗೊಳಿಸಲು ಸಾಧ್ಯವಿಲ್ಲ. ಮೋದಿ-ಶಾ ಅವರ ಕೇಂದ್ರೀಯ ಸಂಸ್ಥೆಗಳ ಬಂಧನವು ಅಪರಾಧದ ಸಾಬೀತಲ್ಲ” ಎಂದು ಮತ್ತೋರ್ವ ಟಿಎಂಸಿ ಸಂಸದ ಸಾಕೇತ್ ಗೋಖಲೆ ಬರೆದುಕೊಂಡಿದ್ಧಾರೆ.

ಮುಂದುವರಿದು, “ಕುತೂಹಲಕಾರಿ ಸಂಗತಿಯೆಂದರೆ ಕಳೆದ 11 ವರ್ಷಗಳಲ್ಲಿ ಬಿಜೆಪಿಯ ಯಾವುದೇ ಕೇಂದ್ರ/ರಾಜ್ಯ ಸಚಿವರ ಬಂಧನವಾಗಿಲ್ಲ. ಎಲ್ಲಾ ಬಂಧನಗಳು ವಿರೋಧ ಪಕ್ಷದ ನಾಯಕರದ್ದು ಮಾತ್ರ” ಎಂದು ಹೇಳಿದ್ದಾರೆ.

“ಗೃಹ ಸಚಿವ ಅಮಿತ್ ಶಾ ಅವರ ಮಸೂದೆಗಳು ರಾಹುಲ್ ಗಾಂಧಿಯವರ ಮತ ಅಧಿಕಾರ ಯಾತ್ರೆಯಿಂದ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯುವ ಹತಾಶ ಪ್ರಯತ್ನವಲ್ಲದೆ ಬೇರೇನೂ ಅಲ್ಲ. ಮೊದಲು ಸಿಎಸ್‌ಡಿಎಸ್ – ಬಿಜೆಪಿ ಐಟಿ ಸೆಲ್ ನಾಟಕ ಮತ್ತು ಈಗ ಈ ಮಸೂದೆಗಳು. ಬಿಹಾರದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿರುವುದು ಸ್ಪಷ್ಟ” ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೋಯ್ ಬರೆದುಕೊಂಡಿದ್ದಾರೆ.

“ಇದೊಂದು ವಿಕೃತ ಚಕ್ರವ್ಯೂಹವೇ ಸರಿ!. ಇಲ್ಲಿ ಬಂಧನಕ್ಕೆ ಸಂಬಂಧಪಟ್ಟ ಯಾವುದೇ ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿಲ್ಲ!. ವಿರೋಧ ಪಕ್ಷಗಳ ನಾಯಕರ ಬಂಧನಗಳು ಅತಿರೇಕವಾಗಿ ಹಾಗೂ ಅನಿಯಮಿತವಾಗಿ ನಡೆಯುತ್ತಿರುವಾಗ, ಹೊಸ ಪ್ರಸ್ತಾಪಿತ ಕಾನೂನು ಅನ್ವಯ, ಯಾರಾದರು ಮುಖ್ಯಮಂತ್ರಿ ಬಂಧಿತರಾದರೆ ಅವರನ್ನು ತಕ್ಷಣವೇ ಅಧಿಕಾರದಿಂದ ವಜಾಗೊಳಿಸಲಾಗುತ್ತದೆ.”

ವಿರೋಧ ಪಕ್ಷವನ್ನು ಅಸ್ಥಿರಗೊಳಿಸುವ ಅತ್ಯುತ್ತಮ ಮಾರ್ಗವೇಂದರೆ, ಪಕ್ಷಪಾತಿ ಕೇಂದ್ರ ಸಂಸ್ಥೆಗಳ ಸಹಾಯದಿಂದ ವಿರೋಧ ಪಕ್ಷದ ಮುಖ್ಯಮಂತ್ರಿಗಳನ್ನು ಬಂಧಿಸುವುದು. ಚುನಾವಣೆಗಳಲ್ಲಿ ಸೋಲಿಸಲು ಸಾಧ್ಯವಾಗದ ಕಾರಣ, ಇಂಥ ಏಕಪಕ್ಷೀಯ ಬಂಧನಗಳ ಮೂಲಕ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಲಾಗುತ್ತಿದೆ. ಇದವರೆಗೆ ಆಡಳಿತ ಪಕ್ಷದ ಯಾವುದೇ ಮುಖ್ಯಮಂತ್ರಿಯನ್ನು ಟಚ್ ಮಾಡಿದ್ದಿಲ್ಲ” ಎಂದು ಹಿರಿಯ ವಕೀಲ ಹಾಗೂ ರಾಜ್ಯಸಭಾ ಸಂಸದ ಅಭಿಷೇಕ್ ಮನು ಸಿಂಘ್ವಿ ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರತಿಪಕ್ಷ ನಾಯಕ ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳನ್ನು ಗಮನಿಸಿದರೆ, ಅಮಿತ್ ಶಾ ಇಂದು ಲೋಕಸಭೆಯಲ್ಲಿ ಮಸೂದೆ ಮಂಡಿಸುವಾಗ ಗದ್ದಲ ಉಂಟಾಗುವ ಸಾಧ್ಯತೆ ಇದೆ.

‘ದಿ ವೈರ್‌’ನ ಸಿದ್ಧಾರ್ಥ್ ವರದರಾಜನ್, ಕರಣ್ ಥಾಪರ್ ವಿರುದ್ಧ ದೇಶದ್ರೋಹ ಪ್ರಕರಣ: ಪತ್ರಕರ್ತರ ಸಂಘಗಳಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...