Homeಮುಖಪುಟಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ 'ಮೋದಿ-ಅದಾನಿ ಭಾಯಿ-ಭಾಯಿ' ಘೋಷಣೆ ಕೂಗಿದ ವಿಪಕ್ಷ ನಾಯಕರು

ಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ ‘ಮೋದಿ-ಅದಾನಿ ಭಾಯಿ-ಭಾಯಿ’ ಘೋಷಣೆ ಕೂಗಿದ ವಿಪಕ್ಷ ನಾಯಕರು

- Advertisement -
- Advertisement -

ಗುರುವಾರ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ಮೋದಿ ಪ್ರತ್ಯುತ್ತರ ನೀಡಲು ಆರಂಭಿಸುತ್ತಿದ್ದಂತೆಯೇ ಪ್ರತಿಪಕ್ಷಗಳು ‘ಮೋದಿ-ಅದಾನಿ ಭಾಯಿ-ಭಾಯಿ’ ಎಂಬ ಘೋಷಣೆಗಳನ್ನು ಕೂಗಲಾರಂಭಿಸಿದರು.

ಅದಾನಿ ಕಂಪನಿ ವಿರುದ್ಧದ ಆರೋಪಗಳ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಒತ್ತಾಯಿಸಿ ಪ್ರತಿಪಕ್ಷಗಳ ಸದಸ್ಯರು ಸದನದ ಬಾವಿಗಿಳಿದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರಧಾನಿ ಮೋದಿ ತಮ್ಮ ಭಾ‍ಷಣದಲ್ಲಿ ವಿರೋಧ ಪಕ್ಷದ ಸದಸ್ಯರ ವಿರುದ್ಧ ವಾಗ್ದಾಳಿ ನಡೆಸಿದ್ದು, ”ಅವರು ನಮ್ಮ ವಿರುದ್ಧ ಮಾತನಾಡಿದಷ್ಟು ಬಿಜೆಪಿ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲು ಸಹಾಯವಾಗುತ್ತದೆ” ಎಂದು ಹೇಳಿದರು. ಮುಂದುವರಿದು, ”ನಾನು ಈ ಸಂಸದರಿಗೆ (ವಿರೋಧ ಪಕ್ಷಗಳ ಸಂಸದರಿಗೆ) ಹೇಳಲು ಬಯಸುತ್ತೇನೆ, ನೀವು ಹೆಚ್ಚು ಕೆಸರು ಎರಚಿದಷ್ಟು ಕಮಲವು ಉತ್ತಮವಾಗಿ ಅರಳುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯಸಭಾ ಕಡತದಿಂದ ಮೋದಿ ವಿರುದ್ಧದ ತಮ್ಮ ಹೇಳಿಕೆ ತಗೆದಿದ್ದಕ್ಕೆ ಖರ್ಗೆ ಆಕ್ಷೇಪ

ಬುಧವಾರ, ಲೋಕಸಭೆಯಲ್ಲಿ ಭಾರತದ ರಾಷ್ಟ್ರಪತಿಯನ್ನು ಅವಮಾನಿಸಿದ್ದಕ್ಕಾಗಿ ಮತ್ತು ಕೆಲವು ನಾಯಕರು ಪರಿಶಿಷ್ಟ ಪಂಗಡಗಳ ವಿರುದ್ಧ ದ್ವೇಷವನ್ನು ಪ್ರದರ್ಶಿಸಿದರು ಎಂದು ವಿರೋಧ ಪಕ್ಷಗಳ ವಿರುದ್ಧ ಮೋದಿ ವಾಗ್ದಾಳಿ ನಡೆಸಿದರು.

ಶತಮಾನಕ್ಕೊಮ್ಮೆ ಸಂಭವಿಸುವ ಸಾಂಕ್ರಾಮಿಕ ಮತ್ತು ಸಂಘರ್ಷಗಳಿಂದಾಗಿ ಜಗತ್ತಿನಾದ್ಯಂತ ಅಸ್ಥಿರತೆ ಉಂಟಾಗಿದೆ. ಈ ಮಧ್ಯೆ ಜಗತ್ತು, ಭಾರತವನ್ನು ಭರವಸೆಯಿಂದ ನೋಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಭಾರತವು ಉತ್ಪಾದನಾ ಕೇಂದ್ರವಾಗಿ ಹೊರಹೊಮ್ಮುತ್ತಿದೆ ಎಂದು ಪ್ರಧಾನಿ ಹೇಳಿದರು.

”ಆದರೆ ಹತಾಶೆಯಲ್ಲಿ ಕುತ್ತಿಗೆಯ ಆಳದಲ್ಲಿರುವ ಕೆಲವರು ಭಾರತದ ಬೆಳವಣಿಗೆಯ ಕಥೆಯನ್ನು ಒಪ್ಪಿಕೊಳ್ಳುತ್ತಿಲ್ಲ. ಅವರು 140 ಕೋಟಿ ಭಾರತೀಯರ ಸಾಧನೆಗಳನ್ನು ನೋಡಲು ಸಾಧ್ಯವಿಲ್ಲ” ಎಂದು ಮೋದಿ ಪ್ರತಿಪಕ್ಷಗಳನ್ನು ಗುರಿಯಾಗಿಸಿಕೊಂಡು ಹೇಳಿದರು.

ಪ್ರಧಾನಿ ಭಾಷಣದ ವೇಳೆ ಪ್ರತಿಪಕ್ಷಗಳು ಮಾತ್ರ ‘ಮೋದಿ-ಅದಾನಿ ಭಾಯಿ-ಭಾಯಿ’ ಎಂಬ ಘೋಷಣೆಗಳನ್ನು ಕೂಗುತ್ತಲೇ ಇದ್ದರು. ಅದಾನಿ ವಿರುದ್ಧ ತನಿಖೆ ನಡೆಸುವಂತೆ ಪ್ರತಿಪಕ್ಷಗಳು ಸರ್ಕಾರಕ್ಕೆ ಒತ್ತಾಯಿಸುತ್ತಿದ್ದರೂ ಪ್ರಧಾನಿ ಮೋದಿಯವರು ಮಾತ್ರ ಅವರ ಮಾತುಗಳಿಗೆ ಉತ್ತರ ನೀಡದೆ ಎಂದಿನಂತೆ ವಿಪಕ್ಷಗಳ ವಿರುದ್ಧ ಭಾಷಣ ಮುಂದುವರೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...