Homeಮುಖಪುಟ'ಪ್ರಜಾಪ್ರಭುತ್ವ ಅಪಾಯದಲ್ಲಿದೆ' ಬ್ಯಾನರ್ ಹಿಡಿದು ರಾಷ್ಟ್ರಪತಿ ಭವನದತ್ತ ಪ್ರತಿಪಕ್ಷಗಳ ಮೆರವಣಿಗೆ

‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಬ್ಯಾನರ್ ಹಿಡಿದು ರಾಷ್ಟ್ರಪತಿ ಭವನದತ್ತ ಪ್ರತಿಪಕ್ಷಗಳ ಮೆರವಣಿಗೆ

- Advertisement -
- Advertisement -

“ಪ್ರಜಾಪ್ರಭುತ್ವ ಅಪಾಯದಲ್ಲಿದೆ” ಬ್ಯಾನರ್‌ನೊಂದಿಗೆ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಇಂದು ವಿಜಯ್ ಚೌಕ್‌ನಿಂದ ರಾಷ್ಟ್ರಪತಿ ಭವನದತ್ತ ಭಾರೀ ಭದ್ರತಾ ನಿಯೋಜನೆಯ ನಡುವೆ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಮೆರವಣಿಗೆ ತಡೆದು ಸಂಸದರನ್ನು ಬಂಧಿಸಿ ಸಮೀಪದ ಪೊಲೀಸ್ ಠಾಣೆಗಳಿಗೆ ಬಸ್‌ನಲ್ಲಿ ಕರೆದೊಯ್ದಿದ್ದಾರೆ. ಮೆರವಣಿಗೆಗೆ ಅನುಮತಿ ಪಡೆದಿರಲಿಲ್ಲ ಮತ್ತು ರಾಷ್ಟ್ರಪತಿಗಳು ಕೂಡ ಇವರ ಭೇಟಿಗೆ ಸಮಯ ನೀಡಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಅದಾನಿ-ಹಿಂಡೆನ್‌ಬರ್ಗ್ ಸಮಸ್ಯೆಯ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ನೀಡಬೇಕು ಎನ್ನುವ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ ಪಕ್ಷಗಳು, ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು ಬಯಸುತ್ತಿವೆ. ಕೋಟ್ಯಾಧಿಪತಿ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರೊಂದಿಗಿನ ಪ್ರಧಾನಿಯವರ ಸ್ನೇಹದ ಬಗೆಗಿನ ಗಮನವನ್ನು ಬೇರೆಡೆಗೆ ಸೆಳೆಯಲು 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರಿಗೆ ಶಿಕ್ಷೆ ವಿಧಿಸುವ ತಂತ್ರ ಮಾಡಿದ್ದಾರೆ ಎಂದು ಪ್ರತಿಪಕ್ಷದ ನಾಯಕರು ಹೇಳಿದ್ದಾರೆ.

”ಅದಾನಿ ಷೇರುಗಳ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪದ ನಂತರ ಎಲ್ಐಸಿ ಎಸ್‌ಬಿಐನಂತಹ ರಾಜ್ಯ-ಸಂಬಂಧಿತ ಕಂಪನಿಗಳಲ್ಲಿ ಇರಿಸಲಾಗಿರುವ ಸಾರ್ವಜನಿಕ ಹಣ ಭಾರಿ ನಷ್ಟಕ್ಕೆ ಕಾರಣವಾಗಿದೆ” ಎಂದು ಪ್ರತಿಪಕ್ಷಗಳು ಹೇಳಿವೆ.

ಇದನ್ನೂ ಓದಿ: ‘ಮೋದಿ ಉಪನಾಮ’ ಟೀಕೆ ಕೇಸ್‌ನಲ್ಲಿ ರಾಹುಲ್‌ಗೆ 2 ವರ್ಷ ಜೈಲು: ಬಿಜೆಪಿಯ ಪಿತೂರಿ ಎಂದ ಪ್ರತಿಪಕ್ಷಗಳು

ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಘಟಕಗಳು ಏಕಕಾಲದಲ್ಲಿ ಪ್ರತಿಭಟನೆಗಳನ್ನು ಆರಂಭಿಸಿವೆ. ಕೇಂದ್ರವು ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪ ಮಾಡಿದ್ದಾರೆ. ಗಾಂಧಿ ವಿರುದ್ಧದ ಸೂರತ್ ಕೋರ್ಟ್ ತೀರ್ಪಿನ ವಿರುದ್ಧ ಕರ್ನಾಟಕದಲ್ಲೂ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಪಕ್ಷದ ಇತರ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ತಮ್ಮ ವಿವಾದಾತ್ಮಕ ಲಂಡನ್ ಹೇಳಿಕೆಗಳ ಬಗ್ಗೆ ತಮ್ಮ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯಿಸಲು ರಾಹುಲ್ ಗಾಂಧಿ ಅವರು ಸಮಯ ಕೋರಿ ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ. ಆದರೆ ಅವರ ಧ್ವನಿ ಅಡಗಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ”ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕೇಂದ್ರ ಸರ್ಕಾರವು ಪ್ರತಿಪಕ್ಷಗಳ ನಾಯಕರನ್ನು ಬೇಟೆಯಾಡುತ್ತಿದೆ. ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವ ನಿಟ್ಟಿನಲ್ಲಿ ಈ ಪಾದಯಾತ್ರೆ ನಡೆಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಸದನದ ಕಲಾಪ ಪ್ರಾರಂಭವಾಗುವ ಮೊದಲು ಪಕ್ಷದ ಸಂಸದರ ಸಭೆಯಲ್ಲಿ ರಾಹುಲ್‌ ಗಾಂಧಿ, ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಕೂಡ ಉಪಸ್ಥಿತರಿದ್ದರು.

ಪಾದಯಾತ್ರೆಗೂ ಮುನ್ನ ಕಾಂಗ್ರೆಸ್ ಮುಖ್ಯಸ್ಥ ಮತ್ತು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಸಂಸತ್ತಿನ ಕಚೇರಿಯಲ್ಲಿ 12 ವಿರೋಧ ಪಕ್ಷಗಳ ಸದಸ್ಯರು ಸಭೆ ನಡೆಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು, ”ಸೂರತ್ ನ್ಯಾಯಾಲಯದ ತೀರ್ಪನ್ನು ”ದುರದೃಷ್ಟಕರ” ಎಂದು ಕರೆದಿದ್ದಾರೆ. ಅದಾನಿ-ಹಿಂಡೆನ್‌ಬರ್ಗ್ ವಿಷಯವನ್ನು ಪ್ರಸ್ತಾಪಿಸಿದಾಗಿನಿಂದಲೂ ಸರ್ಕಾರವು ರಾಹುಲ್ ಅವರನ್ನು ಮಾತನಾಡದಂತೆ ತಡೆಯಲು ಪ್ರಯತ್ನಿಸುತ್ತಿದೆ” ಎಂದು ಹೇಳಿದರು.

”ನಾವು ಪರಿಸ್ಥಿತಿಯನ್ನು ವಿಶ್ಲೇಷಿಸಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದಂತೆ ಈ ತೀರ್ಪು ತುಂಬಾ ದುರದೃಷ್ಟಕರವಾಗಿದೆ. ಪ್ರತಿಪಕ್ಷಗಳೆಲ್ಲಾ ಸೇರಿ ಕಾಂಗ್ರೆಸ್ ಪಕ್ಷಕ್ಕಾಗಿ ಸಾಮೂಹಿಕ ಮೆರವಣಿಗೆ ಮಾಡುತ್ತೇವೆ. ನಾವು ಅಧ್ಯಕ್ಷರೊಂದಿಗೆ ಅಪಾಯಿಂಟ್ಮೆಂಟ್ ಕೇಳುತ್ತಿದ್ದೇವೆ. ರಾಹುಲ್ ಗಾಂಧಿ ಅವರು ಅದಾನಿ ವಿಚಾರವನ್ನು ಪ್ರಸ್ತಾಪಿಸಿದ ಮೊದಲ ದಿನದಿಂದ ಅವರನ್ನು ತಡೆಯಲು ಬಿಜೆಪಿಯವರು ಮುಂದಾದರು. ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮಾತನಾಡುವುದು ಅವರಿಗೆ ಇಷ್ಟವಿಲ್ಲ. ಅವರ ಧ್ವನಿಯನ್ನು ನಿಲ್ಲಿಸಲು ಅವರು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಾರೆ” ಎಂದು ವೇಣುಗೋಪಾಲ್ ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...